ಸಾಗರದಲ್ಲಿ ಬಜರಂಗ ದಳ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ – ಸಂಘಟನೆಗಳಿಂದ ಪ್ರತಿಭಟನೆ|sagara

ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ,  ಈ ಘಟನೆಯಲ್ಲಿ ಸ್ವಲ್ಪದರಲ್ಲಿಯೆ  ಸುನೀಲ್ ಎಂಬಾತ ತಪ್ಪಿಸಿಕೊಂಡಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾಗರ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದ ಘಟನೆ ಇದಾಗಿದ್ದು,  ಬೆಳಗ್ಗೆ ೯ ಗಂಟೆ ಸುಮಾರಿಗೆ ನಡೆದಿದೆ.  ಬೈಕ್​ನಲ್ಲಿ ಬರುತ್ತಿದ್ದ ಸುನೀಲ್​ ಮೇಲೆ ಸಮೀರ್​ ಎಂಬಾತ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದಾರೆ.  ಜಿಯೋ ಫೈಬರ್ ಕಚೇರಿಯ ಬಳಿ ಬೈಕ್ ನಲ್ಲಿ ಬರುತ್ತಿದ್ದಾಗ ಘಟನೆ ನಡೆದಿದೆ. ಅಲ್ಲಿಯೇ ಇದ್ದ ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ.  ಸುನೀಲ್…

Read More

ಯಡೇಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ ಬಹಿಷ್ಕರಿಸಿ ಹೊರನಡೆದ ಸದಸ್ಯರು ಕಾರಣ ಏನಂತೀರಾ ಒಮ್ಮೆ ಈ ಸ್ಟೋರಿ ನೋಡಿ.!!

ಆನಂದಪುರ : ಸರ್ಕಾರ ಇದೀಗ ಕಾನೂನಿನ ಅರಿವನ್ನು ತಿಳಿಸಲು ಗ್ರಾಮ ಪಂಚಾಯತ್ ಮಟ್ಟದಿಂದ ಕಾನೂನು ಅರಿವು ಕಾರ್ಯಕ್ರಮವನ್ನು  ನಡೆಸುತ್ತಿದೆ.ಮಹಿಳೆಯರಿಗೆ ,ಮಕ್ಕಳಿಗೆ ,ದುರ್ಬಲ ವರ್ಗದವರಿಗೆ ಕಾನೂನಿನ ಸಂಪೂರ್ಣ ಅರಿವಿರಬೇಕು ಎಂಬ ಉದ್ದೇಶದಿಂದ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳನ್ನು ಒಳಗೊಂಡು ವಕೀಲರ ತಂಡದೊಂದಿಗೆ ಆಶಾ ಕಾರ್ಯಕರ್ತರ ಸಮ್ಮುಖದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಸುತ್ತಿದೆ. ಆದರೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಯಡೇಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ ದಿಂದ ಕೆಲ ಸದಸ್ಯರು ಅಸಮಾಧಾನವನ್ನು ಹೊರಹಾಕಿ…

Read More

ಶಂಕಿತ ಭಯೋತ್ಪಾದಕ ಶಾರೀಕ್ ಸಹಚರರ ಮಾಹಿತಿ ಸಂಗ್ರಹಕ್ಕೆ ಶಿವಮೊಗ್ಗಕ್ಕೆ NIA ತಂಡ ಭೇಟಿ

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರಿಕ್ ಮತ್ತು ಆತನ ಸಹಚರರ ಕುರಿತು ಮಾಹಿತಿ ಸಂಗ್ರಹಿಸಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಬೆಳಗ್ಗೆ ಎನ್‌ಐಎ ಅಧಿಕಾರಿಗಳ ತಂಡ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸುತ್ತಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂವರು ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ. ಮೂರು ತಿಂಗಳ ಹಿಂದೆ ತೀರ್ಥಹಳ್ಳಿಯ ಮೊಹಮ್ಮದ್ ಶಾರಿಕ್ ನ ಸಹಚರರಾದ ಮಾಜ್ ಮುನೀರ್ ಅಹಮದ್ ಮತ್ತು ಶಿವಮೊಗ್ಗದ ಸಯ್ಯದ್…

Read More

ಮಾರುತಿಪುರ :ಆಟವಾಡುತ್ತಿದ್ದ ಬಾಲಕನ ಜೀವನದಲ್ಲಿ ವಿಧಿಯ ಕ್ರೂರ ಆಟ : ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿ ಬಡ ವಿದ್ಯಾರ್ಥಿ ,

