Headlines

ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ಪಿಡಿಒ ಅಮಾನತ್ತು|PDO

ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ಪಿಡಿಓ ರವರನ್ನು ಅಮಾನತುಗೊಳಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಚೋರಡಿ ಗ್ರಾಮದಲ್ಲಿ ನಡೆದಿದೆ. ಚೋರಡಿ ಗ್ರಾಮ ಪಂಚಾಯತಿ  ಪಿಡಿಒ ಗೋಪಾಲಾಚಾರಿ ಎಂಬುವರನ್ನು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಪ್ರಕಾಶ್ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ. ದೂರದೃಷ್ಠಿ ಯೋಜನೆ ಮತ್ತು ಗ್ರಂಥಾಲಯಗಳ ಡಿಜಿಟಲೀಕರಣಗೊಳಿಸಲು ನಿರ್ಲಕ್ಷ ವಹಿಸಿದ್ದರ ಹಿನ್ನಲೆಯಲ್ಲಿ ಅವರನ್ನ ಅಮಾನತ್ತುಗೊಳಿಸಿ ಆದೇಶಿಸಲಾಗಿದೆ. ದೂರದೃಷ್ಠಿ ಯೋಜನೆಯನ್ನ ಮತ್ತು ಗ್ರಂಥಾಲಯಗಳಲ್ಲಿ ಡಿಜಿಟಲೀಕರಣಗೊಳಿಸುವಂತೆ ಸೂಚಿಸಿ ಅನೇಕ ತಿಂಗಳಾದರೂ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇತ್ತೀಚೆಗೆ ಸಿಇಒ ಪ್ರಕಾಶ್ ಗ್ರಾಮ…

Read More

ಗರ್ತಿಕೆರೆ ಸರ್ಕಾರಿ ಪಿಯು ಕಾಲೇಜು 98.07% ಫಲಿತಾಂಶ – ಪ್ರಾಂಶುಪಾಲರ ದೂರದೃಷ್ಟಿಯಿಂದ ಗ್ರಾಮೀಣ ಮಟ್ಟದ ಕಾಲೇಜು ಯಶಸ್ಸಿನ ಹಾದಿಯಲ್ಲಿ

ಗರ್ತಿಕೆರೆ ಸರ್ಕಾರಿ ಪಿಯು ಕಾಲೇಜು 98.07% ಫಲಿತಾಂಶ – ಪ್ರಾಂಶುಪಾಲರ ದೂರದೃಷ್ಟಿಯಿಂದ ಗ್ರಾಮೀಣ ಮಟ್ಟದ ಕಾಲೇಜು ಯಶಸ್ಸಿನ ಹಾದಿಯಲ್ಲಿ Amrutha Government PU College records an impressive 98.07% result in II PUC exams, with 154 out of 156 students passing, showcasing excellence in rural education. ರಿಪ್ಪನ್ ಪೇಟೆ : ಗರ್ತಿಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 98.07ರಷ್ಟು ಅತ್ಯುತ್ತಮ ಫಲಿತಾಂಶ ದಾಖಲಿಸಿ…

Read More

ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ  12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ  12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ ಹೊಸನಗರ : ರಾಮಚಂದ್ರಾಪುರ ಮತ್ತು ವಾರಂಬಳ್ಳಿ ಗ್ರಾಮದ ನಗರ ಅರಣ್ಯ ವ್ಯಾಪ್ತಿಯಲ್ಲಿ ಕೊಟ್ಟಿಗೆಯಲ್ಲಿ ಅಡಗಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆಯವರು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಎರಡು ದಿನಗಳಿಂದ ವಾರಂಬಳ್ಳಿ ಗ್ರಾಮದ  ಈಶ್ವರಪ್ಪ ಎಂಬುವವರ ಮನೆಯಲ್ಲಿ ಕಾಳಿಂಗ ಸರ್ಪ ಇತ್ತು.  ಈ ಹಿನ್ನೆಲೆ ಈಶ್ವರಪ್ಪ ಕಾಳಿಂಗ ಸರ್ಪವನ್ನು ಹಿಡಿಯಲು ಉರಗ ತಜ್ಞ ಅಜಯ್​ಗಿರಿಯವರಿಗೆ ಕರೆ ಮಾಡಿದ್ದಾರೆ. ನಂತರ  ಅವರ ನೇತೃತ್ವದಲ್ಲಿ…

