Headlines

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ – ಬಸ್ ಗೆ ವಿದ್ಯುತ್ ಪ್ರವಹಿಸಿ 35 ಪ್ರಯಾಣಿಕರು ಆಸ್ಪತ್ರೆಗೆ ದಾಖಲು – ಇಬ್ಬರು ವಿದ್ಯಾರ್ಥಿಗಳು ಮೆಗ್ಗಾನ್ ಗೆ..!!!

ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ – 35 ಪ್ರಯಾಣಿಕರು ಆಸ್ಪತ್ರೆಗೆ ದಾಖಲು ಸಾಗರ :  ಸಿಗಂದೂರು ಹೊಳೆಬಾಗಿಲಿನಿಂದ ಸಾಗರಕ್ಕೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಗೆಣಸಿಕುಣಿ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ವಿದ್ಯುತ್ ವೈರ್ ಬಸ್ ಗೆ ತಾಗಿ ಒಟ್ಟು 45 ಪ್ರಯಾಣಿಕರಲ್ಲಿ 35 ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಈ ಬಸ್ ನಲ್ಲಿ ಒಟ್ಟು 45 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು,…

Read More

ರಿಪ್ಪನ್‌ಪೇಟೆಯ ಗಾನ ಕೋಗಿಲೆ ಕು|| ಪ್ರಣತಿ ಅಣ್ಣಪ್ಪ ರವರಿಗೆ ಶಾಸಕರಿಂದ ಸನ್ಮಾನ|pranathi

ರಿಪ್ಪನ್‌ಪೇಟೆ : ಪಟ್ಟಣದ ಗಾನ ಕೋಗಿಲೆ ಕುಮಾರಿ ಪ್ರಣತಿ ಅಣ್ಣಪ್ಪ ರವರಿಗೆ ಇತ್ತೀಚೆಗೆ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಚಿಕ್ಕವಯಸ್ಸಿನಲ್ಲೇ ಅದ್ಭುತ ಸಾಧನೆ ತೋರಿ ತನ್ನ ಕಂಠಸಿರಿಯಿಂದ ಗಾಯನ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿ ಸಂಗೀತ ಲೋಕದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡು ನಾಡಿನಾದ್ಯಂತ ಗಾನ ಸುಧೆಯನ್ನು ಹರಿಸಿ ಸಂಗೀತ ಪ್ರಿಯರಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದ ಯುವ ಪ್ರತಿಭೆ ರಿಪ್ಪನ್ ಪೇಟೆಯ ಪ್ರಣತಿ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರ ಹೆಸರನ್ನು ಇಡಲು ಆಗ್ರಹ:

ರಿಪ್ಪನ್ ಪೇಟೆ: ಶಿವಮೊಗ್ಗದಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ನೂತನ ವಿಮಾನ ನಿಲ್ದಾಣಕ್ಕೆ ಕರ್ನಾಟಕದಿಂದ ಆಯ್ಕೆಯಾಗಿ ದೇಶದ ಪ್ರಧಾನಿಯಾಗಿ ರಾಜ್ಯದ ಕೀರ್ತಿಯನ್ನು ಇಡೀ ದೇಶಕ್ಕೆ ಪರಿಚಯಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರ ಹೆಸರನ್ನು  ಇಡಬೇಕೆಂದು ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ರವರಿಗೆ ರಾಜ್ಯ ಜೆಡಿಎಸ್ ಮಾಜಿ ಪ್ರಧಾನಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಒತ್ತಾಯಿಸಿದ್ದಾರೆ. .                     …

Read More

ಸಿದ್ದರಾಮಯ್ಯ ವಿರುದ್ದ ವಿವಾದಿತ ಹೇಳಿಕೆ – ಸಚಿವ ಅಶ್ವಥ್ ನಾರಾಯಣ ಪೋಟೋ ಗೆ ಬೆಂಕಿ ಹಚ್ಚಿ ಆಕ್ರೋಶ|protest

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿವಾದಿತ ಹೇಳಿಕೆ ನೀಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್. ಅಶ್ವಥನಾರಾಯಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ, ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬಿ.ಹೆಚ್.ರಸ್ತೆಯ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ದುರಹಂಕಾರಿ ಸಚಿವ ಡಾ.ಅಶ್ವತ್ಥನಾರಾಯಣ ಅವರು ಕೊಟ್ಟ ಪ್ರಚೋದನಕಾರಿ ಹೇಳಿಕೆಯಿಂದ ಸಿದ್ದರಾಮಯ್ಯ ಅವರಿಗಾಗಲೀ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗಾಗಲೀ ಆತಂಕ, ಆಶ್ಚರ್ಯವಾಗಿಲ್ಲ. ಏಕೆಂದರೆ…

Read More

ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ

ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಭಕ್ತವೃಂದದವರ ಭಾಗವಹಿಸುವಿಕೆಯಿಂದ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಹಾಗೂ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಒಂಬತ್ತು ದಿವಸಗಳಲ್ಲಿ ಶರನ್ನವರಾತ್ರಿ ಪೂಜೆ, ಉತ್ಸವಗಳು ನೆರವೇರಿದವು. ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಜಿನಾಗಮೋಕ್ತ ಶಾಸ್ತ್ರದನ್ವಯ…

Read More

ಹುಲಿಕಲ್ ಘಾಟಿಯಲ್ಲಿ ಮಣ್ಣು ಕುಸಿತ: ಮೂವರು ಸಾವು ಶಂಕೆ, ನಾಲ್ವರಿಗೆ ಗಂಭೀರ !

