Headlines

RIPPONPETE | ಬಟ್ಟೆಮಲ್ಲಪ್ಪದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಪತ್ತೆ

RIPPONPETE | ಬಟ್ಟೆಮಲ್ಲಪ್ಪದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಪತ್ತೆ ರಿಪ್ಪನ್‌ಪೇಟೆ : ಬಟ್ಟೆಮಲ್ಲಪ್ಪ ಗ್ರಾಮದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರನ್ನು ಶಿವಮೊಗ್ಗದಲ್ಲಿ ರಿಪ್ಪನ್‌ಪೇಟೆ ಪೊಲೀಸರು ಪತ್ತೆ ಹಚ್ಚಿ, ಪಟ್ಟಣಕ್ಕೆ ವಾಪಾಸು ಕರೆತಂದಿದ್ದು, ಮರಳಿ ಪೋಷಕರಿಗೆ ಒಪ್ಪಿಸಿದ್ದಾರೆ. ಬಟ್ಟೆಮಲ್ಲಪ್ಪ ಗ್ರಾಮದ ನಿವಾಸಿಗಳಾದ ಸಾತ್ವಿಕ್ (13) ನಿರಂಜನ್ (13)ಎಂಬ ಇಬ್ಬರು ಬಾಲಕರು ಬಟ್ಟೆಮಲ್ಲಪ್ಪದಿಂದ ಶಾಲೆಗೆ ತೆರಳುತ್ತೇವೆ ಎಂದು ಗುರುವಾರ ಬೆಳಿಗ್ಗೆ ನಾಪತ್ತೆಯಾಗಿದ್ದರು. ಶಾಲಾ ಸಮವಸ್ತ್ರ ದೊಂದಿಗೆ ನಾಪತ್ತೆಯಾಗಿದ್ದ ಇಬ್ಬರು ಬಾಲಕರ ಬಗ್ಗೆ ಪೋಷಕಕರಿಗೆ ತಿಳಿಯುತಿದ್ದಂತೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ…

Read More

ಶಿಕಾರಿಪುರ-ಶಿವಮೊಗ್ಗ ಹೆದ್ದಾರಿಯಲ್ಲಿ ಬೆಂಕಿ ಹಚ್ಚಿ ಗ್ರಾಮಸ್ಥರ ಆಕ್ರೋಶ – ಶಿವಮೊಗ್ಗಕ್ಕೂ ವ್ಯಾಪಿಸಿದ ಮೀಸಲಾತಿ ಹೋರಾಟ|Protest

ಶಿಕಾರಿಪುರ ತಾಲ್ಲೂಕಿನ ತಾಲ್ಲೂಕು ಆಫೀಸ್ ಹಾಗೂ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ನಿವಾಸದ ಬಳಿ ನಡೆದ ಬಂಜಾರ, ಬೋವಿ, ಕೊರಮ, ಕೊರಚ ಸಮುದಾಯದ ಪ್ರತಿಭಟನೆ ಇದೀಗ ಜಿಲ್ಲಾ ಕೇಂದ್ರಕ್ಕೂ ವ್ಯಾಪಿಸಿದೆ.   ಒಳ ಮೀಸಲಾತಿ ಜಾರಿ ಸಂಬಂಧ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿ ಹೆದ್ದಾರಿಯಲ್ಲಿ ರಸ್ತೆ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.  ರಸ್ತೆ ಮೇಲೆ ತೆಂಗಿನ ಗರಿ ಇಟ್ಟು ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಶಿವಮೊಗ್ಗ –…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ಜಿ ಎಸ್ ವರದರಾಜ್ ನೇಮಕ |JDS

