Headlines

ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ

ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ.ಇಂದು ಬೆಳಗ್ಗೆ ಮತದಾನ ನಡೆದಿತ್ತು. ಸಂಜೆ ವೇಳೆಗೆ ಮತ ಎಣಿಕೆ ಪೂರ್ಣಗೊಂಡು ಫಲಿತಾಂಶ ಪ್ರಕಟಿಸಲಾಗಿದೆ. ಶಿವಮೊಗ್ಗ ತಹಶೀಲ್ದಾರ್‌ ಬಿ.ಎನ್.ಗಿರೀಶ್‌ ಅವರು ರಿಟರ್ನಿಂಗ್‌ ಆಫೀಸರ್‌ ಆಗಿದ್ದರು.12 ಸ್ಥಾನಕ್ಕೆ ಪೈಕಿ 31 ಜನ ಸ್ಪರ್ಧಿಸಿದ್ದರು. ಇದರಲ್ಲಿ ಇಬ್ಬರ ಅವಿರೋಧ ಆಯ್ಕೆಯಾಗಿತ್ತು. ಶಿವಮೊಗ್ಗ ವಿಭಾಗ : ಶಿವಮೊಗ್ಗ ವಿಭಾಗದಿಂದ ಆರ್.ಎಂ.ಮಂಜುನಾಥ್ ಗೌಡ ಅವಿರೋಧ ಆಯ್ಕೆಯಾಗಿದ್ದು, ಭದ್ರಾವತಿಯಿಂದ ಸ್ಪರ್ಧಿಸಿದ್ದ ಶಿಮುಲ್ ಮಾಜಿ ಅಧ್ಯಕ್ಷ ಡಿ.ಆನಂದ್…

Read More

RCB ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : ಯುವಕ ದುರ್ಮರಣ!

RCB ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : 2 ಬೈಕ್ ಮಧ್ಯ ಡಿಕ್ಕಿಯಾಗಿ ಯುವಕ ದುರ್ಮರಣ! ಶಿವಮೊಗ್ಗ : ನಿನ್ನೆ ಗುಜರಾತಿನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ತಂಡವನ್ನು 6 ರನ್ ಗಳಿಂದ ಸೋಲಿಸಿ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಈ ಹಿನ್ನೆಲೆ, ನಿನ್ನೆ ರಾತ್ರಿಯಿಂದ ರಾಜ್ಯಾದ್ಯಂತ ಸಂಭ್ರಮಾಚರಣೆ ಜೋರಾಗಿದ್ದು, ಇದೀಗ ಸಂಭ್ರಮಾಚರಣೆಯ ವೇಳೆ 2 ಬೈಕಗಳು ಮುಖಾಮುಖಿ ಡಿಕ್ಕಿ ಹೊಡೆದು…

Read More

ಗೋಡಂಬಿ ಹೆಸರಿನಲ್ಲಿ ಕಳಪೆ ಅಡಿಕೆ ಆಮದು: ಸೂಕ್ತ ಕ್ರಮಕ್ಕೆ ಶಾಸಕ ಆರಗ ಜ್ಞಾನೇಂದ್ರ ಒತ್ತಾಯ

ರಿಪ್ಪನ್ ಪೇಟೆ:ದೇಶದಲ್ಲಿನ ಅಡಿಕೆ ವ್ಯಾಪಾರಿಗಳ ವಂಚಕರ ಜಾಲವು ಗೋಡಂಬಿ ಹೆಸರಿನಲ್ಲಿ ಕಳಪೆ ಗುಣಮಟ್ಟದ ಅಡಿಕೆಯನ್ನು ಇಂಡೋನೇಶಿಯಾದಿಂದ ಆಮದು ಮಾಡಿಕೊಳ್ಳುವ ಮೂಲಕ ದೇಶದ ಅಡಿಕೆ ಬೆಳೆಗಾರರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿ ಕೊಳ್ಳುವಂತೆ ಮಾಡುತ್ತಿದ್ದಾರೆ. ಈ ತರಹದ ಕಳಪೆ ಅಡಿಕೆ ಆಮದು ಮಾಡಿಕೊಳ್ಳುವವರ ವಿರುದ್ಧ ಕೇಂದ್ರ ಸರ್ಕಾರವು ಈ ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಶಾಸಕ ಮತ್ತು ಗೃಹ ಮಂಡಳಿ ಅಧ್ಯಕ್ಷರಾದ ಶ್ರೀ ಆರಗ ಜ್ಞಾನೇಂದ್ರ ಇಂದಿಲ್ಲಿ ಒತ್ತಾಯಿಸಿದರು. ಪಟ್ಟಣದಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ  ಮಾತನಾಡಿದ ಅವರು  ಅಡಿಕೆ ವಂಚಕರ ಜಾಲವು…

Read More

ನೀರಿನಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು :

