Headlines

ಡಿ ಕೆ ಶಿವಕುಮಾರ್ ಜನ್ಮದಿನದ ಪ್ರಯುಕ್ತ ಸಾಗರದ ತಾಯಿ ಮಗು ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ :

ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಡಿ ಕೆ ಶಿವಕುಮಾರ್ ಜನ್ಮದಿನ ಆಚರಣೆ ಪ್ರಯುಕ್ತ ಸಾಗರದ ತಾಯಿ ಮಗು ಆಸ್ಪತ್ರೆಯಲ್ಲಿ ದಾಖಲಾದವರಿಗೆ ಹಣ್ಣು ಬ್ರೆಡ್ ನ್ನು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ವಿತರಿಸಿದರು. ನಂತರ ಮಾತನಾಡಿದ ಅವರು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ವಿರುದ್ಧ ಟ್ವೀಟ್ ಮಾಡಿರುವ ಮಾಜಿ ಸಂಸದೆ ರಮ್ಯ ಅವರ ಕ್ರಮ ಖಂಡನೀಯ. ಪಕ್ಷದ ವರಿಷ್ಠರು ರಮ್ಯಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಡಿಕೆಶಿ ಅವರ…

Read More

ಆಲುವಳ್ಳಿ ಗ್ರಾಮದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ|Aluvalli

ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಆಲುವಳ್ಳಿ ಗ್ರಾಮದಲ್ಲಿ  67ನೇ ಕರ್ನಾಟಕ  ರಾಜ್ಯೋತ್ಸವದ ಅದ್ಧೂರಿಯಾಗಿ ನಡೆಯಿತು. ಆಲುವಳ್ಳಿ ಗ್ರಾಮದ ವೃತ್ತದಲ್ಲಿ ಕನ್ನಡ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಪ್ರಮುಖ ಬೀದಿಗಳಲ್ಲಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆ ಮತ್ತು  ಮೆರವಣಿಗೆ ನಡೆಯಿತು. ಮಕ್ಕಳು ವಿವಿಧ ವೇಷಭೂಷಣ ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡು ಎಲ್ಲಾರ ಗಮನ ಸೆಳೆದರು. ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮವನ್ನು ಕನ್ನಡ ಸಂಘದ ಅಧ್ಯಕ್ಷರಾದ ಟೀಕೇಶಪ್ಪ ಗೌಡ ನೆರವೇರಿಸಿದರು ಈ ಸಂಧರ್ಭದಲ್ಲಿ ಗ್ರಾಮದ ಹೈಮಾಸ್ಕ್ ಬೀದಿ ದೀಪವನ್ನು ಹೊಸನಗರ ತಾಪಂ ಮಾಜಿ ಅಧ್ಯಕ್ಷ…

Read More

ಬಡಮಕ್ಕಳ ಶಿಕ್ಷಣದಿಂದ ಸಮಾಜ ಸುಶಿಕ್ಷಿತ : ಕೋಣಂದೂರು ಶ್ರೀ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

ರಿಪ್ಪನ್‌ಪೇಟೆ: ಬಡಮಕ್ಕಳಿಗೆ ಶಿಕ್ಷಣ ನೀಡುವುದರಿಂದ ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ. ಎಂಬ ಕಲ್ಪನೆಯಲ್ಲಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹೊಂದಿದ್ದರು ಎಂದು ಕೋಣಂದೂರು ಬೃಹನ್ಮಠದ ಶ್ರೀ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಿದ್ಧಗಂಗಾ ಶ್ರೀಗಳ ಭಕ್ತವೃಂದದವತಿಯಿಂದ ಇಂದು ಶ್ರೀ ಡಾ. ಶಿವಕುಮಾರಸ್ವಾಮೀಜಿಯವರ ೧೧೫ನೇ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಿ ಆಶೀರ್ವಚನ ನೀಡಿ ಆರ್ಥಿಕ ಸಬಲರಲ್ಲದ ಗ್ರಾಮೀಣ ಭಾಗದ  ಮಕ್ಕಳಿಗೆ ಶಿಕ್ಷಣ ದುರ್ಲಬವಾಗಿದ್ದ ಸಂದರ್ಭದಲ್ಲಿ ಸ್ವಾಮೀಜಗೆ ಶ್ರೀಮಠದಲ್ಲಿ ವಿದ್ಯಾ ಕೇಂದ್ರವನ್ನು ತೆರೆದು ತನ್ಮೂಲಕ, ಅನ್ನ, ಅಕ್ಷರ…

