ನಿರ್ಮಲ ಗ್ರಾಮ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಅನೈರ್ಮಲ್ಯದತ್ತ…??? ಎಲ್ಲೆಂದರಲ್ಲಿ ಕಸ ಹರಡಿಕೊಂಡು ದುರ್ನಾತ ಬೀರುತ್ತಿರುವ ತ್ಯಾಜ್ಯ ವಿಲೇವಾರಿ ಘಟಕ……!

ಕಸ ವಿಲೇವಾರಿ, ಸ್ವಚ್ಛತೆ ಹಾಗೂ ನೈರ್ಮಲ್ಯ ವಿಷಯದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿಗೆ ಅನೈರ್ಮಲ್ಯದ ಸೋಂಕು ಮೆತ್ತಿಕೊಂಡಿದೆ. ಹೌದು ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಹಳೆಯ ಕಸ ವಿಲೇವಾರಿ ಘಟಕದಲ್ಲಿರುವ ತ್ಯಾಜ್ಯಗಳನ್ನು ನೋಡಿದರೆ ಹಾಗನಿಸದೇ ಇರದು. 2022 ರಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗಾಗಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಹೊಸನಗರ ರಸ್ತೆಯ ಗವಟೂರು ಹೊಳೆಯ ಸಮೀಪದಲ್ಲಿ ರಾಜ್ಯಕ್ಕೆ ಮಾದರಿಯಾಗುವ ಘನತ್ಯಾಜ್ಯ ಸಂಪನ್ಮೂಲ ಸಂಸ್ಕರಣ ಮತ್ತು ನಿರ್ವಹಣಾ ಘಟಕ ಸ್ಥಾಪನೆ ಮಾಡಲಾಯಿತು.ಪ್ರಸ್ತುತ ಅಲ್ಲಿಯೇ…

Read More

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ ಅಡಿಟ್ ಮತ್ತು ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಗೋಪಿ ವೃತ್ತದಲ್ಲಿ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟಿಸಲಾಯಿತು. ಇದೇ ರೀತಿ ದಿನನಿತ್ಯ ಬಿಜೆಪಿಯ ನಾಯಕರುಗಳು ಬಾಲಿಶತನದ ಹಾಗೂ ಜೋಕರ್ ಹೇಳಿಕೆಗಳನ್ನು ನೀಡುತ್ತಿರುವುದನ್ನು ನೋಡಿದರೆ ದೇಶದಲ್ಲಿ ಬಿಜೆಪಿ ಪಕ್ಷದ ಸಂಸ್ಕೃತಿ ಜೋಕರ್ ಸಂಸ್ಕೃತಿ ಎಂದು ತೋರಿಸುತ್ತಿದ್ದಾರೆ….

Read More

ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನವರಿಗೆ ಹೊಂಬುಜ ಮಠದಿಂದ “ಸಮಾಜಭೂಷಣ” ಗೌರವ – 75 ನೇ ಜನ್ಮದಿನಾಚರಣೆಗೆ ಶುಭ ಹಾರೈಕೆ

ಹೊಂಬುಜ : ಹಿರಿಯ ರಾಜಕಾರಣಿ, ಶಿವಮೊಗ್ಗ ನಗರದ ಜನಪ್ರೀಯ ಮಾಜಿ ಶಾಸಕರು ಹಾಗೂ ಕರ್ನಾಟಕ ಘನ ಸರ್ಕಾರದ ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್. ಈಶ್ವರಪ್ಪರವರಿಗೆ 75ನೇ ಜನ್ಮ ದಿನಾಚರಣೆಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಹೊಂಬುಜ ಜೈನ ಮಠದ ಪೀಠಾಧಿಕಾರಿಗಳಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಇವರ ಸೇವೆಗಾಗಿ ಅಭಿನಂದಿಸಿ, “ಸಮಾಜಭೂಷಣ” ಉಪಾಧಿಯನ್ನು ನೀಡಿ ಗೌರವಿಸಿ, ಶ್ರೀಕ್ಷೇತ್ರ ಹೊಂಬುಜದ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರ ಅನುಗ್ರಹ ಸದಾ…

Read More

ಭದ್ರಾವತಿ ಈದ್‌ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ?

