Headlines

ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ :ಶ್ರೀ ರೇಣುಕಾನಂದ ಸ್ವಾಮೀಜಿ

ರಿಪ್ಪನ್ ಪೇಟೆ : ಮಾನವನ ಬದುಕಿನಲ್ಲಿ ಶಿಕ್ಷಣ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ಪೋಷಕರು  ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ ಎಂದು ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಹೇಳಿದರು.  ಹಾರಂಬಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಹಾಗೂ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು….

Read More

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ 12 ಮಂದಿ ಪೊಲೀಸ್ ವಶಕ್ಕೆ : ಗೃಹ ಸಚಿವ ಆರಗ ಜ್ಞಾನೇಂದ್ರ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಸಂಬಂಧ 3 ಆರೋಪಿಗಳನ್ನು ಬಂಧಿಸಲಾಗಿದೆ.12‌ ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಅವರು ಪ್ರಕರಣದಲ್ಲಿ ಭಾಗಿಯಾಗಿರುವುದು ದೃಢವಾದರೆ ಬಂಧಿಸಲಾಗುತ್ತದೆ. ಅಲ್ಲದೆ ಈ ಪ್ರಕರಣದ ಹಿಂದೆ ಯಾರಿದ್ದಾರೆ ಅನ್ನುವುದನ್ನು ಪತ್ತೆ ಹಚ್ಚಲಾಗುತ್ತದೆ ಎಂದು ತಿಳಿಸಿದರು. ಸದ್ಯ ಶಿವಮೊಗ್ಗ…

Read More

Accident | ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ

Accident | ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ ಮಾಸ್ತಿಕಟ್ಟೆ :  ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೋರ್ವರಿಗೆ ಗಂಭೀರ ಗಾಯಗೊಂಡಿರುವ ಘಟನೆ ಹುಲಿಕಲ್ ಸಮೀಪದಲ್ಲಿ ನಡೆದಿದೆ. ಪಿಕಪ್ ವಾಹನ ಚಾಲಕನ ಅಜಾಗರೂಕತೆಯಿಂದ ಅತಿ ವೇಗದಿಂದ  ಓಮ್ನಿ ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರು ಚಾಲಕನ ಎರಡು ಕಾಲು ತುಂಡಾದ ಘಟನೆ ನಡೆದಿದೆ. ಘಟನೆಯಲ್ಲಿ ಹುಲಿಕಲ್ ನರಸಿಂಹಸ್ವಾಮಿ ದೇವಸ್ಥಾನದ ಧರ್ಮದರ್ಶಿ ಸಮಿತಿ ಅಧ್ಯಕ್ಷ ಕೇಶವಮೂರ್ತಿ ಎಂಬುವವರ ಎರಡು…

Read More

ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ  ಗಂಭೀರ ಗಾಯ

ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ  ಗಂಭೀರ ಗಾಯ ಸಿದ್ದಾಪುರ:  ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ ದಲ್ಲಿ  ಭಕ್ತರ ಮೇಲೆ  ಕಾರು ಹರಿದ ಪರಿಣಾಮ   ಓರ್ವ ಯುವತಿ ಸಾವಿಗೀಡಾಗಿ  08 ಭಕ್ತರಿಗೆ ದಲ್ಲಿ ಗಂಭೀರ ಗಾಯ ಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ  ಸಿದ್ದಾ ಪುರದಲ್ಲಿ ನಿನ್ನೆ ಸಂಭವಿಸಿದೆ. ಕಾರು ಚಾಲಕ ರೋಶನ್ ಫರ್ನಾಂಡಿಸ್ ನನ್ನು ಪೊಲೀಸರು ಬಂಧಿಸಿದ್ದಾರೆ.ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ಈತ ಜಾತ್ರೆಗೆ ನುಗ್ಗಿಸಿದ್ದಾನೆ….

Read More

Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..!

Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್‌ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಭಾನುವಾರ ರಾತ್ರಿ ಖಚಿತ ಮಾಹಿತಿಯ ಮೇರೆಗೆ ಹೊಸನಗರ ರಸ್ತೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್‌ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ ,ಸಂತೋಷ್ ಕೊರವರ ,ರಾಮಚಂದ್ರಪ್ಪ ಹಾಗೂ ಮಧುಸೂಧನ್ ಇದ್ದರು.