ಶಿವಮೊಗ್ಗ : ಪಿತೃ ಪಕ್ಷದ‌ ಪೂಜೆಗೆಂದು ಕಡೂರಿನಿಂದ ಬಂದಿದ್ದ ಇಂಜಿನಿಯರ್ ವಿದ್ಯಾರ್ಥಿ ಕೊಡ್ಲಿ ತುಂಗಾಭದ್ರಾ ಸಂಗಮದಲ್ಲಿ ಮಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಪಿತೃ ಪಕ್ಷದ ಅಂಗವಾಗಿ ಬಿರೂರಿನಿಂದ ಫಣಿಯಾಚರ್ ಕುಟುಂಬದ ಹರೀಶ್ ಹಾಗೂ ಯಶವಂತ್ ಎಂಬುವರು ಸಂಗಮದಲ್ಲಿ ಇಳಿದಿದ್ದರು. ಯಶವಂತ ಸ್ನಾನ ಮುಗಿಸಿ ವಾಪಸ್ ಬಂದ್ರೆ, ಹರೀಶ್( 24) ನೀರಿನಲ್ಲಿ ತೇಲಿ ಹೋಗಿದ್ದಾರೆ. ಘಟನಾ ಸ್ಥಳಕ್ಕೆ ಹೊಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ ಬೋಟ್​​​ನಲ್ಲಿ ಹುಡುಕಾಟ ನಡೆಸಿದ್ದಾರೆ. ನಿನ್ನೆ  ಸಂಜೆ ಕತ್ತಲಾದ…

Read More

ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ | volleyball

ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ | volleyball ರಿಪ್ಪನ್ ಪೇಟೆ : ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ತಂಡದಲ್ಲಿ ರಿಪ್ಪನ್ ಪೇಟೆಯ ಯುವ ವಾಲಿಬಾಲ್ ಆಟಗಾರ ಸೂಫಿಯಾನ್ ಸ್ಥಾನ ಪಡೆದಿದ್ದಾರೆ. 2023. 24 ನೇ ಸಾಲಿನ ಪದವಿಪೂರ್ವ ಕಾಲೇಜುಗಳ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಕೂಟ ಪಂದ್ಯವು ಜನವರಿ 3 ರಿಂದ ಜನವರಿ 7 ರವರೆಗೆ ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯಲಿದೆ….

Read More

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು ಭದ್ರಾವತಿ, ಏ. 12: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ, ಬೈಕ್ ಸವಾರ ಮೃತಪಟ್ಟ ಘಟನೆ ಹೊಳೆಹೊನ್ನೂರು ಸಮೀಪದ ಭದ್ರಾವತಿ ರಸ್ತೆಯ ಸಂತೋಷ್ ರೈಸ್ ಮಿಲ್ ಸಮೀಪ  ರಾತ್ರಿ ನಡೆದಿದೆ. ಮಾರಶೆಟ್ಟಿಹಳ್ಳಿ ಗ್ರಾಮದ ನಿವಾಸಿ ವಿನುತ್ ಘೋರ್ಪಡೆ (23) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮೃತ ಯುವಕ ಭದ್ರಾವತಿ ತಾಲೂಕಿನ ಹಿರಿಯ ರೈತ ಮುಖಂಡ ಯಶವಂತರಾವ್ ಘೋರ್ಪಡೆ ಅವರ ಮೊಮ್ಮಗನಾಗಿದ್ದಾನೆ. ಭದ್ರಾವತಿಯ ಖಾಸಗಿ ನರ್ಸಿಂಗ್ ಆಸ್ಪತ್ರೆಯಲ್ಲಿ…

Read More

ರಿಪ್ಪನ್‌ಪೇಟೆ : ಬಿರುಗಾಳಿ ಸಹಿತ ಭಾರಿ ಮಳೆಗೆ ಧರೆಗುರುಳಿದ ಮರಗಳು – ಲಕ್ಷಾಂತರ ರೂ ನಷ್ಟ | ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ |Rain with storm

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದಲ್ಲಿ ನಿನ್ನೆ ಸಂಜೆ ಸುರಿದ ಬಿರುಗಾಳಿ ಸಹಿತ ಭಾರಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ವಿಷಯ ತಿಳಿಯುತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಪರಿಹಾರ ನೀಡುವಂತೆ ಸೂಚಿಸಿದರು. ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಗುಡುಗು, ಸಿಡಿಲಬ್ಬರದ ಮಳೆ ಸುರಿದಿದ್ದು ಈ ವೇಳೆ ಬೀಸಿದ ಭಾರಿ ಪ್ರಮಾಣದ ಬಿರುಗಾಳಿಗೆ ಗ್ರಾಮದ ಅನೇಕ ಮನೆ,…

Read More

ರಿಪ್ಪನ್‌ಪೇಟೆ : ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಹಿಳೆ ಉಡುಪಿಯಲ್ಲಿ ಪತ್ತೆ : ಸುಖಾಂತ್ಯಗೊಂಡ ನಾಪತ್ತೆ ಪ್ರಕರಣ

