Headlines

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯ ಬಂಧನ

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಅ.25 ರಂದು ಮಧ್ಯಾಹ್ನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗರಭಾವಿ ಬಸ್ ನಿಲ್ದಾಣದಲ್ಲಿ  ಮಾದಕ ವಸ್ತುಗಾಂಜಾವನ್ನು  ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಕುಂಸಿ ಪೊಲೀಸರು ಖಡಕ್ ದಾಳಿ ನಡೆಸಿ ಓರ್ವನನ್ನ ಬಂಧಿಸಿದ್ದಾರೆ. ಆರೋಪಿಯಿಂದ ಅಂದಾಜು ಮೌಲ್ಯ 15,000/- ರೂಗಳ 640  ಗ್ರಾಂ ತೂಕದ ಒಣ ಗಾಂಜಾ ಅಮಾನತ್ತು ಪಡಿಸಿಕೊಂಡು ಠಾಣಾ ಗುನ್ನೆ ಸಂಖ್ಯೆ 0213/2024 ಕಲಂ  20(b), 8(c) NDPS…

Read More

ಶಿಗ್ಗಾಂವ್ ಉಪಚುನಾವಣೆ – ಪಕ್ಷೇತರರ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ನಾಮಪತ್ರ ಸಲ್ಲಿಕೆ

ಶಿಗ್ಗಾಂವ್ ಉಪಚುನಾವಣೆ – ಪಕ್ಷೇತರರ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ನಾಮಪತ್ರ ಸಲ್ಲಿಕೆ ಶಿಗ್ಗಾಂವ್ – ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜಿನಾಮೆಯಿಂದ ತೆರವಾಗಿರುವ ಶಿಗ್ಗಾಂವ್ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದ್ದು ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದೆ.ಈ ನಡುವೆ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿ ಶಿಗ್ಗಾವ್ ಪಟ್ಟಣದ ತಹಶೀಲ್ದಾರ ಕಚೇರಿ ಬಳಿ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ಮಾತನಾಡಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದಿನಿ ಕಾಂಗ್ರೆಸ್…

Read More

ANANDAPURA | ಬೈಕ್ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು

ANANDAPURA | ಬೈಕ್ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು TVS ಎಕ್ಸ್‌ಎಲ್‌ ಮತ್ತು ಅಶೋಕ ಲೇಲ್ಯಾಂಡ್‌ ಗೂಡ್ಸ್‌ ವಾಹನದ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆನಂದಪುರ ವ್ಯಾಪ್ತಿಯ ಗೌತಮಪುರದಲ್ಲಿ ಸಂಭವಿಸಿದೆ. ಮೃತರನ್ನು ವಾಸಪ್ಪ (70) ಮತ್ತು ಸತೀಶ್‌ (40) ಎಂದು ಗುರುತಿಸಲಾಗಿದೆ. ಬೆಳಂದೂರು ಗ್ರಾಮದಿಂದ ಆನಂದಪುರದ ಕಡೆ ತೆರಳುತ್ತಿದ್ದ ಟಿವಿಎಸ್ ಎಕ್ಸೆಲ್ ಬೈಕ್ ಹಾಗೂ ಆನಂದಪುರದಿಂದ ತ್ಯಾಗರ್ತಿ ಕಡೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ…

Read More

RIPPONPETE | ಮಳೆಯಿಂದ ಸ್ಥಗಿತಗೊಂಡಿದ್ದ ದ್ವಿಪಥ ರಸ್ತೆ ಕಾಮಗಾರಿ ಚಾಲನೆಗೆ ಸೂಚನೆ

RIPPONPETE | ಮಳೆಯಿಂದ ಸ್ಥಗಿತಗೊಂಡಿದ್ದ ದ್ವಿಪಥ ರಸ್ತೆ ಕಾಮಗಾರಿ ಚಾಲನೆಗೆ ಸೂಚನೆ ರಿಪ್ಪನ್‌ಪೇಟೆ : ಮಳೆಯಿಂದ ಸ್ಥಗಿತಗೊಂಡಿದ್ದ ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ದ್ವಿಪಥ ರಸ್ತೆ ಕಾಮಗಾರಿಯನ್ನು ಪುನರಾರಂಭಿಸುವ ಬಗ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ ಮೇರೆಗೆ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಸಾಗರ ರಸ್ತೆಯ ಎಪಿಎಂಸಿ ಯಿಂದ ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದವರೆಗೂ ದ್ವಿಪಥ ರಸ್ತೆ ಕಾಮಗಾರಿ ಈಗಾಗಲೇ 70% ಮುಕ್ತಾಯವಾಗಿದ್ದು ಮಳೆಯ ಕಾರಣ ಕಳೆದ ನಾಲ್ಕು…