ಹುಲಿಕಲ್ ಘಾಟಿಯಲ್ಲಿ ಮಣ್ಣು ಕುಸಿತ: ಇಬ್ಬರ ಸಾವು ಶಂಕೆ, ಇನ್ನಿಬ್ಬರು ನಾಪತ್ತೆ Two people are feared dead and two others missing after a landslide at Hulikal Ghat during road work. Rescue operations are underway as officials verify details. ಶಿವಮೊಗ್ಗ ಜಿಲ್ಲೆ ಸಮೀಪದ ಹುಲಿಕಲ್ ಘಾಟಿಯಲ್ಲಿ ಭಾರೀ ಮಣ್ಣು ಕುಸಿತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ. ಘಟನೆಯ…

Read More

ಆರ್​ಎಸ್​​ಎಸ್​​ ಬಾಂಬ್​ ಹಾಕುವವರನ್ನ ತಯಾರು ಮಾಡುವ ಸಂಸ್ಥೆಯಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ಆರ್​​ಎಸ್​ಎಸ್​​​ ಸಂಘಟನೆ ದೇಶದ ಮೇಲೆ ಬಾಂಬ್ ಹಾಕುವವರನ್ನ ತಯಾರು ಮಾಡುವುದಿಲ್ಲ. ದೇಶವನ್ನು ಪ್ರೀತಿ ಮಾಡೋರನ್ನು ತಯಾರು ಮಾಡುತ್ತೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ವೋಟ್ ಬ್ಯಾಂಕಿಗಾಗಿ ಏನೇನೋ ಹೇಳುತ್ತಿದ್ದಾರೆ. ಅವರು ಅಧಿಕಾರದಿಂದ ಕೆಳಗಿಳಿದ ಮೇಲೆ ರಾಜ್ಯದಲ್ಲಿ ಉತ್ತಮ ಆಡಳಿತ ನಡೆಯುತ್ತಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್​ನವರು ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ, ಇದು ಸರಿಯಲ್ಲ. ಅಲ್ಪಸಂಖ್ಯಾತರ ಓಲೈಕೆಗೆ ಕಾಂಪಿಟೇಷನ್ ನಡೆಯುತ್ತಿದೆ ಎಂದರು. ಸಿಂದಗಿ, ಹಾನಗಲ್​ ಉಪ…

Read More

ಸೂಡೂರು ಬಳಿ ಹಿಟ್ ಅಂಡ್ ರನ್: ಸ್ಕೂಟಿ ಸವಾರ ಸ್ಥಳದಲ್ಲೇ ಸಾವು

A hit and run accident near Suduru Gate in Ripponpet claimed the life of a 62-year-old scooter rider. Police have registered a case and started investigation. ರಿಪ್ಪನ್‌ಪೇಟೆ: ತಾಲೂಕಿನ ಸಮೀಪದ ಸೂಡೂರು ಗೇಟ್ ಬಳಿ ಹಿಟ್ ಅಂಡ್ ರನ್ ಪ್ರಕರಣ ಸಂಭವಿಸಿ ಸ್ಕೂಟಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ಹಣಗೆರೆ ಕಟ್ಟೆ ಸಮೀಪದ ಹೊಸೂರು ಗ್ರಾಮದ ನಿವಾಸಿ ಸುಬ್ರಹ್ಮಣ್ಯ (62) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ…

Read More

ಚಂದ್ರಯಾನ -3 ಇಸ್ರೋ ತಂಡದಲ್ಲಿ ಕೋಣಂದೂರಿನ ಮಹಿಳೆ – ಮಾಜಿ ಶಾಸಕರ ಪುತ್ರಿಗೆ ಅಭಿನಂದನೆಗಳ ಮಹಾಪೂರ

ಚಂದ್ರಯಾನ -3 ಲ್ಯಾಂಡರ್ ಬುಧವಾರ ಸಂಜೆ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದ್ದು, ಇಸ್ರೋ ವಿಜ್ಞಾನಿಗಳ ಈ ಸಾಧನೆಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಇಸ್ರೋ ವಿಜ್ಞಾನಿಗಳಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಮಹಿಳೆಯೊಬ್ಬರು ಇದ್ದಾರೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ. ಹೌದು, ಶಿವಮೊಗ್ಗ ಮೂಲದ ಶಿವಾನಿ (ISRO deputy director) ಎಂಬ ಮಹಿಳೆ ಇಸ್ರೋದಲ್ಲಿ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರವಾಗಿದೆ. ಇವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಪಟ್ಟಣದ ಮಾಜಿ…

Read More

ಯುವ ಕಾಂಗ್ರೆಸ್ ಸಾಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಹೇಂದ್ರ ಆಯ್ಕೆ

ಯುವ ಕಾಂಗ್ರೆಸ್ ಸಾಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಹೇಂದ್ರ ಆಯ್ಕೆ ಹೊಸನಗರ ತಾಲೂಕ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆ ಸಾಗರ ವಿಧಾನಸಭಾ ಕ್ಷೇತ್ರದ ಬಹು ನಿರೀಕ್ಷಿತ ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಇಬ್ಬರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹಲವು ತಿಂಗಳಿನಿಂದ ಗೊಂದಲದ ಗೂಡಾಗಿದ್ದ ಕಾಂಗ್ರೆಸ್ ಪಕ್ಷದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಹೇಂದ್ರ ಬುಕ್ಕಿವರೆ ಆಯ್ಕೆಯಾಗಿದ್ದಾರೆ. ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆಯಾಗಿದ್ದಾರೆ….

Read More
Exit mobile version