ಲಂಚದ ಆಸೆಗೆ ಬಿದ್ದ ಜನರಿಗೆ ಆಶ್ರಯ ಕೊಡಬೇಕಾದ ಅಧಿಕಾರಿ – ಲೋಕಾಯುಕ್ತ ಬಲೆಗೆ

ಲಂಚದ ಆಸೆಗೆ ಬಿದ್ದ ಜನರಿಗೆ ಆಶ್ರಯ ಕೊಡಬೇಕಾದ ಅಧಿಕಾರಿ – ಲೋಕಾಯುಕ್ತ ಬಲೆಗೆ ಶಿವಮೊಗ್ಗ: ಖರೀದಿಸಿದ ಮನೆಯನ್ನು ತನ್ನ ಹೆಸರಿಗೆ ಮಾಡಿಕೊಡಲು ಮಹಾನಗರ ಪಾಲಿಕೆಯ ಆಶ್ರಯ ಮನೆ ವಿಭಾಗದ ಸಮುದಾಯ ಸಂಘಟನಾಧಿಕಾರಿ ಲಂಚ ಪಡೆಯುತ್ತಿರುವಾಗ ಲೋಕಾಯುಕ್ತರಿ ದಾಳಿ ನಡೆಸಿ ಬಂಧಿಸಿದ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಶಶಿಧರ ಎ ಪಿ (೫೭) ಸಿಕ್ಕಿಬಿದ್ದ ಅಧಿಕಾರಿಯಾಗಿದ್ದಾರೆ. ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯ ವಾಸಿ ಮೊಹಮ್ಮದ್ ಆಸೀಫ್ ಉಲ್ಲಾ ಎನ್ನುವವರು ಬೊಮ್ಮನಕಟ್ಟೆಯಲ್ಲಿ ಅಮ್ಜದ್ ಅಲಿ ಎನ್ನುವವರಿಂದ ಮನೆಯನ್ನು ಖರೀದಿಸಿದ್ದರು. ಈ ಮನೆಯನ್ನು…

Read More

ರಿಪ್ಪನ್‌ಪೇಟೆ : ಧರ್ಮಸ್ಥಳಕ್ಕೆ ಹೋಗಿ‌ ಕೇಶ ಮುಂಡನೇ ಮಾಡಿಸಿಕೊಂಡು ಬಂದಿದ್ದ ವ್ಯಕ್ತಿ ಆತ್ಮಹತ್ಯೆ|Sucide

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಮದ ಇಂದಿರಾನಗರ ನಿವಾಸಿ ಸತೀಶ್ (35) ತನ್ನ ಮನೆಯಲ್ಲಿಯೇ ಇಂದು ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಈತ ಮಾನಸಿಕವಾಗಿ ನೊಂದಿದ್ದ. ಕಳೆದ ಮೂರು ದಿನಗಳ ಹಿಂದಷ್ಟೇ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದು ಪೂಜೆ ಸಲ್ಲಿಸಿ ಕೇಶ ಮುಂಡನ ಮಾಡಿಸಿಕೊಂಡು ಬಂದಿದ್ದ ಎಂದು ತಿಳಿದುಬಂದಿದೆ. ಪತ್ನಿ, ಇಬ್ಬರು (ಪುತ್ರಿ, ಪುತ್ರ) ಚಿಕ್ಕ ಮಕ್ಕಳನ್ನು ಹಾಗೂ ಸಹೋದರ ಸೇರಿದಂತೆ ಅಪಾರ…

Read More

ಸಿಗರೇಟ್ ಬೆಲೆ ಏರುವ ತಿರುಕನ ಕನಸು ಕಾಣುತ್ತಿದ್ದ ಕಾಳಸಂತೆಯ ವರ್ತಕರಿಗೆ ಕೇಂದ್ರ ಸರ್ಕಾರದ ಬಿಗ್ ಶಾಕ್!!!!!!??? ತಂಬಾಕು, ಸಿಗರೇಟ್ ಮೇಲಿನ ತೆರಿಗೆಯಲ್ಲಿ ಬದಲಾವಣೆ ಇಲ್ಲ !!!