Read More

ಮಾರುತಿಪುರದ ಯುವತಿ ನಾಪತ್ತೆ : ಸುಳಿವು ಪತ್ತೆಗೆ ಮನವಿ

ಮಾರುತಿಪುರ : ಇಲ್ಲಿನ ಸಮೀಪದ ಗುಬ್ಬಿನಜೆಡ್ಡು ಪುಣಜೆ ಗ್ರಾಮದ ವಾಸಿ ಕುಮಾರಿ ಅನುಷಾ ತಂದೆ ದೇವೇಂದ್ರ, 22 ವರ್ಷ, ಈ ಯುವತಿಯು ಡಿಸೆಂಬರ್ 24 ರ ಬೆಳಿಗ್ಗೆ 8.30 ಕ್ಕೆ ಎಂದಿನಂತೆ ಮಾರುತಿಪುರ ಒಕ್ಕೂಟ ಸಂಘದ ಕೆಲಸಕ್ಕೆ ಹೋದವಳು ಮನೆಗೆ ವಾಪಸ್ ಬಂದಿರುವುದಿಲ್ಲ.     ಈಕೆಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಪರಿಚಯದವರು, ಸಂಬಂಧಿಕರಲ್ಲಿ ವಿಚಾರಿಸಿದರೂ ಈಕೆಯ ಸುಳಿವು ಇರುವುದಿಲ್ಲ. ನಾಪತ್ತೆಯಾದ ಯುವತಿ ಸುಮಾರು 05 ಅಡಿ ಎತ್ತರ, ಕೋಲುಮುಖ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ, ತಲೆಯಲ್ಲಿ 15…

Read More

ರಿಪ್ಪನ್‌ಪೇಟೆಯಲ್ಲಿ ಚಿರತೆ ದಾಳಿ ಪ್ರಕರಣ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ|leopard

ರಿಪ್ಪನ್‌ಪೇಟೆ : ಶನಿವಾರ ತಡರಾತ್ರಿ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಸಂಪರ್ಕ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿ ಹಸುವೊಂದನ್ನು ಬಲಿ ಪಡೆದಿತ್ತು. ಮಳವಳ್ಳಿ ಗ್ರಾಮದ ಬಡ ರೈತ ವಿಶ್ವನಾಥ ಎಂಬುವವರ ಜೀವನಕ್ಕೆ ಆಸರೆಯಾಗಿದ್ದ ಹಸುವನ್ನು ಚಿರತೆ ಬಲಿ ಪಡೆದುಕೊಂಡ ಘಟನೆ ನಡೆದಿತ್ತು. ಮಳವಳ್ಳಿ ಗ್ರಾಮದಿಂದ ಶಾಲಾ ಕಾಲೇಜ್‌ಗೆ ಮತ್ತು ದಿನನಿತ್ಯದ ವ್ಯವಹಾರಕ್ಕಾಗಿ ಜನರು ಕಾಲ್ನಡಿಗೆಯಲ್ಲಿ ಬಂದು ಹೋಗುತ್ತಿದ್ದು ಈ ಘಟನೆಯಿಂದಾಗಿ ಗ್ರಾಮಸ್ಥರನ್ನು ಭಯಬೀತರನ್ನಾಗಿಸಿದೆ.ಓಡಾಡಲು ಭಯಪಡುವ ವಾತವರಣ ಸೃಷ್ಟಿಯಾಗಿದೆ. ಈ ಹಿನ್ನಲೆಯಲ್ಲಿ ಘಟನೆಯ ಕುರಿತು ತಕ್ಷಣ ಮಾಹಿತಿ ಪಡೆದುಕೊಂಡ ಸಾಗರ…

