ಶರಾವತಿ ಮುಳುಗಡೆ ಸಂತ್ರಸ್ಥರನ್ನು ಒಕ್ಕಲೆಬ್ಬಿಸಲು ಹೊರಟರೆ ರಕ್ತ ಕ್ರಾಂತಿಯಾಗುತ್ತದೆ : ಸದನದಲ್ಲಿ ಗುಡುಗಿದ ಶಾಸಕ ಹರತಾಳು ಹಾಲಪ್ಪ|halappa
ಶರಾವತಿ ಮುಳುಗಡೆ ಸಂತ್ರಸ್ಥರನ್ನು ಒಕ್ಕಲೆಬ್ಬಿಸಲು ಹೊರಟರೆ ರಕ್ತ ಕ್ರಾಂತಿಯಾಗುತ್ತದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಸದನದಲ್ಲಿ ಗುಡುಗಿದ್ದಾರೆ. ಅಧಿವೇಶನದಲ್ಲಿ ಮಾತನಾಡುತ್ತಾ ಶರಾವತಿ ಮುಳುಗಡೆ ಸಂತ್ರಸ್ಥರನ್ನು ತೆರವುಗೊಳಿಸಲು ಹೊರಟರೆ ರಕ್ತಕ್ರಾಂತಿಯೊಂದಿಗೆ ಸಾಮೂಹಿಕ ಆತ್ಮಹತ್ಯೆ ನಡೆಯುತ್ತದೆ ಅದನ್ನು ತಡೆಯಲು ಸಾಧ್ಯವಿಲ್ಲ ಎಂದು ಗುಡುಗಿದರು. ಲಿಂಗನಮಕ್ಕಿ ಅಣೆಕಟ್ಟೆ ನಿರ್ಮಿಸಲು ಸರ್ಕಾರ ಸುಮಾರು 8 ಸಾವಿರ ಕುಟುಂಬಗಳನ್ನು ರಾತ್ರೋರಾತ್ರಿ ಎಬ್ಬಿಸಿ, ಬೇರೆ ಬೇರೆ ಕಡೆಗಳಲ್ಲಿ ತಂದು ಬಿಟ್ಟಿತು. ಈಗಲೂ ಇವರ ಹೆಸರಿಗೆ…