Headlines

ಹುತಾತ್ಮ ಯೋಧ ಮಂಜುನಾಥ್ ಕುಟುಂಬಕ್ಕೆ ಸಚಿವರ ಸಾಂತ್ವನ

ಹುತಾತ್ಮ ಯೋಧ ಮಂಜುನಾಥ್ ಕುಟುಂಬಕ್ಕೆ ಸಚಿವರ ಸಾಂತ್ವನ ಸಂಕೂರು ಶಾಲೆ ಅಭಿವೃದ್ಧಿ: ಪುತ್ಥಳಿ ನಿರ್ಮಾಣ: ಮಧು ಬಂಗಾರಪ್ಪ ಶಿವಮೊಗ್ಗ : ಅಗ್ರಾದಲ್ಲಿ ತರಬೇತಿ ವೇಳೆ ನಿಧನರಾಗಿದ್ದ  ಭಾರತೀಯ ವಾಯುಸೇನೆಯ ಪ್ಯಾರಾಜೆಂಪ್ ಜ್ಯೂನಿಯರ್ ವಾರೆಂಟ್ ಅಧಿಕಾರಿ ಮಂಜುನಾಥ್ ಅವರ ಹೊಸನಗರ ತಾಲೂಕು ಸಂಕೂರಿನ ಮನೆಗೆ ಸಚಿವ ಮಧು ಬಂಗಾರಪ್ಪ ಅವರು ತೆರಳಿ ಯೋಧನ ಪತ್ನಿ, ಪೋಷಕರು ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮಾತನಾಡಿ, ಕುಟುಂಬದ ಪ್ರಮುಖ…

Read More

ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ

ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ ಊಟ ಬಡಿಸಲು‌ ನಿರಾಕರಿಸಿದ ಪತ್ನಿಯ ಕತ್ತನ್ನು ಟವಲ್ನಲ್ಲಿ ಬಿಗಿದು ಪತಿಯೇ ಕೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಅಂಬ್ಲಿಗೊಳ ಗ್ರಾಮದಲ್ಲಿ‌ ನಡೆದಿದೆ. ಅಂಬ್ಲಿಗೊಳ ಗ್ರಾಮದ ಗೌರಮ್ಮ (28) ಕೊಲೆಯಾದ ಮಹಿಳೆ. ಪತಿ ಮನು (35) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಗೌರಮ್ಮ ಶಿಕಾರಿಪುರದ ಗಾರ್ಮೆಂಟ್ಸ್​​ನಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ಗಂಡ ಮನು ಮನೆಗೆ ಬಂದಾಗ ಪತ್ನಿ…

Read More

ಕೊಡಚಾದ್ರಿ ಬೆಟ್ಟವೇರಿದ್ದ ಕೇರಳ ಮೂಲದ ವ್ಯಕ್ತಿ ಹೃದಯಾಘಾತದಿಂದ ಸಾವು|Kodachadri

ಕೊಡಚಾದ್ರಿ ಗಿರಿ ಹತ್ತಿದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಕೇರಳದ ಕನ್ನೂರು ಜಿಲ್ಲೆಯ ವಾಲಪ್ಪಿಲ್ ಸಮೀಪದ ಕೊಟ್ಟಾರತು ಗ್ರಾಮದ ನಿವಾಸಿ ಗೋವಿಂದನ್ ಕುನ್ನಪ್ಪ (72) ಮೃತ ವ್ಯಕ್ತಿ ಶುಕ್ರವಾರದಂದು ಕೇರಳದಿಂದ ಕೊಲ್ಲೂರು ಶ್ರೀ ಮೂಕಾಂಬಿಕ ದರ್ಶನಕ್ಕೆ ಬಂದಿದ್ದ ಗೋವಿಂದನ್ ಕುಟುಂಬ ಕೊಲ್ಲೂರಿನಲ್ಲಿ ವಾಸ್ತವ್ಯ ಹೂಡಿ ಇಂದು ಬೆಳಿಗ್ಗೆ ಕೊಡಚಾದ್ರಿ ಗಿರಿಗೆ ಹೋಗಿದ್ದು ಪ್ರವಾಸಿಮಂದಿರದಿಂದ ಗಿರಿ ತುದಿಯ ಸರ್ವಜ್ಞ ಪೀಠಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ್ದರು. ಸರ್ವಜ್ಞ ಪೀಠ ತಲುಪಿದ ನಂತರ ಅಲ್ಲೇ ಗೋವಿಂದನ್ ಕುನ್ನಪ್ಪ ಕುಸಿದು…

