Headlines

ಖಾಸಗಿ ಪ್ರಭಾವಿ ವ್ಯಕ್ತಿಗಳ ಮೋಸದ ಜಾಲಕ್ಕೆ ಮನೆ ಕಳೆದುಕೊಂಡು ಬೀದಿ ಪಾಲಾಗಿರುವ 65 ರ ವೃದ್ದೆ :

ಹೊಸನಗರ : ಮಾನಸಿಕ ಅಸ್ವಸ್ಥ ಮಗನೊಂದಿಗೆ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ವೃದ್ದ ಮಹಿಳೆಯೊಬ್ಬರಿಗೆ ಪ್ರಭಾವಿ ಖಾಸಗಿ ವ್ಯಕ್ತಿಯೊಬ್ಬ ಬೆದರಿಸಿ ಅವರ ಆಸ್ತಿ ಕಬಳಿಸಿ ಮನೆಯಿಂದ ಹೊರದಬ್ಬಿರುವ ಘಟನೆ ಬ್ರಹ್ಮೇಶ್ವರ ಗ್ರಾಮದಲ್ಲಿ ನಡೆದಿದೆ. ಬ್ರಹ್ಮೇಶ್ವರ ಗ್ರಾಮದ ಶಾರದಮ್ಮ ಎಂಬ 65 ರ ವೃದ್ದೆ 30 ವರ್ಷಗಳ ಹಿಂದೆಯೇ ಪತಿಯನ್ನು ಕಳೆದುಕೊಂಡಿದ್ದು, ಮೊದಲನೆ ಮಗ ವೀರಪ್ಪ ನಾಲ್ಕು ವರ್ಷಗಳ ಹಿಂದೆ ಮೃತಪಟ್ಟಿದ್ದಾನೆ.ಮಾನಸಿಕ ಅಸ್ವಸ್ಥನಾಗಿರುವ ಎರಡನೇ ಮಗ ಜಗದೀಶ್ ಜೊತೆ ಕೂಲಿ ಕೆಲಸ ಮಾಡಿಕೊಂಡು ವಾಸವಾಗಿದ್ದಾರೆ. ಬ್ರಹ್ಮೇಶ್ವರದ ವೃದ್ದೆಯ…

Read More

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರ ವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು

ರಿಪ್ಪನ್ ಪೇಟೆ : ಶ್ರೀ ನಾರಾಯಣಗುರು ವಸತಿ ಶಾಲೆ ಹಾಗೂ ಸಮುದಾಯದ ಅಭಿವೃದ್ಧಿಗೆ ಅನುದಾನ ನೀಡಿದ ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸಿನ ಮಂತ್ರಿ ಯಾಗಿರುವ ಬಸವರಾಜ್ ಬೊಮ್ಮಾಯಿ ಅವರಿಗೆ ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ  ಶ್ರೀ ರೇಣುಕಾನಂದ ಸ್ವಾಮೀಜಿಗಳು ಅಭಿನಂದಿಸಿದ್ದಾರೆ  ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀನಾರಾಯಣಗುರು ವಸತಿ ಶಾಲೆ ಹಾಗೂ ಸಮುದಾಯದ ಅಭಿವೃದ್ಧಿಗೆ ಅನುದಾನ ನೀಡಿರುವ ಕ್ರಮ ಶ್ಲಾಘನೀಯ.  ಸಾಮಾಜಿಕ ಕ್ರಾಂತಿಯ ಹರಿಕಾರರಾದ ಬ್ರಹ್ಮಶ್ರೀ ನಾರಾಯಣ ಗುರುಗಳ…

Read More

ಆರೋಗ್ಯದಾಯಕ ಸಮಾಜ ನಿರ್ಮಾಣಕ್ಕಾಗಿ ಜೈನ ಧರ್ಮ – ಹೊಂಬುಜ ಶ್ರೀ | ಕೆನಡಾದಲ್ಲಿ ನಡೆದ 24 ತೀರ್ಥಂಕರರ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವ

ಹೊಂಬುಜ : ಕೆನಡಾದ ಟೊರೆಂಟೋ ನಗರದಲ್ಲಿ ಜೈನ ಮಂದಿರದಲ್ಲಿ ಇಪ್ಪತ್ತನಾಲ್ಕು ತೀರ್ಥಂಕರರ ವಿಗ್ರಹಗಳಿಗೆ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾಪಿಸಲಾಯಿತು. ಹೊಂಬುಜ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸಾನಿಧ್ಯ ವಹಿಸಿ “ಜೈನ ಧರ್ಮ ಅನಾದಿ ಕಾಲದಿಂದಲೂ ಅಹಿಂಸೆ, ಸತ್ಯ, ಅಚೌರ್ಯ, ಅಪರಿಗ್ರಹ ಮತ್ತು ಬ್ರಹ್ಮಚರ್ಯೆ ಆಚರಣೆಯ ಮಹತ್ವವನ್ನು ಆರೋಗ್ಯದಾಯಕ ಸಮಾಜದ ನಿರ್ಮಾಣಕ್ಕಾಗಿ ಉಪದೇಶಿಸಲ್ಪಟ್ಟಿದೆ” ಎಂದು ವಿವರಿಸಿದರು. ಜೀವನದಲ್ಲಿ ಯಶಸ್ಸನ್ನು ಗಳಿಸಬೇಕೆಂದರೆ ಬದುಕುವ ಮಾರ್ಗವನ್ನು ಬದಲಿಸಿಕೊಳ್ಳ ಬೇಕಾಗುತ್ತದೆ. ಮನುಷ್ಯನು ಜೀವನದಲ್ಲಿ ಎಲ್ಲಾ ರೀತಿಯ ಪ್ರಗತಿಯನ್ನು…

Read More

ರಿಪ್ಪನ್‌ಪೇಟೆ – ಸಿ.ಟಿ. ರವಿ ವಿವಾದಿತ ಹೇಳಿಕೆಗೆ ಸವಿತಾ ಸಮಾಜದ ಆಕ್ರೋಶ | ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆಯ ಎಚ್ಚರಿಕೆ

ಸಿ.ಟಿ. ರವಿ ವಿವಾದಿತ ಹೇಳಿಕೆಗೆ ಸವಿತಾ ಸಮಾಜದ ಆಕ್ರೋಶ ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆ ಎಚ್ಚರಿಕೆ ರಿಪ್ಪನ್‌ಪೇಟೆ : ಮಾಜಿ ಸಚಿವ ಸಿ.ಟಿ. ರವಿ ರವರು ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಪದ ಬಳಸಿ ಮಾತನಾಡಿದ ಆರೋಪದ ಹಿನ್ನೆಲೆ, ರಿಪ್ಪನ್‌ಪೇಟೆ ಸವಿತಾ ಸಮಾಜ ಘಟಕದಿಂದ ಅವರ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ. ಸಮಾಜದ ಸದಸ್ಯರು ನಾಡ ಕಚೇರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಸಿ.ಟಿ. ರವಿರವರು ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ರಾಜ್ಯದಾದ್ಯಂತ ಸಮಾಜದ ಬಾಂಧವರು…

Read More

ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿ 10 ಲಕ್ಷ ರೂ. ಚೆಕ್ ನೀಡಿದ ಬಿಜೆಪಿ ನಾಯಕರು :

ಶಿವಮೊಗ್ಗ ನಗರದಲ್ಲಿ ಭಾನುವಾರ (ಫೆ.20ರಂದು) ಬರ್ಬರವಾಗಿ ಹತ್ಯೆಯಾಗಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಇಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​​, ಉಪಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ನೀಡಿ ಕುಟುಂಸ್ಥರಿಗೆ ಸಾಂತ್ವನ ಹೇಳಿದರು. ಇದೇ ಸಂಧರ್ಭದಲ್ಲಿ ಬಿಜೆಪಿ ಪಕ್ಷದ ವತಿಯಿಂದ10 ಲಕ್ಷ ರೂ. ಚೆಕ್​ಅನ್ನು ಹರ್ಷ ಪೋಷಕರಿಗೆ ಹಸ್ತಾಂತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಹರ್ಷ ಕಗ್ಗೊಲೆ ಆಗುತ್ತೆ ಅಂತ ಕಲ್ಪನೆಯೂ ಇರಲಿಲ್ಲ. ಸರ್ಕಾರ ಯಾರು ಗೂಂಡಾಗಳಿದ್ದಾರೆ ಅವರನ್ನ ಬಂಧನ ಮಾಡಿದೆ….

