Headlines

Rameshwaram ಕೆಫೆ ಸ್ಪೋಟ ಪ್ರಕರಣ : ಶಂಕಿತ ಉಗ್ರ ತೀರ್ಥಹಳ್ಳಿಯ ಮುಜಾವಿರ್​​ ಹುಸೇನ್ ಅರೆಸ್ಟ್​..!

Rameshwaram ಕೆಫೆ ಸ್ಪೋಟ ಪ್ರಕರಣ : ಶಂಕಿತ ಉಗ್ರ ತೀರ್ಥಹಳ್ಳಿಯ ಮುಜಾವಿರ್​​ ಹುಸೇನ್ ಅರೆಸ್ಟ್​..! ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಶಂಕಿತ ಉಗ್ರ ಮುಜಾವಿರ್​​ ಹುಸೇನ್​ ಶಾಝಿಬ್ ನನ್ನು NIA ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಉಗ್ರ ಮುಜಾವಿರ್​​ ಹುಸೇನ್​ ಶಾಝಿಬ್​​​​ ಜೊತೆ ಮತ್ತೊಬ್ಬ ಉಗ್ರನ ಬಂಧನ ಆಗಿದೆ ಎನ್ನಲಾಗಿದೆ. NIA ತಂಡದಿಂದ ಕಾರ್ಯಾಚರಣೆ ನಡೆಸಿ ಇಬ್ಬರು ಶಂಕಿತ ಉಗ್ರರನ್ನು ಬಂಧನ ಮಾಡಲಾಗಿದೆ. ಶಂಕಿತ ಉಗ್ರರು ಅಸ್ಸಾಂ…

Read More

ಕೊನೆಗೂ ಬೋನಿಗೆ ಬಿದ್ದ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಜನತೆ|theleopard

ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಕ್ಯಾತಿನಕೊಪ್ಪ ರಸ್ತೆಯ ಸುತ್ತಮುತ್ತಲಿನ ಜಮೀನುಗಳಲ್ಲಿ ಕಳೆದೊಂದು ತಿಂಗಳಿನಿಂದ ಓಡಾಡುತ್ತಿದ್ದ ಚಿರತೆಯೊಂದು, ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಕೊನೆಗೂ ಬಿದ್ದಿದೆ. ಕ್ಯಾತಿನಕೊಪ್ಪ ಗ್ರಾಮದ ಹೊರವಲಯದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಇದು ಗ್ರಾಮಸ್ಥರಲ್ಲಿ ಭಯ ಉಂಟು ಮಾಡಿತ್ತು. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು. ಇತ್ತೀಚೆಗೆ ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮಕೈಗೊಂಡಿತ್ತು. ಸೋಮವಾರ ಮುಂಜಾನೆ ಬೋನಿಗೆ ಚಿರತೆ ಬಿದ್ದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ…

Read More

ರಾಜ್ಯ ಮಹಿಳಾ ಕ್ರಿಕೆಟ್ ತಂಡಕ್ಕೆ ಮಲೆನಾಡಿನ ಪ್ರತಿಭೆ ಅದಿತಿ ರಾಜೇಶ್ ಆಯ್ಕೆ|cricket

ಶಿವಮೊಗ್ಗ : ಜಿಲ್ಲೆಯ ಪ್ರತಿಭಾನ್ವಿತ ಕ್ರಿಕೆಟ್‌ ಆಟಗಾರ್ತಿ ಅದಿತಿ ರಾಜೇಶ್ ಅವರು ಕರ್ನಾಟಕ ಮಹಿಳಾ ಕ್ರಿಕೆಟ್​ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಜನವರಿ 18ರಿಂದ 28ರವರೆಗೆ ಮುಂಬೈನಲ್ಲಿ ಟೂರ್ನಿ ನಡೆಯಲಿದೆ. ಭಾರತೀಯ ಮಹಿಳಾ ಕ್ರಿಕೆಟ್​ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ರಾಜ್ಯ ಹಿರಿಯ ಮಹಿಳಾ ತಂಡ ಮುನ್ನಡೆಸುತ್ತಿದ್ದು, ಅದಿತಿ ರಾಜೇಶ್‌ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಶಿವಮೊಗ್ಗದ ಸಹ್ಯಾದ್ರಿ ಕ್ರಿಕೆಟ್ ಕೋಚಿಂಗ್ ಸೆಂಟರ್​ನಲ್ಲಿ ಕೋಚ್ ನಾಗರಾಜ್ ಅವರಿಂದ ಅದಿತಿ ತರಬೇತಿ ಪಡೆದಿದ್ದಾರೆ. ಅದಿತಿ ರಾಜೇಶ್ ಅಂತಿಮ ವರ್ಷದ ಬಿ.ಕಾಂ…

Read More

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ | sandalwood

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ ಚಂದನವನದ ಹಿರಿಯ ಹಾಗೂ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತಾದರೂ ಶುಕ್ರವಾರ ಮಧ್ಯಾಹ್ನ ದಿಢೀರ್ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲೀಲಾವತಿ ಕೊನೆಯುಸಿರೆಳೆದರು….