ಕರೋನಾ ಸಂದರ್ಭದಲ್ಲಿ ನಷ್ಟಕ್ಕೊಳಗಾದ ಸಿಗರೇಟ್ ಹಾಗೂ ಗುಟ್ಕಾ ಕಂಪನಿಗಳಿಗೆ ಸರ್ಕಾರ ರಿಯಾಯಿತಿ ನೀಡಿತ್ತು ಪ್ರಸ್ತುತ ಮೂರನೇ ಅಲೆಯಲ್ಲಿ ವ್ಯಾಪಾರಸ್ಥ ಕಾಳಸಂತೆಯ ವರ್ತಕರು ಕೋಟಿಗಟ್ಟಲೆ ಮೌಲ್ಯದ ಸಿಗರೇಟ್ ಹಾಗೂ ಗುಟ್ಕಾ ಉತ್ಪನ್ನವನ್ನು ದಾಸ್ತಾನು ಮಾಡಿ ದುಪ್ಪಟ್ಟು ಲಾಭ ಮಾಡುವ ಕನಸಿನೊಂದಿಗೆ ತಮ್ಮ ಗೋಡನ್ ಗಳಲ್ಲಿ ದಾಸ್ತಾನು ಮಾಡಿ ಕೋಟಿಗಟ್ಟಲೆ ಲಾಭ ಮಾಡುವ ಕನಸು ಕಾಣುತ್ತಿದ್ದರು. ಆದರೆ ಕೇಂದ್ರ ಸರ್ಕಾರ ಈ ಭ್ರಷ್ಟ ದಾಸ್ತಾನು ಗಾರರಿಗೆ ಬಿಗ್ ಶಾಕ್ ನೀಡಿದೆ. ಕೇಂದ್ರ ಸರ್ಕಾರ ನೀಡಿದ ಬಿಗ್ ಶಾಕ್ ಕಾಳಸಂತೆಯ ವರ್ತಕರಿಗೆ…

Read More

ಗೋ ಸೇವೆ ಮತ್ತು ಗೋ ಸಂರಕ್ಷಣೆಯನ್ನು ತಪಸ್ಸಿನ ರೀತಿಯಲ್ಲಿ ಮೊದಲು ಮಾಡಿದವರು ಶ್ರೀಗಳು : ಬಿ. ವೈ. ರಾಘವೇಂದ್ರ

ಹೊಸನಗರ : ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಯವರ ನೇತೃತ್ವದಲ್ಲಿ ಗೋ ಸೇವೆ, ಜಾಗೃತಿ ಮತ್ತು ಗೋ ಸಂರಕ್ಷಣೆಯನ್ನು ತಪಸ್ಸಿನ ರೀತಿಯಲ್ಲಿ ಮಾಡಿದ್ದಾರೆ,ನಮ್ಮ ಸರ್ಕಾರವೂ ಸಹ ಗೋವಿನ ರಕ್ಷಣೆಗೆ ಬದ್ದವಾಗಿದೆ, ಮತ್ತು ಈ ಗೋವಿನ ಹತ್ಯೆ ಮಾಡುವವರ ವಿರುದ್ಧ ಕಠಿಣ ಕಾನೂನಿನ ಕ್ರಮವನ್ನು ಜರುಗಿಸುತ್ತಿದೆ ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು. ಈ ಪುಣ್ಯ ಕ್ಷೇತ್ರದಲ್ಲಿ ಅತ್ಯಂತ ಸುಂದರವಾಗಿ ವಾಸ್ತು ಶಿಲ್ಪದ ಮೂಲಕ ನಿರ್ಮಾಣವಾಗಿರುವ ಶ್ರೀ ಚಂದ್ರಮೌಳೀಶ್ವರ ದೇವರ ಭವ್ಯ ದೇವಾಲಯ ನಿರ್ಮಾಣವಾಗಿ ಇಂದು…

Read More

ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯಿಂದ ದರ್ಪ : ಬಂಡೆ ಕಾರ್ಮಿಕರಿಗೆ ನಿರಂತರ ಕಿರುಕುಳ

ತೀರ್ಥಹಳ್ಳಿ :  ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯಿಂದ ಸ್ಥಳೀಯ ಮೇಲಿನ ಕುರುವಳ್ಳಿ ಬಂಡೆ ಕಾರ್ಮಿಕರಿಗೆ ನಿರಂತರ ಕಿರುಕುಳ ನೀಡಲಾಗುತ್ತಿದೆ ಎಂದು ಮೇಲಿನ ಕುರುವಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಹೊರಬೈಲು ಪ್ರಭಾಕರ್ ಆರೋಪಿಸಿದ್ದಾರೆ. ಪಟ್ಟಣದ ತಾಲ್ಲೂಕು ಕಛೇರಿ ಎದುರು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ತೀರ್ಥಹಳ್ಳಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಅವಿನಾಶ್ ರವರು ಕಳೆದ ಕೆಲ ದಿನಗಳಿಂದ ಮೇಲಿನ ಕುರುವಳ್ಳಿಯಲ್ಲಿನ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೆ ಬಂದು ಕಾರ್ಮಿಕರು ಕಷ್ಟ ಪಟ್ಟು…

Read More

ಸಾಗರ – ಬೈಕ್ ಮೇಲೆ ಬಂದು ಮಾಂಗಲ್ಯ ಸರ ದೋಚಿ ಕಳ್ಳರು ಪರಾರಿ|chine snatching

ಸಾಗರ – ಬೈಕ್ ಮೇಲೆ ಬಂದು ಮಾಂಗಲ್ಯ ಸರ ದೋಚಿ ಕಳ್ಳರು ಪರಾರಿ|chine snatching ಸಾಗರ : ಇಲ್ಲಿನ ವಿನೋಬಾ ನಗರದ 65 ವರ್ಷದ ವಿಜಯಮ್ಮ ಎಂಬುವವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ವಿಜಯಮ್ಮ ಅವರು ಅಂಗಡಿಗೆ ಹೋಗಿ ಮನೆಗೆ ಹಿಂದಿರುತ್ತಿದ್ದಾಗ ನಂಬರ್ ಪ್ಲೇಟ್ ಇಲ್ಲದ ಕೆಂಪು ಬಣ್ಣದ ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ವಿಳಾಸ ಕೇಳಿದ್ದಾರೆ. ವಿಜಯಮ್ಮ ಅವರು ವಿಳಾಸ ಹೇಳುತ್ತಿದ್ದಾಗ ಬೈಕ್ ಹಿಂಭಾಗದಲ್ಲಿ ಕುಳಿತಿದ್ದ ಒಬ್ಬ ವ್ಯಕ್ತಿ…

