Headlines

ಪ್ರಿಯಕರನನ್ನು ಕತ್ತು ಸೀಳಿ ಹತ್ಯೆಗೈದ ಪ್ರೇಯಸಿ..!!! ಭದ್ರಾವತಿಯ ಖಾಸಗಿ ಲಾಡ್ಜ್ ನಲ್ಲಿ ನಡೆದ ಘಟನೆmurder

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೆರಿಟೇಜ್ ಲಾಡ್ಜ್ ನಲ್ಲಿ ಪ್ರೇಯಸಿಯೇ ಪ್ರಿಯಕರನನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ಹಾಸನ ಮೂಲದ ಪರ್ವೇಜ್ ಖಾನ್​ ಎಂಬ ವ್ಯಕ್ತಿಯ ಕೊಲೆಯಾಗಿದೆ. ಪ್ರೇಯಸಿಯೇ ಈ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗುತಿದ್ದು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ. ಹಾಸನದ ಚನ್ನರಾಯಪಟ್ಟಣದ ಮೂಲದ ಆಯಿಷಾ ಮತ್ತು ಜಾವಗಲ್​ ಮೂಲದ ಪರ್ವೇಜ್ ಖಾನ್ ಇಬ್ಬರು ಕಳೆದ ಮೂರು ನಾಲ್ಕು ವರ್ಷಗಳಿಂದ ಸಂಬಂಧ ಹೊಂದಿದ್ದರು ಎನ್ನಲಾಗಿದೆ.  ಇವರಿಬ್ಬರ ಸಂಬಂಧದ ವಿಚಾರಕ್ಕೆ ಮನನೊಂದಿದ್ದ ಆಯಿಷಾ ಳ ಪತಿ ಇವಳನ್ನು…

Read More

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು ಸ್ಮರಣೀಯರು : ಅಭಿಷೇಕ್ ಹುಂಚ

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು ಸ್ಮರಣೀಯರು. ಅವರು ದೇಶದ ಸ್ವಾಭಿಮಾನ, ಸಮಾನತೆ, ಸೋದರ ಭಾವನೆಗಳನ್ನು ಬೆಳೆಸುವ ಸನ್ಮಾರ್ಗಕ್ಕೆ ಬೆಳಕಾಗಿದ್ದರು ಎಂದು ಯುವ ಮುಖಂಡ ಅಭಿಷೇಕ್ ಹುಂಚ ಹೇಳಿದರು. ಹುಂಚದಲ್ಲಿ(HUMCHA) ಇಂದು ಪಂಡಿತ್ ದೀನ್ ದಯಾಳ್ ಜೀ ಅವರ ಜನ್ಮದಿನಾಚರಣೆ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು ದೀನ್ ದಯಾಳ್ ಅಧಿಕಾರಕ್ಕಾಗಿ ಆಸೆ ಪಟ್ಟವರಲ್ಲ. ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸುವ ಕಳಕಳಿ ಹೊಂದಿದ್ದರು. ಸಮಾಜದಲ್ಲಿ ಮೇಲು-ಕೀಳು ಭಾವನೆ ದೂರವಾಗಬೇಕೆಂದು ಬಯಸಿದ್ದರು. ಸರಕಾರಿ ಯೋಜನೆಗಳು…

Read More

ಅಕ್ರಮ‌ ಮರಳು ಸಾಗಾಟ: 10 ಟ್ರ್ಯಾಕ್ಟರ್, ಜೆಸಿಬಿ, ಲಾರಿ ವಶಕ್ಕೆ!

ಅಕ್ರಮ‌ ಮರಳು ಸಾಗಾಟ: 10 ಟ್ರ್ಯಾಕ್ಟರ್, ಜೆಸಿಬಿ, ಲಾರಿ ವಶಕ್ಕೆ! ಶಿವಮೊಗ್ಗ : ಅಕ್ರಮ ಮರಳು ಸಾಗಾಟ ನಡೆಸುತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 10 ಟ್ರ್ಯಾಕ್ಟರ್  ಜೆಸಿಬಿ ಹಾಗೂ ಲಾರಿಯನ್ನು ವಶಕ್ಕೆ ಪಡೆದ ಘಟನೆ ಹಾಡೊನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ ಎಸಿ ಸತ್ಯನಾರಾಯಣ ನೇತೃತ್ವದಲ್ಲಿ ಹಾಡೋನಹಳ್ಳಿ ಆಕ್ರಮ ಮರಳು ದಂಧೆಯ ಮೇಲೆ ದಾಳಿ ಮಾಡಿದ್ದು ಈ ದಾಳಿಯ ವೇಳೆ ಸುಮಾರು 10 ಜೆಸಿಬಿ ಲಾರಿ, ಹತ್ತಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಸ್ಥಳದಲ್ಲಿದ್ದವು. ಆದರೆ…