ಭದ್ರಾವತಿ ಈದ್‌ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ? ಆರೋಪಿಗಳ ಪತ್ತೆಗೆ ಮೂರು ತಂಡ – ಎಸ್ ಪಿ ಮಿಥುನ್ ಕುಮಾರ್ ಪಾಕಿಸ್ತಾನ ಪರ ಘೋಷಣೆ; ಮತಾಂಧರ ಸೊಕ್ಕಿಗೆ ಕಾಂಗ್ರೆಸ್ ಸರ್ಕಾರದ ಒಲೈಕೆ ಕಾರಣ: ಕೆಎಸ್ ಈಶ್ವರಪ್ಪ ಕಿಡಿ ಭದ್ರಾವತಿಯಲ್ಲಿ ಸೋಮವಾರ ರಾತ್ರಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಭದ್ರಾವತಿಯ ಅಂಬೇಡ್ಕರ್ ವೃತ್ತದಲ್ಲಿ ಮೆರವಣಿಗೆ ಸಾಗುವಾಗ ಕೆಲವು ಯುವಕರಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ…

Read More

ಅಮೃತ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಮಂಜುಳಾ ರಾಜು ರಾಜೀನಾಮೆ….. ವಿನೋದ ಯೋಗೆಂದ್ರಪ್ಪನವರಿಗೆ ಒಲಿಯಲಿದೆಯ ಅದೃಷ್ಟ…???.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಅಮೃತ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುಳಾ ರಾಜು ರವರು ಇಂದು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದಾರೆ. ಇಂದು ಸಾಗರ ಉಪವಿಭಾಗಧಿಕಾರಿಗಳ ಕಚೇರಿ ಯಲ್ಲಿ ಉಪವಿಭಾಗಾಧಿಕಾರಿ ನಾಗರಾಜ್ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ . ಮಂಜುಳಾ ರಾಜುರವರು ಹದಿನೇಳು ತಿಂಗಳ ಕಾರ್ಯಭಾರದ ನಂತರ ಇಂದು ರಾಜಿನಾಮೆ ನೀಡಿದ್ದಾರೆ. ಹದಿನೈದು ತಿಂಗಳ ಅವಧಿಗೆ ಮಾತಾಗಿತ್ತು ಎಂದು ಒಂದು ಬಣ, ಇಲ್ಲಾ ಇಲ್ಲಾ ಪೂರ್ತಿ ಮೂವತ್ತು ತಿಂಗಳಿಗೂ ಇವರೇ ಅಧ್ಯಕ್ಷರು ಎಂದು ಇನ್ನೊಂದು ಬಣದ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ 50 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಕೆರೆಗೆ ಇಳಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಕುಪ್ಪುಗುಡ್ಡೆ ಯಲ್ಲಿ ನಡೆದಿದೆ. ಆನವಟ್ಟಿಯಿಂದ ಸೊರಬ ಕಡೆಗೆ ತೆರಳುತಿದ್ದ ಪೂರ್ಣಚಂದ್ರ ಎಂಬ ಖಾಸಗಿ  ಬಸ್‌ವೊಂದು ಕೆರೆಗೆ ಇಳಿದ ಘಟನೆಯೊಂದು ನಡೆದಿದೆ. ಕೊರಕೋಡು ಕ್ರಾಸ್‌ ಬಳಿಯಲ್ಲಿ ಬರುತ್ತಿದ್ದ ಬಸ್‌ ಇದ್ದಕ್ಕಿದ್ದ ಹಾಗೆ ಕೆರೆಗೆ ಇಳಿದಿದೆ. ಅದೃಷ್ಟವಶಾತ್‌ ಘಟನೆಯಲ್ಲಿ…

Read More

ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ ತೀರ್ಥಹಳ್ಳಿ : ಶೋಕಿ ಜೀವನ, ದಿಢೀರ್ ಹಣ ಮಾಡುವ ದುರಾಸೆಗೆ ಒಳಗಾಗಿ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ವಂಚನೆ ಮಾಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಾಲೂಕಿನ ಆರಗದ ಸುನೀಲ್ (35 ವರ್ಷ) ಮೃತ ದುರ್ದೈವಿ. ಈತ ಯಡೂರಿನ ಕೆನರಾ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ 8 ಖಾತೆಗಳಿಂದ ಠೇವಣಿ ಇಟ್ಟಿದ್ದ ಸುಮಾರು 1 ಕೋಟಿ…

Read More

ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್!

ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿ ವಿಚಾರಕ್ಕೆ ಸ್ವಂತ ಮಾನವ ಮೇಲೆಯೇ ಸೊಸೆಯೋರ್ವಳು ಕೆಲ ಗೂಂಡಾಗಳೊಂದಿಗೆ ಆಗಮಿಸಿ ಲಾಂಗ್ ಮಚ್ಚು, ದೊಣ್ಣೆಯಿಂದ ಅಟ್ಯಾಕ್ ಮಾಡಿರುವ ಘಟನೆ ಬೆಂಗಳೂರಿನ ಮಹದೇವಪುರ ವ್ಯಾಪ್ತಿಯಲ್ಲಿ ನಡೆದಿದೆ. ಶೃತಿ ಎಂಬ ಸೊಸೆ ಐದಾರು ಜನರ ಗುಂಪುಕಟ್ಟಿಕೊಂಡು ಮಾವ ಪ್ರಭು ಎಂಬುವವರ ಮನೆಗೆ ಬಂದು ಹಲ್ಲೆಗೆ…

Read More

ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!!

ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!! ರಿಪ್ಪನ್‌ಪೇಟೆ: ಕಳೆದೆರಡು ವರ್ಷದಿಂದ ಹಸಿ ಶುಂಠಿಗೆ ಬೆಲೆ ಇಲ್ಲ. ಆದ್ದರಿಂದ ಕೆಲ ವ್ಯಾಪಾರಸ್ಥರು, ದಲ್ಲಾಳಿಗಳು, ಶ್ರೀಮಂತ ರೈತರು ಕಂಡು ಕೊಂಡ ಪರಿಹಾರ ಗಂಧಕ ಬಳಸಿ ಒಣ ಶುಂಠಿ ಮಾಡುವುದು !ಶುಂಠಿಗೆ ಬಣ್ಣ ಬರಲು ಹಾಗೂ ಮಾರುಕಟ್ಟೆ ಆಕರ್ಷಿಸಲು ಗಂಧಕ ಬಳಸುವ ತಂತ್ರಕ್ಕೆ ಅವರು ಮೊರೆ ಹೋಗಿದ್ದಾರೆ. ಇದರಿಂದ ಅವರ ಕೆಲಸವೇನೋ ಆಗಿದೆ. ಆದರೆ ಶುಂಠಿ ಸಂಸ್ಕರಣೆಗೆ ಬಳಸುವ ಗಂಧಕದ ಹೊಗೆಯು ವಾತಾವರಣದಲ್ಲಿ ಸೇರಿ ದುರ್ನಾತ ಬೀರುತ್ತಿದೆ. ಶುಂಠಿಗೆ ಗಂಧಕ ಬಳಸುವುದರಿಂದ…

Read More

ರಿಪ್ಪನ್‌ಪೇಟೆ : ಮೃತ ಯೋಧ ಸಂದೀಪ್ ಮನೆಗೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ, ಸಾಂತ್ವಾನ|sandeep

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಯೋಧ ಅಸ್ಸಾಂನ ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ವಿಭಾಗದಲ್ಲಿ ಕರ್ತವ್ಯದಲ್ಲಿದ್ದಾಗ ಮೃತಪಟ್ಟಿದ್ದಾರೆ. ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಟ್ಟಣದ ಶಬರೀಶನಗರದ ನಿವಾಸಿ ಸಂದೀಪ್(27) ಅಸ್ಸಾಂ ನ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟ ವಿಚಾರ ತಿಳಿಯುತಿದ್ದಂತೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮೃತ ಯೋಧನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ನಂತರ ಮಾದ್ಯಮದೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಒಬ್ಬ ಯುವ ಯೋಧ ಅಕಾಲಿಕವಾಗಿ ಮೃತಪಟ್ಟಿರುವುದು ರಾಷ್ಟ್ರಕ್ಕಾದ ನಷ್ಟವಾಗಿದೆ. ನಗುಮೊಗದ ಯುವಕ ಸಂದೀಪ್…

Read More