Headlines

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ ವಾಹನವನ್ನ ತಡೆದು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.  ಕ್ಯಾಂಟರ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ಕ್ಕೂ ಹೆಚ್ಚು ಗೋವುಗಳನ್ನು ಹೊಸನಗರ ತಾಲ್ಲೂಕಿನ ನಗರದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಅಡ್ಡಗಟ್ಟಿ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾರೆ. ಗೋವುಗಳನ್ನು ಅಕ್ರಮವಾಗಿ ಕ್ಯಾಂಟರ್ ಲಾರಿಯಲ್ಲಿ ತುಂಬಿಕೊಂಡು ಹೋಗುತ್ತಿರುವ ಖಚಿತ ಮಾಹಿತಿಯನ್ನರಿತ ಸಂಘಟನೆಯ ಕಾರ್ಯಕರ್ತರು ವಾಹನವನ್ನು ಅಡ್ಡಗಟ್ಟಿ…

Read More

ಆಂಬುಲೆನ್ಸ್ ಡಿಕ್ಕಿಯಾಗಿ ಸೊನಲೆಯ ಪ್ರವೀಣ್ ಸಾವು | ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಅನಾಥಳಾದ ತಾಯಿ

ಆಂಬುಲೆನ್ಸ್ ಡಿಕ್ಕಿಯಾಗಿ ಸೊನಲೆಯ ಪ್ರವೀಣ್ ಸಾವು | ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಅನಾಥಳಾದ ತಾಯಿ ಆಂಬುಲೆನ್ಸ್ ಡಿಕ್ಕಿಯಾಗಿ ಹೊಸನಗರ ಮೂಲದ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿಲುವಾಗಿಲು ಬಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೊನಲೆ ಗ್ರಾಮದ ಪ್ರವೀಣ್ (30) ಎಂದು ಗುರುತಿಸಲಾಗಿದೆ. ನಿಲುವಾಗಿಲು ಬಳಿಯಲ್ಲಿ ಬೈಕ್ ಹಾಗೂ ಆಂಬುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಪ್ರವೀಣ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಕೊಪ್ಪ…

Read More

ಅಂದಾಸುರ ರೈಲ್ವೆ ಹಳಿ ಮೇಲೆ ಪುರುಷನ ಶವ ಪತ್ತೆ – ಕೊಲೆ ಶಂಕೆ !?

ಅಂದಾಸುರ ರೈಲ್ವೆ ಹಳಿ ಮೇಲೆ ಪುರುಷನ ಶವ ಪತ್ತೆ – ಕೊಲೆ ಶಂಕೆ !? ರೈಲ್ವೆ ಹಳಿಯ ಮೇಲೆ ಅನುಮಾನಸ್ಪದ ರೀತಿಯಲ್ಲಿ ಪುರುಷನೊಬ್ಬನ ಶವ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಅಂದಾಸುರ ರೈಲ್ವೆ ಗೇಟ್ ಬಳಿ ನಡೆದಿದೆ. ಅಂದಾಸುರ ರೈಲ್ವೆ ಗೇಟ್ ಸಮೀಪದಲ್ಲಿರುವ ದೇವಸ್ಥಾನವೊಂದರ ಮುಂಭಾಗದಲ್ಲಿ ಮೃತದೇಹ ಪತ್ತೆಯಾಗಿದ್ದು , ಮೃತ ವ್ಯಕ್ತಿಯನ್ನು ಕೋಡೂರು ಮೂಲದ ಜೆಸಿಬಿ ಆಪರೇಟರ್ ಬಸವರಾಜ್ ಎನ್ನಲಾಗುತಿದ್ದು ಇನ್ನಷ್ಟೇ ಮಾಹಿತಿ ತಿಳಿದುಬರಬೇಕಾಗಿದೆ. ರೈಲು ಹಳಿಯ ಮೇಲೆ ಮೃತದೇಹ…

Read More

ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಹೆದ್ದಾರಿಪುರ ಶಿವ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು

ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಹೆದ್ದಾರಿಪುರ ಶಿವ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ಹೊಸನಗರದ ನೆಹರೂ ಮೈದಾನದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ 14 ವರ್ಷದ ವಯೋಮಿತಿಯ ಬಾಲಕರ ವಿಭಾಗದ ಕ್ರೀಡಾಕೂಟದಲ್ಲಿ ಹೆದ್ದಾರಿಪುರ ಶ್ರೀ ಶಿವ ರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಫೈನಲ್ ಪಂದ್ಯದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಹೆದ್ದಾರಿಪುರ ಶ್ರೀ ಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಶಾಲೆಯ ಕಬ್ಬಡಿ ತಂಡ ಗೆಲವು ಪಡೆಯಿತು. ಶಾಲಾ ಮಕ್ಕಳ…

Read More

ಚೀನಾ ಬೆಳ್ಳುಳ್ಳಿ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳ ದಾಳಿ – ಆರೋಗ್ಯಕ್ಕೆ ಹಾನಿಕಾರವಾದ ಬೆಳ್ಳುಳ್ಳಿ ಬಗ್ಗೆ ಇರಲಿ ಎಚ್ಚರ.!!!

