Headlines

ಸೊರಬ ಪುರಸಭೆಗೆ ನೂತನ ಮುಖ್ಯಧಿಕಾರಿಗಳಾಗಿ ಮಹೇಂದ್ರ ಬಿ ಅಧಿಕಾರ ಸ್ವೀಕಾರ:

ಸೊರಬ: ಇಲ್ಲಿನ ಪಟ್ಟಣ ಪಂಚಾಯತ್ ಪುರಸಭೆಯಾದ ನಂತರ ಮೊದಲ ಮುಖ್ಯಾಧಿಕಾರಿಗಳಾಗಿ ಶ್ರೀ ಮಹೇಂದ್ರ ಬಿ ರವರು ಅಧಿಕಾರ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ನಿಯೋಜನೆಗೆ ಅವಕಾಶ ಮಾಡಿ ಕೊಟ್ಟಂತಹ ಸೊರಬ ಶಾಸಕರಾದ ಶ್ರೀಯುತ ಕುಮಾರ್ ಬಂಗಾರಪ್ಪನವರಿಗೆ  ತುಂಬು ಹೃದಯದಿಂದ ಸ್ವಾಗತ ಹಾಗೂ ಅಭಿನಂದನೆಯನ್ನು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಎಮ್ ಡಿ ಉಮೇಶ್,ಉಪಾಧ್ಯಕ್ಷರಾದ ಮಧುರಯ್ ಜಿ ಶೇಟ್,  ಸದಸ್ಯರಾದ ನಟರಾಜ ಉಪ್ಪಿನ,  ಪ್ರೇಮಾ ಟೋಕಪ್ಪ, ಜಯಲಕ್ಷ್ಮಿ ಪರಮೇಶ್ವರ್,ಪ್ರಭು ಮೇಸ್ತ್ರಿ,ಅನ್ಸರ್, ಪ್ರಸನ್ನ ಶೇಟ್ ದೊಡ್ಮನೆ,ರಂಜನಿ,ಪ್ರವೀಣ್ ಕುಮಾರ್,ಸುಲ್ತಾನ್ ಬೇಗಂ,ಆಫ್ರಿನ್,ವೀರೇಶ್ ಮೇಸ್ತ್ರಿಮತ್ತು ಆಶ್ರಯ…

Read More

ತೀರ್ಥಹಳ್ಳಿ : ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್‌ಮೇಲ್: ABVP ಸಂಘಟನೆಯ ಅಧ್ಯಕ್ಷನ ಬಂಧನಕ್ಕೆ ಆಗ್ರಹ

ಕಾಲೇಜು ವಿದ್ಯಾರ್ಥಿನಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷನನ್ನು ಬಂಧಿಸಬೇಕೆಂದು ಎನ್‌ಎಸ್‌ಯುಐ ಒತ್ತಾಯಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಎಬಿವಿಪಿ ಅಧ್ಯಕ್ಷ ಪ್ರತೀಕ್ ಎಂಬಾತ ಯುವತಿಯೊಬ್ಬಳಿಗೆ ವಿಡಿಯೋ ಕಾಲ್‌ ಮಾಡಿ ನಗ್ನಳಾಗುವಂತೆ ಒತ್ತಾಯಿಸಿದ್ದಾರೆ. ಅದನ್ನು ವಿಡಿಯೋ ಮಾಡಿ ಹಣ ನೀಡುವಂತೆ ಬ್ಲಾಕ್‌ ಮಾಡಿದ್ದಾನೆ. ಹಣ ಕೊಡದಿದ್ದಾಗ ವಾಟ್ಸಾಪ್ ಗುಂಪುಗಳಲ್ಲಿ ವಿಡಿಯೋ ಷೇರ್ ಮಾಡಿ ವಿಕೃತಿ ಮೆರೆದಿದ್ದಾನೆ ಎಂದು ಆರೋಪಿಸಲಾಗಿದೆ. ಈ…