Read More

ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ!

ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ! ಗಂಡ ರಘುನಿಂದ ವಿಚ್ಛೇದನಕ್ಕೆ ಮುಂದಾಗಿದ್ದಳು ಎನ್ನಲಾಗಿದೆ. ಕಳೆದ ವರ್ಷ ಗ್ರಾಮದ ಹಿರಿಯರು ಸೇರಿ ಪಂಚಾಯಿತಿ, ರಾಜಿ ಸಂಧಾನದ ಮೂಲಕ ಗಂಡನ ಮನೆಗೆ ಕಳುಹಿಸಿಕೊಟ್ಟಿದ್ದರು. ಆದರೆ ಶಿವಮೊಗ್ಗದಲ್ಲಿ ಇರಲು ಸಾಧ್ಯವಾಗದೆ ಶನಿವಾರ ಮಗುವಿನೊಂದಿಗೆ ತವರಿಗೆ ಬಂದಿದ್ದಳು ಎನ್ನಲಾಗಿದೆ. ನಸಿಕ ಸ್ಥಿಮಿತ ಕಳೆದುಕೊಂಡಿದ್ದ ತಾಯಿಯೊಬ್ಬಳು ಹೆತ್ತ ಮಗಳನ್ನೇ ನೀರಿನ ತೊರೆಯಲ್ಲಿ ಮುಳುಗಿಸಿ ಹತ್ಯೆಗೈದಿರುವ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಜಿನ್ನೇನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಭಾನುವಾರ…

Read More

ಹಂದಿ ಅಣ್ಣಿ‌ ಹತ್ಯೆ ಆರೋಪಿಗಳ ಮೇಲಿನ ದಾಳಿ ಪ್ರಕರಣ – ತಮಿಳ್ ರಮೇಶ್ ಮತ್ತು ದೀಪು ಬೆಂಗಳೂರಲ್ಲಿ ಸೆರೆಂಡರ್|surrender

ಚೀಲೂರಿನ ಗೋವಿನ ಕೋವಿಯಲ್ಲಿ ನಡೆದಿದ್ದ ಡಬ್ಬಲ್​ ಅಟ್ಯಾಕ್ ಪ್ರಕರಣ ಸಂಬಂಧ  ದಾವಣಗೆರೆ ಪೊಲೀಸರು ಆರೋಪಿಗಳು ತನಿಖೆ ಇನ್ನೂ ಸಹ ಮುಂದುವರಿಸಿದ್ದಾರೆ. ಈ ಮಧ್ಯೆ ಆಂಧ್ರದಲ್ಲಿ ಆರೋಪಿಗಳು ಸೆರೆಂಡರ್ ಆಗಿದ್ದರು ಎಂಬ ಫೇಕ್​ ನ್ಯೂಸ್​ನ್ನ ಕೂಡ ಉದ್ದೇಶ ಪೂರ್ವಕ ಕಾಣದ ಕೈಯ್ಯೊಂದು ಹರಿಬಿಟ್ಟಿತ್ತು. ಆದರೆ ಇದೇ ಶರಣಾಗತಿ ಸುದ್ದಿ ಇದೀಗ ನಿಜವಾಗಿದೆ. ಕಳೆದ ಮಾರ್ಚ್ 15 ರಂದು ಹಂದಿ ಅಣ್ಣಿ ಕೊಲೆಯ ಆರೋಪಿಗಳಾದ ಆಂಜನೇಯ ಮತ್ತು ಮಧು ಮೇಲೆ ತಮಿಳ್ ರಮೇಶ್​ ನ ಗ್ಯಾಂಗ್ ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು….

