ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯ – ಶಾಸಕ ಬೇಳೂರು

ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯ – ಶಾಸಕ ಬೇಳೂರು ಹೊಸನಗರ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಬಹಳ ಮುಖ್ಯ ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯಪಟ್ಟರು. ಮಾರುತಿಪುರ ಗ್ರಾಪಂ ವ್ಯಾಪ್ತಿಯ ನಿರೇರಿ ಸರ್ಕಾರಿ ಶಾಲೆಯಲ್ಲಿ ನೂತನ ಶಾಲಾ ಕೊಠಡಿ,ಮೈದಾನ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ ಧ್ಯಜಕಟ್ಟೆ ಉದ್ಘ್ತಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ  ಸರ್ಕಾರಿ ಶಾಲೆಗಳ ಅಭಿವೃದ್ಧಿ ಸರ್ಕಾರದ ಕೆಲಸವಷ್ಟೇ ಎಂಬ…

Read More

ಕೆಸರು ಗುಂಡಿಯಾದ ರಸ್ತೆ: ಗ್ರಾಮಸ್ಥರಿಂದ ಆಕ್ರೋಶ

ಸೊರಬ:ಇಲ್ಲಿನ ಚಂದ್ರಗುತ್ತಿಯ ಬೋವಿ ಕಾಲೋನಿಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಗಾಗಿ ಇಂತಹ ಮಳೆಗಾಲದಲ್ಲಿ ರಸ್ತೆ ಅಗೆದು ಓಡಾಡಲು ಬಾರದ ಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಅಳಲನ್ನು ತೋಡಿಕೊಂಡರು. ಗ್ರಾಮ ಪಂಚಾಯತಿಯ 14ನೇ ಹಣಕಾಸಿನಲ್ಲಿ 1.5 ಲಕ್ಷ ಅನುದಾನದಲ್ಲಿ ಮೊದಲಿದ್ದ 3ಇಂಚ್ ಪೈಪಲೈನ್ ಬದಲಾಯಿಸಿ 2ಇಂಚ್ ಪೈಪ್ ಹಾಕಿದರು. ಮೊದಲು 3 ಇಂಚ್ ಇದ್ದಾಗ ಸ್ವಲ್ಪವಾದರೂ ನೀರು ಬರುತ್ತಿತ್ತು ಆದರೆ ಈವಾಗ ಪೈಪ್ ಬದಲಾವಣೆಯಿಂದ ಸಮರ್ಪಕವಾಗಿ ನೀರು ಬರುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು.  ಗುತ್ತಿಗೆದಾರರು ಬಿಲ್ ಗೋಸ್ಕರ…

Read More

ಭಾರಿ ಮಳೆಗೆ ಧರೆ ಕುಸಿತ : ಶಾಸಕರ ನಿರ್ಲಕ್ಷ್ಯ ಧೋರಣೆ ಖಂಡಿಸಿ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಗ್ರಾಮಸ್ಥರ ಪ್ರತಿಭಟನೆ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಳವಳ್ಳಿ-ತಮ್ಮಡಿಕೊಪ್ಪ ಸಂಪರ್ಕ ರಸ್ತೆಯ ಧರೆ ಕುಸಿದು ಸಂಪರ್ಕ ಕಡಿತಗೊಳ್ಳುವ ಅಪಾಯದ ಅತಂಕದಲ್ಲಿ  ಇರುವ ಹಿನ್ನೆಲೆಯಲ್ಲಿ  ಮಳವಳ್ಳಿ ಮತ್ತು ತಮ್ಮಡಿಕೊಪ್ಪ ಗ್ರಾಮಸ್ಥರು ಇಂದು ಮಾಜಿ ಶಾಸಕ  ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ನೇತ್ರತ್ವದಲ್ಲಿ ಶಾಸಕ ಹರತಾಳು ಹಾಲಪ್ಪ ರವರ ನಿರ್ಲಕ್ಷ್ಯ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸಿದರು. ನಂತರ ಮಾತನಾಡಿದ ಬೇಳೂರು ಮಳವಳ್ಳಿ-ತಮ್ಮಡಿಕೊಪ್ಪದ ಗ್ರಾಮದ  ಸಂಪರ್ಕ ರಸ್ತೆಯು ಸಂಪೂರ್ಣ ಅಪಾಯದ ಸ್ಥಿತಿಯಲ್ಲಿದ್ದು ಈಗಾಗಲೇ ಈ…