Read More

RIPPONPETE | ಪೂಜಾ ಎಂ.ಎನ್‌ಗೆ ಗಣಿತಶಾಸ್ತ್ರದಲ್ಲಿ ಪಿಎಚ್.ಡಿ ಪದವಿ

Pooja M.N from Arasalu village near Ripponpet has been awarded a PhD in Mathematics by Kuvempu University. She completed her research under the guidance of Prof. S.K. Narasimhamurthy. Her achievement has been widely appreciated by her family and the academic community. RIPPONPETE | ಪೂಜಾ ಎಂ.ಎನ್‌ಗೆ ಗಣಿತಶಾಸ್ತ್ರದಲ್ಲಿ ಪಿಎಚ್.ಡಿ ಪದವಿ ರಿಪ್ಪನ್‌ಪೇಟೆ: ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮದ ಪೂಜಾ ಎಂ.ಎನ್…

Read More

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ – ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿವೈಆರ್ ಹೇಳಿದ್ದೇನು..!!??|SMG

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ – ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿವೈಆರ್ ಹೇಳಿದ್ದೇನು..!!?? ಸಮಾಜದಲ್ಲಿ ಶಾಂತಿಯನ್ನು ಕದಡುವವರು ಮತ್ತು ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಿವಮೊಗ್ಗ ನಗರದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು,…

Read More

ಶಿವಮೊಗ್ಗದಲ್ಲಿ ಪೊಲೀಸ್ ಗುಪ್ತಚರ ಇಲಾಖೆ ಸಂಪೂರ್ಣ ವಿಫಲ : ಚಕ್ರವರ್ತಿ ಸೂಲಿಬೆಲೆ

ಶಿವಮೊಗ್ಗದಲ್ಲಿ ಗುಪ್ತಚರ ಇಲಾಖೆಯಿಂದ ಮಾಹಿತಿ ಸಂಗ್ರಹಿಸುವಲ್ಲಿ ವಿಫಲವಾಗಿದೆ ಎಂದು ಯುವ ಬ್ರಿಗೇಡ್ ನ ಸಂಸ್ಥಾಪಕ ಚಕ್ರವರ್ತಿ ಸೂಲಬೆಲಿ ಅಭಿಪ್ರಾಯಪಟ್ಟರು.ಇಂದು ಮೃತ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತರ ಹಲ್ಲೆ ಕೊಲೆಯಾಗಿದೆ. ಕೊಲೆಯ ಹಿಂದೆ ಸರ್ಕಾರ ಹಾಗೂ ಗುಪ್ತಚರ ಇಲಾಖೆಯ ವಿಫಲವಾಗಿದೆ ಎಂದರು.ಶಿವಮೊಗ್ಗ ಯಾವತ್ರು ಶಾಂತವಾಗಿಲ್ಲ. ಮುಸ್ಲಿಂ ಸಂಘಟನೆಗಳು ಯಾವಾಗಲೂ ಆಕ್ಟಿವ್ ಆಗಿರುವ ಜಿಲ್ಲೆ ಶಿವಮೊಗ್ಗ ಸರ್ಕಾರ ಕಣ್ಣು ಹೊರೆಸುವ ಕೆಲಸ ಮಾಡುತ್ತಿದೆ. ಈ ಹಿಂದೆ ಇರುವ…

Read More

ಅಮ್ಮನಘಟ್ಟವನ್ನು ಪ್ರೇಕ್ಷಣಿಯ ಮಾದರಿ ಯಾತ್ರಾ ಸ್ಥಳವನ್ನಾಗಿಸುವ ಸಂಕಲ್ಪ ನನ್ನದಾಗಿತ್ತು : ಹರತಾಳು ಹಾಲಪ್ಪ|ammanaghatta