Read More

Ripponpete| ಪ್ರತಿಯೊಬ್ಬರೂ ಉತ್ತಮ ಆರೋಗ್ಯವನ್ನು ಹೊಂದಿರಬೇಕು : ಮೂಲೆಗದ್ದೇ ಶ್ರೀಗಳು

ರಿಪ್ಪನ್ ಪೇಟೆ ಶ್ರೀ ನಂದಿ ಹಾಸ್ಪಿಟಲ್ ನಲ್ಲಿ  ಉಚಿತ ವೈದ್ಯರ ಸೇವಾ ತಪಾಸಣೆಗೆ ಚಾಲನೆ. ಪ್ರತಿಯೊಬ್ಬರೂ ಉತ್ತಮ ಆರೋಗ್ಯವನ್ನು ಹೊಂದಿರಬೇಕು : ಅಭಿನವ ಚನ್ನಬಸವ ಸ್ವಾಮೀಜಿ ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಒತ್ತಡದ ಜೀವನವನ್ನು ನಡೆಸುತ್ತಿರುವ ಪ್ರತಿಯೊಬ್ಬರು. ತಮ್ಮ ಆರೋಗ್ಯದ ಬಗ್ಗೆ ಗಮನಹರಿಸಿ ಉತ್ತಮ ಆರೋಗ್ಯವನ್ನು ಹೊಂದಿರಬೇಕು ಎಂದು ಶ್ರೀ ಸದಾನಂದ ಶಿವಯೋಗಾಶ್ರಮ ಮೂಲೆ ಗೆದ್ದೆ ಮಠದ ಶ್ರೀ ಅಭಿನವ ಚೆನ್ನಬಸವ ಸ್ವಾಮೀಜಿ ಹೇಳಿದರು. ಪಟ್ಟಣದ ಶ್ರೀ ನಂದಿ ಹಾಸ್ಪಿಟಲ್ ನಲ್ಲಿ ಉಚಿತ ವೈದ್ಯರ…

Read More

ರಿಪ್ಪನ್‌ಪೇಟೆ – 33 ವರ್ಷದ ಮಹಿಳೆ ಕ್ಯಾನ್ಸರ್‌ಗೆ ಬಲಿ | “ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತ ಗೀತಾ”

ರಿಪ್ಪನ್‌ಪೇಟೆ – 33 ವರ್ಷದ ಮಹಿಳೆ ಕ್ಯಾನ್ಸರ್‌ಗೆ ಬಲಿ | “ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತ ಗೀತಾ” ರಿಪ್ಪನ್‌ಪೇಟೆ – ಮಹಾಮಾರಿ ಕ್ಯಾನ್ಸರ್ ಗೆ ಇನ್ನೂ ಬಾಳಿ ಬದುಕಬೇಕಾಗಿದ್ದ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಪಟ್ಟಣದ ವ್ಯಾಪ್ತಿಯಲ್ಲಿ ನಡೆದಿದೆ. ಗವಟೂರು ಗ್ರಾಮದ 33 ವರ್ಷದ ಗೀತಾ ಎಂಬ ಯುವತಿ ಮಹಾಮಾರಿ ಕ್ಯಾನ್ಸರ್‌ನಿಂದ ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಪತಿ ಅನಿಲ್ ಕುಮಾರ್ ಅವರನ್ನು ಅಗಲಿದ ಗೀತಾ ಕಳೆದ ಕೆಲವು ತಿಂಗಳಿನಿಂದ ದುಸ್ತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮೂಲತಃ ಆರೋಗ್ಯವಂತಳಾಗಿದ್ದ…

