ಬೆಳ್ಳೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ರೈತ ಸಾವು :

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತಿದ್ದ ರೈತ ವಿದ್ಯುತ್ ಅವಘಡದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಇಂದು ಬೆಳಿಗ್ಗೆ ಕೃಷಿ ಚಟುವಟಿಕೆ ನಿಮಿತ್ತ ತೋಟಕ್ಕೆ ಹೋದಾಗ ಈ ಅವಘಡ ಸಂಭವಿಸಿದ್ದು,ಬೆಳ್ಳೂರು ಗ್ರಾಮದ ಹಿರಿಯಣ್ಣ (58) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮೃತ ಹಿರಿಯಣ್ಣ ಬೆಳ್ಳೂರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಗಿರಿಜಮ್ಮ ರವರ ಪತಿಯಾಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು ದೂರು  ದಾಖಲಾಗಿದೆ. ಸಂತಾಪ…

Read More

ಸಾಗರ ಬಂದ್ ಸಂಪೂರ್ಣ ಯಶಸ್ವಿ – ಅಜಾದ್ ರಸ್ತೆಯಲ್ಲಿ ಮಾತಿನ ಚಕಮಕಿ : ಕೊಲೆ ಯತ್ನ ಘಟನೆಗೆ ರೋಚಕ ಟ್ವಿಸ್ಟ್|sagara

ಸಾಗರದಲ್ಲಿ ಹಿಂದೂ ಸಂಘಟನೆಗಳು ಕರೆ ನೀಡಿರುವ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಸಾಗರದ ಮೀನು ಮಾರುಕಟ್ಟೆಯ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ಬಂದ್ ಮಾಡಿಸಲು ಬಂದಾಗ ಮಾತಿನ ಚಕಮಕಿ ನಡೆದಿದೆ. ಮಾರ್ಕೆಟ್ ನಲ್ಲಿ ಹಿಂದೂ ಸಂಘಟನೆಯ ಗುಂಪು ಸಾಗರದ ಬಂದ್ ಹಿನ್ಬಲೆಯಲ್ಲಿ ಮೀನು ಮಾರ್ಕೆಟ್ ಬಂದ್ ಮಾಡಿಸಲು ಮುಂದಾದಾಗ ಸ್ಥಳೀಯರು ಬಂದ್ ಮಾಡಲು ನಿರಾಕರಿಸಿದ್ದಾರೆ. ಪರಸ್ಪರ ಘೋಷಣೆ ಕೂಗಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತರು ಜೈ ಶ್ರೀರಾಮ್ ಎಂದು ಕೂಗಿದರೆ ಸ್ಥಳೀಯರು ಅಲ್ಲಾಹೋ ಅಕ್ಬರ್ ಎಂಬ ಘೋಷಣೆ ಕೂಗಿದ್ದಾರೆ. ಪರಸ್ಪರ…

Read More

ರಿಪ್ಪನ್‌ಪೇಟೆ ಸಮೀಪದ ಬಿಳಿಕಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು|Accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರು ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿ ಬಿದ್ದ ಘಟನೆ ಇಂದು ಸಂಜೆ ನಡೆದಿದೆ.  ದಾವಣೆಗೆರೆ ಮೂಲದವರು ಕೊಲ್ಲೂರು ಮೂಕಾಂಬಿಕಾ ದೇವರ ದರ್ಶನ ಮುಗಿಸಿಕೊಂಡು ವಾಪಾಸು ದಾವಣಗೆರೆಗೆ ತೆರಳುತಿದ್ದಾಗ ಪಟ್ಟಣದ ಗವಟೂರು ಹೊಳೆಯ ಸಮೀಪದ ತಿರುವಿನಲ್ಲಿ ಕಿಯಾ (Ka 05 MF 7205) ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.ಕಾರಿನಲ್ಲಿ ಇಬ್ಬರು ಪ್ರಯಾಣಿಸುತಿದ್ದರು. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತಿದ್ದವರಿಗೆ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

Ripponpete | ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು – ಧನಲಕ್ಷ್ಮಿ ಗಂಗಾಧರ್

Ripponpete | ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು – ಧನಲಕ್ಷ್ಮಿ ಗಂಗಾಧರ್ ರಿಪ್ಪನ್‌ಪೇಟೆ : ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬರಿಗೂ ಸಮಾನವಾದ ಹಕ್ಕಿನೊಂದಿಗೆ ಜೀವನ ನಡೆಸಲು ಅನುವು ಮಾಡಿಕೊಟ್ಟ ಪವಿತ್ರ ಗ್ರಂಥವಾಗಿದೆ. ಸಂವಿಧಾನದಿಂದ ಇಂದು ದೇಶ ಪ್ರಗತಿ ಕಾಣುವಂತಾಗಿದೆ. ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು ಗ್ರಾಮ ಪಂಚಾಯತ್ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು. ಸೋಮವಾರ ಪಟ್ಟಣಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ…

Read More

“ಒಂದು ಕಂತು ಬಾಕಿ – ರೈತನ ಮನೆಗೆ ನುಗ್ಗಿ ಜಾನುವಾರು ಎಳೆದೊಯ್ದ ಫೈನಾನ್ಸ್ ಗೂಂಡಾಗಳು!”

