Headlines

ಅನಾಮಧೇಯ ಶವ: ವಾರಸುದಾರರ ಪತ್ತೆಗೆ ಮನವಿ

ಶಿವಮೊಗ್ಗ : ಜ.08 ರಂದು ಮೆಗ್ಗಾನ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅನಾಮಧೇಯ ವೃದ್ದರೋರ್ವರು ಮರಣ ಹೊಂದಿದ್ದಾರೆ.      ಸಾರ್ವಜನಿಕರು ಆಸ್ಪತ್ರೆಗೆ ಸೇರಿಸಲಾಗಿದ್ದ ಸುಮಾರು 60 ರಿಂದ 65 ವರ್ಷದ ಅನಾಮಧೇಯ ವೃದ್ದರು ಮೃತಪಟ್ಟಿದ್ದು ಶವವನ್ನು ಶವಾಗಾರದಲ್ಲಿ ಇರಿಸಲಾಗಿದೆ. ಮೃತರು ಸುಮಾರು 5.6 ಅಡಿ ಎತ್ತರ ಇದ್ದು ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿರುತ್ತಾರೆ. ತಲೆಯಲ್ಲಿ ಸುಮಾರು 02 ಇಂಚು ಉದ್ದದ ಕಪ್ಪು ಕೂದಲು, 01 ಇಂಚು ಉದ್ದದ ಬಿಳಿ ಗಡ್ಡ ಮೀಸೆ ಇರುತ್ತದೆ. ಮುಂಭಾಗದ…

Read More

ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಕುಗ್ರಾಮದ ಗ್ರಾಮಸ್ಥರಿಂದ ಉಗ್ರ ಹೋರಾಟದ ಎಚ್ಚರಿಕೆ:

ಹೊಸನಗರ: ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಕುಗ್ರಾಮದಲ್ಲಿ ಗ್ರಾಮಸ್ಥರು ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ದ ಗದ್ದೆಯಂತಾದ ರಸ್ತೆಯಲ್ಲಿ ನಾಟಿ ಮಾಡುವ ಮೂಲಕ ವಿಭಿನ್ನ ಪ್ರತಿಭಟನೆಯನ್ನು ನಡೆಸಿದ ಘಟನೆ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮಪಂಚಾಯತ್ ವ್ಯಾಪ್ತಿಯ ಒಂದಗದ್ದೆ, ನೀರೇರಿ  ಎಂಬ ಅವಳಿ ಗ್ರಾಮದಲ್ಲಿ ನಡೆದಿದೆ. ಒಂದಗದ್ದೆ ಹಾಗೂ ನೀರೇರಿ ಗ್ರಾಮಗಳು ಅವಳಿ ಗ್ರಾಮಗಳಾಗಿವೆ. ಈ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಬೀದಿದೀಪ ಹಾಗೂ ಕುಡಿಯುವ ನೀರಿನ ಸಮಸ್ಯೆಯಿಂದಾಗಿ ಗ್ರಾಮಸ್ಥರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.  ಈ ಮೂಲಭೂತ ಸೌಕರ್ಯಗಳ…

Read More

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಹೊಸನಗರದಲ್ಲಿ ವಿವಿಧ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಹೊಸನಗರ : ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ರಸ್ತೆತಡೆ ಹಾಗೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಬಸ್ ನಿಲ್ದಾಣದಲ್ಲಿ ಬಜರಂಗ ದಳ, ಹಿಂದೂ ಕಾರ್ಯಕರ್ತರು ಹಿಂದೂಗಳ ಮೇಲಿನ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿದರು. ಬಳಿಕ ರಸ್ತೆ ತಡೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದರು. ನಂತರ ಹೊಸನಗರ ತಹಶೀಲ್ದಾರ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಅಸಂಖ್ಯಾತ ಹಿಂದೂ ಗಳ ರಕ್ಷಣೆ ಕೋರಿ ಮನವಿ ಪತ್ರ ಸಲ್ಲಿಸಿದರು.. ಈ…

