Headlines

ಇನ್‌ಸ್ಟಾಗ್ರಾಂ ‘ರೀಲ್ಸ್’ ಅಭಿಮಾನಿ ಸೋಗಿನಲ್ಲಿ ಶಿಕ್ಷಕನ ದರೋಡೆ – ಶಿವಮೊಗ್ಗದಲ್ಲಿ ಆಘಾತಕಾರಿ ಘಟನೆ

ಇನ್‌ಸ್ಟಾಗ್ರಾಂ ‘ರೀಲ್ಸ್’ ಅಭಿಮಾನಿ ಸೋಗಿನಲ್ಲಿ ಶಿಕ್ಷಕನ ದರೋಡೆ – ಶಿವಮೊಗ್ಗದಲ್ಲಿ ಆಘಾತಕಾರಿ ಘಟನೆ ಶಿವಮೊಗ್ಗ: ತಮ್ಮ ಇನ್‌ಸ್ಟಾಗ್ರಾಂ ರೀಲ್ಸ್‌ಗೆ ಅಭಿಮಾನಿ ಎಂದು ನಂಬಿಸಿ, ಶಿಕ್ಷಕರೊಬ್ಬರನ್ನು ದರೋಡೆ ಮಾಡಿರುವ ಅಚ್ಚರಿಯ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಬಳಿ ಈ ಕೃತ್ಯ ನಡೆದಿದೆ. ಖಾಸಗಿ ಶಾಲೆಯ ಶಿಕ್ಷಕರೊಬ್ಬರು ಇನ್‌ಸ್ಟಾಗ್ರಾಂನಲ್ಲಿ ನಿಯಮಿತವಾಗಿ ರೀಲ್ಸ್ ಅಪ್‌ಲೋಡ್ ಮಾಡುತ್ತಿದ್ದರು. ಅವರ ರೀಲ್ಸ್‌ಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದ ವ್ಯಕ್ತಿಯೊಬ್ಬ, ಮೆಸೇಜ್ ಮೂಲಕ ಶಿಕ್ಷಕರನ್ನು ಸಂಪರ್ಕಿಸಿದ್ದ. ಬಳಿಕ ಅವರನ್ನು ಭೇಟಿಯಾಗಬೇಕೆಂದು ಕೋರಿದ್ದ…

Read More

ದ್ವಿಚಕ್ರ ವಾಹನ ಸವಾರರ ಮೇಲೆ ಏಕಾಏಕಿ ಜೇನುನೊಣಗಳ ದಾಳಿ – ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ,ಓರ್ವ ಗಂಭೀರ | bee bite

ದ್ವಿಚಕ್ರ ವಾಹನ ಸವಾರರ ಮೇಲೆ ಏಕಾಏಕಿ ಜೇನುನೊಣಗಳ ದಾಳಿ – ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ,ಓರ್ವ ಗಂಭೀರ | bee ಬಿತೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮೂಗೂಡ್ತಿಯಲ್ಲಿ ದಿಢೀರ್ ಜೇನುನೊಣಗಳ ದಾಳಿಯಿಂದ ಹತ್ತಕ್ಕೂ ಅಧಿಕ ಜನರು ಅಸ್ವಸ್ಥರಾಗಿ, ಓರ್ವನಿಗೆ ಗಂಭೀರ ಗಾಯಗೊಂಡಿರುವ ನಡೆದಿದೆ. ಮೂಗೂಡ್ತಿ ಗ್ರಾಮದಲ್ಲಿ ಜೇನು ನೊಣಗಳ ದಾಳಿಯಿಂದ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುತಿದ್ದ ಪ್ರಯಾಣಿಕರು ಹಾಗೂ ಪಾದಚಾರಿಗಳ ಮೇಲೆ ಜೇನು ನೊಣ ಏಕಾಏಕಿ ದಾಳಿ ನಡೆಸಿದೆ. ಘಟನೆಯಲ್ಲಿ ತಳಲೆ ಗ್ರಾಮದ ಮಂಜುನಾಥ ,ಲೋಹಿತ್ ,…