Read More

ರಿಪ್ಪನ್ ಪೇಟೆಯಲ್ಲಿ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ಕಾರ್ಯಗಾರ : ಆಧುನಿಕ ಸಮಾಜದಲ್ಲಿ ಎಲ್ಲಕ್ಕಿಂತಲೂ ಮಿಗಿಲಾದದ್ದು ಶಿಕ್ಷಣ : ಎಸ್ ಎಲ್ ಭೋಜೇಗೌಡ

ರಿಪ್ಪನ್ ಪೇಟೆ : ಆಧುನಿಕ ಸಮಾಜದಲ್ಲಿ ಎಲ್ಲಕ್ಕಿಂತ ಮಿಗಿಲಾದುದು ಶಿಕ್ಷಣ ಮತ್ತು ಆರೋಗ್ಯ ಎಂದು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಹೇಳಿದರು. ಪಟ್ಟಣದ ಆಶ್ರೀತಾ ಸಭಾಭವನದಲ್ಲಿ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಕಾರ್ಯಾಗಾಗಾರ  ಹಾಗೂ ನಿವೃತ್ತ ಪ್ರಾಚಾರ್ಯರು ಮತ್ತು ಉಪನ್ಯಾಸಕರಿಗೆ  ಅಭಿನಂದನಾ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಸರಕಾರಿ ಕಾಲೇಜುಗಳ ಹಾಗೂ ಶಾಲೆಗಳ ಪರಿಸ್ಥಿತಿ ಹೇಳಿಕೊಳ್ಳುವಷ್ಟು ಚೆನ್ನಾಗಿಲ್ಲ. ಇಡೀ ರಾಜ್ಯದಲ್ಲಿ ಎಲ್ಲಾ ಸರಕಾರಿ ಶಾಲಾ ಕಾಲೇಜುಗಳು  ಮೂಲ ಸೌಕರ್ಯಗಳಿಲ್ಲದೆ…

Read More

ಬಂಕಾಪುರ ಜನತೆಯ ಸಹಕಾರ ಉಸಿರಿರುವವರೆಗೂ ಮರೆಯುವುದಿಲ್ಲ – ಪಿಎಸ್‌ಐ ನಿಂಗರಾಜ್ ಕೆ ವೈ

ಬಂಕಾಪುರ ಜನತೆಯ ಸಹಕಾರ ಉಸಿರಿರುವವರೆಗೂ ಮರೆಯುವುದಿಲ್ಲ – ಪಿಎಸ್‌ಐ ನಿಂಗರಾಜ್ ಕೆ ವೈ ಬಂಕಾಪುರ: ಶಾಂತಿ ಸುವ್ಯವಸ್ಥೆ ಕಾಪಾಡಲು ತಮ್ಮ ಸೇವಾವಧಿಯಲ್ಲಿ ಬಂಕಾಪುರ ಜನರು ನೀಡಿರುವ ಸಹಕಾರ ಜೀವನ ಉಸಿರಿರುವವರೆಗೂ ಮರೆಯಲ್ಲ ಎಂದು ವರ್ಗಾವಣೆಗೊಂಡ ಪಿಎಸ್‌ಐ ನಿಂಗರಾಜ್ ಕೆ ವೈ ಹೇಳಿದರು. ಸೋಮವಾರ ಪಟ್ಟಣದ ಹಳ್ಳಿಕೇರಿ ಬಸವಣ್ಣ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಸನ್ಮಾನ ಸಮಾರಂಭ ದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ ನನ್ನ ಕರ್ತವ್ಯದ ಅವಧಿಯಲ್ಲಿ ಬಂಕಾಪುರದ ಜನತೆ ನೀಡಿದ ಸಹಕಾರ, ಬೆಂಬಲ ಮತ್ತು ನಂಬಿಕೆಗೆ ನಾನು ತುಂಬು…

Read More

ರಿಪ್ಪನ್‌ಪೇಟೆಯಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕಾರಿಣಿ ಸಮಾವೇಶ :