Read More

ಕನ್ನಡ ಶಿಕ್ಷಕರನ್ನು ಒದಗಿಸಿ – ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮನವಿ ಸಲ್ಲಿಸಿದ ಹೊಸನಗರದ ವಿದ್ಯಾರ್ಥಿನಿಯರು

ಕನ್ನಡ ಶಿಕ್ಷಕರನ್ನು ಒದಗಿಸಿ – ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮನವಿ ಸಲ್ಲಿಸಿದ ಹೊಸನಗರದ ವಿದ್ಯಾರ್ಥಿನಿಯರು ಶಿವಮೊಗ್ಗ: ಕನ್ನಡ ಶಿಕ್ಷಕರನ್ನು ಒದಗಿಸಿ ಎಂದು ಆಗ್ರಹಿಸಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು  ಹೊಸನಗರದಿಂದ ಬಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಘಟನೆ ಗುರುವಾರ ಇಲ್ಲಿ ನಡೆದಿದೆ. ಹೊಸನಗರದ ಜೂನಿಯರ್ ಕಾಲೇಜಿನ ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಸಿದರು. ಕನ್ನಡ, ಇಂಗ್ಲೀಷ್ ಬರೆಯಲು ಬಾರದ ಉರ್ದು ಶಿಕ್ಷಕರಿಂದ ಕನ್ನಡ ಪಾಠ ಮಾಡಿಸಲು ಮುಂದಾಗಿರುವ…

Read More

ಸಂಚಾರ ನಿಯಮ ಉಲ್ಲಂಘನೆಗೆ ‘ಅದೃಶ್ಯ ಪೊಲೀಸ್’ ಕಣ್ಣು : 500ಕ್ಕೂ ಹೆಚ್ಚು ಪ್ರಕರಣ ದಾಖಲು, ಮನೆ ಬಾಗಿಲಿಗೆ ಅಂಚೆ ಮೂಲಕ ದಂಡದ ನೋಟಿಸ್!

Over 500 traffic violation cases have been registered in Ripponpet under the ITMS system, with penalty notices being sent directly to vehicle owners’ homes via post for rule violations. ಸಂಚಾರ ನಿಯಮ ಉಲ್ಲಂಘನೆಗೆ ‘ಅದೃಶ್ಯ ಪೊಲೀಸ್’ ಕಣ್ಣು : 500ಕ್ಕೂ ಹೆಚ್ಚು ಪ್ರಕರಣ ದಾಖಲು, ಮನೆ ಬಾಗಿಲಿಗೆ ಅಂಚೆ ಮೂಲಕ ದಂಡದ ನೋಟಿಸ್! ರಿಪ್ಪನ್ ಪೇಟೆ : ರಸ್ತೆಯಲ್ಲಿ ಪೊಲೀಸ್ ಕಾಣಿಸಿದರೆ ಹೆಲ್ಮೆಟ್ ತಕ್ಷಣ ತಲೆಗೆ…

Read More

ಹೊಸನಗರ: ಯುವಕನ ಕಿಡ್ನಿ ವೈಫಲ್ಯ,ಚಿಕಿತ್ಸೆಗೆ ನೆರವು ಯಾಚನೆ :