Read More

ಒತ್ತುವರಿ ತೆರವಿಗೆ ಹೋದ ಅಧಿಕಾರಿಗಳಿಗೆ ಬೆದರಿಕೆ – ಏಳು ಜನರ ಬಂಧನ|enforcement

ಸಾಗರ : ಸರ್ಕಾರಿ ಜಾಗ ಒತ್ತುವರಿ ತೆರವು ಮಾಡಿ ಅಗಳ ನಿರ್ಮಿಸಲು ಹೋಗಿದ್ದ ತಹಶೀಲ್ದಾರ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ  ಏಳು ಜನರ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ತಾಲ್ಲೂಕಿನ ಕಸಬಾ ಹೋಬಳಿ ಮಡಸೂರು ಗ್ರಾಮದ ಸರ್ವೇ ನಂ. 71ರ ಸರ್ಕಾರಿ ಜಮೀನಿನಲ್ಲಿ ಒತ್ತುವರಿ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್ ನೇತೃತ್ವದ ಕಂದಾಯ ಇಲಾಖೆ ತಂಡ ಸ್ಥಳಕ್ಕೆ ಭೇಟಿ ನೀಡಿದೆ….

Read More

Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು

Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದಲ್ಲಿ ಕಾಡು ಕೋಣಗಳ ಮಾರಣಹೋಮ ನಡೆದಿರುವ ಬಗ್ಗೆ ವರದಿಯಾಗಿದೆ. ಹುಂ‍ಅ ವ್ಯಾಪ್ತಿಯ ನಾಗರಹಳ್ಳಿ ವ್ಯಾಪ್ತಿಯಲ್ಲಿ ಕೆಲವು ಕಿಡಿಗೇಡಿಗಳು ನಾಲ್ಕಕ್ಕೂ ಹೆಚ್ಚು ಕಾಡುಕೋಣಗಳನ್ನು ಅಕ್ರಮ ಬಂದೂಕು ಬಳಸಿ ಹತ್ಯೆಗೈದಿದ್ದಾರೆ,ಈ ಭಾಗದಲ್ಲಿ ಹತ್ತಕ್ಕೂ ಹೆಚ್ಚು ಕಾಡುಕೋಣಗಳು ಕೆಲವೊಮ್ಮೆ ಪ್ರತ್ಯಕ್ಷಗೊಳ್ಳುತಿದ್ದವು ಆದರೆ ಈಗ ಗುಂಪಿನಲ್ಲಿ ನಾಲ್ಕೈದು ಮಾತ್ರ ಇದೆ ಕಾಡುಕೋಣಗಳ ಮಾರಣಹೋಮವೇ ನಡೆದಿದೆ ಎಂಬ ಆರೋಪ…

Read More

ಹೊಸನಗರದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ನಿಧಿ ಸಂಗ್ರಹಣೆಗಾಗಿ ಮೆರವಣಿಗೆ :

ಹೊಸನಗರ ಪಟ್ಟಣದ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ, ಭಾನುವಾರ ಶಿವಮೊಗ್ಗದಲ್ಲಿ ಕಿಡಿಗೇಡಿಗಳಿಂದ ಕೊಲೆಯಾದ ಭಜರಂಗದಳದ ಕಾರ್ಯಕರ್ತ ಹರ್ಷನ ಕುಟುಂಬಕ್ಕಾಗಿ ಪಟ್ಟಣದಲ್ಲಿ ಮೆರವಣಿಗೆ ಮಾಡಿ ಪ್ರಮುಖ ಅಂಗಡಿ, ಹೋಟೆಲ್ ಗಳಲ್ಲಿ ನಿಧಿ ಸಂಗ್ರಹಣೆ ಮಾಡಲಾಯಿತು. ಈ ಮೆರವಣಿಗೆಯಲ್ಲಿ ಅಂಬೈಡ್ಕರ್ ನಿಗಮದ ನಿರ್ದೇಶಕ ಎನ್.ಆರ್ ದೇವಾನಂದ್,ಬಿ.ಜೆ.ಪಿ.ಮುಖಂಡರು ಸೇರಿದಂತೆ, ವಿಶ್ವ ಹಿಂದೂ ಪರಿಷತ್ತ್ ಮತ್ತು ಭಜರಂಗದಳದ ಕಾರ್ಯಕರ್ತರು ಭಾಗವಹಿಸಿದ್ದರು. ವರದಿ : ಫುಷ್ಪಾ ಜಾಧವ್

