Headlines

ಹಣದ ವಿಚಾರವಾಗಿ ಖಾರದ ಪುಡಿ ಎರಚಿ ದಾಳಿ ಸ್ಥಳದಲ್ಲಿ ಬೈಕ್ ಸುಟ್ಟು ಭಸ್ಮ!! ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು !!

ಹಣದ ವಿಚಾರದಲ್ಲಿ ಹಾರನಹಳ್ಳಿ ರಫೀಕುಲ್ಲಾ(37) ಎಂಬುವರಿಗೆ ಖಾರದ ಪುಡಿ ಎರಚಿ ಥಳಿಸಿದ್ದು‌‌ ಬೈಕ್ ನ್ನ ಸುಟ್ಟು ಭಸ್ಮ ಮಾಡಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 2 ಗಂಟೆಗೆ ನಡೆದಿದೆ. ತರಕಾರಿ, ಕಾರ್ಪೆಂಟ್ ಕೆಲಸ ಮಾಡಿಕೊಂಡಿದ್ದ ರಫೀಕುಲ್ಲಾ  ಹಾರನಹಳ್ಳಿಯಿಂದ ಶಿವಮೊಗ್ಗಕ್ಕೆ ಬಜಾಜ್ ಪ್ಲಾಟಿನ ದಲ್ಲಿ ಬರುವಾಗ ಯರೇಕೊಪ್ಪದ ಅರಣ್ಯ ಇಲಾಖೆಯ ಪ್ರವೇಶ‌ದ್ವಾರದ ಬಳಿ ಖಾರದ ಪುಡಿ ಎರಚಿ ಮೂವರು  ದಾಳಿ ನಡೆಸಿದ್ದಾರೆ ಕಳೆದ ಎರಡು ತಿಂಗಳ ಹಿಂದೆ ರಫಿಕುಲ್ಲಾ ಪತ್ನಿ ರಿಹಾನಾ ಭಾನು  ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. 13…

Read More

ರಿಪ್ಪನ್‌ಪೇಟೆ ಕಟ್ಟಡ ಕಾರ್ಮಿಕ ಸಂಘದಿಂದ ಮೇಲಿನ ಸಂಪಳ್ಳಿಯ ಬಡ ಮಹಿಳೆಗೆ ಆರ್ಥಿಕ ನೆರವು|rpet news

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡ ಮಹಿಳೆಯ ಕುಟುಂಬಕ್ಕೆ ರಿಪ್ಪನ್‌ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಆರ್ಥಿಕ ನೆರವು ನೀಡಿದ್ದಾರೆ. ಗೃಹಲಕ್ಷ್ಮಿಯರ ರಾಜ್ಯದಲ್ಲೊಬ್ಬಳು ನತದೃಷ್ಟ ಲಕ್ಷ್ಮಿ ಎಂಬ ಅಡಿಬರಹದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಇತ್ತೀಚೆಗೆ ವಿಸ್ಕೃತವಾದ ವರದಿ ಮಾಡಲಾಗಿತ್ತಿ ಈ ವರದಿಯನ್ನು ಗಮನಿಸಿದ ರಿಪ್ಪನ್‌ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಮಹಿಳೆಯನ್ನು ಸಂಪರ್ಕಿಸಿ ನೆರವು ನೀಡಿದ್ದಾರೆ. ನಗದು ಪರಿಹಾರವನ್ನು ನೀಡುವುದರ ಜತೆಗೆ ದಿನಸಿ ವಸ್ತುಗಳ ಕಿಟ್ ಸಹ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ…

Read More

ಶಿವಮೊಗ್ಗಕ್ಕೆ ಈಶ್ವರಪ್ಪ ಕೊಡುಗೆ ಏನು – ಬಿ ವೈ ವಿಜಯೇಂದ್ರ | BYV

ಶಿವಮೊಗ್ಗಕ್ಕೆ ಈಶ್ವರಪ್ಪ ಕೊಡುಗೆ ಏನು – ಬಿ ವೈ ವಿಜಯೇಂದ್ರ ಬಿಜೆಪಿ ವಿರುದ್ಧ ಬಂಡಾಯವೆದ್ದು, ಶಿವಮೊಗ್ಗದಿಂದ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ  ಪರ ಪ್ರಚಾರ ನಡೆಸಿದ ಅವರು, ಈಶ್ವರಪ್ಪ ನಾಮಪತ್ರ ಸಲ್ಲಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ರು. ಈ ಹಿಂದೆ ಈಶ್ವರಪ್ಪ ಸಚಿವರು, ಡಿಸಿಎಂ ಆಗಿದ್ದರು. ಹಾಗಿದ್ದರೂ ಶಿವಮೊಗ್ಗಕ್ಕೆ ಅವರ ಕೊಡುಗೆ ಏನು ಅಂತ ಪ್ರಶ್ನಿಸಿದ್ರು….

