Headlines

Shivamogga | ಹುಣಸೋಡು ಸ್ಫೋಟ ಪ್ರಕರಣ: ಮರು ತನಿಖೆಗೆ ಹೈಕೋರ್ಟ್ ಆದೇಶ

Shivamogga | ಹುಣಸೋಡು ಸ್ಫೋಟ ಪ್ರಕರಣ: ಮರು ತನಿಖೆಗೆ ಹೈಕೋರ್ಟ್ ಆದೇಶ ಇಡೀ ದೇಶದ ಗಮನ ಸೆಳೆದಿದ್ದ ಶಿವಮೊಗ್ಗ ಹುಣಸೋಡು ಸ್ಫೋಟ ಪ್ರಕರಣದ ಮರು ತನಿಖೆಗೆ ಹೈಕೋರ್ಟ್ ಆದೇಶ ಮಾಡಿದೆ. ಸಿಇಎನ್ ಠಾಣೆಯ ಬದಲು ಶಿವಮೊಗ್ಗ ಗ್ರಾಮಾಂತರ ಠಾಣೆಗೆ ತನಿಖೆಗೆ ಆದೇಶ ಮಾಡಿ ಚಾರ್ಚ್ ಶೀಟ್ ಸಲ್ಲಿಸಲು ನ್ಯಾಯಾಲಯ ಆದೇಶಿಸಿದೆ. 2021ರ ಜನವರಿ 21ರಂದು ರಾತ್ರಿ 10:20ಕ್ಕೆ ಶಿವಮೊಗ್ಗ ನಗರದ ಹೊರವಲಯದ ಹುಣಸೋಡು ಎಂಬಲ್ಲಿ ಸ್ಫೋಟ ಸಂಭವಿಸಿತ್ತು. ಎಸ್.ಎಸ್. ಕ್ರಷರ್ ಕ್ವಾರಿಯಲ್ಲಿ ಸ್ಫೋಟಕ ತುಂಬಿದ ಕ್ಯಾಂಟರ್ ಲಾರಿಯಿಂದ…

Read More

ಶಿವಮೊಗ್ಗದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ – ಬಂದ್ ಗೆ ನೀರಸ ಪ್ರತಿಕ್ರಿಯೆ|kaveri issue

ಶಿವಮೊಗ್ಗದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ – ಬಂದ್ ಗೆ ನೀರಸ ಪ್ರತಿಕ್ರಿಯೆ ಶಿವಮೊಗ್ಗ : ಕಾವೇರಿ ವಿಚಾರವಾಗಿ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಅಶೋಕ ವೃತ್ತದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಬೆಳ್ಳಂಬೆಳಗ್ಗೆ ಕಾವೇರಿ ಹೋರಾಟ ನಡೆಸಿದ ಕನ್ನಡ ಪರ ಸಂಘಟನೆಗಳು, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಜೊತೆಗೆ ಕರವೇ ಹಾಗೂ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕಾವೇರಿ ನಮ್ಮದು, ಕಾವೇರಿ…

Read More

ಕಾಂಗ್ರೆಸ್ಸಿಗರು ಹತಾಶರಾಗಿ‌ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ : ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ರಾಜ್ಯದ ಎರಡೂ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ. ಇದನ್ನು ಅರಿತಿರುವ ಕಾಂಗ್ರೆಸ್ಸಿಗರು ಹತಾಶರಾಗಿ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿನ ಭೀತಿಯಿಂದಾಗಿ ಕಾಂಗ್ರೆಸ್ ನಾಯಕರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಕಾಂಗ್ರೆಸ್​ ನಾಯಕರ ಅಪ ಪ್ರಚಾರ ಇಲ್ಲದಿದ್ದರೆ ಕೋವಿಡ್ 2ನೇ ಡೋಸ್​ ನೀಡಿಕೆಯಲ್ಲಿ ಇನ್ನಷ್ಟು ಪ್ರಗತಿ ಆಗುತ್ತಿತ್ತು. ಆದಾಗ್ಯೂ, ಇಡೀ ವಿಶ್ವವೇ ಮೆಚ್ಚುವಂತಹ ರೀತಿ ಕೊರೊನಾ ಲಸಿಕೆ…