“ಒಂದು ಕಂತು ಬಾಕಿ – ರೈತನ ಮನೆಗೆ ನುಗ್ಗಿ ಜಾನುವಾರು ಎಳೆದೊಯ್ದ ಫೈನಾನ್ಸ್ ಗೂಂಡಾಗಳು!” ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಫೈನಾನ್ಸ್ ಕಂಪನಿಗಳ ‘ಗುಂಡಾಗಿರಿ’ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೇವಲ ಒಂದು ತಿಂಗಳ ಕಂತು ಬಾಕಿ ಇಟ್ಟ ಕಾರಣಕ್ಕೆ ರೈತನ ಜೀವಾಳವಾದ ಜಾನುವಾರುಗಳನ್ನು ಬಲಪ್ರಯೋಗದಿಂದ ಎಳೆದೊಯ್ದಿರುವ ಗೃಹಹಲ್ಲೆಯಂತ ಘಟನೆ ಸಿದ್ಲಿಪುರದಲ್ಲಿ ನಡೆದಿದೆ. ಸಿದ್ಲಿಪುರ ಗ್ರಾಮದ ಭರತ್ ಎಂಬ ಕೃಷಿಕರು 2 ಲಕ್ಷ ರೂಪಾಯಿ ಲೋನ್ ಪಡೆದಿದ್ದರು. ನಿಯಮಿತವಾಗಿ ತಿಂಗಳಿಗೆ ₹9,000 ಕಂತು ಪಾವತಿಸುತ್ತಿದ್ದರೂ, ಹಾಲಿಡುವ ಹಸು ಅಕಾಲಿಕವಾಗಿ ಸಾವನ್ನಪ್ಪಿದ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಪಾದಚಾರಿ ಸಾವು

A 60-year-old pedestrian died after being hit by a speeding car near Jambaraghatte close to Holehonnur in Shivamogga. The car lost control, crashed into an electric pole and a coconut tree, and overturned. ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಜಂಬರಘಟ್ಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ನಿನ್ನೆ ನಡೆದಿದೆ. ಮೃತರನ್ನು ಕಲ್ಲಜ್ಜನಾಳ್ ಗ್ರಾಮದ 60 ವರ್ಷದ ರಾಜಪ್ಪ ಎಂದು ಗುರುತಿಸಲಾಗಿದೆ….

Read More

Hosanagara | ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆಯನ್ನು ಉಳಿಸುವ ಜವಬ್ದಾರಿ ಪೋಷಕರದ್ದು : ಸಿಪಿಐ ಗುರಣ್ಣ ಹೆಬ್ಬಾಳ್ಕರ್

ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆ ಉಳಿಸುವ ಜವಬ್ದಾರಿ ಪೋಷಕರದ್ದು : ಸಿಪಿಐ ಗುರಣ್ಣ ಹೆಬ್ಬಾಳ್ಕರ್ “ಸರ್ಕಾರಿ ಶಾಲೆ ಅಭಿಮಾನ – ಸುಣ್ಣಬಣ್ಣ ಅಭಿಯಾನದ ಮತ್ತೊಂದು ಶಾಲೆಗೆ ಚಾಲನೆ ನೀಡಿದ ಸಿಪಿಐ ಗುರಣ್ಣ ಹೆಬ್ಬಾಳ್ಕರ್ ಹೊಸನಗರ : ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ  ಶಾಲೆಗಳನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ಪೋಷಕರ ಮೇಲಿದೆ. ಸರ್ಕಾರಿ ಶಾಲೆಗಳಲ್ಲಿ ಅನೇಕ ಸೌಲಭ್ಯಗಳು ಲಭ್ಯವಾಗುತ್ತಿದ್ದು, ಇದರತ್ತ ಹೆಚ್ಚಿನ ಗಮನಹರಿಸಬೇಕೆಂದು ಸಿಪಿಐ ಗುರಣ್ಣ ಹೆಬ್ಬಾಳ್ಕರ್ ಹೇಳಿದರು. ಪಟ್ಟಣದ ಮಾವಿನಕೊಪ್ಪ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್…