ಚೀನಾ ಬೆಳ್ಳುಳ್ಳಿ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳ ದಾಳಿ – ಆರೋಗ್ಯಕ್ಕೆ ಹಾನಿಕಾರವಾದ ಬೆಳ್ಳುಳ್ಳಿ ಬಗ್ಗೆ ಇರಲಿ ಎಚ್ಚರ.!!! ಭಾರತದ ಮಾರು ಕಟ್ಟೆಯಲ್ಲಿ ನಿಷೇಧಿಸಿರುವ ಚೀನದ ಬೆಳ್ಳುಳ್ಳಿ ಈಗ ಕಳ್ಳಮಾರ್ಗದ ಮೂಲಕ ಶಿವಮೊಗ್ಗ ಮಾರುಕಟ್ಟೆ ಪ್ರವೇಶಿಸಿದ್ದು, ಅಧಿಕಾರಿಗಳು50 ಕೆ.ಜಿ.ಗೂ ಹೆಚ್ಚು ಬೆಳ್ಳುಳ್ಳಿ ವಶಪಡಿಸಿಕೊಂಡು ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಚೀನ ಬೆಳ್ಳುಳ್ಳಿ ಕುರಿತು ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ 2 ದಿನಗಳಿಂದ ಭಾರತೀಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ಶಿವಮೊಗ್ಗ ದಲ್ಲಿ 8 ಕಡೆ…

Read More

RIPPONPETE | ಈದ್ ಮಿಲಾದ್ ಕಾರ್ಯಕ್ರಮಕ್ಕೆ ಹೋಳಿಗೆ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಮಹಾಸಭಾ ಸಮಿತಿ

RIPPONPETE | ಈದ್ ಮಿಲಾದ್ ಕಾರ್ಯಕ್ರಮಕ್ಕೆ ಹೋಳಿಗೆ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಮಹಾಸಭಾ ಸಮಿತಿ ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1499ನೇ ಜನ್ಮ ದಿನಾಚರಣೆ ಅಂಗವಾಗಿ ನಡೆಯುತ್ತಿರುವ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯವರು ಹೋಳಿಗೆ ವಿತರಿಸುವ ಮೂಲಕ ಸೌಹಾರ್ಧತೆ ಮೆರೆದಿದ್ದಾರೆ. ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತದಿಂದ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಹಿಂಭಾಗದ ಕೂರ ತಂಝಲ್ ಸಭಾ ಭವನಕ್ಕೆ ತೆರಳಿದ ವೇಳೆಯಲ್ಲಿ…

Read More

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು…

Read More

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಸಂಘಟನೆಯ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಸಂಘಟನೆಯ ಕಾರ್ಯಕರ್ತರು : ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1499ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತಕ್ಕೆ ಆಗಮಿಸುತಿದ್ದಂತೆ ಹಿಂದೂ ಸಂಘಟನೆಯ ಕಾರ್ಯಕರ್ತರು ಎಲ್ಲರಿಗೂ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದರು. ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಹಾಗೂ ಮೆರವಣಿಗೆ ನೋಡಲು ಬಂದಿದ್ದ ಮಹಿಳೆಯರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ತಂಪು ಪಾನೀಯ ವಿತರಿಸಿದ್ದಾರೆ. ರಿಪ್ಪನ್‌ಪೇಟೆ ಪಿಎಸ್‌ಐ…

Read More

ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಏಕ ಬಳಕೆಯ ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹ ಹಾಗೂ ಜಾಗೃತಿ

ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಏಕ ಬಳಕೆಯ ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹ ಅಭಿಯಾನ ರಿಪ್ಪನ್‌ಪೇಟೆ : ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ರಿಪ್ಪನ್‌ಪೇಟೆ ಪದವಿ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿಗಳು ಹಾಗೂ ಗ್ರಾಮ ಪಂಚಾಯತ್ ವತಿಯಿಂದ ಇಂದು ಸ್ವಚ್ಚತೆ ಕುರಿತು ಜಾಗ್ರತೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್ ಪೇಟೆಯ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ, ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಸಹಯೋಗದಲ್ಲಿ …

Read More

ಅಕ್ರಮವಾಗಿ ಸಾಗಿಸುತಿದ್ದ 37 ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತಿದ್ದ 37 ಗೋವುಗಳ ರಕ್ಷಣೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಿಂದ ಮಂಗಳೂರಿನ ಬಿ.ಸಿ ರಸ್ತೆಗೆ  ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ  407 ಐಷರ್ ವಾಹನವನ್ನ ಬಜರಂಗದಳ ಯುವಕರು ತಡೆದು ಜಯನಗರ ಪೊಲೀಸ್ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.  ವಾಹನವನ್ನ ಉಷ ನರ್ಸಿಂಗ್ ಹೋಮ್ ವೃತ್ತದ ಬಳಿ ಹಿಂದೂ ಸಂಘಟನೆಗಳು ತಡೆದಿದ್ದಾರೆ. ನಂತರ 112 ಪೊಲೀಸರಿಗೆ ಕರೆಯಲಾಗಿದೆ. 407 ಐಷರ್ ವಾಹನದಲ್ಲಿ ಟಾರ್ಪಲ್ ಮುಚ್ಚಿ ಸಾಗಿಸಲಾಗುತ್ತಿತ್ತು. ಟಾರ್ಪಲ್ ಸಮೇತ ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನ ತಂದು ನಿಲ್ಲಿಸಲಾಗಿದೆ. ಟಾರ್ಪಲ್ ಬಿಚ್ಚಿ ನೋಡಿದಾಗ…

Read More