ಹೊಸನಗರ: ಇಲ್ಲಿನ ಮಾರಿಗುಡ್ಡ ವಾಸಿಯಾದ ಯುವಕನೊಬ್ಬ 3 ವರ್ಷಗಳಿಂದ ಕಿಡ್ನಿ ವೈಫಲ್ಯಕ್ಕೊಳಗಾಗಿದ್ದು, ಚಿಕಿತ್ಸೆ ವೆಚ್ಚ ಭರಿಸಲಾಗದೆ ಅವರ ಕುಟುಂಬ ದಾನಿಗಳಿಂದ ನೆರವು ಯಾಚಿಸಿದೆ. ಹೊಸನಗರದ ಮಾರಿಗುಡ್ಡ ವಾಸಿಯಾದ ಮಂಜುನಾಥ ಮತ್ತು ಪದ್ಮಾವತಿ ದಂಪತಿಗಳ  ಮಗನಾದ 23  ವರ್ಷ ವಯ್ಯಸ್ಸಿನ ಶರತ್ ಎಂಬುವವರು ಸುಮಾರು 3 ವರ್ಷದಿಂದ ಕಿಡ್ನಿ ವೈಫಲ್ಯಗೊಂಡಿದ್ದು, ಆರ್ಥಿಕ ಸಮಸ್ಯೆಯಿಂದಾಗಿ ಡಯಾಲಿಸಿಸ್ ಮಾಡಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.  ಈಗಾಗಲೇ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಆರಂಭವಾಗಿದೆ, ಇನ್ನೂ ಹೆಚ್ಚಿನ  ಚಿಕಿತ್ಸೆಗಾಗಿ ಬೆಂಗಳೂರಿನ ಹೊಸೂರು ರಸ್ತೆಯ ನಾರಾಯಣ…

Read More

ಯುವಕನಿಗೆ ಡಿಕ್ಕಿ ಹೊಡೆದು ಪರಾರಿಯಾದ ವಾಹನ : ಯುವಕ ಸ್ಥಳದಲ್ಲೇ ಸಾವು

ಸಾಗರ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಪ್ರಗತಿ ಶಾಲೆಯ ಬಳಿ ವಾಹನವೊಂದು ಢಿಕ್ಕಿಯಾಗಿ ಪರಾರಿಯಾದ ಕಾರಣ ಬೈಕ್‌ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.  ವಾಹನ ಮುಂಭಾಗದಿಂದ ಢಿಕ್ಕಿ ಹೊಡೆದು,ಸುಮಾರು ದೂರ ಯುವಕನ ದೇಹವನ್ನು ಎಳೆದುಕೊಂಡು ಹೋಗಿದೆ. ಬೈಕ್‌ ಚಲಾಯಿಸುತ್ತಿದ್ದ ಕುಗ್ವೆ ಗ್ರಾಮದ ನಿವಾಸಿ ರಂಜಿತ್ ಕುಮಾರ್ (26) ಎನ್ನುವ ಯುವಕ ರಸ್ತೆಗೆ ಅಪ್ಪಳಿಸಿ ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ರಸ್ತೆಗೆ ಬಿದ್ದ ಪರಿಣಾಮ ತಲೆ ಒಡೆದು ತೀವ್ರವಾಗಿ ರಕ್ತ ಸ್ರಾವವಾಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ.  ಪೊಲೀಸರು…

Read More

ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಪೋಷಣ್ ಅಭಿಯಾನ: ಚಂದ್ರಕಲಾ | ಗರ್ಭಿಣಿಯರು ಧನಾತ್ಮಕವಾಗಿ ಆಲೋಚಿಸಲಿ : ಉಬೇದುಲ್ಲಾ ಷರೀಫ್

ರಿಪ್ಪನ್‌ಪೇಟೆ: ಸಮಾಜದ ಪ್ರತಿಯೊಬ್ಬರು ಆರೋಗ್ಯವಾಗಿದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ. ಪ್ರಸ್ತುತ ಅಪೌಷ್ಠಿಕತೆಯಿಂದ ಬಳಲುತ್ತಿರುವ ಜನರನ್ನು ಅನಾರೋಗ್ಯ ಮುಕ್ತರನ್ನಾಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಉದ್ದೇಶದಿಂದ ಸರಕಾರ ಪೋಷಣ್ ಅಭಿಯಾನವನ್ನು ಜಾರಿಗೆ ತಂದಿಗೆ ಎಂದು ಹೊಸನಗರ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಚಂದ್ರಕಲಾ  ಹೇಳಿದರು.        ಸಮೀಪದ ಮೂಗುಡ್ತಿ ಸಭಾಭವನದಲ್ಲಿ ಬುಧವಾರ ಗ್ರಾಮ ಪಂಚಾಯತಿ ಹೆದ್ದಾರಿಪುರ ಮತ್ತು ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶುಅಭಿವೃದ್ಧಿ ಯೋಜನೆಯ…

Read More
Exit mobile version