ರಿಪ್ಪನ್‌ಪೇಟೆ : ಇತ್ತೀಚೆಗೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ  ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾನಗರದ ನಿವಾಸಿ ಸೌಂದರ್ಯ ತನ್ನ ಇಬ್ಬರು ಮಕ್ಕಳೊಂದಿಗೆ ಉಡುಪಿಯ ಸಾಂತ್ವಾನ ಕೇಂದ್ರದಲ್ಲಿ ಪತ್ತೆಯಾಗಿದ್ದಾರೆ. ಕಳೆದ ಹತ್ತು ವರ್ಷದ ಹಿಂದೆ ಹೆದ್ದಾರಿಪುರ ಗ್ರಾಮದ ಶಶಿಕುಮಾರ್ ಎಂಬಾತನೊಂದಿಗೆ ಸೌಂದರ್ಯ ವಿವಾಹವಾಗಿದ್ದರು . ಶಶಿ ಕುಮಾರ್ ಪತ್ನಿಗೆ ಮಾನಸಿಕ ಕಿರುಕುಳ ದೈಹಿಕ ಹಲ್ಲೆ ನಡೆಸುತ್ತಿದ್ದ ಕಾರಣ ಪತಿಯ ನಡೆಗೆ ಬೇಸತ್ತು ತನ್ನ ಇಬ್ಬರು ಮಕ್ಕಳೊಂದಿಗೆ ಮನೆ ಬಿಟ್ಟು ಹೋಗಿದ್ದಾರೆ. ನಿನ್ನೆ ಮೂವರು ಪತ್ತೆಯಾಗಿ ಉಡುಪಿ ಸಾಂತ್ವಾನ ಕೇಂದ್ರದಲ್ಲಿದ್ದಾರೆ….

Read More

ನಲ್ಲೆಯ ಮೋಸದಾಟಕ್ಕೆ ಜೀವ ಚೆಲ್ಲಿದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ | Crime News

ನಲ್ಲೆಯ ಮೋಸದಾಟಕ್ಕೆ ಜೀವ ಚೆಲ್ಲಿದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ –  ನಾಲ್ಕು ವರ್ಷದ ಪ್ರೀತಿ, ಮದ್ವೆಯಾಗಿ 15 ದಿನಕ್ಕೆ ಉಲ್ಟಾ ಹೊಡೆದ ಪ್ರಿಯತಮೆ ಚಿಕ್ಕಮಗಳೂರು ಜಿಲ್ಲೆಯ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ, ಅವಳು ಪಿಯುಸಿ ವಿದ್ಯಾರ್ಥಿನಿ, ಇಬ್ಬರ ನಡುವೆ ಹುಚ್ಚು ಪ್ರೇಮ. ಪ್ರೊ ಕಬಡ್ಡಿಯಲ್ಲಿ ಆಟವಾಡುವ ಕನಸು ಕಂಡವ ಪ್ರೀತಿಯ ಹುಚ್ಚಿಗೆ ಬಿದ್ದಿದ್ದ. ಹುಡುಗಿ ಮನೆಯವರ ವಿರೋಧದ ನಡೆವೆ ಪ್ರೀತಿ ಉಳಿಸಿಕೊಳ್ಳುವ ಸವಾಲಿಗೆ ಬಿದ್ದು ಅವಳನ್ನೇ ಮದುವೆಯಾಗಿದ್ದ.ಪ್ರೀತಿಯಿಂದ ಆರಂಭವಾಗಿ ವಿವಾಹ ಬಂಧನಕ್ಕೆ ಬಿದ್ದವನು ಕಟ್ಟಿಕೊಂಡವಳ ಚೆಲ್ಲಾಟಕ್ಕೆ ಜೀವ ಚೆಲ್ಲಿದ್ದಾನೆ. …

Read More

Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ

Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಮುಂಬರುವ ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಲಾಗಿದ್ದು ನಾನು ಮಾಡಿದ ಕಾರ್ಯಗಳು ಮತದಾರರ ಮನಮುಟ್ಟಿವೆ ಎಲ್ಲಾ ಸಮುದಾಯದವರು ಮತದಾರರು ನನಗೆ ಮತ್ತು ಕೇಂದ್ರದ ಮೋದಿಜಿಯವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆಂದು ಸಂಸದ ಶಿವಮೊಗ್ಗ ಲೋಕಸಭಾ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ಸಮೀಪದ ಕೋಣಂದೂರಿನ ಶ್ರೀಶಿವಲಿಂಗೇಶ್ವರ ಬೃಹನ್ಮಠಕ್ಕೆ ಭೇಟಿ ನೀಡಿ ಶಿವಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ನಂತರ ಕೋಣಂದೂರು ಮಠದ ಷ.ಬ್ರ.ಶ್ರೀಪತಿ ಪಂಡಿತಾರಾಧ್ಯ…

Read More
Exit mobile version