Read More

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು ಹಣದ ಆಸೆಗಾಗಿ ಬೆಟ್ಟಿಂಗ್ ಕಟ್ಟಿ ಎಣ್ಣೆ ಪಾರ್ಟಿಯಲ್ಲಿ 5 ಬಾಟಲಿ ಎಣ್ಣೆಯನ್ನು ನೀರು ಬೆರೆಸದೇ ಡ್ರೈ ಕುಡಿದು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ನಡೆದಿದೆ. ಕಾರ್ತಿಕ್ (21) ಮದ್ಯ ಸೇವಿಸಿ ಸಾವನ್ನಪ್ಪಿದ ಯುವಕ. ಐದು ಬಾಟಲ್ ಮದ್ಯಕ್ಕೆ ಒಂದು ಹನಿ ನೀರನ್ನೂ ಬೆರೆಸದೇ ಕುಡಿಯುವುದಾಗಿ ಎದುರಾಳಿ ವ್ಯಕ್ತಿಯೊಂದಿಗೆ 10 ಸಾವಿರ ರೂ. ಹಣಕ್ಕೆ ಬಾಜಿ…

Read More

ಹೆದ್ದಾರಿಗೆ ಉರುಳಿ ಬಿದ್ದ ಬೃಹತ್ ಆಲದ ಮರ – ವಾಹನ ಸಂಚಾರ ವ್ಯತ್ಯಯ

ಹೆದ್ದಾರಿಗೆ ಉರುಳಿ ಬಿದ್ದ ಬೃಹತ್ ಆಲದ ಮರ – ವಾಹನ ಸಂಚಾರ ವ್ಯತ್ಯಯ ಮರ ಉರುಳುವಾಗ ಅದೃಷ್ಟವಶಾತ್‌ ಆ ಭಾಗದಲ್ಲಿ ಯಾವುದೇ ವಾಹನ ಸಂಚರಿಸುತ್ತಿರಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದೆ. ಶಿವಮೊಗ್ಗ : ಜೋರು ಗಾಳಿಗೆ ಸಹಿತ ಮಳೆಯಿಂದಾಗಿ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಬೃಹತ್‌ ಮರ ಧರೆಗುರುಳಿದೆ. ಶಿವಮೊಗ್ಗ ತಾಲೂಕು ಗಾಜನೂರು ಚೆಕ್‌ ಪೋಸ್ಟ್‌ ಸಮೀಪ ಮರ ಬುಡಮೇಲಾಗಿದೆ. ಚೆಕ್‌ ಪೋಸ್ಟ್‌ನ ಬಳಿಯಿದ್ದ ಬೃಹತ್‌ ಆಲದ ಮರ ಮಧ್ಯಾಹ್ನ ಬೀಸಿದ ಜೋರಿ ಗಾಳಿಗೆ ಧರೆಗುರುಳಿಸಿದೆ. ಇದರಿಂದ…

Read More

ಪತಿಯೊಂದಿಗಿನ ಜಗಳದಿಂದ ನೊಂದು ತನ್ನ ಆರು ಮಕ್ಕಳನ್ನು ಬಾವಿಗೆಸೆದು ಕೊಂದ ಪಾಪಿ ತಾಯಿ :

  ಪತಿ ಜೊತೆ ಜಗಳವಾಡಿಕೊಂಡ ಮಹಿಳೆ ತನ್ನ ಆರು ಮಕ್ಕಳನ್ನು ಬಾವಿಗೆಸೆದು ತಾನೂ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಐದು ಬಾಲಕಿಯರು ಸೇರಿದಂತೆ ಆರು ಸಣ್ಣ ಮಕ್ಕಳು ಸಾವನ್ನಪ್ಪಿದ್ದಾರೆ.ಆದರೆ, ಆತ್ಮಹತ್ಯೆಗೆ ಪ್ರಯತ್ನಿಸಿದ ಮಹಿಳೆ ಅಪಾಯದಿಂದ ಪಾರಾಗಿದ್ದಾಳೆ ಎನ್ನಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಬಾವಿಯಲ್ಲಿದ್ದ ಎಲ್ಲಾ ಮೃತದೇಹಗಳನ್ನು ಹೊರತೆಗೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ. ಮಾಹಿತಿ ಪ್ರಕಾರ,…

Read More

ಸರಿಗಮಪ ಜೂನಿಯರ್ ಮೆಗಾ ಆಡಿಷನ್‌ಗೆ ಗ್ರಾಮೀಣ ಪ್ರತಿಭೆ ಆಯ್ಕೆ

Keerthi S, an 8th-grade student from a government high school in Harishi village, Soraba taluk, has been selected for the Zee Kannada Sa Re Ga Ma Pa Junior mega audition, bringing pride to her village. ಸೊರಬ: ತಾಲೂಕಿನ ಹರೀಶಿ ಗ್ರಾಮದ ಸರ್ಕಾರಿ ಪ್ರೌಢಶಾಲೆ, ವಿದ್ಯಾನಗರದ 8ನೇ ತರಗತಿ ವಿದ್ಯಾರ್ಥಿನಿ ಕೀರ್ತಿ ಎಸ್ ಅವರು ತಮ್ಮ ಸಂಗೀತ ಪ್ರತಿಭೆಯಿಂದ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುವ ಹೆಜ್ಜೆ ಇಟ್ಟಿದ್ದಾರೆ….