Read More

ಮುದ್ದೇಬಿಹಾಳದಲ್ಲಿ ಜು. 25 ರಂದು ಪತ್ರಿಕಾ ದಿನಾಚರಣೆ,ವಿಕಲಚೇತನರಿಗೆ ಸೌಲಭ್ಯಗಳ ವಿತರಣೆ

ಜು. 25 ರಂದು ಪತ್ರಿಕಾ ದಿನಾಚರಣೆ,ವಿಕಲಚೇತನರಿಗೆ ಸೌಲಭ್ಯಗಳ ವಿತರಣೆ ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ನೇತೃತ್ವದಲ್ಲಿ ಜು.25 ರಂದು ಬೆಳಗ್ಗೆ 10.30 ಕ್ಕೆ ರಾಘವೇಂದ್ರ lಮಂಗಲ ಭವನದಲ್ಲಿ ಪತ್ರಿಕಾ ದಿನಾಚರಣೆ, ಪದಾಧಿಕಾರಿಗಳ ಪದಗ್ರಹ ಹಾಗೂ ವಿಕಲಚೇತನರಿಗೆ ಸೌಲಭ್ಯಗಳ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ತಾಲೂಕಾಧ್ಯಕ್ಷ ಶಂಕರ ಹೆಬ್ಬಾಳ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ,ಕಾರ್ಯಕ್ರಮದ  ದಿವ್ಯ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಹಿರೇಮಠದ ಚೆನ್ನವೀರ ದೇವರು,ತಾಳಿಕೋಟಿ ಖಾಸ್ಗತೇಶ್ವರ ಮಠದ…

Read More

ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ ಶಿವಮೊಗ್ಗದ 88 ವರ್ಷದ ವೃದ್ಧನಿಗೆ 17 ಲಕ್ಷ ರೂ ವಂಚನೆ

ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ ಶಿವಮೊಗ್ಗದ 88 ವರ್ಷದ ವೃದ್ಧನಿಗೆ 17 ಲಕ್ಷ ರೂ ವಂಚನೆ ಶಿವಮೊಗ್ಗ: ನಗರದ ಗಾಂಧಿನಗರ ಬಡಾವಣೆಯಲ್ಲಿ 88 ವರ್ಷದ ವೃದ್ಧರೊಬ್ಬರಿಗೆ “ಡಿಜಿಟಲ್‌ ಅರೆಸ್ಟ್‌’ನ ನಾಟಕವಾಡಿ ಬರೋಬ್ಬರಿ 17.60 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ವಾಟ್ಸ್‌ಆಯಪ್‌ ವೀಡಿಯೋ ಕರೆ ಮೂಲಕ ಸಂಪರ್ಕಿಸಿ, ಮುಂಬಯಿಯ ಕೊಲಾ ಪೊಲೀಸ್‌ ಠಾಣೆ ಅಧಿಕಾರಿಯೆಂದು ವಂಚಕರು ಪರಿಚಯಿಸಿಕೊಂಡು ವ್ಯಕ್ತಿಯೊಬ್ಬರ ಫೋಟೋ ಕಳುಹಿಸಿ, ಮನಿ ಲಾಂಡ್ರಿಂಗ್‌ ಕೇಸ್‌ನಲ್ಲಿ ಬಂಧಿತರಾಗಿದ್ದಾರೆ. ಇವರ ಅಕ್ರಮ ಹಣ ನಿಮ್ಮ ಖಾತೆಗೆ ವರ್ಗಾವಣೆಯಾಗಿದೆ ಎಂದು…

Read More

ಹೆದ್ದಾರಿಪುರ : ಯಡಗುಡ್ಡೆ ಅಂಗನಾವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ – ಗ್ರಾಮಸ್ಥರ ಆಕ್ರೋಶ|yadagudde