Read More

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಕೋಮು ಗಲಭೆ ನಡೆಸಲು ಪ್ರಭಾವಿಗಳ ಸಂಚು :

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಕಿರುಕುಳದ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಕೆ. ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಮುಸ್ಲಿಮ್ ಯುವಕನ ಹತ್ಯೆ ಮಾಡುವ ಮೂಲಕ ಕೋಮು ಗಲಭೆಗೆ ಸಂಚು ರೂಪಿಸಲಾಗಿದೆ.ಇದರ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಸದಾಶಿವ ನಗರದ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಒಂದು ಟ್ರಸ್ಟ್ ಇದ್ದು, ಅದರಲ್ಲಿ ದೊಡ್ಡವರು ಸದಸ್ಯರಾಗಿದ್ದಾರೆ. ಆ ಟ್ರಸ್ಟ್ ಸದಸ್ಯರು ಹಾಗೂ…

Read More

ರಿಪ್ಪನ್ ಪೇಟೆ | ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ | ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ : ಪಟ್ಟಣದ ಸಾವರ್ಕರ್ ರಸ್ತೆಯ ಕಾಂಕ್ರೀಟ್ ರಸ್ತೆ , ತಮ್ಮಡಿಕೊಪ್ಪ ಗ್ರಾಮದ ಊರೊಳಗಿನ ರಸ್ತೆ ,ಕೊಣನಜೆಡ್ಡು ರಸ್ತೆ  ಹಾಗೂ ಆಕಾಶ್ ಮಕ್ಕಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ ನೇರವೇರಿಸಿದರು. ವಿವಿಧ ಗ್ರಾಮಗಳಲ್ಲಿ ಶಂಕುಸ್ಥಾಪನೆಯ ನಂತರ  ಡಿ.ಸಿ.ಸಿ ಬ್ಯಾಂಕ್ ನ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತಾನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ  ಹೊಸನಗರ…

Read More

Ripponpete| “ಕಡುಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು “: ಶಾಸಕ ಗೋಪಾಲಕೃಷ್ಣ ಬೇಳೂರು

“ಕಡುಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು “: ಶಾಸಕ ಗೋಪಾಲಕೃಷ್ಣ  ಬೇಳೂರು  ರಿಪ್ಪನ್‌ಪೇಟೆ;-ಕೂಲಿ ಕಾರ್ಮಿಕರ ಮತ್ತು  ಕಡುಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು,ಉನ್ನತ ವ್ಯಾಸಂಗಮಾಡಲು ಉತ್ತಮ ಅವಕಾಶಗಳಿವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಶನಿವಾರ ಪಟ್ಟಣದಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು ಹಿಂದೆ ಶ್ರೀಮಂತರ ಮಕ್ಕಳಿಗೆ ಮಾತ್ರ ಉನ್ನತ ಶಿಕ್ಷಣ ಪಡೆಯುತ್ತಿದ್ದರು ಅದರೆ ಕೂಲಿಕಾರ್ಮಿಕರ ಮಕ್ಕಳು ಇದರಿಂದ ವಂಚಿತರಾಗುವ ಕಾಲವೊಂದು ಇತ್ತು ಈಗಿನ ಸರ್ಕಾರಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ…

