Headlines

ರಿಪ್ಪನ್‌ಪೇಟೆಯಲ್ಲಿ ಸಪ್ತಸಿರಿ “ಚಿಟ್ ಫಂಡ್ಸ್” ನೂತನ ಸೇವಾ ಕೇಂದ್ರಕ್ಕೆ ಇಂದು ಚಾಲನೆ

ರಿಪ್ಪನ್‌ಪೇಟೆಯಲ್ಲಿ ಸಪ್ತಸಿರಿ “ಚಿಟ್ ಫಂಡ್ಸ್” ನೂತನ ಸೇವಾ ಕೇಂದ್ರಕ್ಕೆ ಇಂದು ಚಾಲನೆ ರಿಪ್ಪನ್ ಪೇಟೆ : ಜಿಲ್ಲಾದ್ಯಂತ ನಂಬಿಕೆ ಮತ್ತು ವಿಶ್ವಾಸಕ್ಕೆ ಹೆಸರಾದ ಸಪ್ತಸಿರಿ ಚಿಟ್ ಫಂಡ್ಸ್ ಇದೀಗ ರಿಪ್ಪನ್‌ಪೇಟೆ ಪಟ್ಟಣದಲ್ಲಿಯೂ ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ. ಶಿವಮೊಗ್ಗ ರಸ್ತೆಯಲ್ಲಿರುವ ಜಯದೇವ ರೈಸ್ ಮಿಲ್ ಕಟ್ಟಡದಲ್ಲಿ ಗ್ರಾಹಕರಿಗಾಗಿ ನೂತನ ಸೇವಾ ಕೇಂದ್ರ ಆರಂಭವಾಗುತ್ತಿದ್ದು, ಡಿಸೆಂಬರ್ 15ರಂದು ಬೆಳಿಗ್ಗೆ 11.00 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ವರ್ಷಗಳಿಂದ ಚಿಟ್ ಫಂಡ್ ಕ್ಷೇತ್ರದಲ್ಲಿ ಪಾರದರ್ಶಕ ವ್ಯವಹಾರ, ಸಮಯಪಾಲನೆ ಮತ್ತು ಗ್ರಾಹಕ…

Read More

ರಿಪ್ಪನ್‌ಪೇಟೆ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪುರವರ ಹೆಸರಿಡಲು ಜೆಡಿಎಸ್ ಆಗ್ರಹ

ರಿಪ್ಪನ್ ಪೇಟೆ: ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ಶಿವಮೊಗ್ಗದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ವಿಮಾನ ನಿಲ್ದಾಣಕ್ಕೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ನಾಮಕರಣ ಮಾಡುವಂತೆ ಜೆಡಿಎಸ್ ರಾಜ್ಯ ಮುಖಂಡ ಆರ್ ಎ ಚಾಬುಸಾಬ್ ಒತ್ತಾಯಿಸಿದ್ದಾರೆ. ಪಟ್ಟಣದ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು  ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಮೊದಲ ಬಾರಿ ಕನ್ನಡಕ್ಕೆ ತಂದು ಕೊಟ್ಟ ಇವರು.ವಿಶ್ವಮಾನವ ಸಂದೇಶದ ಮೂಲಕ ರಾಷ್ಟ್ರಕವಿಯಾಗಿ ಜ್ಞಾನಪೀಠ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ…

Read More

HOSANAGARA | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮಾಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ

ಹೊಸನಗರ : ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕಾರ್ಯಕಾರಣಿ ಸಭೆಯ ನಿರ್ಣಯದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಲೇಖನಿ ಕೆಳಗಿಟ್ಟು, ಮೊಬೈಲ್ ಆಪ್ ಮತ್ತು ವೆಬ್ ಕಾರ್ಯ ಸ್ಥಗಿತಗೊಳಿಸಿ ಗುರುವಾರ ಇಲ್ಲಿನ ತಾಲೂಕು ಕಚೇರಿ ಎದುರು ಕೈಗೆ ಕಪ್ಪು ಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಘಟನೆ ನಡೆದಿದೆ. ಈ ಸಂಧರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿ ಸಂಘದ ಹೊಸನಗರ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ಮಾತನಾಡಿ, ಕಂದಾಯ…