ಅಮ್ಮನಘಟ್ಟವನ್ನು ಪ್ರೇಕ್ಷಣಿಯ ಮಾದರಿ ಯಾತ್ರಾ ಸ್ಥಳವನ್ನಾಗಿಸುವ ಸಂಕಲ್ಪ ನನ್ನದಾಗಿತ್ತು :  ಹರತಾಳು ಹಾಲಪ್ಪ   ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ  ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯದೇವಸ್ಥಾನವನ್ನು ರಾಜ್ಯದಲ್ಲಿ ಆತ್ಯುತ್ತಮ ಮಾದರಿ ಪ್ರೇಕ್ಷಣಿಯ ಯಾತ್ರಾ ಕ್ಷೇತ್ರವನ್ನಾಗಿಸುವ ಮಹಾದಾಸೆ ಹೊಂದಿದ್ದೆ ಈ ಹಿಂದಿನ ಅವಧಿಯಲ್ಲಿ ಈ ದೇವಸ್ಥಾನವನ್ನು ಶಿಲಾಮಯ ದೇವಸ್ಥಾನವನ್ನಾಗಿಸಲು ಸರ್ಕಾರದಿಂದ ೧.೫೦ ಕೋಟಿ ಆನುದಾನವನ್ನು ಬಿಡುಗಡೆ ಮಾಡಲಾಗಿದ್ದು ನನ್ನ ಅವಧಿಯಲ್ಲಿಯೇ ಪೂರ್ಣವಾಗಬೇಕಾಗಿತ್ತು ಆದರೆ ರಾಜಕೀಯ ವ್ಯತ್ಯಾಸದಿಂದಾಗಿ ಪೂರ್ಣವಾಗಿಲ್ಲ  ಎಂದು ಮಾಜಿ ಮಂತ್ರಿ  ಹರತಾಳು ಹಾಲಪ್ಪ ಹೇಳಿದರು. ಕೋಡೂರು ಗ್ರಾಮ…

Read More

ರಿಪ್ಪನ್ ಪೇಟೆ :ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕರಲ್ಲಿ ಅಭೂತಪೂರ್ವ ಗೆಲುವಿನ ಹಿನ್ನಲೆ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ :

ರಿಪ್ಪನ್ ಪೇಟೆ : ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ‌ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ದ ವತಿಯಿಂದ  ವಿಜಯೋತ್ಸವ ಆಚರಿಸಲಾಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಪಟಾಕಿಗಳನ್ನು ಸಿಡಿಸಿ, ಸಿಹಿ ಹಂಚಿ,ವಿಜಯೋತ್ಸವ ಆಚರಿಸಿದರು.ಈ ಸಂಧರ್ಭದಲ್ಲಿ ಪ್ರಧಾನಿ ಮೋದಿ,ಮುಖ್ಯಮಂತ್ರಿ ಬೊಮ್ಮಾಯಿ,ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾ ನಾಥ್ ,ಯಡಿಯೂರಪ್ಪ ಹಾಗೂ ಶಾಸಕ ಹರತಾಳು ಹಾಲಪ್ಪ ಪರವಾಗಿ ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಜೊತೆ ಮಾತನಾಡಿದ…