Read More

ರಿಪ್ಪನ್‌ಪೇಟೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಅದ್ದೂರಿ ಮೆರವಣಿಗೆ | ಮನಸೆಳೆದ ಜಾನಪದ ಕಲಾ ಮೆರುಗು

ರಿಪ್ಪನ್‌ಪೇಟೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಅದ್ದೂರಿ ಮೆರವಣಿಗೆ | ಮನಸೆಳೆದ ಜಾನಪದ ಕಲಾ ಮೆರುಗು ರಿಪ್ಪನ್‌ಪೇಟೆಯಲ್ಲಿ ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಸ್ತೂರಿ ಕನ್ನಡ ಸಂಘದ ವತಿಯಿಂದ ಕನ್ನಡ ತಾಯಿ ಭುವನೇಶ್ವರಿ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭವ್ಯವಾಗಿ ನಡೆಯಿತು. ಕನ್ನಡ ತಾಯಿ ಭುವನೇಶ್ವರಿಯ ಮೆರವಣಿಗೆಗೆ ಪಟ್ಟಣದ ಪಿಎಸ್ಐ ರಾಜುರೆಡ್ಡಿ ಚಾಲನೆ ನೀಡಿದರು. ನೂರಾರು ಪುಟಾಣಿ ಮಕ್ಕಳು ಭುವನೇಶ್ವರಿ ವೇಷದಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿ ಜನರ ಮನಸೆಳೆದರು. ಡೊಳ್ಳು ಕುಣಿತ, ಪಟಾಕಿ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿದವು….

Read More

ಹೊಂಬುಜ ಜಗನ್ಮಾತೆ ಸನ್ನಿಧಿಯಲ್ಲಿ ಶ್ರೀಗಳಿಂದ ಮಳೆಗಾಗಿ ಪ್ರಾರ್ಥನೆ|hombuja

ಹೊಂಬುಜ ಜಗನ್ಮಾತೆ ಸನ್ನಿಧಿಯಲ್ಲಿ ಶ್ರೀಗಳಿಂದ ಮಳೆಗಾಗಿ ಪ್ರಾರ್ಥನೆ ರಿಪ್ಪನ್ ಪೇಟೆ : ಸಮೀಪದ ಹೊಂಬುಜ  ಕ್ಷೇತ್ರದಲ್ಲಿ ಶ್ರಾವಣ ಮಾಸದ ಮೂರನೇ ಸಂಪತ್ ಶುಕ್ರವಾರ ಅಂಗವಾಗಿ ಮಾತೆ  ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಮಠದ ಪೀಠಾಧಿಕಾರಿ  ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಸ್ವಾಮೀಜಿ ಅವರು “ಇಳೆಗೆ ಮಳೆ ಬರಲಿ; ಭಕ್ತಿ ಸಿಂಚನ ತಂಪೆರೆಯಲಿ”ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಭಕ್ತರು ಜಗನ್ಮಾತೆ ಶ್ರೀ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಫಲಪುಷ್ಪ, ಧಾನ್ಯ, ಇಷ್ಟ ನೈವೇದ್ಯಗಳನ್ನು ಸಮರ್ಪಿಸಿದರು. ಮಳೆ ಬರಲಿ,…

Read More

ವಿಶೇಷ ಪ್ರಕಟಣೆ : 108 ಆಂಬ್ಯುಲೆನ್ಸ್ ಸಂಪರ್ಕಕ್ಕೆ ಪರ್ಯಾಯ ದೂರವಾಣಿ ಸಂಖ್ಯೆ ಕಲ್ಪಿಸಿದ ಆರೋಗ್ಯ ಇಲಾಖೆ