Read More

ಶಿವಮೊಗ್ಗ ಚಾಕು ಇರಿತ ಪ್ರಕರಣದ ಆರೋಪಿಗೆ ಭಯೋತ್ಪಾದಕರ ಲಿಂಕ್ ಬಹಿರಂಗ : ಆರಗ ಜ್ಞಾನೇಂದ್ರ

ಶಿವಮೊಗ್ಗ : ಗಾಂಧಿ ಬಜಾರ್ ನಲ್ಲಿ ಪ್ರೇಮ್​ ಸಿಂಗ್ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧಿತ ಆರೋಪಿಗೆ ಜಬೀವುಲ್ಲಾ ಲಿಂಕ್‌ ಭಯಾನಕವಾಗಿದೆ.  ಭಯೋತ್ಪಾದಕರ ಜೊತೆ ಲಿಂಕ್‌ ಇರೋದು ಬಹಿರಂಗವಾಗಿದೆ. ಸದ್ಯದಲ್ಲೇ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸುತ್ತೇವೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ವೀರ್ ಸಾವರ್ಕರ್ ಫೋಟೋ ಹಾಕುವ ವಿಚಾರದಲ್ಲಿ ಎಸ್​ಡಿಪಿಐ ಬೆಂಬಲದಲ್ಲಿ ಕೆಲವರು ಹಿಂಸಾಚಾರ ನಡೆಸಿದ್ದರು. ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿದಿದ್ದ ಪ್ರಕರಣ ನಡೆದಿತ್ತು. ಪ್ರಕರಣದ ಆರೋಪಿಗೆ ‘ಭಯೋತ್ಪಾದಕರ ಲಿಂಕ್‌ ಭಯಾನಕ’ವಾಗಿದೆ…

Read More

ಎಂಟು ವರ್ಷದ ಬಾಲಕಿಯ ಮೇಲೆ 52 ವರ್ಷದ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ

ಎಂಟು ವರ್ಷದ ಬಾಲಕಿಯ ಮೇಲೆ 52 ವರ್ಷದ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಎಂಟು ವರ್ಷದ ಬಾಲಕಿ ಮೇಲೆ 52 ವರ್ಷದ ವ್ಯಕ್ತಿಯೊಬ್ಬನು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಈ ಘಟನೆ ವರದಿಯಾಗಿದೆ.  ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಚಂದ್ರಪ್ಪ (52) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಹೊಸನಗರ ಸಮಾಜ ಕಲ್ಯಾಣ ಇಲಾಖೆಯಲ್ಲಿ ನೌಕರನಾಗಿದ್ದಾನೆ. ಭಾನುವಾರ ಸಂಜೆ ಸಮಯದಲ್ಲಿ ಆರೋಪಿ ಚಂದ್ರಪ್ಪ…

Read More

Ripponpet | ಮರ್ಯಾದ ಪುರುಷೋತ್ತಮ ಶ್ರೀರಾಮನಿಗೆ ಬ್ರಾಹ್ಮಣ ಸಭಾಭವನದಲ್ಲಿ ವಿಶೇಷ ಪೂಜೆ

Ripponpet | ಮರ್ಯಾದ ಪುರುಷೋತ್ತಮ ಶ್ರೀರಾಮನಿಗೆ ಬ್ರಾಹ್ಮಣ ಸಭಾಭವನದಲ್ಲಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಇಂದು ಅಯೋಧ್ಯೆಯಲ್ಲಿ ಲೋಕಾರ್ಪಣೆಗೊಂಡ ಶ್ರೀರಾಮಲಲ್ಲಾ ಮೂರ್ತಿಯ ಪ್ರತಿಷ್ಟಾಪನಾ ಕಾರ್ಯಕ್ರಮದ ಅಂಗವಾಗಿ ರಿಪ್ಪನ್‌ಪೇಟೆಯ ಬ್ರಾಹ್ಮಣ ಸಮಾಜದ ಶ್ರಿರಾಮ ಮಂದಿರದಲ್ಲಿ ವಿಶೇಷ ಅಲಂಕಾರ ಪೂಜೆ ಮತ್ತು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ದಾಭಕ್ತಿಯಿಂದ ನೆರವೇರಿದವು. ಹೆಚ್.ಎಸ್.ಸುಧೀಂದ್ರ ಹೆಬ್ಬಾರ್ ಮತ್ತು ದೀಪಾ ಹೆಬ್ಬಾರ್ ಇವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಿರ್ವಿಘ್ನವಾಗಿ ಜರುಗಿ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನೆರವೇರಿತು. ಬ್ರಾಹ್ಮಣ ಸಮಾಜದ ಅಧ್ಯಕ್ಷ…