Read More

ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ…

ಶಿವಮೊಗ್ಗ: ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಐಎನ್ಎ)ದಿಂದ ತನಿಖೆ ನಡೆಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಫೆಬ್ರವರಿ 5 ರಂದು ಉಡುಪಿ ಜಿಲ್ಲೆಯಲ್ಲಿ ಪ್ರಾರಂಭವಾದ ಹಿಜಾಬ್ ವಿವಾದ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗಿರುವುದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ. ಹಿಜಾಬ್ ಒಂದು ಪ್ರಕರಣ ಮಾತ್ರವಲ್ಲ, ಇದೊಂದು ಜಿಹಾದಿನ ಷಡ್ಯಂತ್ರ. ಮುಸಲ್ಮಾನ ವಿಧ್ಯಾರ್ಥಿಗಳ ಮೂಲಕ ಶಾಲಾ -ಕಾಲೇಜುಗಳನ್ನು ಉಪಯೋಗಿಸಿ…

Read More

ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧ – ಜಿಲ್ಲಾಧಿಕಾರಿ ಆದೇಶ

ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ ಆದೇಶ : ಜಿಲ್ಲಾಧಿಕಾರಿಗಳು ಶಿವಮೊಗ್ಗ, ಆ.12 ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ದಿ: 27-08-202025 ರಿಂದ 15-09-2025 ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ. ದಿ: 27-08-2025 ರಂದು ಗಣೇಶ ಹಬ್ಬದ ಪ್ರಯಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ನಂತರ ವಿವಿಧ ದಿನಗಳಂದು ವಿಸರ್ಜನಾ…

Read More

ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident

ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಣೆಹೊಸೂರಿನಲ್ಲಿ ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಇನ್ನೋರ್ವ ಗಂಭೀರವಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ನಿವಾಸಿ ಗುಡ್ಡೇನಹಳ್ಳಿಯ ನಿವಾಸಿ ಮಂಜನಾಯ್ಕ ಎಂಬಾತ ಮೃತಪಟ್ಟಿದ್ದು ಬೈಕ್ ನ ಹಿಂಬದಿ ಸವಾರ ರಘು ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ಬೈಕ್ ನಲ್ಲಿ ಶಿವಮೊಗ್ಗ ಕಡೆ  ಬರುತ್ತಿದ್ದ…

Read More

ಕುಂಸಿ : ಬಹಿರ್ದೆಸೆಗೆಂದು ಹೊರಹೋಗಿದ್ದ ನಾಲ್ಕು ವರ್ಷದ ಮಗು ಶವವಾಗಿ ಪತ್ತೆ:

ಕುಂಸಿ : ಬಹಿರ್ದೆಸೆಗೆ ತೆರಳಿದ್ದ ನಾಲ್ಕು ವರ್ಷದ ಮಗು ಸೋಮವಾರದಿಂದ ಕಾಣೆಯಾಗಿದ್ದು ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಮಗುವಿನ ಕೊಲೆಯ ಬಗ್ಗೆ  ಶಂಕೆ ವ್ಯಕ್ತವಾಗಿದೆ. ಸೋಮವಾರದಂದು ಕಾಣೆಯಾಗಿದ್ದ ಮಗು ಇಂದು ಮುಂಜಾನೆ ಮನೆಯಿಂದ 1½ ಕಿಮಿ ದೂರದಲ್ಲಿ ಶವವಾಗಿ ಪತ್ತೆಯಾಗಿದೆ. ಜಿಲ್ಲೆಯ ಗಡಿಭಾಗದ ರಟ್ಟೆಹಳ್ಳಿಯಲ್ಲಿ ಆ.30 ರಂದು ಸಂಜು ಎಂಬ ನಾಲ್ಕು ವರ್ಷದ ಮಗು ಸಂಜು ಬಹಿರ್ದೆಸೆಗೆ ಹೋಗಿದ್ದವರು ಮನೆಗೆ ವಾಪಾಸಾಗಿರಲಿಲ್ಲ. ಸಂಜೆಯ ವರೆಗೆ ಹುಡುಕಿದ ಪೋಷಕರು ಕೊನೆಯಲ್ಲಿ ಕುಂಸಿ ಪೊಲೀಸ್ ಠಾಣೆಗೆ ದೂರು…

Read More