Headlines

ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ – ಯುವಕ ಸಾವು

Fatal accident between bike and tipper – youth dies ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಪಿಯುಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆವಿನಹಳ್ಳಿ ಸಮೀಪದಲ್ಲಿ ನಡೆದಿದೆ. ಕಟ್ಟಿನಕಾರು ಗ್ರಾಮದ ನಿವಾಸಿ ಸಚಿನ್ (18) ಮೃತ ದುರ್ಧೈವಿಯಾಗಿದ್ದಾರೆ. ಸಾಗರ ಪಟ್ಟಣಕ್ಕೆ ಹಾಸ್ಟೆಲ್ ಗೆ ಅರ್ಜಿ ಸಲ್ಲಿಸಲು ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಅಪಘಾತದಲ್ಲಿ ಬೈಕ್ ನಲ್ಲಿದ್ದ ಹಿಂಬದಿಯಲ್ಲಿದ್ದವನಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. Fatal…

Read More

ಕಡಸೂರು ಗ್ರಾಮದ ಅರಣ್ಯ ಒತ್ತುವರಿ ತೆರವು

ಹೊಸನಗರ: 2021-22ರ ಅರಣ್ಯ ಪ್ರದೇಶ ಒತ್ತುವರಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗುರುವಾರ ಇಲಾಖೆಯ ಮೇಲಾಧಿಕಾರಿಗಳ ಸೂಚನೆ ಮೇರೆಗೆ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಒತ್ತುವರಿ ತೆರವುಗೊಳಿಸಲಾಯಿತು. ತಾಲೂಕಿನ ಹುಂಚ ಹೋಬಳಿ ಕಡಸೂರು ಗ್ರಾಮದ ಸ.ನಂ.72ರ ಪರಿಭಾವಿತ ಅರಣ್ಯ ಪ್ರದೇಶದಕ್ಕೆ ತೆರಳಿ, ಸ್ಥಳದಲ್ಲಿ ಇಂಗು ಗುಂಡಿ ನಿರ್ಮಿಸಿ, ಕಾಡುಜಾತಿಯ ಗಿಡಗಳನ್ನು ನೆಟ್ಟು, ಸುಮಾರು ಒಂದು ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆದಿದ್ದಾರೆ. ಈ ತೆರವು ಕಾರ್ಯವು ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ…

Read More

Ripponpete | ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ

Ripponpete | ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ ರಿಪ್ಪನ್‌ಪೇಟೆ : ಬರುವೆ ಗ್ರಾಮದ ಮಂಜುನಾಥ್ ಎಂಬುವವರ ಮನೆಯ ಸಮೀಪದಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂರಕ್ಷಣಾ ಕೇಂದ್ರದ ಉರಗ ಸಂಶೋಧಕ ಅಜಯ್ ಗಿರಿ ಮತ್ತು ತಂಡದವರು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಬರುವೆ ಗ್ರಾಮದ ಮಂಜುನಾಥ್ ಮನೆಯ ಸಮೀಪದಲ್ಲಿದ್ದ ಕಾಳಿಂಗ ಸರ್ಪವನ್ನು ಕಂಡು ಸ್ಥಳೀಯರು ಉಪ ವಲಯ ಅರಣ್ಯಾಧಿಕಾರಿ ಮಹೇಶ್ ನಾಯ್ಕ್ ರವರಿಗೆ ಮಾಹಿತಿ ತಿಳಿಸಿದ್ದಾರೆ. ವಿಷಯ ತಿಳಿಯುತಿದ್ದಂತೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕಾಗಮಿಸಿದ ಮಹೇಶ್ ನಾಯ್ಕ್…