ರಿಪ್ಪನ್‌ಪೇಟೆ:ಸಂಘಟನಾತ್ಮಕ ಸಭೆಯನ್ನು ಬೂತ್ ಮಟ್ಟದಲ್ಲಿ ಸರ್ವಸ್ಪರ್ಶಿ ಸರ್ವವ್ಯಾಪಿ ಕಾರ್ಯಕ್ರಮದ ಸದುಪಯೋಗವನ್ನು ಕಾರ್ಯಕರ್ತರು ಮತದಾರರಿಗೆ ಮನನ ಮಾಡಬೇಕು.ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಸ್ನೇಹಿ ಕಾರ್ಯಕ್ರಮಗಳನ್ನು ಮತದಾರರಿಗೆ ರೂಪಿಸುವ ಮಹಾತ್ಕಾರ್ಯವನ್ನು ಸಂಘಟನೆಗಳು ಮಾಡಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ ಡಿ ಮೇಘರಾಜ್ ಹೇಳಿದರು.  ರಿಪ್ಪನ್‌ಪೇಟೆ ಬಿಜೆಪಿ ಕಛೇರಿಯಲ್ಲಿ ಹುಂಚ-ಕೆರೆಹಳ್ಳಿ ಮಹಾಶಕ್ತಿಕೇಂದ್ರದವರು ಆಯೋಜಿಸಲಾಗಿದ ವಿಸ್ತಾರಕ ಯೋಜನೆಯ ಅವಲೋಕನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಹಿಂದಿನ ಅಟಲ್ ಬಿಹಾರಿ ವಾಜಪೇಯ ಸರ್ಕಾರದ ಅಭಿವೃದ್ಧಿ ಸಾಧನೆಗಳನ್ನು ತಿಳಿಸುವಲ್ಲಿ ವಿಫಲವಾದ ಕಾರಣ ಅಧಿಕಾರ…

Read More

ತೀರ್ಥಹಳ್ಳಿಯ ಛತ್ರಕೇರಿ ಗಣಪತಿ ವಿಸರ್ಜನೆಯಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆ|tth

ತೀರ್ಥಹಳ್ಳಿಯಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆ  ತೀರ್ಥಹಳ್ಳಿ : ಶಾಂತಿ,ಸೌಹಾರ್ಧತೆಗೆ ಹೆಸರಾದ ಊರು ಎಂದರೆ ತೀರ್ಥಹಳ್ಳಿ ಈ ಹೆಸರೇ ಎಲ್ಲರಿಗೂ ಅಚ್ಚು ಮೆಚ್ಚು. ಈ ನಡುವೆ – ತೀರ್ಥಹಳ್ಳಿಯಲ್ಲಿ ಹಿಂದೂ, ಮುಸ್ಲಿಂ ಬಾಂಧವರು ಸೌಹಾರ್ದತೆ ಮೆರೆದಿದ್ದಾರೆ. ಹೌದು.ಸೋಮವಾರ ಛತ್ರಕೆರಿ ಗಣಪತಿ ವಿಸರ್ಜನೆ ವೇಳೆ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಸೀಬಿನಕೆರೆ ಸರ್ಕಲ್ ನಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಅಂಗವಾಗಿ ತಿಂಡಿ ಉಪಹಾರದ ವ್ಯವಸ್ಥೆ – ಮಾಡಿದ್ದು, ಎಲ್ಲರೂ ಸೌಹಾರ್ದಯುತವಾಗಿ ಹಬ್ಬದಲ್ಲಿ ಪಾಲ್ಗೊಂಡರು. ಗಣೇಶ ಹಬ್ಬ ಹಾಗೂ…

Read More

Sudooru | ಕಬ್ಬಿನ ಜ್ಯೂಸ್ ಅಂಗಡಿಯವನ ಮೇಲೆ ಮುಸಿಯಾ ದಾಳಿ – ಮೆಗ್ಗಾನ್ ಗೆ ದಾಖಲು

Sudooru | ಕಬ್ಬಿನ ಜ್ಯೂಸ್ ಅಂಗಡಿಯವನ ಮೇಲೆ ಮುಸಿಯಾ ದಾಳಿ – ಮೆಗ್ಗಾನ್ ಗೆ ದಾಖಲು ಮುಸಿಯಾ ದಾಳಿಯಿಂದ ವ್ಯಕ್ತಿಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೂಡೂರು ಸಮೀಪದ ಐದನೇ ಮೈಲಿಕಲ್ಲು ಬಳಿಯಲ್ಲಿ ನಡೆದಿದೆ. ಲೋಕೇಶ್ ಹೊಸಕೊಪ್ಪ ಎಂಬುವವರಿಗೆ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹನುಮಾನ್‌ ಲಂಗೂರ್‌ ಎಂದು ಕರೆಯಲ್ಪಡುವ ಮುಸಿಯಾಗಳು ಈ ಭಾಗದಲ್ಲಿ ಹೆಚ್ಚು ತೊಂದರೆ ಕೊಡುತ್ತಿದೆ ಎಂದು ಸ್ಥಳೀಯರು ಆರೋಪಿಸುತಿದ್ದಾರೆ. ನಡೆದಿದ್ದೇನು..??? ಐದನೇ ಮೈಲಿಕಲ್ಲು ಬಸ್ ನಿಲ್ದಾಣದ ಬಳಿಯಲ್ಲಿ ಕಬ್ಬಿನ…

Read More