ಹೊಸನಗರ : ಮಾರುತಿಪುರದಲ್ಲಿ ಎಂಟನೇ ತರಗತಿ ಓದುತ್ತಿರುವ ಬಾಲಕ  ಕೌಶಿಕ್ ಇದೇ ತಿಂಗಳ 4ರಂದು ಶಾಲೆಯಲ್ಲಿ ಆಡುತ್ತಿರುವಾಗ ಬಿದ್ದು ತಲೆಯ  ಬಲಬಾಗದಲ್ಲಿ ಬಲವಾಗಿ ಪೆಟ್ಟಾಗಿದ್ದು ಬ್ರೈನ್ ನಲ್ಲಿ ಬ್ಲಾಡ್ ಕ್ಲೋಟ್ ಆಗಿರುವ ಕಾರಣ  ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆ ಗೆ ಮ್ಯಾಕ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು ಸುಮಾರು 2 ಲಕ್ಷ ಕ್ಕೂ ಹೆಚ್ಚು ಚಿಕಿತ್ಸಾ ವೆಚ್ಚವಾಗುವದೆಂದು ಆರೋಗ್ಯ ಸಿಬ್ಬಂದಿಗಳು ತಿಳಿಸಿರುತ್ತಾರೆ. ತಂದೆಯನ್ನು ಬಾಲ್ಯದಲ್ಲಿಯೇ ಕಳೆದುಕೊಂಡಿರುವ ಈ ಬಾಲಕ ತಾಯಿ ವಿಶಾಲ ಜೊತೆ ವಾಸಿಸುತ್ತಿದ್ದು ಯಾವದೇ ಆದಾಯವಿರುವದಿಲ್ಲ, ಕೂಲಿ…

Read More

ರಿಪ್ಪನ್‌ಪೇಟೆ : ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತಿದ್ದ ಲಾರಿ ವಶಕ್ಕೆ|Illegal quarrying

ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತಿದ್ದ ಲಾರಿ ವಶಕ್ಕೆ ರಿಪ್ಪನ್‌ಪೇಟೆ : ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ. ಹೊಸನಗರ ಮತ್ತು ರಿಪ್ಪನ್‌ಪೇಟೆ ರಾಜ್ಯ ಹೆದ್ದಾರಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತಿದ್ದಾಗ ಚಿಕ್ಕಜೇನಿ ಸಮೀಪದಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತಿದ್ದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಲಾರಿಯನ್ನು ಹೆಚ್ಚಿನ ತನಿಖೆಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Read More

ಹೊಸನಗರ ತಾಲೂಕ್ ತಹಶೀಲ್ದಾರ್ ವಿ ಎಸ್ ರಾಜೀವ್ ವರ್ಗಾವಣೆ – ಜಿಲ್ಲೆಯ ಮೂವರು ತಹಶೀಲ್ದಾರ್ ವರ್ಗಾವಣೆ|transfer

ಹೊಸನಗರ ತಾಲೂಕಿನ ತಹಶೀಲ್ದಾರ್ ವಿ ಎಸ್ ರಾಜೀವ್ ರವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೊಸನಗರ ತಾಲೂಕಿನ ತಹಶೀಲ್ದಾರ್ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ. ರಾಜೀವ್ ಸೇರಿದಂತೆ  ಶಿವಮೊಗ್ಗ ಜಿಲ್ಲೆಯ ಮೂವರು ತಹಶೀಲ್ದಾರ್ ಗಳು ವರ್ಗಾವಣೆಗೊಂಡಿದ್ದಾರೆ. ಭದ್ರಾವತಿ, ಹೊಸನಗರ ಮತ್ತು ಶಿವಮೊಗ್ಗ ತಹಶೀಲ್ದಾರ್ ವರ್ಗಾವಣೆಗೊಂಡಿದ್ದಾರೆ. ಭದ್ರಾವತಿ ತಹಶೀಲ್ದಾರ್ ಪ್ರದೀಪ್ ನಿಕ್ಕಂ ಉಡುಪಿಯ ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದರೆ, ಹೊಸನಗರ ತಾಲೂಕಿನ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ. ಶಿವಮೊಗ್ಗ ತಾಲೂಕು…

