Headlines

ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು | Caste barrier for lovers married in love

ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು  ಶಿವಮೊಗ್ಗ:  ಪ್ರೀತಿ ಮಾಡಬಾರದು, ಮಾಡಿದರೆ ಜಗಕೆ ಹೆದರಬಾರದು’ ಹಾಡಿನಂತೆ ಪ್ರೇಮಿಗಳಿಬ್ಬರು ಪ್ರೀತಿ ಮಾಡಿ ಎಲ್ಲರನ್ನೂ ಎದುರಿಸಿ ನಿಂತಿದ್ದಾರೆ, ಇದೀಗ ಈ ಪ್ರೇಮಿಗಳು ಜಾತಿ ಕಾರಣಕ್ಕೆ ಭಯದಲ್ಲೇ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಶಿವಮೊಗ್ಗ ನಗರದ ನವುಲೆ ನಿವಾಸಿಗಳಾದ ಲೇಖನ ಹಾಗೂ ಬಸವರಾಜ್ ಕಳೆದ ಎರಡು ವರ್ಷದಿಂದ ಪ್ರೀತಿ ಮಾಡಿದ್ದರು. ಇದೀಗ ಪ್ರೀತಿ ಮಾಡಿದ ಪರಸ್ಪರ ಒಪ್ಪಿಗೆ ಮೇರೆಗೆ ಕಳೆದ ನಾಲ್ಕು ದಿನದ ಹಿಂದೆ ಮದುವೆಯಾಗಿದ್ದಾರೆ….

Read More

ಮನೆಯ ಗೇಟ್ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನ ಬರ್ಬರ ಹತ್ಯೆ.!!|crime

ಶಿವಮೊಗ್ಗ: ರೌಡಿ‌ಶೀಟರ್ ಮುಜೀಬ್ (32) ಎಂಬಾತನನ್ನು‌ ಮಾರಕಾಸ್ತ್ರಗಳಿಂದ‌ ಕೊಚ್ಚಿ‌ ಕೊಲೆಗೈದ ಘಟನೆ ಕಳೆದ ರಾತ್ರಿ ಭದ್ರಾವತಿಯಲ್ಲಿ ನಡೆದಿದೆ. ಬೊಮ್ಮನಕಟ್ಟೆ ಬಳಿಯ ಹಳೆ ನಂಜಾಪುರದಲ್ಲಿ ಘಟನೆ ಜರುಗಿದೆ. ಮುಜೀಬ್ ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಪ್ರಮುಖ‌ ಆರೋಪಿಯಾಗಿದ್ದ.  ಇಂದು ಬೆಳಗ್ಗೆ ಸ್ಥಳೀಯರು ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೇಪರ್‌ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಜೀಬ್‌ಗೆ ಎರಡು ಮದುವೆಯಾಗಿದ್ದು, ಮೊದಲನೇ ಪತ್ನಿಗೆ ಇಬ್ಬರು ಮತ್ತು ಎರಡನೇ ಪತ್ನಿಗೆ ಒಂದು‌ ಮಗುವಿದೆ. ನಿನ್ನೆ ರಾತ್ರಿ 12…

Read More

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕರು

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಗ್ರಾಂ ಪಂ ವ್ಯಾಪ್ತಿಯ ಬಸವನಗದ್ದೆ ಸಮೀಪದ ಶಿರನಲ್ಲಿ ಬಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಹೊಂಡ ತೆಗೆದು ಕಳಪೆ ಕಾಮಗಾರಿ ನಡೆಸಿದ ಹಿನ್ನಲೆಯಲ್ಲಿ ಉತ್ತಮ ರಸ್ತೆ ಹದಗೆಟ್ಟು ಸಾರ್ವಜನಿಕರು ಓಡಾಡಲು ಹೆದರುವ ಪರಿಸ್ಥಿತಿ ಉಂಟಾಗಿದೆ. ತೀರ್ಥಹಳ್ಳಿ – ಹಣಗೆರೆ – ಶಿವಮೊಗ್ಗಕ್ಕೆ ಹಾದು ಹೋಗುವ ಮುಖ್ಯ ರಸ್ತೆ ಅರ್ಧಕರ್ದ ಬಿರುಕು ಬಿಟ್ಟಿದ್ದು ವಾಹನ…