Read More

ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು

ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ವಾಸಿಸುತಿದ್ದ ವೃದ್ದೆಯನ್ನು ಪಿಎಸ್‌ಐ ಪ್ರವೀಣ್ ಹಾಗೂ ಪತ್ರಕರ್ತರು ವೃದ್ದಾಶ್ರಮಕ್ಕೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಭಾಗ್ಯಲಕ್ಷ್ಮಿ ಕೋಂ ನಾರಾಯಣಸ್ವಾಮಿ ಮೂಲತಃ ಅರಸಾಳಿನವರು. ಶಿಕ್ಷಕರಾಗಿದ್ದ ಇವರ ಪತಿ ಕಳೆದ ಕೆಲವು ವರ್ಷಗಳ ಹಿಂದೆ ತೀರಿಕೊಂಡಿದ್ದರು.ಮಕ್ಕಳಿಲ್ಲದ ಅವರು ಕಳೆದ ಎಂಟು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ದುಸ್ತರವಾಗಿರುವ ಈಗಲೋ ಆಗಲೋ…

Read More

ಸರ್ಕಾರಿ ಜಮೀನು ಒತ್ತುವರಿ ತೆರವು

ಸರ್ಕಾರಿ ಜಮೀನು ಒತ್ತುವರಿ ತೆರವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಹೋಬಳಿಯ ಮಳಲಿಕೊಪ್ಪ ಗ್ರಾಮದ ಸರ್ವೆ ನಂಬರ್ 54 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 4 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿದರು. ಮಳಲಿಕೊಪ್ಪ ಗ್ರಾಮದ ಎಂ ಬಿ ದೇವಪ್ಪ , ಬೈರಪ್ಪ ಹಾಗೂ ಇನ್ನಿತರರು  ಸರ್ವೆ ನಂ 54 ರಲ್ಲಿ ಸುಮಾರು ನಾಲ್ಕಕ್ಕೂ ಹೆಚ್ಚು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದರು. ಹುಂಚ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್…

Read More

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು ಆನಂದಪುರ ಸಮೀಪದ ಮಲಂದೂರಿನಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗ ಪಟ್ಟಣದ ನಿವಾಸಿ ಕೃಷ್ಣಮೂರ್ತಿ (46) ಸಾವಿಗೀಡಾದವರು. ಮಲ್ಲಂದೂರಿನ ಸಂತೋಷ್ ಅಗ್ರೋ ಕಂಪನಿಯ ಕಟ್ಟಡ ನಿರ್ಮಾಣ ಕಾರ್ಯ ನಡೆಸುತಿದ್ದಾಗ ಏಕಾಏಕಿ ವಿದ್ಯುತ್ ಪ್ರವಹಿಸಿದೆ ತಕ್ಷಣ ಕಾರ್ಮಿಕರು ಅವರನ್ನು ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ನಕಲಿ ಬ್ಯಾಂಕ್ ಮ್ಯಾನೇಜರ್ ನನ್ನು ನಂಬಿ ಲಕ್ಷಾಂತರ ರೂ ಹಣ ಕಳೆದುಕೊಂಡ ಶಿಕ್ಷಕಿ

ನಕಲಿ ಬ್ಯಾಂಕ್ ಮ್ಯಾನೇಜರ್ ನನ್ನು ನಂಬಿ ಲಕ್ಷಾಂತರ ರೂ ಕಳೆದುಕೊಂಡ ಶಿಕ್ಷಕಿ ಬ್ಯಾಂಕಿಂಗ್ ವ್ಯವಹಾರ ಸಂಬಂಧ ಮಾಹಿತಿ ಪಡೆಯಲು ಗೂಗಲ್‌ನಲ್ಲಿ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರ ಫೋನ್ ನಂಬರ್ ಹುಡುಕಿದ್ದಕ್ಕೆ, ಮಹಿಳೆಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದ ಪ್ರಕರಣ ನಡೆದಿದೆ. ಮಹಿಳೆಯ ಬ್ಯಾಂಕ್ ಖಾತೆಯಿಂದ 9.19 ಲಕ್ಷ ರೂ. ಕಡಿತಗೊಂಡಿದೆ. ಬ್ಯಾಂಕಿಂಗ್ ವ್ಯವಹಾರ ಸಂಬಂಧ ಮಾಹಿತಿ ಪಡೆಯಲು ಶಿಕ್ಷಕಿಯೊಬ್ಬರು (ಹೆಸರು ಗೌಪ್ಯವಾಗಿಡಲಾಗಿದೆ) ಗೂಗಲ್‌ನಲ್ಲಿ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರ ಮೊಬೈಲ್ ನಂಬರ್ ಹುಡುಕಿದ್ದರು. ಅಲ್ಲಿ ದೊರೆತ ನಂಬರ್‌ಗೆ ಕರೆ ಮಾಡಿದಾಗ…