Read More

Election | ಸಾಗರ ಕ್ಷೇತ್ರದಲ್ಲಿ ಬೇಳೂರು ಗೋಪಾಲಕೃಷ್ಣ ಭಾರಿ ಮುನ್ನಡೆ

ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಭಾರಿ ಮುನ್ನಡೆಯನ್ನು ಸಾಧಿಸಿದ್ದಾರೆ. 11.10 ನಿಮಿಷದ ಫಲಿತಾಂಶದ ಪ್ರಕಾರ 35001 ಮತ ಗಳಿಸಿದ್ದಾರೆ . ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ 25994 ಮತ ಗಳಿಸಿದ್ದಾರೆ. ಬೇಳೂರು ಗೋಪಾಲಕೃಷ್ಣ 9007 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಆಮ್ ಆದ್ಮಿಯ ದಿವಾಕರ್ 412 ಮತ ಗಳಿಸಿದ್ದಾರೆ.

Read More

ಬಿಜೆಪಿ ಪಕ್ಷದ ಯುವ ಮುಖಂಡನ ಬರ್ಬರ ಹತ್ಯೆ : ಶಿವಮೊಗ್ಗ ನಗರ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ

ಬಿಜೆಪಿ ಯುವ ಮುಖಂಡನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಮಂಗಳೂರು ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ಬೆಳ್ಳಾರೆಯ ನೆಟ್ಟಾರು ನಿವಾಸಿ ಪ್ರವೀಣ್ ನೆಟ್ಟಾರು(32) ಎಂದು ಗುರುತಿಸಲಾಗಿದೆ. ಇವರು ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿದ್ದರು. ಬೆಳ್ಳಾರೆಯಲ್ಲಿ ಅಕ್ಷಯ ಕೋಳಿ ಫಾರ್ಮ್ ಹೊಂದಿರುವ ಪ್ರವೀಣ್ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಫಾರ್ಮ್ ಮುಚ್ಚಿ ಮನೆಗೆ ಹೋಗಲು ಸಿದ್ಧವಾಗುತ್ತಿದ್ದ ವೇಳೆ ಈ ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ. ಬೈಕ್‌ನಲ್ಲಿ ಬಂದ ಇಬ್ಬರು…

Read More

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್|cow theft

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಬೀದಿಯ ಗೋವುಗಳ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದ್ದು, ಸ್ಥಳೀಯರು ಕೂಗಿದೊಡನೆ ಖದೀಮರು ಪರಾರಿಯಾಗಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ಗಾಂಧಿ ನಗರದಲ್ಲಿ  ಕಾರನ್ನು ಗೋವುಗಳ ಹತ್ತಿರ ತಂದು ನಿಲ್ಲಿಸಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಗೋವುಗಳು ಕೈಗೆ ಸಿಕ್ಕಿಲ್ಲ.ಈ ಸಂಧರ್ಭದಲ್ಲಿ ಸ್ಥಳೀಯರು ಕೂಗಿದ್ದಾರೆ ನಂತರ  ಎಚ್ಚೆತ್ತುಕೊಂಡ ಖದೀಮರು ಓಡಿ ಹೋಗಿದ್ದಾರೆ. ಈ ಘಟನೆಯನ್ನು ಯಾರೋ ವೀಡಿಯೋ ಮಾಡಿದ್ದು…

Read More

ತೀರ್ಥಹಳ್ಳಿಯ ತುಂಗಾ ಸೇತುವೆಯ ಕೆಳಗೆ ವೃದ್ದೆಯ ಮೃತದೇಹ ಪತ್ತೆ|dead-body-found

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ತುಂಗಾ ಸೇತುವೆ ಕೆಳ ಭಾಗದಲ್ಲಿ ವೃದ್ದೆಯೊಬ್ಬರ ಮೃತದೇಹ ಪತ್ತೆಯಾಗಿದೆ. ವೃದ್ದೆಯು ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಡಾಕಮ್ಮ (80 ವರ್ಷ) ತಮ್ಮ ಮಗಳ ಮನೆಗೆ ಬಂದಿದ್ದರು ಎನ್ನಲಾಗುತ್ತಿದೆ. ತುಂಗಾ ಸೇತುವೆ ಸಮೀಪ ವೃದ್ದೆ ಯಾಕೆ ಬಂದರು ಎಂದು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More