ಕ್ಷುಲ್ಲಕ ವಿಚಾರಕ್ಕೆ ತಂದೆ ಮಗನ ನಡುವೆ ಜಗಳ : ಕೊಲೆಯಲ್ಲಿ ಅಂತ್ಯ

ಶಿವಮೊಗ್ಗ: ಕ್ಷುಲ್ಲಕ ವಿಚಾರಕ್ಕೆ ತಂದೆಯೊಂದಿಗೆ ಜಗಳವಾಡಿದ ಮಗ, ಕೋಪದಲ್ಲಿ ಕೋಲಿನಿಂದ  ಹೊಡೆದು ತಂದೆಯನ್ನು ಕೊಲೆ ಮಾಡಿದ್ದಾನೆ. ಈ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿದ್ದ ದಿನಸಿ ವಸ್ತುಗಳನ್ನು ಮಾರಾಟ ಮಾಡಿ,ಕುಡಿದು ಬರುತ್ತಿದ್ದ ತಂದೆಯನ್ನು ಮಗ ಪ್ರಶ್ನಿಸಿದಾಗ ತಂದೆ ಮತ್ತು ಮಗನ ಮಧ್ಯ ಗಲಾಟೆಯಾಗಿದೆ. ಕೋಪದಲ್ಲಿ ಕೋಲಿನಿಂದ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ. ತಲೆಗೆ ಗಂಭೀರ ಗಾಯವಾಗಿದ್ದ ಆರೋಪಿಯ ತಂದೆ ಮೃತಪಟ್ಟಿದ್ದಾರೆ. ಮಂಡೇನಕೊಪ್ಪದ ಕುಮಾರ ನಾಯ್ಕ (55) ಮೃತಪಟ್ಟ ವ್ಯಕ್ತಿ. ಮನೆಯಲ್ಲಿ ತನ್ನ ಮಗ ಮಧು ಜೊತೆ…

Read More

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್ – ಸಂಚಾರ ವ್ಯತ್ಯಯ ತೀರ್ಥಹಳ್ಳಿ : ಆಗುಂಬೆ ಘಾಟಿಯಲ್ಲಿ  ಬೃಹತ್ ಮರವೊಂದು ಅಡ್ಡಲಾಗಿ ರಸ್ತೆಗೆ ಬಿದ್ದ ಪರಿಣಾಮ ವಾಹನಗಳ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು ಅದರಲ್ಲೂ ಮಣಿಪಾಲ ಆಸ್ಪತ್ರೆಗೆ ಹೋಗುವ ಆಂಬುಲೆನ್ಸ್ ಗಳಿಗೆ ತೊಂದರೆಯಾಗಿದೆ. ಆಗುಂಬೆ ಘಾಟಿಯ ಪ್ರದೇಶದಲ್ಲಿ ಸಂಜೆ ಬಿರುಸಿನ ಗಾಳಿ ಮತ್ತು ಮಳೆಗೆ ಒಂದು ದೊಡ್ಡ ಮರ ರಸ್ತೆ ಮೇಲೆ ಬಿದ್ದ ಪರಿಣಾಮ, ರಾಷ್ಟ್ರೀಯ ಹೆದ್ದಾರಿ 169A–ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸುದೀರ್ಘ ಸಮಯದವರೆಗೆ ಉಡುಪಿ ಮತ್ತು…

Read More

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ಪೊಲೀಸರ ದಾಳಿ , ಓರ್ವ ವಶಕ್ಕೆ!

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ಪೊಲೀಸರ ದಾಳಿ , ಓರ್ವ ವಶಕ್ಕೆ! Police conducted a sudden raid in Harohithlu after illegal oil sales were reported at a grocery shop, leading to the shop owner being caught red-handed. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾರೋಹಿತ್ಲು ಸಮೀಪದ ಕಲ್ಲುಹಳ್ಳ ಗ್ರಾಮದಲ್ಲಿ ಕಿರಾಣಿ ಅಂಗಡಿಯ ಮುಂಭಾಗ ಸಾರ್ವಜನಿಕರಿಗೆ…

Read More

ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟೆಷ್ಟು ಮಳೆ..!? ಇಲ್ಲಿದೆ ಮಾಹಿತಿ | Rain

ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟೆಷ್ಟು ಮಳೆ..!? ಇಲ್ಲಿದೆ ಮಾಹಿತಿ ಶಿವಮೊಗ್ಗ ಜಿಲ್ಲಾದ್ಯಂತ ಬುಧವಾರ ಧಾರಾಕಾರ ಮಳೆಯಾಗಿದ್ದು ಜಿಲ್ಲೆಯಲ್ಲಿ 24 ಗಂಟೆಗಳ ಅವಧಿಯಲ್ಲಿ 55 ಮಿಲಿಮೀಟರ್‌ ಮಳೆಯಾಗಿದೆ.  ತಾಲ್ಲೂಕುವಾರು ಮಳೆಯ ಪ್ರಮಾಣ : ಸಾಗರದಲ್ಲಿ ಅತಿಹೆಚ್ಚು 111.20 MM ಮಳೆಯಾಗಿದೆ.  ಹೊಸನಗರ ತಾಲ್ಲೂಕುನಲ್ಲಿ 100.90 MM ಮಳೆಯಾಗಿದೆ.  ಭದ್ರಾವತಿಯಲ್ಲಿ ಅತಿ ಕಡಿಮೆ 9.10 MM ಮಳೆಯಾಗಿದೆ. ತೀರ್ಥಹಳ್ಳಿಯಲ್ಲಿಯು 100.80 MM ಮಳೆಯಾಗಿದೆ. ಶಿಕಾರಿಪುರದಲ್ಲಿ  18.80 MM ಮಳೆಯಾಗಿದ್ದು ಸೊರಬ ತಾಲ್ಲೂಕಿನಲ್ಲಿ 34.60 MM ಮಳೆಯಾಗಿದೆ. ಶಿವಮೊಗ್ಗದಲ್ಲಿ 15.30 MM…

Read More

ಮಹಿಳೆಯ ಸಹನೆಯನ್ನು ಸರ್ವರೂ ಗೌರವಿಸಿ: ಶ್ರೀಶೈಲ ಜಗದ್ಗುರು

ಮಹಿಳೆಯ ಸಹನೆಯನ್ನು ಸರ್ವರೂ ಗೌರವಿಸಿ: ಶ್ರೀಶೈಲ ಜಗದ್ಗುರು ರಿಪ್ಪನ್‌ಪೇಟೆ: ದೇವ ನಿರ್ಮಿತವಾದ ಈ ಪ್ರಪಂಚವನ್ನು ಮುಂದುವರೆಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುವ ಮಹಿಳೆಯರ ಸಹನೆಯನ್ನು ಸರ್ವರೂ ಗೌರವಿಸಬೇಕೆಂದು ಶ್ರೀಶ್ರೀಶ್ರೀ 1008 ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಕೋಣಂದೂರಿನ ಶ್ರೀಶೈಲ ಸೂರ್ಯ ಸಿಂಹಾಸನ ಶಾಖಾ ಶ್ರೀ ಶಿವಲಿಂಗೇಶ್ವರ ಬೃಹನ್ಮಠದಲ್ಲಿ ಗುರುವಾರ ಆಯೋಜಿಸಲಾಗಿದ್ದ ಇಷ್ಠಲಿಂಗ ಮಹಾಪೂಜೆ ಮತ್ತು 1008 ಮುತ್ತೆದೆಯರಿಗೆ ಉಡಿತುಂಬುವ ಕಾರ್ಯಕ್ರಮಕ್ಕೆ ಚಾಲ£ಯೊಂದಿಗೆ ಆಶೀರ್ವಚನ ನೀಡಿ ಒಂದು ಮನೆಯನ್ನು ಸಂಸ್ಕಾರಯುತವಾಗಿ ರೂಪುಗೊಳಿಸಬೇಕಾದರೆ ಹೆಣ್ಣಿನ ಮಹತ್ವ…

Read More

ದೇಶಾದ್ಯಂತ ಐದು ವರ್ಷ PFI ಮತ್ತು 8 ಅಂಗಸಂಸ್ಥೆಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ :

ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆ ಪಿಎಫ್‌ಐ ಸಂಘಟನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐದು ವರ್ಷ ಬ್ಯಾನ್ ಮಾಡಿದೆ. ಕಾನೂನು ಬಾಹಿರ ಸಂಘಟನೆ ಎಂದು PFI(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳು ಅಥವಾ ರಂಗಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಬ್ಯಾನ್ ಮಾಡಲಾಗಿದೆ ಎಂದು ಸರ್ಕಾರ ಘೋಷಿಸಿದೆ. ಇತ್ತೀಚೆಗಷ್ಟೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ಮಾಡಿದ್ದ ಎನ್‌ಐಎ…

Read More

ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಹೆದ್ದಾರಿಪುರ ಶಿವ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು

ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಹೆದ್ದಾರಿಪುರ ಶಿವ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ಹೊಸನಗರದ ನೆಹರೂ ಮೈದಾನದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ 14 ವರ್ಷದ ವಯೋಮಿತಿಯ ಬಾಲಕರ ವಿಭಾಗದ ಕ್ರೀಡಾಕೂಟದಲ್ಲಿ ಹೆದ್ದಾರಿಪುರ ಶ್ರೀ ಶಿವ ರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಫೈನಲ್ ಪಂದ್ಯದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಹೆದ್ದಾರಿಪುರ ಶ್ರೀ ಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಶಾಲೆಯ ಕಬ್ಬಡಿ ತಂಡ ಗೆಲವು ಪಡೆಯಿತು. ಶಾಲಾ ಮಕ್ಕಳ…

Read More

ರಿಪ್ಪನ್ ಪೇಟೆ: ಫಲಿತಾಂಶಕ್ಕೆ ಹೆದರಿ SSLC ವಿಧ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಬಂದ ವಿಧ್ಯಾರ್ಥಿ ಅಂಕಗಳು ಕಡಿಮೆ ಬರಬಹುದೆಂದು ಹೆದರಿ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ನಡೆದಿದೆ. ಪಟ್ಟಣದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ  ಎಸ್ಎಸ್ಎಲ್ ಸಿ ವ್ಯಾಸಾಂಗ ಮಾಡುತ್ತಿದ್ದ ಕೆಂಚನಾಲದ ವಿಧ್ಯಾರ್ಥಿನಿಯೊಬ್ಬಳು ಇಂದು ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದು  ಮನೆಗೆ ತೆರಳಿ  ಫಲಿತಾಂಶದಲ್ಲಿ ಕಡಿಮೆ ಅಂಕ ಬರಬಹುದು ಎಂದು ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಕೂಡಲೇ ಸಂಬಂಧಿಕರು ರಿಪ್ಪನ್ ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ…

Read More

ರಿಪ್ಪನ್ ಪೇಟೆ ಸಮೀಪ ಕ್ಯಾಂಟರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಯುವಕ ಸಾವು

ರಿಪ್ಪನ್‌ಪೇಟೆ :ಇಲ್ಲಿನ ಸಮೀಪದ ಮೂಗುಡ್ತಿ ಗ್ರಾಮದ ಕಣಬಂದೂರು ತಿರುವಿನಲ್ಲಿ ನಡೆದ ಕ್ಯಾಂಟರ್ ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಹೆದ್ದಾರಿಪುರದ ಪುನೀತ್ (25) ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ರಿಪ್ಪನ್‌ಪೇಟೆಯ ದೇವಿ ಕೋಳಿ ಫಾರಂನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುನೀತ್  ರಾತ್ರಿ 9.30 ರ ವೇಳೆಗೆ ಹೆದ್ದಾರಿಪುರದ ಮನೆಗೆ ಹೋಗುವಾಗ ಮೂಗುಡ್ತಿಯ ಕಣಬಂದೂರು ತಿರುವಿನಲ್ಲಿ ಈ ಅವಘಡ ಸಂಭವಿಸಿದ್ದು ಸ್ಥಳದಲ್ಲೇ ಬೈಕ್ ಸವಾರ ಪುನೀತ್ ತಲೆ ಮೇಲೆ  ಕ್ಯಾಂಟರ್ ಲಾರಿ ಹರಿದ ಪರಿಣಾಮ ಮೃತಪಟ್ಟಿದ್ದಾನೆ….

Read More

ಹಸುವಿಗೆ ನೀರು ಕುಡಿಸಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

 ಹಸುವಿಗೆ ನೀರು ಕುಡಿಸಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದಲ್ಲಿ‌ ನಡೆದಿದೆ. ಬೀರನಕೆರೆ ಗ್ರಾಮದ ರವಿ ನಾಯ್ಕ(18) ಮೃತ ಯುವಕ. ರವಿನಾಯ್ಕ ಭಾನುವಾರ ಮಧ್ಯಾಹ್ನ ಹಸುವಿಗೆ ನೀರು ಕುಡಿಸಲು ಗ್ರಾಮದ ಎಂಪಿಎಂ ಕಟ್ಟೆಯ ಬಳಿ‌ ಹೋದಾಗ, ಹಸು ನೀರಿಗೆ ಇಳಿದಿದೆ. ಈ ವೇಳೆ ಹಸು‌ ನೀರಿನ ಆಳಕ್ಕೆ ಹೋದಾಗ ಹಸುವನ್ನು ಕರೆದುಕೊಂಡು ಬರಲು ಹೋಗಿ ಆತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹಸು ಮನೆಗೆ ಬಂದಿದೆ. ಆದರೆ ರವಿ ಮನೆಗೆ ಬಾರದೆ…

Read More