Read More

ಪಿಯುಸಿ ಪಲಿತಾಂಶ 2022 : ಶಿವಮೊಗ್ಗ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಇಲ್ಲಿದೆ ನೋಡಿ

ಪಿಯುಸಿ ಪರೀಕ್ಷೆ ಫಲಿತಾಂಶ ಆನ್ ಲೈನ್ ನಲ್ಲಿ ಪ್ರಕಟವಾಗಿದ್ದು, ಶಿವಮೊಗ್ಗದಲ್ಲಿ 66.15% ಫಲಿತಾಂಶ ಬಂದಿರುವ ಬೆನ್ನಲ್ಲೇ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಪ್ರಕಟಗೊಂಡಿದೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಜಿಲ್ಲೆಯಲ್ಲಿ ಒಟ್ಟು 19033 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಇದರಲ್ಲಿ 12590 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಅದರಂತೆ ಪ್ರತಿ ಮೂರು ವಿಭಾಗದಲ್ಲಿ 10 ಜನ ಟಾಪರ್ಸ್ ಎಂದು ಗುರುತಿಸಲಾಗಿದೆ. ಕಲಾ ವಿಬಾಗ : ವಾಣಿಜ್ಯ ವಿಭಾಗ : ವಿಜ್ಞಾನ ವಿಭಾಗ :

Read More

ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯ: ಬಿ ವೈ ರಾಘವೇಂದ್ರ

ಶಿವಮೊಗ್ಗ : ಜಿಲ್ಲೆಯ ವಿವಿಧ ಹಳೆಯ ಕೈಗಾರಿಕೆಗಳು ಕೆಲವು ಕಾರಣಕ್ಕೆ ಮುಚ್ಚುವ ಸ್ಥಿತಿ ಬಂದಿದೆ ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಜಿಲ್ಲೆಯಿಂದ ಕೈಗಾರಿಕಾ ಉದ್ಯಮಿಗಳ ಸಹಕಾರದಿಂದ ಉತ್ಪನ್ನಗಳು ತಲುಪುತ್ತಿದೆ, ಇಲ್ಲಿನ ಉದ್ಯಮಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯವಾಗಿದೆ ಆದ್ದರಿಂದ ನಮ್ಮ ಸೇವೆ ಮತ್ತು ಕೆಲಸಗಳು ಉತ್ತಮ ಗುಣಮಟ್ಟದಾಗಿರಲಿ ಎಂದು ಸಂಸದರಾದ ಬಿ.ವೈ ರಾಘವೇಂದ್ರ ಅವರು ತಿಳಿಸಿದರು. ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ…

Read More

ಧಾರವಾಡದ ಪತ್ರಕರ್ತ ಮೆಹಬೂಬ್ ಮುನವಳ್ಳಿಯ ಬಂಧನ ಖಂಡನಾರ್ಹ – ಗಾರಾ ಶ್ರೀನಿವಾಸ್|munavalli

ಧಾರವಾಡದ ಪತ್ರಕರ್ತ ಮೆಹಬೂಬ್ ಮುನವಳ್ಳಿಯ ಬಂಧನ ಖಂಡನಾರ್ಹ – ಪತ್ರಕರ್ತ ಗಾರಾ ಶ್ರೀನಿವಾಸ್ ರಿಂದ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ  ಪತ್ರಿಕಾ ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಖ್ಯಾನ, ಹಾಗೂ ಮಾನವ ಹಕ್ಕುಗಳ ಕುರಿತಾಗಿ ಪೊಲೀಸ್ ವಲಯದಿಂದ ತಾತ್ವಿಕ ಸಲಹೆಗಳನ್ನು ಸ್ವೀಕರಿಸುವ ಹೊತ್ತು ಪತ್ರಿಕಾಂಗದ ಮುಂದಡಿ ಇದಿಯಾ..? ಎನ್ನುವ ಪ್ರಶ್ನೆಯೊಂದು ಇತ್ತೀಚಿನ ಒಂದಿಷ್ಟು ಪ್ರಕರಣಗಳಲ್ಲಿ ಕಂಡು ಬಂದಿದೆ. ೧೫-೦೩-೨೦೨೩ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಚೀಲೂರು ಬಳಿಯಿರುವ ಗೋವಿನಕೋವಿ ಬಳಿ ರೌಡಿ ಶೀಟರ್ ಹಂದಿ ಅಣ್ಣಿ ಕೊಲೆಯ ಪ್ರತಿಕಾರವಾಗಿ ರೌಡಿ ಶೀಟರ್‌ಗಳಾದ…