Read More

ಅರಸಾಳಿನ ಮಾಲ್ಗುಡಿ ರೈಲು ನಿಲ್ದಾಣದಲ್ಲಿ ನಿಲ್ಲದ ಇಂಟರ್‌ಸಿಟಿ ರೈಲು – ಮಲೆನಾಡಿನ ಪ್ರಯಾಣಿಕರಿಗಿಲ್ಲ ಟ್ರೈನ್ ಹತ್ತುವ ಭಾಗ್ಯ……..!!Train

ಅರಸಾಳಿನ ಮಾಲ್ಗುಡಿ ರೈಲು ನಿಲ್ದಾಣದಲ್ಲಿ ನಿಲ್ಲದ ಇಂಟರ್‌ಸಿಟಿ ರೈಲು – ಮಲೆನಾಡಿನ ಪ್ರಯಾಣಿಕರಿಗಿಲ್ಲ ಟ್ರೈನ್ ಹತ್ತುವ ಭಾಗ್ಯ……..!  ರಿಪ್ಪನ್‌ಪೇಟೆ : ಮೈಸೂರು-ಬೆಂಗಳೂರು-ಶಿವಮೊಗ್ಗ-ಸಾಗರ -ತಾಳಗುಪ್ಪ ಮಾರ್ಗದ ಇಂಟರ್ ಸಿಟಿ ರೈಲು ಆರಸಾಳು ರೈಲ್ವೆ ನಿಲ್ದಾಣದಲ್ಲಿ ನಿಲ್ಲದೆ ಇರುವುದರಿಂದ ಮಲೆನಾಡಿನ ಪ್ರಯಾಣಿಕರಿಗೆ ರೈಲು ಹತ್ತಿ ಇಳಿಯುವ ಯೋಗ ಇನ್ನೂ ಕೂಡಿ ಬಂದಿಲ್ಲ. ಈ ಹಿಂದೆ ತಾಳಗುಪ್ಪದಿಂದ ಹೋಗುತ್ತಿದ್ದ ಪ್ಯಾಸೆಂಜರ್ ರೈಲು ಕೊರೋನಾ ಸಂದರ್ಭದಲ್ಲಿ ನಿಲ್ಲಿಸಲಾಗಿದ್ದು ಅದು ಈಗ ಶಿವಮೊಗ್ಗಕ್ಕೆ ಬಂದು ಅಲ್ಲಿಂದ ಭರ್ತಿಯಾಗಿ ಹೋಗುತ್ತಿದೆ ಇದರಿಂದ ಕಡಿಮೆ ಖರ್ಚಿನಲ್ಲಿ ರಾಜಧಾನಿಗೆ…

Read More

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್ | Suspended

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ಪ್ರವಾಸದ ವೇಳೆ ರೊಮ್ಯಾಂಟಿಕ್ ಫೋಟೊ ಶೂಟ್ ಮಾಡಿಸಿಕೊಂಡಿದ್ದ ವಿಡಿಯೋ ವೈರಲ್ ಆಗುತ್ತಲೇ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ವೇಳೆ ಮುರುಗಮಲ್ಲ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 42 ವರ್ಷದ ಮುಖ್ಯಶಿಕ್ಷಕಿ ವಿದ್ಯಾರ್ಥಿ ಜೊತೆ ಕೆನ್ನೆಗೆ ಮುತ್ತು ಕೊಡುವಂತೆ,‌ಸೀರೆ ಸೆರಗು ಎಳೆಯುವಂತೆ ರೊಮ್ಯಾಂಟಿಕ್‌ ಆಗಿ…

Read More

ರಿಪ್ಪನ್‌ಪೇಟೆ : ಆಟೋ ಮತ್ತು ಬೈಕ್‌ನಡುವೆ ಭೀಕರ ಅಪಘಾತ – ಓರ್ವನ ಸ್ಥಿತಿ ಗಂಭೀರ : ರಕ್ತದ ಮಡುವಿನಲ್ಲಿ ಸಹಾಯಕ್ಕೆ ಅಂಗಲಾಚಿದ ಗಾಯಾಳು|Accident