Read More

ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು

ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು ರಿಪ್ಪನ್‌ಪೇಟೆ;-ಸರ್ಕಾರ ಶಿಕ್ಷಣಕ್ಕಾಗಿ ಹೆಚ್ಚು ಒತ್ತು ನೀಡುವ ಮೂಲಕ ಕಡ್ಡಾಯ ಶಿಕ್ಷಣ ನೀಡುವುದು ಮತ್ತು ಸಾಕಷ್ಟು ಉಪಯುಕ್ತವಾದಂತಹ ಯೋಜನೆಗಳ ಮೂಲಕ ನಮ್ಮ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡದಂತೆ ಯೋಜನೆ ರೂಪಿಸಿದೆ ಇದನ್ನು ಬಳಸಿಕೊಂಡು ಪೋಷಕರು ಶಿಕ್ಷಕ ಸಮೂಹ ಮಕ್ಕಳಗೆ ಶಿಕ್ಷಣ ನೀಡುವಂತೆ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪ್ರೌಢಶಾಲಾ ವಿಭಾಗದ 2024-25…

Read More

Shivamogga | ಕಸದ ವಿಚಾರಕ್ಕೆ ವ್ಯಕ್ತಿಯ ಕೊಲೆ – ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕಸದ ವಿಚಾರಕ್ಕೆ ವ್ಯಕ್ತಿಯ ಕೊಲೆ ಪ್ರಕರಣ; ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ : ಹುಣಸೇಮರದ ಕಸದ ವಿಚಾರಕ್ಕೆ ಸಂಬಂಧಿಸಿದಂತೆಮಾತಿಗೆ ಮಾತು ಬೆಳೆದು ಪಕ್ಕದ ಮನೆಯ ವ್ಯಕ್ತಿ ಮೇಲೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಮತ್ತು ಓರ್ವ ಆರೋಪಿಗೆ ಮೂರು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಶಿಕಾರಿಪುರ ಪಟ್ಟಣದ ಅವಿನಾಶ್ ಅಲಿಯಾಸ್ ಅವಿ(25), ಪ್ರಶಾಂತ್ ಅಲಿಯಾಸ್ ಗುಂಡ (26), ಆರ್.ಪ್ರದೀಪ್ (28)…

Read More

ಅಪ್ಪ-ಅಮ್ಮನಿಲ್ಲದ ಕೊರಗು – ಬೇಸತ್ತ ಯುವಕ ನೇಣಿಗೆ ಶರಣು|bdvt

ಅಪ್ಪ-ಅಮ್ಮನಿಲ್ಲದ ಕೊರಗು – ಬೇಸತ್ತ ಯುವಕ ನೇಣಿಗೆ ಶರಣು ತಂದೆ ತಾಯಿಯಿಲ್ಲದ ಕೊರಗಿನಿಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸೈದರಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಯುವಕ ವೀರೇಶ್ (21) ಅಡಕೆ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ದೇವೆಂದ್ರಪ್ಪ ಎಂಂಬುವವರ ಅಡಕೆ ತೋಟದ ಅಂಚಿನಲ್ಲಿರುವ ಮಾವಿನ ಮರಕ್ಕೆ ಒಂದು ಬಿಳಿ ಪಂಚೆಯನ್ನು ಕುತ್ತಿಗೆಗೆ ಬಿಗಿದುಕೊಂಡು ಮೃತ ಪಟ್ಟಿದ್ದು, ವೀರೇಶನು ತಂದೆ-ತಾಯಿ ಇಲ್ಲದ ಕೊರಗಿನಿಂದ ಜಿಗುಪ್ಪೆಗೊಂಡಿದ್ದರು ಎನ್ನಲಾಗಿದೆ.  ಈ ಸಂಬಂಧ ಪೊಲೀಸ್…

Read More

ಗ್ಯಾಸ್ ಸಿಲಿಂಡರ್ ಸ್ಪೋಟ – ಮೂವರಿಗೆ ಗಂಭೀರ ಗಾಯ, ಮನೆಗೆ ಭಾರೀ ಹಾನಿ

ಗ್ಯಾಸ್ ಸಿಲಿಂಡರ್ ಸ್ಪೋಟ – ಮೂವರಿಗೆ ಗಂಭೀರ ಗಾಯ, ಮನೆಗೆ ಭಾರೀ ಹಾನಿ ಶಿವಮೊಗ್ಗ, ಜುಲೈ 23 – ಇಂದು ಸಂಜೆ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶರಾವತಿ ನಗರದಲ್ಲೊ ನಡೆದಿದೆ. ಶಬ್ದದ ತೀವ್ರತೆಗೆ ನೆರೆಮನೆಯವರು ಭಯದಿಂದ ಓಡಿ ಬಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಶರಾವತಿ ನಗರದ 1ನೇ ಅಡ್ಡರಸ್ತೆಯ ಸುನ್ನಿ ಮಸ್ಜಿದ್ ಏ ಶೆಹ್‌ಜಾದಿ ಅಸ್ಗರ್ ಮಸೀದಿ ಪಕ್ಕದ ಓಣಿಯಲ್ಲಿ ವಾಸಿಸುತ್ತಿರುವ ಎಂ.ಬಿ. ಪೀರಾನ್ ಸಾಬ್ (48) ಅವರ ಮನೆಯಲ್ಲಿ…

Read More
Exit mobile version