Read More

ಜ್ಯೂಸ್ ಬಾಟಲ್ ನ ಮುಚ್ಚಳ ನುಂಗಿ ಮಗು ಸಾವು

ಜ್ಯೂಸ್ ಬಾಟಲ್ ನ ಮುಚ್ಚಳ ನುಂಗಿ ಮಗು ಸಾವು ಮನೆಯಲ್ಲಿ ಆಟವಾಡುತಿದ್ದ ಮಗು ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಉಸಿರಾಟದ ತೊಂದರೆಯಿಂದ ಮೃತಪಟ್ಟ ದಾರುಣ ಘಟನೆ, ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿ ಯಲ್ಲಿ ಹರಗುವಳ್ಳಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಒಂದೂವರೆ ವರ್ಷದ ಪುತ್ರ ನಂದೀಶ್ ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಬುಧವಾರ ಬೆಳಿಗ್ಗೆ ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಮುಚ್ಚಳ ನುಂಗಿದ್ದು…

Read More

HOSANAGARA | ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ನೇಮಕ

ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ಅವರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಸಾಗರ ವಿಧಾನಸಭೆ ಕ್ಷೇತ್ರದ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಜಿ.ಬಿ. ಚಂದ್ರಮೌಳಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಜಿ.ಬಿ. ಚಂದ್ರಮೌಳಿ ಅವರು ತಕ್ಷಣ ಹೊಸನಗರ ಬ್ಲಾಕ್ ಕಾಂಗ್ರೆಸ್‌ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ….

Read More

ಗಾಂಜಾ ಮಾರಾಟಕ್ಕೆ ಯತ್ನ – ಮಾಲು ಸಮೇತ ಆರೋಪಿಯ ಬಂಧನ|arrested

ಶಿವಮೊಗ್ಗ : ನಗರದ ಪುಟ್ಟಪ್ಪನ ಕ್ಯಾಂಪ್ ಬಳಿ ಗಾಂಜಾ ಮಾರುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸದ್ದಾಂ ಹುಸೇನ್ ಯಾನೆ ಸಾಂಬಾನನ್ನ ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ನಗರದ ಸೂಳೆಬೈಲಿನ ಪುಟ್ಟಪ್ಪ ಕ್ಯಾಂಪ್ ಹತ್ತಿರ ಅಪರಿಚಿತ ವ್ಯಕ್ತಿಯೊಬ್ಬನು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿಸಿ ಆರ್ ಬಿ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ, ಮಾರ್ಗದರ್ಶನದಲ್ಲಿ, ಸಿಇಎನ್ ಪೊಲೀಸ್ ಠಾಣೆಯ ಪಿಐ ದೀಪಕ್ ಎಂ ರವರ…

Read More

ಆನಂದಪುರ – ಆಯನೂರು ಹೆದ್ದಾರಿಗೆ ಅಡ್ದಲಾಗಿ ಬಿದ್ದ ಮರ – ಟ್ರಾಫಿಕ್ ಜಾಮ್| ಸಮಯ ಪ್ರಜ್ಞೆ ಮೆರೆದ ಶಾಸಕ ಬೇಳೂರು|rain

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು  ಗಿಳಾಲಗುಂಡಿ ಸಮೀಪ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದಿತ್ತು. ಗಾಳಿ ಮಳೆಗೆ ಬಿದ್ದ ಮರದಿಂದಾಗಿ ಶಿವಮೊಗ್ಗ-ಸಾಗರ ರಸ್ತೆಯಲ್ಲಿ ಸಂಚಾರಕ್ಕೆ ಕೆಲವು ಹೊತ್ತು ಸಮಸ್ಯೆ ಉಂಟಾಗಿತ್ತು.   ರಾಷ್ಟ್ರೀಯ ಹೆದ್ಧಾರಿಯಲ್ಲಿ ಸುಮಾರು 2 ಗಂಟೆ ಕಾಲ ಸಂಚಾರ ಬಂದ್ ಆಗಿತ್ತು. ಮರ ಉರುಳಿಬಿದ್ದ ಬೆನ್ನಲ್ಲೆ ಸ್ಥಳೀಯರು ಮರವನ್ನು ಕಡಿದು , ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾದರು. ಆದರೆ ದೊಡ್ಡದಾಗಿದ್ದ ಮರವನ್ನು ತೆರವುಗೊಳಿಸುವುದು ಸುಲಭದ ಕೆಲಸವಾಗಿರಲಿಲ್ಲ.  ಗಿಳಾಲಗುಂಡಿ ಕ್ರಾಸ್ ಸಮೀಪವೇ ಘಟನೆ ಬಗ್ಗೆ ವಿಷಯ ತಿಳಿದು…