Read More

ಎತ್ತು ಸಾಗಿಸುತಿದ್ದವನ ಮೇಲೆ ಹಲ್ಲೆ – 9 ಮಂದಿ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಪೊಲೀಸ್ ಸ್ಠೇಷನ್​ ವ್ಯಾಪ್ತಿಯಲ್ಲಿ ನಡೆದ ಘಟನೆಯೊಂದರ ಸಂಬಂಧ ಸುಮೊಟೋ ಕೇಸ್ ಹಾಗೂ ಹಲ್ಲೆ ಪ್ರಕರಣದ ಕೇಸ್ ದಾಖಲಾಗಿದೆ.  ಎತ್ತುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ತಡೆದು ಆತನ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪದ ಅಡಿಯಲ್ಲಿ9 ಮಂದಿ ವಿರುದ್ಧ ಹಲ್ಲೆ ಪ್ರಕರಣ ದಾಖಲಾಗಿದೆ. ಇನ್ನೂ ಪ್ರಾಣಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿಯಲ್ಲಿ ವಾಹನದ ಚಾಲಕನ ವಿರುದ್ಧವೂ ಕೇಸ್ ದಾಖಲಾಗಿದೆ.  ಇಲ್ಲಿ ಮಂಚಿಕೊಪ್ಪ ಗ್ರಾಮದ ಬಳಿ ಶುಕ್ರವಾರ ಜಾನುವಾರುಗಳನ್ನು ಸಾಗಿಸುತ್ತಿದ್ದಾರೆ ಎಂಬ ಆರೋಪದಡಿಯಲ್ಲಿ ವಾಹನವೊಂದನ್ನ ಗುಂಪೊಂದು ತಡೆದು ವಿಚಾರಿಸಿದೆ….

Read More

ರಿಪ್ಪನ್ ಪೇಟೆ ಕಸ್ತೂರಿ ಕನ್ನಡ ಸಂಘದ ವತಿಯಿಂದ ಪುನೀತ್ ರಾಜಕುಮಾರ್ ಅವರಿಗೆ ನುಡಿನಮನ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ.

ರಿಪ್ಪನ್‌ಪೇಟೆ: ಪಟ್ಟಣದ ಕಸ್ತೂರಿ ಕನ್ನಡ ಸಂಘ, ಪುನೀತ್‌ರಾಜ್ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ಶನಿವಾರ ನಡೆಸಲಾಯಿತು. ಪ್ರಥಮ ವರ್ಷದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್‌ರಾಜ್ ನುಡಿ ನಮನ ಕಾರ್ಯಕ್ರಮವು ಅಂಗವಾಗಿ  ಏರ್ಪಡಿಸಿದ್ದ  ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ ಪುಟಾಣಿ ಮಕ್ಕಳ ವಿವಿಧ ವೇಷ ಭೂಷಣಗಳೊಂದಿಗೆ ಚಂಡೆ ನೃತ್ಯವು ಮೆರವಣಿಗೆಗೆ ಜನ ಆಕರ್ಷಣೆಗೊಂಡಿತ್ತು. ಬೆಳಿಗ್ಗೆ ತಾಯಿ ಭುವನೇಶ್ವರಿ ಭಾವಚಿತ್ರದ ರಾಜಬೀದಿ ಉತ್ಸವಕ್ಕೆ  ಗ್ರಾ.ಪಂ.ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಚಾಲನೆ ನೀಡಿದರು. ಕನ್ನಡ ಧ್ವಜಾರೋಹಣವನ್ನು ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್‌ರಾಜ್ ಅಭಿಮಾನಿ ಬಳಗದ…

Read More

ಹುಲಿಕಲ್ ಘಾಟ್ ನಲ್ಲಿ ಭೀಕರ ಅಪಘಾತ – ಇಬ್ಬರ ಸಾವು,ಓರ್ವ ಮಹಿಳೆಯ ಸ್ಥಿತಿ ಗಂಭೀರ|Accident

ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾದ ಘಟನೆ ತಡರಾತ್ರಿ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿರುವವರ ಮೇಲೆ ಹಿಂಬದಿಯಿಂದ ಬಂದ ಲಾರಿ ಹರಿದಿದ್ದು ಘಟನೆ ಬಳಿಕ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಘಟನಾ ಭೀಕರತೆ ನೋಡಿ ಜನ ಬೆಚ್ಚಿಬಿದ್ದಿದ್ದು, ಸುಮಾರು ಎರಡೂವರೆ ಘಂಟೆ ಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ಮಾಸ್ತಿಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಪದ ಕೈ ಕೂಲಿ ಕಾರ್ಮಿಕ ರವಿ…

Read More
Exit mobile version