Read More

Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್

Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್ ರಿಪ್ಪನ್‌ಪೇಟೆ : ಕೊಟ್ಟಿಗೆಗೆ ಸಂಬಂದಿಸಿದ ವಿಚಾರದಲ್ಲಿ ಚಿಕ್ಕಪ್ಪ ಹಾಗೂ ಚಿಕ್ಕಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ (ಕೆರೆಗೋಡು) ಗ್ರಾಮದ ನಿವಾಸಿ ಅರ್ಪಿತ್ (30) ಬಂಧಿತ ಆರೋಪಿಯಾಗಿದ್ದಾನೆ. ಕೆರೆಗೋಡು ನಿವಾಸಿಗಳಾದ ಮುರುಗೇಶಪ್ಪ ಹಾಗೂ ಉಮಾ ದಂಪತಿಗಳ ಮೇಲೆ ದನದ ಕೊಟ್ಟಿಗೆಯ…

Read More

ಕ್ರೈಸ್ತ ಸಮುದಾಯದ ಮೇಲೆ ಅಪಪ್ರಚಾರ ಸಲ್ಲ : ಬಿ ರಾಜಶೇಖರ್

ಶಿವಮೊಗ್ಗ :  ಕ್ರೈಸ್ತ ಸಮುದಾಯವನ್ನ ನಿಯಂತ್ರಿಸಲು ಮತಾಂತರ ಕಾಯ್ದೆ ಜಾರಿಗೊಳಿಸಬೇಕೆಂಬ ಚರ್ಚೆ ಆಗುತ್ತಿದ್ದು ಕ್ರಿಶ್ಚಿಯನ್ ಮಿಷನರಿಗಳು ಬಲವಂತವಾಗಿ ಎಲ್ಲೂ ಮತಾಂತರ ಮಾಡುತ್ತಿಲ್ಲವೆಂದು ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ಸ್ಪಷ್ಟಪಡಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಬಿ.ರಾಜಶೇಖರ್ ಮಾತನಾಡಿ, ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಗೂಳಿಹಟ್ಟಿ ಮಾತನಾಡಿ, ಕ್ರೈಸ್ತ ಮಿಷನರಿಗಳಿಂದ ವ್ಯಾಪಕ ಮತಾಂತರಗೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ ತಡೆಯಲು ಹೋದವರ ಮೇಲೆ ಜಾತಿ ನಿಂದನೆ ಅತ್ಯಾಚಾರದ ಪ್ರಕರಣಗಳನ್ನ ಮಾಡಲಾಗಿದೆ ಎಂದು ಆರೋಪಿಸಿದ್ದರು. ಈ ಕುರಿತು ಸದನದಲ್ಲಿ ಮತಾಂತರ ಕಾಯ್ದೆ ಜಾರಿಗೆ…

Read More

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!!

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!! ನಿತಿನ್ ಅವರ ಬೈಕ್ ವರದಹಳ್ಳಿ ಸಮೀಪ ಪತ್ತೆಯಾಗಿತ್ತು.ಸೋಮವಾರ ಬೆಳಗ್ಗೆ ನಿತಿನ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ವರದಹಳ್ಳಿಯ ಗುಡ್ಡದಲ್ಲಿ ಪತ್ತೆಯಾಗಿದೆ. ದೇವಸ್ಥಾನಕ್ಕೆ ಹೋಗಿಬರುವುದಾಗಿ ಹೋಗಿದ್ದ ಉದ್ಯಮಿಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಾಗರ ಪಟ್ಟಣದ ಮಾರ್ಕೇಟ್ ರಸ್ತೆಯಲ್ಲಿ ವಿಪಿ ಅಸ್ಸೆಯಿಂಗ್ ಹಾಲ್ ಮಾರ್ಕ್ ಶಾಪ್ ಮಾಲೀಕ  ನಿತಿನ್ ಶೇಟ್ (34),ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭಾನುವಾರ ಸಂಜೆ ವರದಹಳ್ಳಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೋಗಿದ್ದರು.ಸೋಮವಾರ ಬೆಳಗ್ಗಿನವರೆಗೂ…

Read More

80 ಸಾವಿರ ರೂ ಸಾಲಕ್ಕೆ ಹೆದರಿ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ !!!

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಬ್ಯಾಡರ ಕೊಪ್ಪದ ರೈತ  ಮರಿಯಪ್ಪ ಸಾವನ್ನಪ್ಪಿರುವ ದುರ್ದೈವಿ ರೈತ. ಶುಂಠಿಗೆ ಹೊಡೆಯುವ ಕಳೆನಾಶಕವನ್ನು ಸೇವಿಸಿದ್ದ ಮರಿಯಪ್ಪ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಾರ್ಪೊರೇಷನ್ ಬ್ಯಾಂಕ್ ನಲ್ಲಿ ಎಂಬತ್ತು ಸಾವಿರ ರೂಪಾಯಿ ಸಾಲ ಮಾಡಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ಇವರ ಮಗ ಲಿಂಗರಾಜು ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read More