ರಿಪ್ಪನ್‌ಪೇಟೆ : ಪಟ್ಟಣದ ಜೆ.ಡಿ.ಎಸ್.ಪಕ್ಷದ ಹಿರಿಯ ಸದಸ್ಯ ಜಿ.ಎಸ್. ವರದರಾಜ್‌ರವರನ್ನು ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಎಂ. ಶ್ರೀಕಾಂತ್‌ರವರ ಆದೇಶದ ಮೇರೆಗೆ ಶಿವಮೊಗ್ಗ ಜಿಲ್ಲಾ ಜನತಾದಳ (ಜ್ಯಾತ್ಯಾತೀತ) ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಎನ್. ರಾಮಕೃಷ್ಣರವರು ಆದೇಶ ಹೊರಡಿಸಿದ್ದಾರೆ. ಈ ನೇಮಕಾತಿಗಾಗಿ ಸಹಕರಿಸಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್, ಕಾರ್ಯಧ್ಯಕ್ಷ ಕೆ.ಎನ್ ರಾಮಕೃಷ್ಣರವರಿಗೆ ಜಿ.ಎಸ್. ವರದರಾಜ್ ಕೃತಜ್ಞತೆ ಸಲ್ಲಿಸಿದ್ದಾರೆ.

Read More

ಹಲಾಲ್ ಮಾಂಸ ಮಾರಾಟಗಾರನ ಮೇಲೆ ಬಜರಂಗದಳದವರಿಂದ ಹಲ್ಲೆ: ಪ್ರಕರಣ ದಾಖಲು

ಹಲಾಲ್ ಮಾಂಸ ಮಾರಾಟಗಾರನ ಮೇಲೆ ಬಜರಂಗದಳದ ಸದಸ್ಯರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಧಾರ್ಮಿಕ ವಿಭಜನೆ ಬಿಕ್ಕಟ್ಟು ದಿನಕಳೆದಂತೆ ಹೆಚ್ಚಾಗುತ್ತಿದೆ. ಹಿಜಾಬ್, ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಭಹಿಷ್ಕಾರ, ಹಲಾಲ್ ಕಟ್-ಜಟ್ಕಾ ಕಟ್ ವಿವಾದಗಳು ಒಂದಾದ ಮೇಲೊಂದರಂತೆ ಸಮಾಜದಲ್ಲಿ ಶಾಂತಿಯನ್ನು ಕದಡುತ್ತಿವೆ. ಇದರ ಬೆನ್ನಲ್ಲೆ ಹಲಾಲ್ ಮಾಂಸ ಮಾರಾಟಗಾರನ ಮೇಲೆ ಹಲ್ಲೆ ಮಾಡಿರುವುದು ಹಿಂಸಾಚಾರವನ್ನು ಭುಗಿಲೇಳಲಿದೆ. ಇದಕ್ಕೆ ಬಿಜೆಪಿ ಪ್ರಚೋದನೆ ನೀಡುತ್ತಿದೆ ಎನ್ನುವ ಆರೋಪಗಳನ್ನು ವಿಪಕ್ಷಗಳು ಮಾಡುತ್ತಿವೆ. ಹೀಗಾಗಿ ರಾಜ್ಯದಲ್ಲಿ ಧಾರ್ಮಿಕ…

Read More

ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿದ್ದಕ್ಕೆ ಪರೀಕ್ಷೆಯನ್ನೆ ಬಹಿಷ್ಕರಿಸಿದ ವಿದ್ಯಾರ್ಥಿಗಳು :

ಶಿವಮೊಗ್ಗದಲ್ಲಿ ತಾರಕಕ್ಕರೇರಿದ ಹಿಜಾಬ್ ವಿವಾದ.ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ಬಹಿಷ್ಕರಿಸಿ ವಿದ್ಯಾರ್ಥಿನಿಯರು ಹೊರನಡೆದಿದ್ದಾರೆ. ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ  ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿದ್ದು  ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಬಿಡಲಿಲ್ಲ ಎಂಬ ಕಾರಣಕ್ಕೆ 13 ವಿದ್ಯಾರ್ಥಿ ನಿಯರಿಂದ ಪರೀಕ್ಷೆ ಬಹಿಷ್ಕಾರಿಸಿದ್ದಾರೆ. ಅದರಂತೆ ತುಂಗನಗರ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬಳು ಹಿಜಬ್ ತೆಗೆದು ತರಗತಿಯಲ್ಲಿ ಕೂರಲು ಸಾಧ್ಯವಿಲ್ಲವೆಂದು ತರಗತಿ ಬಹಿಷ್ಕರಿಸಿ ಹೊರನಡೆದಿದ್ದಾಳೆ, ಶಿಕಾರಿಪುರ ಮತ್ತು ಸಾಗರದಲ್ಲಿಯೂ ಇದೇ…