Read More

ಹೊಸನಗರ : ಚಲಿಸುತಿದ್ದ ಟ್ರಾಕ್ಟರ್ ಪಲ್ಟಿ – ನೀರುಗಂಟಿ ಸಾವು|Accident

ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ನೀರುಗಂಟಿಯೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರಿನಲ್ಲಿ(ನಗರ) ನಡೆದಿದೆ. ಬಿದನೂರು ನಗರದ ಚಿಕ್ಕಪೇಟೆ ನಿವಾಸಿ ತುಕರಾಂ(46) ಎಂಬಾತ ಮೃತ ದುರ್ದೈವಿ. ಕುಡಿಯುವ ನೀರು ಪೂರೈಸುವ ಟ್ರಾಕ್ಟರ್ ಪಲ್ಟಿಯಾದ ಕಾರಣ ನೀರುಗಂಟಿ ಸಾವನ್ನಪ್ಪಿದ್ದಾನೆ. ನಗರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನೀರುಗಂಟಿ ಕೆಲಸ ಮಾಡುತ್ತಿದ್ದ ತುಕರಾಂ.ಗ್ರಾ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಮನೆಗಳಿಗೆ ಟ್ಯಾಂಕರ್ ಗಳ ಮೂಲಕ ನೀರು ಪೂರೈಸಲು ಮುಂದಾದಾಗ ಈ ಅವಘಡ ಸಂಭವಿಸಿದೆ. ನೀರು ಪೂರೈಸುವ ಟ್ರ್ಯಾಕ್ಟರ್…

Read More

ತುಂಗಾ ನದಿಯಲ್ಲಿ ಯುವಕನ ಶವ ಪತ್ತೆ – ಆತ್ಮಹತ್ಯೆ ಶಂಕೆ|TUNGA

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನಾನಿ ಬಳಿಯ ಹಿಂಭಾಗದ ತುಂಗಾ ನದಿಯಲ್ಲಿ ಭಾನುವಾರ ತೆಂಗಿನ ಕೊಪ್ಪದ ಯುವಕನ ಶವ ಪತ್ತೆಯಾಗಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಪ್ರಜತ್(26) ಮೃತಪಟ್ಟ ಯುವಕ. ಸಾಲೂರು ಹೊಸಮನೆ ತೆಂಗಿನಕೊಪ್ಪದ ಪ್ರಜತ್  4 ವರ್ಷದ ಹಿಂದೆ ಹಾವು ಕಚ್ಚಿದ ಕಾರಣ ತಾಯಿಯನ್ನು ಕಳೆದುಕೊಂಡಿದ್ದರು ಹಾಗೂ ತಂದೆ ಕೂಡ ಕ್ಯಾನ್ಸರ್ ರೋಗಕ್ಕೆ ಇತ್ತೀಚಿಗೆ ಬಲಿಯಾಗಿದ್ದರು. ಪ್ರಜತ್ ಸಾಲದ ಕಾರಣ ಹಾಗೂ ಒಳ್ಳೆಯ ಉದ್ಯೋಗ ಇಲ್ಲದ ಕಾರಣ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗುತ್ತಿದೆ….

Read More

ಬೋರ್‌ವೆಲ್ ಮಂಜೂರಿಗೆ ಲಂಚ: ಅಧಿಕಾರಿಗೆ ಜೈಲು ಹಾಗೂ ₹40 ಸಾವಿರ ದಂಡ

A Shivamogga court sentenced a district manager to two years in prison and fined ₹40,000 for accepting a ₹10,000 bribe under the Ganga Kalyana scheme, following a Lokayukta trap case. ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಅಧಿಕಾರಿಗೆ ಶಿವಮೊಗ್ಗ ನ್ಯಾಯಾಲಯವು ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹40,000 ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ…

Read More

HOSANAGARA | ಚಿರತೆ ದಾಳಿಗೆ ಜಾನುವಾರು ಬಲಿ

HOSANAGARA | ಚಿರತೆ ದಾಳಿಗೆ ಜಾನುವಾರು ಬಲಿ ಹೊಸನಗರ ತಾಲೂಕಿನ ಪುಣಜೆ ಗ್ರಾಮದ ಬ್ರಹ್ಮೇಶ್ವರದಲ್ಲಿ ಕೆಲ ದಿನಗಳಿಂದ ಚಿರತೆ ಸಂಚರಿಸುತ್ತಿದ್ದು ಗ್ರಾಮದ ಜಾನುವಾರುಗಳು ಚಿರತೆ ದಾಳಿಗೆ ಬಲಿಯಾಗಿವೆ. ಇಲ್ಲಿನ ಅಂಬೇಡ್ಕರ್ ಕಾಲೋನಿ ಸಮೀಪದ ಅರಣ್ಯ ಪ್ರದೇಶದಲ್ಲಿ 4 ದನಗಳ ಶವದ ಅವಶೇಷಗಳು ದೊರಕಿದ್ದು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆಯ ಹೆಜ್ಜೆ ಗುರುತುಗಳನ್ನು ಗ್ರಾಮಸ್ಥರು ಪತ್ತೆ ಮಾಡಿರುವುದು, ಈ ಭಾಗದಲ್ಲಿ ಚಿರತೆಯ ಇರುವಿಕೆಯನ್ನು ದೃಢಪಡಿಸಿದೆ. ಕೆಲ ದಿನಗಳಿಂದ ಕಾಡಿಗೆ ಮೇಯಲು ಬಿಟ್ಟ ಜಾನುವಾರುಗಳು ಮನೆ…

Read More