Read More

ಭೂಮಿಗೆ ಯಶಸ್ವಿಯಾಗಿ ಕಾಲಿಟ್ಟ ಸುನೀತಾ ವಿಲಿಯಮ್ಸ್ ..! ಫಲಿಸಿತು ಕೋಟ್ಯಾಂತರ ಮಂದಿಯ ಪ್ರಾರ್ಥನೆ!

ಭೂಮಿಗೆ ಯಶಸ್ವಿಯಾಗಿ ಕಾಲಿಟ್ಟ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್! ಫಲಿಸಿತು ಕೋಟ್ಯಾಂತರ ಮಂದಿಯ ಪ್ರಾರ್ಥನೆ! ಇಡೀ ಜಗತ್ತೇ ತುದಿಗಾಲಲ್ಲಿ ನಿಂತು ಕಾಯುತ್ತಿದ್ದ ಕ್ಷಣವೊಂದು ನಿರೀಕ್ಷೆಯಂತೆ ಸಕ್ಸಸ್ ಆಗಿದೆ. (Sunita Williams) 9 ತಿಂಗಳ ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಬಾಕಿಯಾಗಿದ್ದ ಭಾರತ ಮೂಲದ ಸುನೀತಾ ವಿಲಿಯಮ್ಸ್ ಮತ್ತು ಸಹ ಗಗನಯಾತ್ರಿ ಬುಚ್ ವಿಲ್ಮೋರ್ (Butch Wilmore) ಯಶಸ್ವಿಯಾಗಿ ಭೂಮಿಗೆ ಬಂದಿಳಿದಿದ್ದಾರೆ. ಆ ಮೂಲಕ ವಿಜ್ಞಾನಿಗಳ ಬಹುದಿನಗಳ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದೆ. ನಿನ್ನೆ (ಮಂಗಳವಾರ) ನ್ಯೂಯಾರ್ಕ್ ಸಮಯ 1:05…

Read More

ಮತದಾರರು ಹರತಾಳು ಹಾಲಪ್ಪ , ಬಿ ವೈ ರಾಘವೇಂದ್ರ ಮುಖ ನೋಡಿ ಮತ ಹಾಕಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ | GKB

ಮತದಾರರು ಹರತಾಳು ಹಾಲಪ್ಪ , ಬಿ ವೈ ರಾಘವೇಂದ್ರ ಮುಖ ನೋಡಿ ಮತ ಹಾಕಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ ಸಾಗರ :  ಲೋಕಸಭಾ ಚುನಾವಣೆಯಲ್ಲಿ 26 ಸಾವಿರ ಮತ ಬಿಜೆಪಿಗೆ ಲೀಡ್ ಬಂದಿದೆ ಎಂದು ಕಾರ್ಯಕರ್ತರು ಹೆದರಬೇಡಿ. ಕೇಂದ್ರದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಜನರು ಬಿಜೆಪಿಗೆ ಮತ ನೀಡಿದ್ದಾರೆಯೇ ವಿನಾ ಬಿ.ವೈ.ರಾಘವೇಂದ್ರ, ಹರತಾಳು ಹಾಲಪ್ಪ ಮುಖ ನೋಡಿ ಮತ ಹಾಕಿಲ್ಲ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು…

Read More

Shivamogga | ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ಯುವಕರ ಬಂಧನ

Shivamogga | ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ಯುವಕರ ಬಂಧನ ಶಿವಮೊಗ್ಗ : ದರೋಡೆಗೆ ಹೊಂಚು ಹಾಕಿ ನಿಂತಿದ್ದ ಯುವಕರನ್ನ ದೊಡ್ಡಪೇಟೆ ಪೊಲೀಸರು ಬಂಧಿಸಿ, 2 ಸ್ಟೀಲ್ ಡ್ರಾಗನ್, ಕಬ್ಬಿಣದ ರಾಡು ಹಾಗೂ ಲಾಂಗ್‌ ವಶಪಡಿಸಿಕೊಂಡಿದ್ದಾರೆ. ಹೋಟೆಲ್ ಕಾರ್ಮಿಕ, ಭದ್ರಾವತಿ ತಾಲೂಕಿನ ಬಾಬಳ್ಳಿ ಗ್ರಾಮದ ದೇವರಾಜ್ (31), ಕೋಟೆಗಂಗೂರಿನ ಸಾಗರ್ ಯಾನೆ ಶಬರೀಶ್ (22), ಭದ್ರಾವತಿ ಎಪಿಎಂಸಿ ಅಡಕೆ ಮಂಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಾಗರಾಜ್ ಯಾನೆ ಕುಮಾರ (38), ರಾಗಿಗುಡ್ಡದ ಶೇಯಸ್ (22) ಬಂಧಿತ ಆರೋಪಿಗಳಾಗಿದ್ದು ಕೋಟೆಗಂಗೂರಿನ…

Read More