Read More

ಹೊಸನಗರ : ಜೇನುನೊಣ ದಾಳಿ – ಒಂದೇ ಕುಟುಂಬದ 6 ಮಂದಿಗೆ ಗಾಯ | ಮೆಗ್ಗಾನ್ ಗೆ ದಾಖಲು

ಹೊಸನಗರ : ಜೇನು ಹುಳುಗಳ ದಾಳಿಯಿಂದ 6 ಜನ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪದ ಮಳಲಿ ಗ್ರಾಮದಲ್ಲಿ ನಡೆದಿದೆ. ಕೋಣಂದೂರು ಮೂಲದ ಒಂದೇ ಕುಟುಂಬದ 9 ಜನ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದಾರೆ.ಮಧ್ಯಾಹ್ನ ಕೆರೆಯ ಏರಿಯ ಮೇಲೆ ಊಟ ಮಾಡುತ್ತಿರುವಾಗ ಏಕಾಏಕಿ ಜೇನುನೊಣಗಳು ದಾಳಿ ಮಾಡಿದ್ದು ಆರು ಜನರಿಗೆ ಗಂಭೀರ ಗಾಯಗಳಾಗಿವೆ. ಕೋಣಂದೂರಿನ ಫಯಾಜ್ ಮತ್ತು ಇಂತಿಯಾಜ್ ಕುಟುಂಬ ಭಾನುವಾರವಾದ ಹಿನ್ನಲೆಯಲ್ಲಿ ಕುಟುಂಬದೊಂದಿಗೆ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದರು ಎನ್ನಲಾಗುತ್ತಿದೆ. ಗಾಯಾಳುಗಳನ್ನು…

Read More

ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿಯ ಕಾಲಿಗೆ ಗುಂಡಿಟ್ಟ ಪೊಲೀಸ್ :

ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಶಿವಮೊಗ್ಗ ಪೊಲೀಸರು ಬಂದಿಸಿದ್ದಾರೆ. ರಾಜೀವ್ ಗಾಂಧಿ ಬಡಾವಣೆಯಲ್ಲಿ ಆರೋಪಿ ಇದ್ದ ಹಿನ್ನಲೆಯಲ್ಲಿ ಕಾಯಾಚರಣೆ ನಡೆಸಿದ ಪೊಲೀಸರು ಶಾಹಿದ್ ಖುರೇಶಿಯನ್ನು ಬಂಧಿಸಲು ಮುಂದಾಗಿದ್ದಾರೆ. ಈ ವೇಳೆ ಪುನಃ ಚಾಕುವಿನಿಂದ ದಾಳಿಗೆ ಪ್ರಯತ್ನಿಸಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ರಾಬರಿ ಕೇಸ್’ಗಳಲ್ಲಿ ಪ್ರಮುಖ ಆರೋಪಿಯಾಗಿದ್ದ ಶಾಹಿದ್ ಖುರೇಶಿಯ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಬಲಗಾಲಿನ ಮಂಡಿಯ ಕೆಳಗೆ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿಯನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು…

Read More

ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮ ಗೋ ಸಾಕಾಣಿಕೆ : ಇಬ್ಬರಬಂಧನ

  ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಗೋವಿನ‌ ಮಾರಾಟ ಮತ್ತು ಸಾಗಾಣಿಕ ವಿರುದ್ಧ ದಾಳಿ ನಡೆಸಲಾಗಿದ್ದು ಒಂದು ಕಡೆ ಗೋವುಗಳನ್ನ ರಕ್ಷಿಸಲಾದರೆ ಇನ್ನೊಂದೆಡೆ ಮನೆಯಲ್ಲಿಯೇ ಗೋವನ್ನ ಕಡಿದು ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿದೆ ಬಂದಿದೆ. ಸಾಗರ ತಾಲೂಕಿನ ತಾಳಗುಪ್ಪ ಗ್ರಾಮದಲ್ಲಿ ಅಕ್ರಮವಾಗಿ ಮೂರು ಗೋವುಗಳನ್ನ ಟಾಟಾ‌ಏಸ್ ವಾಹನದಲ್ಲಿ ತುಂಬಿಸಿಕೊಂಡು ಹೋಗುವಾಗ ಪೊಲೀಸರು ತಡೆದು ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಆಟೋದಲ್ಲಿದ್ದ ಓರ್ವ ಪರಾರಿಯಾಗಿದ್ದಾನೆ. ಕಣಸೆ ಗ್ರಾಮದ ಗಣಪತಿ ಮತ್ತು ಆತನ ಪುತ್ರ ದೇವರಾಜ್ ನನ್ನ ಬಂಧಿಸಲಾಗಿದೆ. ಅದರಂತೆ…

Read More