Headlines

ರಿಪ್ಪನ್ ಪೇಟೆ ಗುಡ್ ಶೆಫರ್ಡ್ ಚರ್ಚ್ ಬಳಿ ಭೀಕರ ರಸ್ತೆ ಅಪಘಾತ : ಬೈಕ್ ಸವಾರನ ಸಾವು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶಫರ್ಡ್ ಶಾಲೆಯ ಸಮೀಪ ಇಂದು ಸಂಜೆ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಮ್ಮಡಿ ಕೊಪ್ಪ ಗ್ರಾಮದ ದಿನೇಶ್ ಪಿಸಾಳೆ (42) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತರು ಇಂದು ಸಂಜೆ ರಿಪ್ಪನ್ ಪೇಟೆ ಪಟ್ಟಣದಿಂದ ತನ್ನ ಸ್ವಗ್ರಾಮ ತಮ್ಮಡಿಕೊಪ್ಪ  ಹೋಗುತ್ತಿರುವಾಗ ಕ್ಯಾಂಟರ್ ವಾಹನವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.  ರಾಜ್ಯ…

Read More

ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಟಿ ಆರ್ ಕೃಷ್ಣಪ್ಪರವರಿಂದ ಅರೆ ಬೆತ್ತಲೆ ಪ್ರತಿಭಟನೆ :

ರಿಪ್ಪನ್ ಪೇಟೆ : ಲಾಭದಲ್ಲಿರುವ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಕ್ಕೆ  ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ರವರು ಇಂದು ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬ್ಯಾಂಕುಗಳನ್ನು ರಾಷ್ಟ್ರೀಕರಣ ಮಾಡಿರುವುದೇ ರೈತರು ಮತ್ತು ಬಡ ವರ್ಗಕ್ಕೆ ನೆರವಾಗುವುದಕ್ಕಾಗಿ, ಇದೀಗ ಖಾಸಗೀಕರಣ ಮಾಡಿದರೆ ಬಡ ವರ್ಗ ಸಂಕಷ್ಟಕ್ಕೆ ಸಿಗಲಿದೆ. ಆದ್ದರಿಂದ ಯಾವುದೇ ರಾಷ್ಟ್ರೀಕೃತ ಬ್ಯಾಂಕನ್ನು ಖಾಸಗೀಕರಣ ಮಾಡುವುದಕ್ಕೆ ಮುಂದಾಗಬಾರದು ಎಂದು ಆಗ್ರಹಿಸಿದರು….

Read More

ತೀರ್ಥಹಳ್ಳಿಯ ಕಾಂಗ್ರೆಸ್ ಟಿಕೆಟ್ ಕಿಮ್ಮನೆ ರತ್ನಾಕರ್ ಗೆ ಬಹುತೇಕ ಖಚಿತ – ಇಂದೇ ಘೋಷಣೆಯ ಸಾಧ್ಯತೆ|kimmane

ತೀರ್ಥಹಳ್ಳಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಕಾಂಗ್ರೆಸ್​ ಈಗಾಗಲೇ ತನ್ನ ಮೊದಲ ಪಟ್ಟಿಯನ್ನು ರಿಲೀಸ್​ ಮಾಡಿದ್ದು ಎರಡನೇ ಪಟ್ಟಿಯನ್ನು ಇಂದು ಸಂಜೆ ಅಥವಾ ನಾಳೆ ರಿಲೀಸ್ ಮಾಡಲಿದ್ದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕಿಮ್ಮನೆ ರತ್ನಾಕರ್ ಗೆ ಬಹುತೇಕ ಖಚಿತವಾಗಿದೆ ಎಂದು ಉನ್ನತ ಮೂಲಗಳ ಮಾಹಿತಿಯಿಂದ ತಿಳಿದುಬಂದಿದೆ. ಎರಡನೆ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕ್ಷೇತ್ರದ ಅಭ್ಯರ್ಥಿಯನ್ನು ಮಾತ್ರ ಘೋಷಿಸುತಿದ್ದು ಇನ್ನುಳಿದಂತಹ ಶಿವಮೊಗ್ಗ ನಗರ,ಶಿವಮೊಗ್ಗ ಗ್ರಾಮಾಂತರ ಮತ್ತು ಶಿಕಾರಿಪುರ ಕ್ಷೇತ್ರ ಅಭ್ಯರ್ಥಿಗಳನ್ನು ಇನೂ…

Read More

ಪಿಂಚಣಿ ಹಣದಲ್ಲಿ ಗಂಜಿ ಕುಡಿದು ಬದುಕುತ್ತೇನೆಯೇ ವಿನಃ ಭ್ರಷ್ಟಾಚಾರ ಮಾಡಲ್ಲ : ಹಾಲಿ ಶಾಸಕರಿಗೆ ಮಾಜಿ ಶಾಸಕರ ಟಾಂಗ್