Read More

ಶ್ರೀಗಂಧ ಚೋರರ ಬಂಧನ

Shivamogga | ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಉಂಬ್ಳೆ ಬೈಲು ರಸ್ತೆಯಲ್ಲಿರುವ ದರ್ಗಾದ ಹತ್ತಿರ  ಆಲ್ಟೋ ಕಾರಿನಲ್ಲಿ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ತುಂಗ ನಗರ ಪೊಲೀಸರ ದಾಳಿ ನಡೆದಿದೆ. ದಾಳಿಯಲ್ಲಿ ಮೂವರನ್ನ‌ ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ್ದ ವಾಹನ ಮತ್ತು 14.5 ಕೆ.ಜಿ ಗಂಧವನ್ನ ವಶಕ್ಕೆ ಪಡೆಯಲಾಗಿದೆ.  ತುಂಗ ನಗರ ಠಾಣೆಯ ಪಿಐ ಮಂಜುನಾಥ್  ರವರ ಮೇಲ್ವಿಚಾರಣೆಯಲ್ಲಿ ನಡೆದ ದಾಳಿಯಲ್ಲಿ ಠಾಣೆಯ ಪಿಎಸ್ಐ ಶಿವಪ್ರಸಾದ್, ಸಿದ್ದಪ್ಪ  ಹಾಗೂ ಸಿಬ್ಬಂಧಿಗಳಾದ …

Read More

ಮೆಸ್ಕಾಂ ಇಂಜಿನಿಯರ್ ಗೆ ಯಾರು ಕಿರುಕುಳ ನೀಡಿಲ್ಲ – ಹೈಕೋರ್ಟ್ ಗೆ ಎಎಸ್ ಪಿಪಿ ವಿವರಣೆ

ಸಾಗರ ಡಿವೈಎಸ್ಪಿ ಹಾಗೂ ಶಾಸಕರ ವಿರುದ್ದ ಹೈಕೋರ್ಟ್ ನಲ್ಲಿ ಆರೋಪ ಮಾಡಿದ್ದ ಆನಂದಪುರದ ಮೆಸ್ಕಾಂ ಎಂಜಿನಿಯರ್‌ ಶಾಂತಕುಮಾರ ಸ್ವಾಮಿ ಎಂ ಜಿ ಅವರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕರ್ನಾಟಕ ಹೈಕೋರ್ಟ್‌ ಬುಧವಾರ ಸೂಚಿಸಿದೆ. ವಿಚಾರಣೆಯ ವೇಳೆ ಡಿವೈಎಸ್‌ಪಿ ಹಾಜರಾಗಿದ್ದರು. ನ್ಯಾಯಾಲಯದ ನಿರ್ದೇಶನದಂತೆ ವಾಸ್ತವಿಕ ವರದಿಯ ಮಾಹಿತಿಯನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠಕ್ಕೆ ಒದಗಿಸಿದರು. “ಶಾಂತಕುಮಾರ ಸ್ವಾಮಿ ಅವರು ಅಬಕಾರಿ ಇಲಾಖೆಯ ಪೊಲೀಸ್‌ ಅಧಿಕಾರಿ…

Read More

ಆನಂದಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸುತ್ತಮುತ್ತ ಗುರುವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮಾದರಿ ಗ್ರಾಮದ ಕಾಮಗಾರಿಯನ್ನು ನಿರ್ವಹಿಸುವ ಮತ್ತು 11 ಕೆ ವಿ ಮಾರ್ಗಗಳ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುವುದರಿಂದ ಮಲಂದೂರು, ದಾಸಕೊಪ್ಪ ,ಆನಂದಪುರ,ಜೆಡಿಸರ,ಅಡೂರು, ತುಂಬ್ರಿಕೊಪ್ಪ ಮತ್ತು ಬಳ್ಳಿಬೈಲು ಗ್ರಾಮಗಳಿಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6:00 ವರೆಗೆ ವಿದ್ಯುತ್ ವೆಚ್ಚಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಇಲಾಖೆಯವರು ಮನವಿ ಮಾಡಿದ್ದಾರೆ

Read More

Ripponpete | ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನ ದಿಡೀರ್ ರಾಜಿನಾಮೆ…!!?

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನಾ ಇಂದು ಹುದ್ದೆಗೆ ದಿಡೀರ್ ರಾಜಿನಾಮೆ ನೀಡಿದ್ದಾರೆ. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚಿನ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರುಗಳ ನಡೆಯಿಂದ ಬೇಸತ್ತು ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹಾಗೂ ಸರ್ಕಾರಿ ಪದವಿ‌ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ ಅವರು ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಷ್ಟಾವಂತ ಸಕ್ರಿಯ ಕಾರ್ಯಕರ್ತೆಯಾಗಿ…

Read More

ಕ್ಯಾಲ್ಸಿಯಂ ಮಾತ್ರೆ ತಿಂದ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ! 