Read More

ಕೇಬಲ್ ಕಳವು ಮಾಡುತಿದ್ದ ಇಬ್ಬರು ಆರೋಪಿಗಳು ರಿಪ್ಪನ್‌ಪೇಟೆ ಪೊಲೀಸರ ಬಲೆಗೆ

ಕೇಬಲ್ ಕಳವು ಮಾಡುತಿದ್ದ ಇಬ್ಬರು ಆರೋಪಿಗಳು ರಿಪ್ಪನ್‌ಪೇಟೆ ಪೊಲೀಸರ ಬಲೆಗೆ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದಲ್ಲಿ ನಡೆದ ಕೇಬಲ್ ಕಳವು ಪ್ರಕರಣದಲ್ಲಿ ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳನ್ನು ರಿಪ್ಪನ್‌ಪೇಟೆ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಪತ್ತೆಹಚ್ಚಿ ಬಂಧಿಸಲು ಯಶಸ್ವಿಯಾಗಿದ್ದಾರೆ. ಅರಸಾಳು ಗ್ರಾಮದ ಮಂಜ ಮತ್ತು ನಾಗ ಬಂಧಿತ ಆರೋಪಿಗಳಾಗಿದ್ದಾರೆ. ಅರಸಾಳು ಗ್ರಾಮದಲ್ಲಿ ಹೊಳೆ ಬದಿಯಲ್ಲಿ ಮೋಟಾರ್ ಗಳಿಗೆ ಅಳವಡಿಸುತಿದ್ದ ಕೇಬಲ್ ಗಳನ್ನು ಕದ್ದು ಮಾರುತಿದ್ದ ಆರೋಪಿಗಳು ಅರಸಾಳು ಗ್ರಾಮದಲ್ಲಿ ಸುತ್ತಾಡುತ್ತಿದ್ದ  ಕುರಿತು ಬಂದ ಗುಪ್ತ ಮಾಹಿತಿಯ ಆಧಾರದ…

Read More

ಕೊರೊನಾ ಪಾಸಿಟಿವ್ ಹಿನ್ನಲೆ ರಜೆ ಮೇಲೆ ಹೋಗಿದ್ದ ಕಾನ್ಸ್ ಟೇಬಲ್ ನಾಪತ್ತೆ – ಅದೇ ಸ್ಟೇಷನ್ ನಲ್ಲಿ ದಾಖಲಾಯ್ತು ಕೇಸ್|missing

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಸ್ಟೇಷನ್​ನಲ್ಲಿ ಕೆಲಸ ಮಾಡುತ್ತಿದ್ದ ಪೇದೆಯೊಬ್ಬರು ಕಾಣೆಯಾಗಿದ್ದಾರೆ ಎಂಬ ದೂರೊಂದು ಅದೇ ಸ್ಟೇಷನ್​ನಲ್ಲಿ ದಾಖಲಾಗಿದ್ದು, ಆ ಸಂಬಂಧ ಎಫ್​ಐಆರ್ ಕೂಡ ದಾಖಲಾಗಿದೆ.   ದಿನಾಂಕ: 07-12-2021 ರಿಂದ ಮಾಳೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಸಂತೋಷ್ ಕುಮಾರ್ ಎಂಬವರು ಕೋವಿಡ್ ಪಾಸೀಟಿವ್ ಬಂದ ಹಿನ್ನೆಲೆಯಲ್ಲಿ  24-01-2022 ರಿಂದ ದಿನಾಂಕ:31-01-2022 ರ ವಿಶೇಷ ರಜೆ ತೆಗೆದುಕೊಂಡಿದ್ದರಂತೆ.  ಆನಂತರ  ವಾಪಸ್‌ ಕರ್ತವ್ಯಕ್ಕೆ ಹಾಜರಾಗಿಲ್ಲ. ಅಲ್ಲದೆ ಯಾವುದೇ ರೀತಿಯ ರಜೆಯನ್ನು ಸಹ ಪಡೆದುಕೊಳ್ಳದೆ…

Read More

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ ರಿಪ್ಪನ್‌ಪೇಟೆ :  ರಬ್ಬರ್ ಮರ ಲೀಜ್ ವಿಚಾರವಾಗಿ ಇದ್ದ ಜಗಳದ ಕೇಸನ್ನು  ರಾಜಿ ಮೂಲಕ ಬೇಗ ಮುಗಿಸಿಕೊಡುತ್ತೇನೆ ಎಂದು ಹೇಳಿ ಪಿರ್ಯಾದಿಯಿಂದ ಲಂಚ ಪಡೆಯುತ್ತಿದ್ದ  ಹೊಸನಗರ ನ್ಯಾಯಾಲಯದ ಸಹಾಯಕ  ಸರ್ಕಾರಿ ಅಭಿಯೋಜಕ ರವಿ ಎನ್ನುವವರನ್ನು ಲೋಕಾಯುಕ್ತ  ಪೊಲೀಸರು ಶುಕ್ರವರ ಸಂಜೆ ನ್ಯಾಯಾಲಯದ ಆವರಣದಲ್ಲೇ ಬಂಧಿಸಿದ್ದಾರೆ. ರಿಪ್ಪನ್‌ಪೇಟೆಯ ಕೆರೆಹಳ್ಳಿ ಗ್ರಾಮದ ಅಂಜನ್‌ಕುಮಾರ್ ರವರ ಅವರ  ಕೇಸ್ ಮುಗಿಸಿಕೊಡಬೇಕಾದರೆ 5,೦೦೦ ರೂ ಕೊಡಬೇಕು ಎಂದು ಹೇಳಿ, ಪಿರ್ಯಾದುದಾರರ…