ಸಾಗರ: ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಪಿಂಚಣಿಯಲ್ಲಿ ಬದುಕುತ್ತಿದ್ದಾರೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ನನ್ನನ್ನು ಟೀಕಿಸಿದ್ದಾರೆ. ಅವರು ಹೇಳಿದಂತೆ ನಾನು ಪಿಂಚಣಿಯಲ್ಲಿ ಗಂಜಿ ಕುಡಿದು ಬದುಕುತ್ತೇನೆಯೇ ವಿನಃ ಭ್ರಷ್ಟಾಚಾರ ಮಾಡಿಲ್ಲ. ಭ್ರಷ್ಟಾಚಾರದ ಹಣದಲ್ಲಿ ಬದುಕುತ್ತಿಲ್ಲ. ಇವತ್ತಿಗೂ ಜನರಿಗೆ ಸಹಾಯ ಮಾಡುತ್ತ ಬದುಕುತ್ತಿದ್ದೇನೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಶಾಸಕ ಹಾಲಪ್ಪ ಅವರ ಮಾತಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಶಾಸಕ…

Read More

ಶಿವಮೊಗ್ಗ : ಸರಳವಾಗಿ ವಿಸರ್ಜನೆಗೊಂಡ ಇತಿಹಾಸ ಪ್ರಸಿದ್ಧ ಹಿಂದು ಮಹಾಸಭಾ ಗಣಪತಿ

ಶಿವಮೊಗ್ಗ: ನಗರದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನೆಯನ್ನು ಸರಳವಾಗಿ ನೆರವೇರಿಸಲಾಯಿತು. ಸರ್ಕಾರದ ಸೂಚನೆ ಹಿನ್ನೆಲೆ ಈ ಭಾರಿ ಮೆರವಣಿಗೆ ನಡೆಸದೆ ವಿಸರ್ಜನೆ ಮಾಡಲಾಯಿತು. ಸುಮಾರು 12-45 ಕ್ಕೆ ದೇವಸ್ಥಾನದ ಬಳಿಯಿರುವ ತುಂಗ ನದಿಯ ಭೀಮನ ಮಡುವಿನಲ್ಲಿ ವಿಸರ್ಜನೆ ಮಾಡಲಾಗಿದೆ. ಸುಮಾರು 300 ಕ್ಕೂ ಹೆಚ್ಚು ಜನ ಹಿಂದೂ ಮಹಾಸಭಾ ಸಂಘಟನೆಯ ಕಾರ್ಯಕರ್ತರು ವಿಸರ್ಜನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಇದರಿಂದ 77 ನೇ ಹಿಂದೂ ಮಹಾಸಭಾ ಗಣಪತಿಯನ್ನು ವಿಸರ್ಜಿಸಲಾಗಿದೆ. 77 ವರ್ಷದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಒಟ್ಟು…

Read More

ರಿಪ್ಪನ್ ಪೇಟೆ : ಆಲುವಳ್ಳಿ,ಕೆಂಚನಾಲ ಸುತ್ತಮುತ್ತ ಆಕಾಶದಲ್ಲಿ ವಿಚಿತ್ರ ಕೌತುಕ : ಬೆಚ್ಚಿಬಿದ್ದ ಜನರು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಆಲುವಳ್ಳಿ ಹಾಗೂ ಕೆಂಚನಾಲ ಗ್ರಾಮದಲ್ಲಿ ಇಂದು ಸರಿಯಾಗಿ ಆಕಾಶದಲ್ಲಿ ಸಾಲು ಸಾಲಾಗಿ ಸಣ್ಣ ಸಣ್ಣ ದೀಪಗಳು ಹಾದು ಹೋಗಿ ಅಚ್ಚರಿ ಮೂಡಿಸಿವೆ. ಬಾಹ್ಯಾಕಾಶದಲ್ಲಿ ನಡೆಯುವ‌ ಕೌತುಕಗಳಿಗೆ ಕೊನೆಯೇ ಇಲ್ಲ. ಆಕಾಶದಲ್ಲಿ ಅದೇ ನಕ್ಷತ್ರ, ಅದೇ ಚಂದ್ರ, ಅದೇ ಸೂರ್ಯ ಇದ್ದಿದ್ದರೆ ಯಾವ ಕುತೂಹಲವೂ ಅನುಸುತ್ತಿರಲಿಲ್ಲ. ಆದರೆ ಬಾಹ್ಯಾಕಾಶದಲ್ಲಿ ಏಕಾಏಕಿ ಲೈಟ್ ಗಳ ಸರಣಿ ಹಾದು ಹೋದರೆ ನಿಮ್ಮನ್ನ ಅಚ್ಚರಿ ಪಡಿಸದೆ ಇರದು. ಇಂತಹ ಒಂದು ಕೌತುಕಕ್ಕೆ ಹೊಸನಗರ ತಾಲೂಕಿನ ಕೆಂಚನಾಲ,ಆಲುವಳ್ಳಿ…