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಚಿಪ್ಪಿಗರ ಕೆರೆ ಬಳಿ ಬೈಕ್ ಹಾಗೂ ಲಗೇಜ್ ಆಟೋ ಭೀಕರ ಅಪಘಾತವಾಗಿ ಒಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯ ಬಳಿ ಲಗೇಜ್ ಆಟೋ (KA-15 A 4679) ಹಾಗೂ ಹೀರೋ ಹೋಂಡಾ ಸ್ಪೆಂಡರ್ (KA 01 S 8450) ಬೈಕ್ ಗಳ ನಡುವೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಬೈಕ್ ಸವಾರ ಗವಟೂರು ನಿವಾಸಿ ಗಣೇಶ್ (46) ರವರಿಗೆ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ.ಅಪಘಾತ…

Read More

ಕೆಂಚನಾಲ ವ್ಯಾಪ್ತಿಯಲ್ಲಿ ಎರಡು ಕೆರೆಗಳ ಕಾಮಗಾರಿಗೆ ಶಂಕುಸ್ಥಾಪನೆ

ಕೆಂಚನಾಲ ವ್ಯಾಪ್ತಿಯಲ್ಲಿ ಎರಡು ಕೆರೆಗಳ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ – ಇಲ್ಲಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ವಿಶೇಷ ಆಸಕ್ತಿಯಿಂದ ಮಂಜೂರಾಗಿರುವ ಎರಡು ಕೆರೆಗಳ ಕಾಮಗಾರಿಗೆ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಶಂಕುಸ್ಥಾಪನೆ ನೆರವೇರಿಸಿದರು. ಕೆಂಚನಾಲ ಗ್ರಾಮ ಪಂಚಾಯತ್ ಕೆಂಚನಾಲ ಈರಣ್ಣನ ಕೆರೆ ಹಾಗೂ ಮಸರೂರು ವಡ್ಡಿನ ಕೆರೆ ಏರಿ ಮೇಲೆ ರಸ್ತೆ ಸುರಕ್ಷತಾ ಕಾಮಗಾರಿಗೆ (ರೋಡ್ ಸೇಫ್ಟಿ ಕ್ರಾಶ್ ಬ್ಯಾರಿಯರ್ ) ಹೊಸನಗರ ಲೋಕೋಪಯೋಗಿ ಇಲಾಖೆಯಿಂದ ಅಂದಾಜು ಮೊತ್ತ 25 ಲಕ್ಷ…

Read More

ಜಿಲ್ಲಾಧಿಕಾರಿಗಳ ಭೇಟಿಯಿಂದ ಬೆಳ್ಳೂರು ಗ್ರಾಮದ ಜನರ ಸಂಕಷ್ಟ ದೂರವಾದಿತೆ…….!? ಇದೇ ತಿಂಗಳ 21 ರಂದು ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ.

ಗ್ರಾಮಗಳ ಜೀರ್ಣೋದ್ಧಾರಕ್ಕಾಗಿ ಪ್ರತಿ ವರ್ಷ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋಟ್ಯಾಂತರ ರೂಪಾಯಿಗಳು ಬಿಡುಗಡೆ ಮಾಡಿ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದೆ. ಆದರೆ ಇಲ್ಲೊಂದು ಗ್ರಾಮ ಸುಮಾರು 70 ವರ್ಷಗಳಿಂದ ಮೂಲ ಸೌಕರ್ಯಗಳಿಲ್ಲದೆ ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿದೆ. ಇಷ್ಟೆಲ್ಲಾ ಸಂಕಷ್ಟ ಅನುಭವಿಸುತ್ತಿರುವ ಈ ಕುಗ್ರಾಮದ ಜನರ ಅಳಲನ್ನು ಯಾರು ಕೇಳವರೇ ಇಲ್ಲ. ಅಷ್ಟಕ್ಕೂ ಈ ಗ್ರಾಮ ಇರುವದಾದ್ರು ಎಲ್ಲಿ? ಇಲ್ಲಿಯ ಜನರ ಪರಿಸ್ಥಿತಿ ಆದ್ರೂ ಹೇಗಿದೆ ಅಂತೀರಾ ಹಾಗಾದ್ರೆ ಈ ಸ್ಟೋರಿ ನೋಡಿ… ಹೌದು, ನಾವಿಲ್ಲಿ ಹೇಳಲು ಹೊರಟಿರುವುದು…

Read More
Exit mobile version