Read More

ಗೊಂಬೆಗಳ ಪಟ್ಟಣದ ಸೈನಿಕನ ಪಕ್ಷಾಂತರದ ಹಾದಿ -ಪಕ್ಷದಿಂದ ಪಕ್ಷಕ್ಕೆ ಹಾರುತ್ತಲೇ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಚತುರ ರಾಜಕಾರಣಿ

ಗೊಂಬೆಗಳ ಪಟ್ಟಣದ ಸೈನಿಕನ ಪಕ್ಷಾಂತರದ ಹಾದಿ -ಪಕ್ಷದಿಂದ ಪಕ್ಷಕ್ಕೆ ಹಾರುತ್ತಲೇ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಚತುರ ರಾಜಕಾರಣಿ ರಾಜಕಾರಣವೆಂಬ ಚದುರಂಗದ ಆಟದಲ್ಲಿ ಪಕ್ಷಾಂತರ ಮಾಡಿಕೊಂಡೇ ರಾಜಕೀಯ ಅಸ್ತಿತ್ವ ಉಳಿಸಿಕೊಂಡು ಬಂದಿರುವ ಸೈನಿಕನಿಗೆ ಇದು ಆರನೇ ಪಕ್ಷಾಂತರ. ಭಾರಿ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ಸೇರಿ ಕಣಕ್ಕಿಳಿಯಲು ಸನ್ನದ್ದನಾಗಿರುವ ಸಿ.ಪಿ. ಯೋಗೇಶ್ವರ್ 25 ವರ್ಷಗಳಿಂದ ರಾಜಕಾರಣದಲ್ಲಿ ಸಕ್ರಿಯವಾಗಿರುವ ಕಾಂಗ್ರೆಸ್, ಬಿಜೆಪಿ, ಸಮಾಜವಾದಿ ಪಕ್ಷ ಸೇರಿದಂತೆ ಮೂರು ಪಕ್ಷಗಳಿಗೆ ಜಿಗಿದು ರಾಜಕಾರಣ ಮಾಡಿದ್ದಾರೆ. ಒಮ್ಮೆ…

Read More

ಪ್ರೇಯಸಿಯ ಗಂಡನ ಕೊಲೆಗೆ ಯತ್ನ – ಪೊಲೀಸ್ ಪೇದೆ ಅರೆಸ್ಟ್!

ಪ್ರೇಯಸಿಯ ಗಂಡನ ಕೊಲೆಗೆ ಯತ್ನ – ಪೊಲೀಸ್ ಪೇದೆ ಅರೆಸ್ಟ್! ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಠಾಣೆಯ ಪೊಲೀಸ್ ಪೇದೆ ಕೊಟ್ರೇಶ್ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಆಯಿಷಾ ಎಂಬುವರ ಜೊತೆ ಅಕ್ರಮ ಸಂಬಂಧ ಬೆಳಸಿದ್ದಾನೆ. ಮಂಗಳವಾರ ಮಧ್ಯರಾತ್ರಿ ಕೊಟ್ರೇಶ್ ಪ್ರೇಯಸಿ ಆಯಿಷಾ ಪತಿಯನ್ನು ಕೊಲೆ ಮಾಡಲು ಯತ್ನಿಸಿದ್ದಾನೆ. ಕೊಲೆ ಮಾಡಲು ಯತ್ನಿಸಿದ್ದ ಪೊಲೀಸ್ ಪೇದೆ ಕೊಟ್ರೇಶ್ (30) ಮತ್ತು ಕೊಲೆಗೆ ಯತ್ನಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕೊಟ್ರೇಶ್ ಪ್ರಿಯತಮೆ ಆಯಿಷಾ (29)ಳನ್ನು ಪೊಲೀಸರು ಬಂಧಿಸಿದ್ದಾರೆ….

Read More
Exit mobile version