Read More

ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಸರ್ವರ್ ದೋಷ – ಗ್ರಾಹಕರ ಆಕ್ರೋಶ

ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿಗಳ ಮುಂದೆ ಜನಸ್ತೋಮ ಪಡಿತರಕ್ಕಾಗಿ ನಿಂತು ಹೈರಾಣಾಗಿದೆ.ಶುಕ್ರವಾರದಿಂದ ಪಡಿತರ ವಿತರಣೆ ಮಾಡುತ್ತಿದ್ದರೂ, ಎಲ್ಲಾ ಗ್ರಾಹಕರಿಗೆ ಪಡಿತರ ತಲುಪಿಸಲು ಸಾಧ್ಯವಾಗಿಲ್ಲ… ಇದರಿಂದಾಗಿ ಸಾರ್ವಜನಿಕರು ಸಂಬಂಧಿಸಿದವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.ಇದಕ್ಕೆಲ್ಲ ಕಾರಣವಾಗಿದ್ದು ಗ್ರಾಹಕರ ಬೆರಳಚ್ಚು (ಬಯೋಮೆಟ್ರಿಕ್) ಪಡೆಯುವ ಸರ್ವರ್ ಗಳ ದೋಷ , ಇದರಿಂದಾಗಿ ಜನರ ನರಳಾಟ…. ಸರ್ವರ್ ವೈಫಲ್ಯದಿಂದಾಗಿ ಜನರು ನ್ಯಾಯಬೆಲೆ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಲ್ಲುವಂತಾಗಿದೆ… ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿರುವ ಪುರುಷೋತ್ತಮ್ ನ್ಯಾಯಬೆಲೆ ಅಂಗಡಿಯ ಮುಂಭಾಗದಲ್ಲಿ ಪಡಿತರಕ್ಕಾಗಿ ದೂರದ ಹಳ್ಳಿಗಳಿಂದ…

Read More

HUMCHA | ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ 12 ಸದಸ್ಯರು ಅವಿರೋಧ ಆಯ್ಕೆ

HUMCHA | ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ 12 ಸದಸ್ಯರು ಅವಿರೋಧ ಆಯ್ಕೆ ಹುಂಚ : ಸದಾ ಒಂದಿಲ್ಲೊಂದು ವಿವಾದಗಳಿಂದ ಹೊಸನಗರ ತಾಲ್ಲೂಕಿನ ಬಹು ವಿವಾದಿತ ಸೊಸೈಟಿ ಎಂಬ ಹೆಸರಾಗಿರುವ ಹುಂಚಾ ವ್ಯವಸಾಯ ಸಹಕಾರ ನಿಯಮಿತದ ಚುನಾವಣೆಯಲ್ಲಿ ಎಲ್ಲಾ 12 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಸ್ಪರ್ಧೆ ನಡೆಯದೆ, 12 ಸ್ಥಾನಗಳಿಗೆ ಅವಿರೋಧವಾಗಿ ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ಐದು ವರ್ಷಗಳ ಅವಧಿಗೆ ಆಯ್ಕೆಯಾಗಬೇಕಿದ್ದ ಈ…

