ನಿರ್ಮಲ ಗ್ರಾಮ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರಿಪ್ಪನ್ಪೇಟೆ ಗ್ರಾಮ ಪಂಚಾಯತಿ ಅನೈರ್ಮಲ್ಯದತ್ತ…??? ಎಲ್ಲೆಂದರಲ್ಲಿ ಕಸ ಹರಡಿಕೊಂಡು ದುರ್ನಾತ ಬೀರುತ್ತಿರುವ ತ್ಯಾಜ್ಯ ವಿಲೇವಾರಿ ಘಟಕ……!
ಕಸ ವಿಲೇವಾರಿ, ಸ್ವಚ್ಛತೆ ಹಾಗೂ ನೈರ್ಮಲ್ಯ ವಿಷಯದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಗ್ರಾಮ ಪಂಚಾಯತಿಗೆ ಅನೈರ್ಮಲ್ಯದ ಸೋಂಕು ಮೆತ್ತಿಕೊಂಡಿದೆ. ಹೌದು ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಹಳೆಯ ಕಸ ವಿಲೇವಾರಿ ಘಟಕದಲ್ಲಿರುವ ತ್ಯಾಜ್ಯಗಳನ್ನು ನೋಡಿದರೆ ಹಾಗನಿಸದೇ ಇರದು. 2022 ರಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗಾಗಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಹೊಸನಗರ ರಸ್ತೆಯ ಗವಟೂರು ಹೊಳೆಯ ಸಮೀಪದಲ್ಲಿ ರಾಜ್ಯಕ್ಕೆ ಮಾದರಿಯಾಗುವ ಘನತ್ಯಾಜ್ಯ ಸಂಪನ್ಮೂಲ ಸಂಸ್ಕರಣ ಮತ್ತು ನಿರ್ವಹಣಾ ಘಟಕ ಸ್ಥಾಪನೆ ಮಾಡಲಾಯಿತು.ಪ್ರಸ್ತುತ ಅಲ್ಲಿಯೇ…