Read More

ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ತೀರ್ಥಹಳ್ಳಿ :  ಮುಡುಬಾದ 15 ನೇ ಮೈಲಿಗಲ್ಲಿನ ಬಳಿ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ  ಬೈಕ್ ಸವಾರ ಸ್ಥಳದಲ್ಲೇ ಸತ್ತು ಹೋಗಿರುವ ಘಟನೆ  ಸೋಮವಾರ ರಾತ್ರಿ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಎದುರಿನಿಂದ ಬಂದ ಮೂಕಾಂಬಿಕ ಬಸ್ ನ ಸೈಡ್ ಗೆ ದ್ವಿಚಕ್ರವಾನ ತಗುಲಿದ ಪರಿಣಾಮ ಬಸ್ ನ ಹಿಂಬದಿ ಚಕ್ರ ದ್ವಿಚಕ್ರ ವಾಹನ ಸವಾರನ ಮೇಲೆ ಹರಿದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 15…

Read More

ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ -ಸ್ಥಳೀಯರಲ್ಲಿ ಆತಂಕ!!

ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ –ಸ್ಥಳೀಯರಲ್ಲಿ ಆತಂಕ!! Suspected tiger attack on cattle near Kodur – locals worried!! ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ –ಸ್ಥಳೀಯರಲ್ಲಿ ಆತಂಕ!! Suspected tiger attack on cattle near Kodur – locals worried!! ರಿಪ್ಪನ್ ಪೇಟೆ : ಇಲ್ಲಿನ ಕೋಡೂರು ಸಮೀಪದ ಕೀಳಂಬಿ ಗ್ರಾಮದಲ್ಲಿ ಜಾನುವಾರುವೊಂದರ ಮೇಲೆ ಕಾಡುಪ್ರಾಣಿಯೊಂದು ದಾಳಿ ನಡೆಸಿ ಕೊಂದಿರುವ ಘಟನೆ ವರದಿಯಾಗಿದ್ದು, ಇದು…

Read More

Ripponpete | ಪಟ್ಟಣದ ಹೆಸರಾಂತ ವೈದ್ಯ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ನಿಧನ

Ripponpete | ಪಟ್ಟಣದ ಹೆಸರಾಂತ ವೈದ್ಯ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ನಿಧನ ರಿಪ್ಪನ್‌ಪೇಟೆ ; ವಿಶ್ರಾಂತ ವೈದ್ಯರೂ ಹಾಗೂ ಜಿ ಎಸ್ ಬಿ ಸಮಾಜದ ಹಿರಿಯರಾದ ಡಾ. ಮಂಜುನಾಥ್ ರಾವ್ ( ಕಿರಣ್ ಡಾಕ್ಟರ್) ಇಂದು ಬೆಳಗ್ಗೆ 3:30 ಕ್ಕೆ ತೀರ್ಥಹಳ್ಳಿಯಲ್ಲಿರುವ ನಿವಾಸದಲ್ಲಿ ದೈವಾಧೀನರಾಗಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಕಿರಣ್ ಕ್ಲಿನಿಕ್ ಎಂಬ ಹೆಸರಿನ ಚಿಕಿತ್ಸಾ ಕೇಂದ್ರದಲ್ಲಿ ಮೂವತ್ತು ವರ್ಷಕ್ಕೂ ಅಧಿಕ ಕಾಲ ಜನರ ಸೇವೆ ಸಲ್ಲಿಸಿದ್ದರು.ಬಡವರಿಗೆ ಉಚಿತವಾಗಿ ಸೇವೆ ನೀಡುತಿದ್ದರು. ವೈದ್ಯಕೀಯ ವೃತ್ತಿಯಲ್ಲಿ ಗಣನೀಯ ಸೇವೆ…

Read More