ಕ್ಯಾಲ್ಸಿಯಂ ಮಾತ್ರೆ ತಿಂದ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ!  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೊಪ್ಪುಗುಡ್ಡೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಯಾಲ್ಸಿಯಂ ಮಾತ್ರೆ ಸೇವಿಸಿದ್ದ 15 ಜನ ವಿದ್ಯಾರ್ಥಿನಿಯರು ವಾಂತಿ – ಭೇದಿಯಾಗಿ ಅಸ್ವಸ್ಥರಾದ ಘಟನೆ ನಡೆಸಿದೆ. ವೈದ್ಯರು ಸೂಚಿಸಿದಂತೆ ಕ್ಯಾಲ್ಸಿಯಂ ಮಾತ್ರೆ ವಿದ್ಯಾರ್ಥಿಗಳಿಗೆ ನೀಡಲಾಗಿತ್ತು. ಅದರಂತೆ ಮಧ್ಯಾಹ್ನದ ಊಟದ ನಂತರ ಸೇವಿಸಲು ಪ್ರಿನ್ಸಿಪಾಲ್ ವಿದ್ಯಾರ್ಥಿಗಳಿಗೆ ಹೇಳಿದ್ದರು.ಆದರೆ ಪ್ರಸ್ತುತ ಕಾಲೇಜು ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಇಲ್ಲದಿರುವುದರಿಂದ ಊಟಕ್ಕೆ ಮೊದಲೇ ವಿದ್ಯಾರ್ಥಿಗಳು ಮಾತ್ರೆ ಸೇವಿಸಿದ್ದು ಈ ಅನಾರೋಗ್ಯಕ್ಕೆ…

Read More

ಅಕ್ರಮ ಮರಳು ಸಾಗಾಣಿಕೆ – ಟಿಪ್ಪರ್ ಲಾರಿ ವಶಕ್ಕೆ

Ripponpete | ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೋಡೂರು ಸಮೀಪದಲ್ಲಿ ಟಿಪ್ಪರ್ ನಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದಾಗ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತಿದ್ದಾಗ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಮರಳು ಸಾಗಾಣಿಕೆ ಪ್ರಕರಣದಲ್ಲಿ ಲಾರಿಯನ್ನು ವಶಕ್ಕೆ ಪಡೆದ ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಪ್ರಿಯಾರವರು ಪ್ರಕರಣ ದಾಖಲಿಸಿಕೊಂಡು ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ – ಶಾಸಕ ಬೇಳೂರು ಸವಾಲ್

ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಹೈಕೋರ್ಟ್ ಜಡ್ಜ್ ಮುಂದೆ ಶಾಸಕರ ವಿರುದ್ದ ಆರೋಪ ಮಾಡಿದ ಮೆಸ್ಕಾಂ ಇಂಜಿನಿಯರ್ ಇತ್ತೀಚೆಗೆ ಗಾಂಜಾ ಕೇಸ್ ನಲ್ಲಿ ಅರೆಸ್ಟ್ ಆಗಿದ್ದ ಮೆಸ್ಕಾಂ ಇಂಜಿನಿಯರ್ ಕೆಪಿಟಿಸಿಎಲ್ ಇಂಜಿನಿಯರ್ ಶಾಂತಕುಮಾರ ಸ್ವಾಮಿ ಅವರು ಯಾರು ಅಂತನೇ ನನಗೆ ಗೊತ್ತಿಲ್ಲ. ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿಯೂ ಆತ ಇಲ್ಲ. ಹೀಗಿದ್ದೂ ನನ್ನ ವಿರುದ್ಧ ಹಣ ಕೇಳಿದ ಆರೋಪ ಮಾಡಿದ್ದಾರೆ. ಇದನ್ನು ಸಾಬೀತು ಪಡಿಸಿದ್ದೇ ಆದರೇ ನಾನು ರಾಜಕೀಯ ನಿವೃತ್ತಿಯಾಗುವುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಸವಾಲ್ ಹಾಕಿದರು. ಶಿವಮೊಗ್ಗ ಜಿಲ್ಲೆಯ…

Read More