Read More

ಅಶಾ,ಅಂಗನವಾಡಿ ಕಾರ್ಯಕರ್ತೆಯರ ಸೇವೆ ಪರಮ ಶ್ರೇಷ್ಟ ಸೇವೆ – ಹರತಾಳು ಹಾಲಪ್ಪ|haratalu

ರಿಪ್ಪನ್‌ಪೇಟೆ : ಜಗತ್ತನ್ನೆ ತಲ್ಲಣಗೊಳಿಸಿದ ಕೋರೋನಾ ಮಹಾಮಾರಿಯ ಸಂದರ್ಭದಲ್ಲಿ ಹಗಲಿರುಳು ತಾಯಿಯಂತೆ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಸಮಾಜದ ರಕ್ಷಣೆಗಾಗಿ ಅಶಾ ಅಂಗನವಾಡಿ ಕಾರ್ಯಕರ್ತೆಯರು ಸೇವೆ ಮಾಡಿ ದೇಶಕ್ಕೆ ಮಾದರಿಯಾಗಿದ್ದಾರೆಂದು ಕ್ಷೇತ್ರದ ಶಾಸಕ ಹಾಗೂ ಎಂ.ಎಸ್.ಐ.ಎಲ್.ಅಧ್ಯಕ್ಷ ಹರತಾಳು ಹಾಲಪ್ಪ ಪ್ರಶಂಶೆ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶ್ರೀರಾಘವೇಂದ್ರ ಸ್ವಾಮಿ ಮಠದ ಸಭಾ ವನದಲ್ಲಿ ಅಯೋಜಿಸಲಾದ ಅಂಗನವಾಡಿ ಹಾಗೂ ಅಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಗೌರವ ಸಮರ್ಪಣೆ ಮಾಡಿ ಮಾತನಾಡಿದ ಅವರು ಸರ್ಕಾರದ ಕನಿಷ್ಟ ವೇತನದ ನೌಕರರಾಗಿದ್ದರು ಸಹ…

Read More

ಇಂದಿನಿಂದ (ಮಾ.19 ರಿಂದ 24 ರವರೆಗೆ)  ಹೊಂಬುಜಾ ಅತಿಶಯ ಶ್ರೀಕ್ಷೇತ್ರದಲ್ಲಿ ವಾರ್ಷಿಕ ರಥಯಾತ್ರಾ ಮಹೋತ್ಸವ

ಇಂದಿನಿಂದ (ಮಾ.19 ರಿಂದ 24 ರವರೆಗೆ)  ಹೊಂಬುಜಾ ಅತಿಶಯ ಶ್ರೀಕ್ಷೇತ್ರದಲ್ಲಿ ವಾರ್ಷಿಕ ರಥಯಾತ್ರಾ ಮಹೋತ್ಸವ ಚಾರಿತ್ರಿಕ ಹಿನ್ನೆಲೆಯ ಹೊಂಬುಜ ಕ್ಷೇತ್ರವಿಂದು ಧಾರ್ಮಿಕ-ಆಧ್ಯಾತ್ಮಿಕ ಶ್ರದ್ಧಾ ಭಕ್ತಿಯ ಕೇಂದ್ರ ಎಂಬುದು ಜನಜನಿತವಾಗಿದೆ. ಮಲೆನಾಡಿನ ರಮ್ಯ ವಿಹಂಗಮ ಪ್ರಕೃತಿಯ ಮಡಿಲಲ್ಲಿ ಮೂಲನಾಯಕ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಮತ್ತು ಅಭೀಷ್ಠವರಪ್ರದಾಯಿನಿ ಯಕ್ಷಿ ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಜಿನಮಂದಿರಗಳಿಗೆ 1300 ವರ್ಷಗಳ ಅಪೂರ್ವ ಇತಿಹಾಸವಿದೆ. ಕಾಲಕಾಲಕ್ಕೆ ಪೀಠಧೀಶರಾಗಿದ್ದ ಭಟ್ಟಾರಕ ಪರಂಪರೆಯ ಮಹಾಸ್ವಾಮಿಗಳವರ ಕ್ಷೇತ್ರದಲ್ಲಿ ಜೀರ್ಣೋದ್ಧಾರ, ಸಂರಕ್ಷಣೆ ಮತ್ತು ಜೈನ ಧರ್ಮ ಪ್ರಸಾರದ…

Read More

ರಾಷ್ಟ್ರೀಯ ಹಾಕಿ ಆಟಗಾರ್ತಿ ಕು. ಪೂಜಿತ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದಿಂದ ಸನ್ಮಾನ :