Read More

ಕೃಷ್ಣ ಮೃಗದ ಚರ್ಮ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯ ಮಾಲು ಸಮೇತ ಬಂಧನ

ಶಿವಮೊಗ್ಗ ಜಿಲ್ಲೆಯ ಆನಂದಪುರದ ದಾಸಕೊಪ್ಪ ಬಸ್ ನಿಲ್ದಾಣದ ಬಳಿ ಕೃಷ್ಣ ಮೃಗ ಚರ್ಮಗಳ ಮಾರಾಟದಲ್ಲಿ ತೊಡಗಿರುವ ವ್ಯಕ್ತಿಯನ್ನು ಅರಣ್ಯ ಸಂಚಾರಿದಳದ ಪೋಲೀಸರು ಬಂಧಿಸಿದ್ದಾರೆ. ಆನಂದಪುರದ ದಾಸಕೊಪ್ಪ ಬಸ್ ನಿಲ್ದಾಣದಲ್ಲಿ ಕೃಷ್ಣ ಮೃಗದ ಚರ್ಮ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಾಗರ ಅರಣ್ಯ ಸಂಚಾರಿ ದಳದವರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಶಿಕಾರಿಪುರ ತಾಲೂಕಿನ ಮಳವಳ್ಳಿ ತಾಂಡದ ಮುರಳೀಧರ್ ನಾಯ್ಕ್ ಬಂಧಿತ ವ್ಯಕ್ತಿ. ಈತನಿಂದ ಕೃಷ್ಣ ಮೃಗದ ಚರ್ಮಗಳನ್ನು ಮಾಲು ಸಮೇತ  ವಶಪಡಿಸಿಕೊಂಡು,ಪ್ರಕರಣ ದಾಖಲಿಸಿದ್ದಾರೆ. ಪೋಲೀಸ್ ಅರಣ್ಯ ಸಂಚಾರಿದಳದ ಸಬ್…

Read More

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು (06-07-2026) ರಜೆ ಘೋಷಣೆ

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು (06-07-2026) ರಜೆ ಘೋಷಣೆ Hosanagara Taluk has declared a holiday for all schools, colleges, and Anganwadi centres on July 6 due to heavy rainfall and strong winds. The order was issued by Tahsildar Bharat Raj. ಹೊಸನಗರ, ಜುಲೈ 6: ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ…

Read More

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಮಾಡಿದ ಶಾಸಕ ಹರತಾಳು ಹಾಲಪ್ಪ !!!

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಶಾಸಕ ಹರತಾಳು ಹಾಲಪ್ಪ ಸಾಗರ ಹಾಗೂ ಹೊಸನಗರ  ಕ್ಷೇತ್ರದ ಮರಳು ಲಾರಿ ಮಾಲೀಕರಿಂದ ಅಕ್ರಮವಾಗಿ ಕಮಿಶನ್ ಪಡೆದಿದ್ದಾರೆಂದು ಆರೋಪ ಮಾಡಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ತಾವು ಆಣೆ ಮಾಡಬೇಕು ಹಣವನ್ನು ಪಡೆದಿಲ್ಲವೆಂದು ಎಂದು ಸವಾಲು ಎಸೆದಿದ್ದರು. ಇದರ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಶಾಸಕ ಹರತಾಳು ಹಾಲಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳದ ಸನ್ನಿಧಿಯಲ್ಲಿ ನಾವು ಯಾವುದೇ  ಮರಳು ಲಾರಿ ಮಾಲೀಕರಿಂದ ಕಮೀಷನ್ ಹಾಗೂ ಹಣ ಪಡೆದಿಲ್ಲವೆಂದು ಪ್ರಮಾಣ ಮಾಡಿದ್ದಾರೆ. ಬೇಳೂರು ಮಾಡಿರುವ ಆರೋಪಗಳು…

Read More

Ripponpete | ಹೆಚ್ಚುತ್ತಿರುವ ಡೆಂಗ್ಯೂ – ಖಾಸಗಿ ಮೆಡಿಕಲ್ ಶಾಪ್ ಗಳಿಗೆ ವಾರ್ನಿಂಗ್ ಕೊಟ್ಟ ಪಿಎಸ್‌ಐ ಪ್ರವೀಣ್

Ripponpete | ಹೆಚ್ಚುತ್ತಿರುವ ಡೆಂಗ್ಯೂ – ಖಾಸಗಿ ಮೆಡಿಕಲ್ ಶಾಪ್ ಗಳಿಗೆ ವಾರ್ನಿಂಗ್ ಕೊಟ್ಟ ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮರಣ ಮೃದಂಗ ಬಾರಿಸುತಿದ್ದು ಈಗಾಗಲೇ ಒಬ್ಬರು ಸಾವನ್ನಪ್ಪಿ ನೂರಕ್ಕೂ ಹೆಚ್ಚು ಜನ ಡೆಂಗ್ಯೂ ಜ್ವರದಿಂದ ತೀರ್ಥಹಳ್ಳಿ, ಶಿವಮೊಗ್ಗ ಹಾಗೂ ಸಾಗರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಈ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪಟ್ಟಣದ ಎಲ್ಲ ಖಾಸಗಿ ಮೆಡಿಕಲ್ ಶಾಪ್ ಗಳಿಗೆ ತೆರಳಿ ವೈದ್ಯರ ಚೀಟಿಯಿಲ್ಲದೇ ಜ್ವರ ಸಂಬಂಧಿತ ಖಾಯಿಲೆಗಳಿಗೆ…

