“ಸ್ವಧರ್ಮದಲ್ಲಿ ನಿಷ್ಠೆ, ಪರ ಧರ್ಮದಲ್ಲಿ ಸಹಿಷ್ಣುತಾ “: ಭಾವವನ್ನು ಹೊಂದಿರುವ ದೇಶ ನಮ್ಮದು : ಮಳಲಿ ಶ್ರೀ
ರಿಪ್ಪನ್ ಪೇಟೆ : ನಮ್ಮ ದೇಶವು ಅನೇಕ ಧರ್ಮಗಳ ಮಹಾಸಾಗರ ವಾಗಿದ್ದು ಅನೇಕತೆಯಲ್ಲಿ ಏಕತೆಯನ್ನು ಹೊಂದಿ ಸ್ವಧರ್ಮದಲ್ಲಿ ನಿಷ್ಠೆ ಪರಧರ್ಮ ದಲ್ಲಿ ಸಹಿಷ್ಣುತಾ ಭಾವವನ್ನು ಹೊಂದಿರುವ ದೇಶವಾಗಿದೆ ಎಂದು ಮಳಲಿ ಮಠದ ಶ್ರೀ ಡಾ. ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ರಿಪ್ಪನ್ ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಇಂದು ಹಿಂದೂ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ಹೊಸವರ್ಷದ ಧ್ವಜಾರೋಹಣದ ಯುಗಾದಿ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿ ಸ್ವಾಮೀಜಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ವಿಶ್ವದ ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಭಾರತವು…


