ವಿಚಾರಣಾಧೀನ ಖೈದಿಗೆ ಗಾಂಜಾ ಪೂರೈಕೆಗೆ ಯತ್ನ – ಯುವಕನ ಬಂಧನ|arrested
ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಸಲು ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಸೋಗಾನೆ ಗ್ರಾಮದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಕಾರಾಗೃಹದಲ್ಲಿರುವವನಿಗೆ ಬೇಕರಿ ಪದಾರ್ಥಗಳನ್ನು ನೀಡುವ ನೆಪದಲ್ಲಿ ಗಾಂಜಾ ಪೂರೈಕೆ ಮಾಡಲು ಯತ್ನಿಸಿದ ಯುವಕರು. ಈ ಪೈಕಿ ಒಬ್ಬ ಸಿಕ್ಕಿಬಿದ್ದಿದ್ದು ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಎರಡು ವಾರದ ಹಿಂದೆ ಸಾಗರದಲ್ಲಿ ಗಾಂಜಾದೊಂದಿಗೆ ಸಿಕ್ಕಿಬಿದ್ದು ಜೈಲು ಸೇರಿದ್ದ ಅಲ್ತಾಫ್ ಎಂಬುವನಿಗೆ ಗಾಂಜಾ ನೀಡಲು ಬಂದಿದ್ದ ಯುವಕರು. ಕೈದಿಯ ಸ್ನೇಹಿತರೇ ಆಗಿರುವ ಶಿವಮೊಗ್ಗ ಗೋಪಾಳದ ಮುಸ್ತಫಾ ಮತ್ತು ಕಾಶೀಪುರದ ದಿಲೀಪ ಕೆಲವು…