Read More

ಸಂಸದ ಬಿವೈ ರಾಘವೇಂದ್ರ ಮನೆಗೆ ಯುವ ಕಾಂಗ್ರೆಸ್ ನಿಂದ ಮುತ್ತಿಗೆ ಯತ್ನ – ಕಾರ್ಯಕರ್ತರು ವಶಕ್ಕೆ|protest

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಬಿಜೆಪಿ ಸರ್ಕಾರ ನಿರಾಕರಿಸಿದೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಸಂಸದ ಬಿ ವೈ ರಾಘವೇಂದ್ರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಈ ವೇಳೆ 35ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. 9 ವರ್ಷದಿಂದ ಕೇಂದ್ರದಲ್ಲಿ ಅಧಿಕಾರ ನಡೆಸುವ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣವನ್ನು ಮಾಡುತ್ತಾ ಬಂದಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ 650ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸದೆ…

Read More

ರಿಪ್ಪನ್‌ಪೇಟೆಯಲ್ಲಿ ಕಾಳಸಂತೆಯಲ್ಲಿ ಪಡಿತರ ಮಾರಾಟ : ಆಟೋ ಸಮೇತ ಅಕ್ಕಿ ಹಿಡಿದ ಸಾರ್ವಜನಿಕರು

ರಿಪ್ಪನ್ ಪೇಟೆ : ಇಲ್ಲಿನ ಹಾಸ್ಟೆಲ್ ರಸ್ತೆಯಲ್ಲಿರುವ ನ್ಯಾಯಬೆಲೆ ಅಂಗಡಿಯ ಮಾಲೀಕರು ಅಕ್ರಮವಾಗಿ ಬಡವರಿಗೆ ನೀಡಬೇಕಾಗಿದ್ದ ಸರ್ಕಾರದ ಉಚಿತ ಪಡಿತರ ಸುಮಾರು ಏಳು ಕ್ವಿಂಟಾಲ್ 50 ಕೆಜಿ ಅಕ್ಕಿಯನ್ನು ಕದ್ದು ಆಟೋದಲ್ಲಿ ಅಕ್ರಮವಾಗಿ ಸಾಗಿಸುವಾಗ ಸಾರ್ವಜನಿಕರು ಶಿವಮೊಗ್ಗ ರಸ್ತೆಯ ಖಾಸಗಿ ರೈಸ್ ಮಿಲ್ ನ ಆವರಣದಲ್ಲಿ ತಡೆಹಿಡಿದು ನಿಲ್ಲಿಸಿದ ಪ್ರಸಂಗ ಇಂದು ಮಧ್ಯಾಹ್ನ ನಡೆದಿದೆ. ಇಂದು ಮದ್ಯಾಹ್ನ ಖಾಸಗಿ ಆಟೋ ಗೆ 25 ಕೆಜಿ ಪ್ರಮಾಣದಲ್ಲಿ 30 ಚೀಲ ಪಡಿತರ ಅಕ್ಕಿಯನ್ನು ತುಂಬುತ್ತಿರುವುದನ್ನು ಗಮನಿಸಿದ ವಿನಾಯಕ ನಗರದ…

Read More

ತೀರ್ಥಹಳ್ಳಿ : ಕಾಲು ಜಾರಿ ನದಿಗೆ ಬಿದ್ದು ಮಹಿಳೆ ಸಾವು !

ತೀರ್ಥಹಳ್ಳಿ :  ನದಿಯನ್ನು ದಾಟುವಾಗ ಆಯತಪ್ಪಿ ಕಾಲು ಜಾರಿ ಬಿದ್ದು ಮಹಿಳೆಯೊಬ್ಬರು ಸಾವನ್ನಪಿದ ಘಟನೆ ತಾಲೂಕಿನ ನೆರಟೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನೆಡೆದಿದೆ.  ಮೃತಪಟ್ಟ ಮಹಿಳೆಯನ್ನು ಜಸೋಪ್ರಿನ್ ಮಚಾದೋ (36) ಎಂದು ಗುರುತಿಸಲಾಗಿದೆ. ಮಗನೊಂದಿಗೆ ಅಂಗಡಿಗೆ ಹೋಗಿ ವಾಪಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ವರದಿ : ಪ್ರಶಾಂತ್ ಮೇಗರವಳ್ಳಿ

Read More
Exit mobile version