ಗ್ರಾಮೀಣ ಪ್ರದೇಶದ ವರಾಹಿ ಸಾವೆಹಕ್ಲು ಮುಳುಗಡೆ  ಸಂತ್ರಸ್ಥರ ಕಡು ಬಡತನದ ಕುಟುಂಬದಲ್ಲಿ ಹುಟ್ಟಿ ಪ್ರಾಥಮಿಕ ಶಿಕ್ಷಣ ವನ್ನು ಸರಕಾರಿ ಶಾಲೆಯಲ್ಲಿ ಪಡೆದು ನಂತರ ಕ್ರೀಡಾ ಶಾಲೆಗೆ ಸೇರಿ ಕಠಿಣ  ಪರಿಶ್ರಮ ನಿರಂತರ ಅಭ್ಯಾಸದ  ಮೂಲಕ  ಇಂದು ಹಾಕಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ಪೂಜಿತ ಗೌಡ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದಿಂದ ರಿಪ್ಪನ್ ಪೇಟೆ ಪಟ್ಟಣದ ಬರುವೆ ಗ್ರಾಮದ ಪೂಜಿತ ರವರ ಸ್ವ-ಗೃಹದಲ್ಲಿ ಅಭಿನಂದಿಸಿ ಗೌರವಿಸಿಲಾಯಿತು. ಇದೇ ಸಂಧರ್ಭದಲ್ಲಿ ಪೂಜಿತ ರವರನ್ನು ಬೆಂಬಲಿಸಿ ರಾಷ್ಟ್ರ ಮಟ್ಟದ ಕ್ರೀಡಾಪಟುವಾಗಿ…

Read More

ಅಚ್ಚರಿಯ ಮಡೆನೂರು ಜಲಾಶಯ – 60 ವರ್ಷ ನೀರಲ್ಲಿ ಮುಳುಗಿದ್ದರೂ ಅಚ್ಚಳಿಯದ ವಿನ್ಯಾಸ| ಇನ್ಮುಂದೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ರಾಜ್ಯದಲ್ಲಿರುವ ಎಲ್ಲ ಜಲಾಶಯಗಳನ್ನು ನೋಡಬಹುದು. ಆದರೆ ಈ ಜಲಾಶಯವನ್ನು ನೋಡಲು ಸಾಧ್ಯವೇ ಇಲ್ಲ‌. ವರ್ಷಪೂರ್ತಿ ನೀರಿನಲ್ಲೇ ಮುಳುಗಿರುವ ಈ ಜಲಾಶಯ ಕಾಣಸಿಗುವುದೇ ಹತ್ತಾರು ವರ್ಷಗಳಿಗೊಮ್ಮೆ. ಹೌದು! ಶರಾವತಿ ಒಡಲಲ್ಲಿ ಮುಳುಗಿಹೋಗಿರುವ ರಾಜ್ಯದ ಹಳೆಯ ಜಲಾಶಯದ ಕಥೆಯಿದು.ಲಿಂಗನಮಕ್ಕಿ ಜಲಾಶಯ ನಿರ್ಮಾಣಕ್ಕಿಂತ ಮೊದಲು ಅಂದರೆ 20 ವರ್ಷಗಳ ಹಿಂದೆ ಇನ್ನೊಂದು ಜಲಾಶಯ ನಿರ್ಮಿಸಲಾಗಿತ್ತು. ಶರಾವತಿ ನದಿಗೆ ಅಡ್ಡಲಾಗಿ ಮೊದಲು ಹಿರೇಭಾಸ್ಕರ ಎಂಬ ಡ್ಯಾಂನ್ನು ಎಂ ಸುಬ್ಬರಾವ್ ಅಧೀಕ್ಷಕ ಇಂಜಿನಿಯರ್ ನಿರ್ಮಾಣ ಮಾಡಿದ್ದರು. ಇಡೀ ಆಣೆಕಟ್ಟೆಯ ನಿರ್ಮಾಣ ಸುರ್ಕಿ ಅಂದರೆ ಗಾರೆಯಿಂದ…

Read More

Hosanagara | ಜಿಲ್ಲೆಯ ಜನರ ಬಳಿ ಮತ ಕೇಳುವ ನೈತಿಕತೆ ಕಾಂಗ್ರೆಸ್ ಅಭ್ಯರ್ಥಿಗಿಲ್ಲ – ವೀರೇಶ್ ಆಲುವಳ್ಳಿ

ಜಿಲ್ಲೆಯ ಜನರ ಬಳಿ ಮತ ಕೇಳುವ ನೈತಿಕತೆ ಕಾಂಗ್ರೆಸ್ ಅಭ್ಯರ್ಥಿಗಿಲ್ಲ – ವೀರೇಶ್ ಆಲುವಳ್ಳಿ ಹೊಸನಗರ: 5 ವರ್ಷಗಳ ಹಿಂದೆ ಶಿವಮೊಗ್ಗ ಜಿಲ್ಲೆಗೆ ತಾವು ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಯುತ್ತಿದ್ದೀರಿ ಸುಮಾರು 2 ಲಕ್ಷಕ್ಕಿಂತಲೂ ಹೆಚ್ಚು ಮತಗಳು ತಮಗೆ ಬಂದಿದೆ. ಆ ಎರಡು ಲಕ್ಷ ಜನರಿಗೆ ನೀವು ಕಷ್ಟ-ಸುಖಗಳಿಗೆ ಬಂದು ಸ್ಪಂದಿಸದೇ ಈ ಬಾರಿ ನನಗೆ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಎಂದು ಯಾವ ರೀತಿ ಮತದಾರರ ಬಳಿ ಹೋಗಿ ಮತ ಕೇಳುತ್ತೀರಿ ?…