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಗ್ರಾಮದಲ್ಲಿ 16 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡು 6 ತಿಂಗಳು ಕಳೆದಿದ್ದರೂ ಉದ್ಘಾಟನೆ ಭಾಗ್ಯ ಕಾಣದೆ ಪಾಳು ಬಿದ್ದಂತಾಗಿದೆ.ಹೀಗೇ ದಿನ ಕಳೆದರೆ ಹೊಸ ಕಟ್ಟಡ ಶೀಥಿಲಾವಸ್ಥೆ ತಲುಪುದರಲ್ಲಿ ಅನುಮಾನ ಇಲ್ಲ ಎಂದು ಯಡಗುಡ್ಡೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಅಂಗನವಾಡಿ ಕೇಂದ್ರದ ಮಕ್ಕಳು ಅಂಗನವಾಡಿ ಶಿಕ್ಷಕಿಯ ಮನೆಯಲ್ಲಿ ಕಲಿಕೆಯಲ್ಲಿ ತೊಡಗಿದ್ದಾರೆ.ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಿರುವ ಈ…

Read More

ಅರಣ್ಯ ಇಲಾಖೆ ಜಾಗದಲ್ಲಿ ಅಕ್ರಮವಾಗಿ ಮರ ಕಡಿಯುವಾಗ ಮರ ಬಿದ್ದು ಹಸು ಸಾವು

ಅರಣ್ಯ ಇಲಾಖೆ ಜಾಗದಲ್ಲಿ ಅಕ್ರಮವಾಗಿ ಮರ ಕಡಿಯುವಾಗ ಮರ ಬಿದ್ದು ಹಸು ಸಾವು A cow died after a tree fell during illegal tree cutting in a forest area at Neerulli near Thirthahalli. Police have registered a case and started investigation. ತೀರ್ಥಹಳ್ಳಿ: ಅರಣ್ಯ ಇಲಾಖೆಯ ಜಾಗದಲ್ಲಿ ಅನುಮತಿ ಇಲ್ಲದೆ ಮರ ಕಟಾವು ನಡೆಸುತ್ತಿದ್ದ ವೇಳೆ ನಡೆದ ದುರಂತದಲ್ಲಿ ಹಸುವೊಂದು ಮೃತಪಟ್ಟ ಘಟನೆ ತಾಲೂಕಿನ ನೀರುಳ್ಳಿ ಗ್ರಾಮದಲ್ಲಿ…

Read More

ರಿಪ್ಪನ್‌ಪೇಟೆ : ನೂತನವಾಗಿ ಕಟ್ಟಡ ಕಾರ್ಮಿಕರ ಸಂಘ ಅಸ್ತಿತ್ವಕ್ಕೆ|labour

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಮದಲ್ಲಿ ನೂತನವಾಗಿ ಕಟ್ಟಡ ಕಾರ್ಮಿಕರ ಸಂಘ ಸೋಮವಾರ ನೂತನವಾಗಿ ಅಸ್ತಿತ್ವಕ್ಕೆ ಬಂದಿದೆ. ಪಟ್ಟಣದ ಚೌಡೇಶ್ವರಿ ಬೀದಿಯ ಅಂಬೇಡ್ಕರ್ ಭವನದಲ್ಲಿ ನಡೆದ ಸರ್ವಸದಸ್ಯರ ಸಭೆಯಲ್ಲಿ‌ ನೂತನ ಸಂಘವನ್ನು ರಚನೆ ಮಾಡಿ ಸಂಘದ ಅಧ್ಯಕ್ಷರನ್ನಾಗಿ ಮಹಮ್ಮದ್ ಹುಸೇನ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಪದಾಧಿಕಾರಿಗಳ ವಿವರ :  ಅಧ್ಯಕ್ಷರು : ಮಹಮ್ಮದ್ ಹುಸೇನ್  ಉಪಾಧ್ಯಕ್ಷರು : ದೇವೇಂದ್ರ ಆಚಾರ್ ಮತ್ತು ಶೌಕತ್ ಗೌರವಾಧ್ಯಕ್ಷರು : ರಮೇಶ್ ಆರ್ ಕಾರ್ಯಾಧ್ಯಕ್ಷರು : ಪ್ರಭಾಕರ್ ಆಚಾರ್…

Read More