ತಾಂತ್ರಿಕ ದೋಷದಿಂದಾಗಿ ರಾಜ್ಯಾದ್ಯಂತ ಸೆಪ್ಟೆಂಬರ್​ 24ರ ರಾತ್ರಿಯಿಂದ 108 ಆಯಂಬುಲೆನ್ಸ್​ ಸೇವೆ ಸ್ಥಗಿತಗೊಂಡಿದೆ. ಜಿವಿಕೆ ಏಜೆನ್ಸಿ ನಡೆಸುತ್ತಿರುವ 108 ಸಹಾಯವಾಣಿಗೆ, ಆರೋಗ್ಯ ಎಮರ್ಜನ್ಸಿ ಎಂದು ಯಾರೇ ಕರೆಮಾಡಿದರೂ ಅದನ್ನು ಸ್ವೀಕರಿಸುತ್ತಿಲ್ಲ.ಹೀಗಾಗಿ ಅನೇಕ ರೋಗಿಗಳು ಪರದಾಡುವಂತಾಗಿದೆ. ಆಂಬುಲೆನ್ಸ್​ಗಳು ಸಿಗದೆ ಕಷ್ಟಪಡುವಂತಾಗಿದೆ. ಈ ಸಮಸ್ಯೆಗೆ ತಕ್ಷಣ ಸ್ಪಂದಿಸಿರುವ ಆರೋಗ್ಯ ಇಲಾಖೆ ಆಯಾ ಆಯಾ ತಾಲೂಕುಗಳಿಗೆ ಪರ್ಯಾಯ ದೂರವಾಣಿ ಸಂಖ್ಯೆಯನ್ನು ಕಲ್ಪಿಸಿದೆ. Due to non functional of 108 call centre,District has made an alternative arrangements for…

Read More

ಶಿವಮೊಗ್ಗ ಸಮೀಪದ ಸಕ್ರೆಬೈಲಿನಲ್ಲಿ ಧಗಧಗನೆ ಹೊತ್ತಿ ಉರಿದ ಕಾರು :

ಶಿವಮೊಗ್ಗದ ಸಕ್ರೆಬೈಲು ಬಳಿ ಸ್ಕೋಡಾ ಕಂಪನಿಯ ಕಾರೊಂದು ಧಗಧಗ ಹೊತ್ತಿ ಉರಿದಿದೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಕಾರು ವೇಗವಿದ್ದ ಕಾರಣ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ತಕ್ಷಣ ಕಾರಿಗೆ ಬೆಂಕಿ ಹತ್ತಿಕೊಂಡು ಕಾರು ಹೊತ್ತಿ ಉರಿದಿದೆ. ಕಾರಿನಲ್ಲಿ ಮೂವರು ಪ್ರಯಾಣಿಸಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದ್ದಾರೆ.  ಹೆಚ್ಚಿನ ಮಾಹಿತಿ ಇನ್ನಷ್ಟು ಬರಬೇಕಾಗಿದೆ. ವರದಿ : ಮಂಜುನಾಥ್ ಶೆಟ್ಟಿ ಶಿವಮೊಗ್ಗ

Read More

ಕೆಂಚನಾಲ : ಬಸ್ ಅಡ್ಡಗಟ್ಟಿ ವಿದ್ಯಾರ್ಥಿಯ ಮೇಲೆ ನಾಲ್ವರು ಯುವಕರಿಂದ ಹಲ್ಲೆ – ದೂರು ದಾಖಲು|assault

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕೆದಲುಗುಡ್ಡೆ ಗ್ರಾಮದಲ್ಲಿ ಚಲುಸುತಿದ್ದ ಬಸ್ ನ್ನು ಅಡ್ಡ ಹಾಕಿ ನಾಲ್ವರು ಯುವಕರು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಸರ್ಕಾರಿ ಪ್ರೌಡ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿ ಗಾಳಿಬೈಲ್ ಗ್ರಾಮದ ನಿವಾಸಿ ರಿಫಾಯತ್(17) ಇಂದು ಸಂಜೆ ವಿಶೇಷ ತರಗತಿ ಮುಗಿಸಿಕೊಂಡು‌ ತನ್ನ ಊರಾದ ಕೆಂಚನಾಲಕ್ಕೆ ಬಸ್ ನಲ್ಲಿ ಹಿಂದಿರುತಿದ್ದಾಗ ನಾಲ್ಕು ಜನ ಯುವಕರು ಬೈಕ್ ನಲ್ಲಿ ಹಿಂಬಾಲಿಸಿ ಕೆದಲುಗುಡ್ಡೆ ಗ್ರಾಮದ ಬಳಿ ಬಸ್…

Read More
Exit mobile version