Read More

ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್:

ಶಿವಮೊಗ್ಗ:  ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷದ ಕೈ ಹಿಡಿಯವ ಮುಹೂರ್ತ ಫಿಕ್ಸ್ ಆಗಿದೆ.   ಇದೇ ತಿಂಗಳ 30 ರಂದು ಹುಬ್ಬಳ್ಳಿಯಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜಿವಾಲಾ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಸೇರಲಿದ್ದಾರೆ.ಮಧುಬಂಗಾರಪ್ಪನವರೊಂದಿಗೆ ಅವರ ಬೆಂಬಲಿಗರು ಕೂಡ ಕಾಂಗ್ರೆಸ್‌ ಸೇರಲಿದ್ದಾರೆ ಎನ್ನಲಾಗಿದೆ.   ಶಿವಮೊಗ್ಗದಲ್ಲಿ ಬೃಹತ್‌ ಸಮಾವೇಶ ನಡೆಸಿ ಕಾಂಗ್ರೆಸ್ ಸೇರ್ಪಡೆಯಾಗುವ…

Read More

ಕೆಎಸ್ಆರ್ ಟಿಸಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ

ಕೆಎಸ್ಆರ್ ಟಿಸಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ A KSRTC bus and a truck collided near Kugve in Sagar taluk, leaving a woman passenger injured. Police have visited the spot and initiated an investigation. ಸಾಗರ: ತಾಲೂಕಿನ ಕುಗ್ಗ್ವೆ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಮತ್ತು ಟ್ರಕ್ ನಡುವೆ ರಸ್ತೆ ಅಪಘಾತ ಸಂಭವಿಸಿದ ಘಟನೆ ವರದಿಯಾಗಿದೆ. ಸಾಗರದಿಂದ ಜೋಗದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ತಾಳಗುಪ್ಪ…

Read More

ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಶಾಸಕ ಆನಂದ್ ಮಾಮನಿ ನಿಧನ|Bangalore

ವಿಧಾನಸಭೆಯ ಉಪಸಭಾಧ್ಯಕ್ಷ ಹಾಗೂ ಬೆಳಗಾವಿ ಜಿಲ್ಲೆ ಸವದತ್ತಿ ಕ್ಷೇತ್ರದ ಶಾಸಕರೂ ಆಗಿದ್ದ ಆನಂದ್ ಚಂದ್ರಶೇಖರ್ ಮಾಮನಿ (56) ಅವರು ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಸ್ವರೂಪದ ಅನಾರೋಗ್ಯದ ಹಿನ್ನೆಲೆಯಲ್ಲಿ ಎರಡು ತಿಂಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಉಪಸಭಾಪತಿಯಾಗಿದ್ದ ವೇಳೆ ಅವರು ಕಲಾಪದಲ್ಲಿ ಸದನವನ್ನು ನಿರ್ವಹಿಸುತ್ತಿದ್ದ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭೆ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಮಾದರಿ ಜನಪ್ರತಿನಿಧಿಯಾಗಿ ಕ್ಷೇತ್ರದಲ್ಲಿ…

Read More

ಆಸ್ತಿ ವಿಚಾರದಲ್ಲಿ ನ್ಯಾಯಾಲಯದ ಮೊರೆ ಹೋದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ :

ಸಾಗರ ತಾಲೂಕಿನ ಹುಲಿದೇವರಬನ ಸಮೀಪ ಸಣ್ಣಕೊಪ್ಪ ಗ್ರಾಮದ ಗುರುಬಸಪ್ಪ ಎಂಬ ವ್ಯಕ್ತಿಯು ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೊರೆ ಹೋಗಿ ಎದುರು ಪಾರ್ಟಿಗಳಿಗೆ ಸಮನ್ಸ್ ಕಳುಹಿಸಿರುವ ಹಿನ್ನೆಲೆಯಲ್ಲಿ ಗುರುಬಸಪ್ಪ ರವರ ಮೇಲೆ  ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. >ಗುರುಬಸಪ್ಪ ಎಂಬ ವ್ಯಕ್ತಿಗೆ ಬೇಸೂರು ಗ್ರಾಮದ ಸರ್ವೆ ನಂಬರ್ 33 ರಲ್ಲಿ ಕುಟುಂಬದ ಹಿಸ್ಸೆ ಮೂಲಕ ಬರಬೇಕಾದ ಜಮೀನನ್ನು ಪಡೆಯುವ ಸಲುವಾಗಿ ನ್ಯಾಯಾಲಯದ ಮೊರೆ ಹೋಗಿರುತ್ತಾರೆ. ಇದರಿಂದ ರೊಚ್ಚಿಗೆದ್ದ ಇದೇ  ಗ್ರಾಮದವರಾದ ರಾಮನಾಯ್ಕ,…

Read More
Exit mobile version