Read More

ಏ 17 ರ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ – ಬೇಳೂರು

ಏ 17 ರ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ – ಬೇಳೂರು  ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಚುನಾವಣಾ ಕಾವು ರಂಗೇರಿದ್ದು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪ ನಾಮಪತ್ರ ಸಲ್ಲಿಸಿದ್ದು ,ಇನ್ನೂ ಹಲವರು ನಾಮಪತ್ರ ಸಲ್ಲಿಸಿದ್ದಾರೆ. ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಬೇಳೂರು ಗೋಪಾಲಕೃಷ್ಣ ನಾಳೆ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿರುವ ಬೇಳೂರು ನಾಳೆ 11 ಗಂಟೆಗೆ ಕಾರ್ಯಕರ್ತರು ,ಅಭಿಮಾನಿಗಳು ಹಾಗೂ ಹಿತೈಶಿಗಳನ್ನು…

Read More

ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ

ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ ಹಲವು ವರ್ಷಗಳಿಂದ ಅನಾಥ ಶವಗಳನ್ನು ಸಂಸ್ಕಾರ ಮಾಡುತ್ತಾ ಬಂದಿರುವ ತಂದೆ ಹಾಗೂ ಮಗಳ ನಿಸ್ವಾರ್ಥ ಸೇವೆಗೆ ಶಿವಮೊಗ್ಗ ಪೊಲೀಸರು ವಿಶೇಷ ರೀತಿಯಲ್ಲಿ ಗೌರವಿಸಿ ಸನ್ಮಾನಿಸಿದ್ದಾರೆ. ಶಿವಮೊಗ್ಗ ಟೌನ್ ಗಾಡಿಕೊಪ್ಪದ ನಿವಾಸಿ ರವಿ ಎಸ್ ಮತ್ತು ಮಗಳು ಧನುಶ್ರೀ 2005ರಿಂದ ಜಿಲ್ಲೆಯಲ್ಲಿ ಅನಾಥ ಶವಗಳ ಬಗ್ಗೆ ಮಾಹಿತಿ ಸಿಕ್ಕಿದರೆ, ಅಥವಾ ಪೊಲೀಸ್ ಇಲಾಖೆ ಮಾಹಿತಿ ನೀಡಿದರೆ ಅಂತಹ ಶವಗಳನ್ನು ಸಾಗಿಸಿ ಸಂಸ್ಕಾರ ಮಾಡುತ್ತಿದ್ದಾರೆ. ತಂದೆ-ಮಗಳ…

Read More

ಹೊಸನಗರ ತಾಲೂಕ್ ಒಕ್ಕಲಿಗರ ವೇದಿಕೆ ವತಿಯಿಂದ ರಾಷ್ಟ್ರ ಮಟ್ಟದ ಹಾಕಿ ಕ್ರೀಡಾಪಟು ಪೂಜಿತ ಗೌಡ ರವರಿಗೆ ಸನ್ಮಾನ :

ಹಾಕಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ರಿಪ್ಪನ್ ಪೇಟೆಯ ಪೂಜಿತ ಗೌಡ ರವರಿಗೆ ಹೊಸನಗರ ತಾಲೂಕ್ ಒಕ್ಕಲಿಗರ ವೇದಿಕೆ ವತಿಯಿಂದ ರಿಪ್ಪನ್ ಪೇಟೆ ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ರಿಪ್ಪನ್‌ಪೇಟೆಯ ವಿಶ್ವ ಮಾನವ ಸಭಾ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬರುವೆ ಗ್ರಾಮದ ನಿವಾಸಿಗಳಾದ ನಾಗೇಶ್ ಗೌಡ ಹಾಗೂ ಪೂರ್ಣಿಮಾ ದಂಪತಿಗಳ ಮಗಳಾದ ಪೂಜಿತ ರಾಷ್ಟ್ರಮಟ್ಟದಲ್ಲಿ ಹಾಕಿ ಕ್ರೀಡೆಯಲ್ಲಿ ಮಿಂಚುತ್ತಿದ್ದಾಳೆ.ಪೂಜಿತ ಪ್ರಸ್ತುತ ಕರ್ನಾಟಕ ಮಹಿಳಾ ಹಾಕಿ ತಂಡದ ಸಹ ಆಟಗಾರ್ತಿಯಾಗಿದ್ದಾಳೆ. ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅವಕಾಶ…

Read More