Read More

ಸಿಗಂದೂರು ಸೇತುವೆಗೆ ಯಡಿಯೂರಪ್ಪ ಹೆಸರಿಡುವಂತೆ ವೀರಶೈವ ಮಹಾಸಭಾ ವತಿಯಿಂದ ಒತ್ತಾಯ

ಸಿಗಂದೂರು ಸೇತುವೆಗೆ ಯಡಿಯೂರಪ್ಪ ಹೆಸರಿಡುವಂತೆ ವೀರಶೈವ ಮಹಾಸಭಾ ವತಿಯಿಂದ ಒತ್ತಾಯ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡುವಂತೆ ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಅಧ್ಯಕ್ಷರಾದ ಉಮೇಶ್ ಮಸರೂರು ಆಗ್ರಹಿಸಿದ್ದಾರೆ. ಪಟ್ಟಣದ ಶಿವಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ ಬಿ.ಎಸ್. ಯಡಿಯೂರಪ್ಪ ಕರ್ನಾಟಕ ರಾಜ್ಯಕ್ಕೆ ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಇವರ ಅಧಿಕಾರ ಅವಧಿಯಲ್ಲಿ ಜಿಲ್ಲೆಯನ್ನು  ವಿಶ್ವ…

Read More

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಕೋಮು ಗಲಭೆ ನಡೆಸಲು ಪ್ರಭಾವಿಗಳ ಸಂಚು :

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಕಿರುಕುಳದ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಕೆ. ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಮುಸ್ಲಿಮ್ ಯುವಕನ ಹತ್ಯೆ ಮಾಡುವ ಮೂಲಕ ಕೋಮು ಗಲಭೆಗೆ ಸಂಚು ರೂಪಿಸಲಾಗಿದೆ.ಇದರ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಸದಾಶಿವ ನಗರದ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಒಂದು ಟ್ರಸ್ಟ್ ಇದ್ದು, ಅದರಲ್ಲಿ ದೊಡ್ಡವರು ಸದಸ್ಯರಾಗಿದ್ದಾರೆ. ಆ ಟ್ರಸ್ಟ್ ಸದಸ್ಯರು ಹಾಗೂ…

Read More

ಅಪಘಾತಪಡಿಸಿದ್ದನ್ನು ಪ್ರಶ್ನಿಸಿದ್ದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ.! – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು..!!??

ಅಪಘಾತಪಡಿಸಿದ್ದನ್ನು ಪ್ರಶ್ನಿಸಿದ್ದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ.! – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು..!!?? ಹೊಸನಗರ: ಡಿಸೇಲ್ ಹಾಕಿಸುತ್ತಿದ್ದ ಪಿಕಪ್ ವಾಹನಕ್ಕೆ ರಾಷ್ಟ್ರೀಯ ಪ್ರಕೃತಿ ವಿಕೋಪ‌ ನಿರ್ವಹಣಾ ತಂಡ (NDRF ) ದ ವಾಹನ ಡಿಕ್ಕಿ ಹೊಡೆದಿದ್ದಲ್ಲದೆ, , ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಅದರ ಸಿಬ್ಬಂದಿಗಳು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ಮೂಗಿನಲ್ಲಿ ರಕ್ತ ಬರುವ ಹಾಗೇ  NDRF ಸಿಬ್ಬಂದಿಗಳು ಹಲ್ಲೆ ಮಾಡಿದ್ದಾರೆ ಎಂದು ವ್ಯಕ್ತಿ ಆರೋಪಿಸಿದ್ದಾರೆ. ಹೊಸನಗರ ಪೆಟ್ರೋಲ್ ಬಂಕ್…

Read More

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ ಹೊಸನಗರ ತಾಲೂಕಿನ ಗರ್ತಿಕೆರೆ ಸಮೀಪದ ರಾಮನಸರ ಶ್ರೀನಾಗದೇವತೆ, ಚೌಡೇಶ್ವರಿ ಹಾಗೂ ಪರಿವಾರ ದೇವತೆಗಳ ಸುಬ್ರಹ್ಮಣ್ಯ ಷಷ್ಠಿ ಮತ್ತು ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಶನಿವಾರದಂದು ಗಣಹೋಮ, ಪಂಚ ವಿಂಶತಿ, 108 ಕಲಶಾಭಿಷೇಕ, ಕಲಾತತ್ವ ಅಧಿವಾಸ ಹೋಮ, ಆಶ್ಲೇಷಾ ಬಲಿ ನಡೆಯಿತು. ವೇದಮೂರ್ತಿ ವಿದ್ವಾನ್ ಮುರಳೀಧರ ಕೆದ್ಲಾಯ ಹಾಗೂ ಪ್ರಧಾನ ಅರ್ಚಕ ಸುರೇಶ್ ಭಟ್ ಅವರ ತಂಡ ಪೂಜಾ ವಿಧಿವಿಧಾನಗಳ ನೆರವೇರಿಸಿದರು. ಉಡುಪಿ ಜಿಲ್ಲೆ…

Read More