Read More

ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ | Job News

ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ (Shivamogga) ಜಿಲ್ಲಾ ವ್ಯಾಪ್ತಿಯ 251 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿ ಇರುವ 14 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ, ರಿಪ್ಪನ್‌ಪೇಟೆ, ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ, ಹೋತನಕಟ್ಟೆ, ತಾಳಗುಂದ, ಮಾರವಳ್ಳಿ, ಅಗ್ರಹಾರ ಮುಚುಡಿ, ಸೊರಬ ತಾಲ್ಲೂಕಿನ ಅಂಡಿಗೆ, ಮುಟುಗುಪ್ಪೆ, ಭದ್ರಾವತಿ ತಾಲ್ಲೂಕಿನ ಹನುಮಂತಾಪುರ, ಸನ್ಯಾಸಿಕೋಡಮಗ್ಗೆ,  ಶಿವಮೊಗ್ಗ ತಾಲ್ಲೂಕಿನ ತುಪ್ಪೂರು, ತೀರ್ಥಹಳ್ಳಿ…

Read More

ಇಲಿ ಪಾಶಾಣ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು – ಸಾವಿಗೆ ಕಾರಣವಾಯ್ತಾ ಪ್ರೇಮ್ ಕಹಾನಿ

ಇಲಿ ಪಾಶಾಣ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು – ಸಾವಿಗೆ ಕಾರಣವಾಯ್ತಾ ಪ್ರೇಮ್ ಕಹಾನಿ ಶಿವಮೊಗ್ಗ: ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯುವಕನ ಆತ್ಮಹತ್ಯೆಯ ಹಿಂದೆ ಪ್ರೇಮ್ ಕಹಾನಿ ಇದೆ ಎಂದು ಹೇಳಲಾಗುತ್ತಿದೆ. ಕುಂಚೇನಹಳ್ಳಿಯ ಕಲ್ಲಾಪುರದ ನಿವಾಸಿ ಸಂಜು (9) ಇಲಿ ಪಾಷಣ ಸೇವಿಸಿ ಆತ್ಮಹತ್ಯೆಯಾಗಿದ್ದಾನೆ.    ಇಲಿ ಪಾಶಾಣ ಸೇವಿಸಿ 10 ದಿನಗಳಾಗಿದ್ದು ನಿನ್ನೆ ಮೆಗ್ಗಾನ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವು ಕಂಡಿದ್ದಾನೆ.ಇಲಿ ಸೇವಿಸಿದ ಎರಡು ದಿನಗಳ ವರೆಗೆ ಸಂಜು ಆರಾಮಾಗಿದ್ದರು. ನಂತರ ಆರೋಗ್ಯ…

Read More

ರಿಪ್ಪನ್ ಪೇಟೆಯಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ “ಸಂಕ್ರಾಂತಿ ಉತ್ಸಾಹ ಹಾಗೂ ಭಜನೆ”.

ರಿಪ್ಪನ್ ಪೇಟೆಯಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ “ಸಂಕ್ರಾಂತಿ ಉತ್ಸಾಹ ಹಾಗೂ ಭಜನೆ”. ರಿಪ್ಪನ್ ಪೇಟೆ : ಪಟ್ಟಣದ ಶ್ರೀ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ವೇದಿಕೆ ಇವರ ಆಶ್ರಯದಲ್ಲಿ  ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಂಕ್ರಾಂತಿ ಉತ್ಸವ ಹಾಗೂ ಬಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು  ವೇದಿಕೆಯ ಅಧ್ಯಕ್ಷ ಸುಮಂಗಳ ಹರೀಶ್ ಹಾಗೂ ಕಾರ್ಯದರ್ಶಿ ರೂಪ ಶಂಕ್ರಪ್ಪ ತಿಳಿಸಿದ್ದಾರೆ. ಸೋಮವಾರ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜನವರಿ 14 ಮಂಗಳವಾರ  ಸಂಜೆ 4 ಗಂಟೆಗೆ  ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ರಿಪ್ಪನ್ ಪೇಟೆ…

Read More

ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ಎನ್.ಡಿ.ಹೆಗಡೆ

ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ಎನ್.ಡಿ.ಹೆಗಡೆ ಆನಂದಪುರ ನಿವಾಸಿಯಾಗಿರುವ ಹೊಸನಗರ ತಾಲೂಕಿನ ಚಿಕ್ಕಜೇನಿ ಪ್ರೌಢ ಶಾಲಾ ಶಿಕ್ಷಕ ಎನ್.ಡಿ.ಹೆಗಡೆಗೆ ಅಕ್ಷರ ದೀಪ ಪೌಂಡೇಶನ್ (ರಿ) ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿ ಘೋಷಿಸಿದೆ. ಸೆ‌.29 ರ ಭಾನುವಾರ ಬೆಳಿಗ್ಗೆ ಶಿರಸಿಯಲ್ಲಿ ನಡೆಯುವ ಮಲೆನಾಡ ಅಕ್ಷರೋತ್ಸವ -2024 ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಜಿಲ್ಲಾ ಘಟಕ ಉತ್ತರ ಕನ್ನಡ ಇದರ ಕಚೇರಿ ಪ್ರಕಟಣೆಯಲ್ಲಿ…

Read More
Exit mobile version