Read More

ಸಿಗಂದೂರು ಸೇತುವೆಗೆ ಚೌಡೇಶ್ವರಿ ಹೆಸರಿಡದಿದ್ದರೆ ಹೋರಾಟದ ಎಚ್ಚರಿಕೆ

ಸಿಗಂದೂರು ಸೇತುವೆಗೆ ಚೌಡೇಶ್ವರಿ ಹೆಸರಿಡದಿದ್ದರೆ ಹೋರಾಟ ಶಿವಮೊಗ್ಗ – ಸಾಗರ ತಾಲೂಕು ಅಂಬಾರಗೊಡ್ಲು ಬಳಿ  ನಿರ್ಮಿಸಲಾಗಿರುವ ಸೇತುವೆಗೆ ಸಿಗಂಧೂರು ಚೌಡೇಶ್ವರಿ ಸೇತುವೆ ಎಂದು ಹೆಸರಿಡದಿದ್ದಲ್ಲಿ  ಉಗ್ರ ಹೋರಾಟ ನಡೆಸಲಾಗುವುದು ಎಂದು ನಾರಾಯಣಗುರು ವಿಚಾರ ವೇದಿಕೆಯ (ಎಸ್‌ಎನ್‌ಜಿವಿ) ಜಿಲ್ಲಾಧ್ಯಕ್ಷ ಪ್ರವೀಣ್ ಹಿರೆಗೋಡು ಎಚ್ಚರಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಗಂದೂರು ಚೌಡೇಶ್ವರಿ ದೇವಸ್ಥಾನದಿಂದಾಗಿ ಆ ಭಾಗ ಹೆಚ್ಚು ಪ್ರಸಿದ್ಧಿಗೆ ಬಂದಿದೆ. ಅದೊಂದು ಧರ್ಮಿಕ ಸ್ಥಳವಾಗಿ, ಪ್ರವಾಸಿ ತಾಣವಾಗಿಯೂ ಹೊರಹೊಮ್ಮಿದೆ. ಬೇರೆ ಹೆಸರಿಡುವುದಕ್ಕಿಂತ ಸಿಗಂದೂರು ಚೌಡೇಶ್ವರಿಯ ಹೆಸರಿಡಬೇಕು ಎಂದ ಅವರು,…

Read More

ಪುನೀತ್ ನೆನಪಿನೋತ್ಸವ ಎಂಬ ನೆನಪಿನ ಕಾರ್ಯಕ್ರಮ|kuppalli

ಪುನೀತ್ ನೆನಪಿನೋತ್ಸವ ಎಂಬ ನೆನಪಿನ ಕಾರ್ಯಕ್ರಮ! – 30 ಮಂದಿ ನೇತ್ರದಾನ: ಕಲೆ, ಕಲಾವಿದರ ಸಮಾಗಮ – 35 ಮಂದಿಗೂ ಹೆಚ್ಚು ಸಾಧಕರು, ಸೇವಕರಿಗೆ ಸನ್ಮಾನ – ಕುಪ್ಪಳಿ ಸಮೀಪದ ಸಣ್ಣ ಹಳ್ಳಿಯಲ್ಲಿ ಮಾದರಿ ಕೆಲಸ  ವಿಶ್ವ ಮಾನವ ಕನ್ನಡ ವೇದಿಕೆ ಹಾಗೂ ಪುನೀತ್ ಬ್ರಿಗೇಡ್, ಕಲ್ಲುಕೊಡಿಗೆ ಕುಪ್ಪಳಿ ಹಾಗೂ ಬೆಕ್ಕನೂರು ಸಮಸ್ತ ಗ್ರಾಮಸ್ಥರ ಸಹಯೋಗದಲ್ಲಿ ಮಾ.17ರಂದು ದಿನವಿಡಿ ಪುನೀತ್ ನೆನಪಿನೋತ್ಸವ-2023 ಕಾರ್ಯಕ್ರಮ ನಡೆದಿದ್ದು ಈ ಕಾರ್ಯಕ್ರಮ ಹತ್ತಾರು ಸಾಮಾಜಿಕ ಕೆಲಸಗಳ ಮೂಲಕ ಮಾದರಿಯಾಯಿತು. ಸಮುದಾಯ ಭವನ,ಮುಸ್ಸಿನಕೊಪ್ಪ,…

Read More
Exit mobile version