ವ್ಯಸನ ಮುಕ್ತ ಸಮಾಜಕ್ಕಾಗಿ 450 ಕಿಲೋ ಮೀಟರ್ ಪಾದಯಾತ್ರೆ : ಅಥಣಿಯಿಂದ ಹೊಂಬುಜಾ ಕ್ಷೇತ್ರಕ್ಕೆ ಕಾಲ್ನಡಿಗೆಯಲ್ಲಿ ಬಂದ ಭಕ್ತರ ದಂಡು

ರಿಪ್ಪನ್ ಪೇಟೆ : ಸದೃಢ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ಪಣತೊಡಬೇಕು ಎಂಬ ಆಶಯದೊಂದಿಗೆ ಆ ನಿಟ್ಟಿನಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ನಿರಂತರವಾಗಿ ಪಾದಯಾತ್ರೆ ಮೂಲಕ ಜನಜಾಗೃತಿ ಗೊಳಿಸುತ್ತಿರುವುದು  ವಿಶೇಷ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ- ಐನಾಪುರ ಗ್ರಾಮದ ಶ್ರೀ ಕ್ಷೇತ್ರ ಹೊಂಬುಜ ಪದ್ಮಾವತಿ ಪಾದಯಾತ್ರ  ಸಂಘವು   ಈ ಕಾರ್ಯದಲ್ಲಿ ತೊಡಗಿಕೊಂಡಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಶ್ರೀ ಕ್ಷೇತ್ರ ಹೊಂಬುಜಕ್ಕೆ  ಸುಮಾರು 450  ಕಿಲೋ ಮೀಟರ್ ಪಾದಯಾತ್ರೆ ಯಲ್ಲಿ ಬಂದು ದರ್ಶನ  ಪಡೆಯುತ್ತಿದ್ದಾರೆ. ಪದ್ಮಾವತಿ ಪಾದಯಾತ್ರಾ…

Read More

ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಆರೋಪ : ರಿಪ್ಪನ್ ಪೇಟೆಯಲ್ಲಿ ಗಂಡ-ಹೆಂಡತಿ ವಿರುದ್ಧ ಎಫ್‌ಐಆರ್

ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಆರೋಪ : ರಿಪ್ಪನ್ ಪೇಟೆಯಲ್ಲಿ ಗಂಡ-ಹೆಂಡತಿ ವಿರುದ್ಧ ಎಫ್‌ಐಆರ್ Rare POCSO case registered in Ripponpete. Police have booked a husband and wife over alleged sexual assault of a minor girl and are investigating the alleged involvement of seven other youths. ರಿಪ್ಪನ್‌ಪೇಟೆ: ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪರೂಪದ ರೀತಿಯ ಪೋಕ್ಸೋ (POCSO) ಪ್ರಕರಣ ದಾಖಲಾಗಿದ್ದು,…

Read More

Ripponpete | ಚಾಲಕನ ನಿಯಂತ್ರಣ ತಪ್ಪಿ ಲಾರಿ ಅಪಘಾತ – ತಪ್ಪಿದ ಭಾರಿ ಅನಾಹುತ

Ripponpete | ಚಾಲಕನ ನಿಯಂತ್ರಣ ತಪ್ಪಿ ಲಾರಿ ಅಪಘಾತ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಕೋಕ್ ತುಂಬಿದ ಲಾರಿಯೊಂದು ಅಪಘಾತವಾಗಿ ಮರಕ್ಕೆ ತಗುಲಿ ನಿಂತಿರುವ ಘಟನೆ ಸಿದ್ದಪ್ಪನಗುಡಿ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಕಲ್ಲಿದ್ದಲು ತುಂಬಿದ್ದ ಲಾರಿ ಎದುರಿನಿಂದ ಬಂದ ವಾಹನದ ಕಣ್ನೂ ಕುಕ್ಕುವ ಲೈಟ್ ಗೆ ನಿಯಂತ್ರಣ ತಪ್ಪಿ ಸುಮಾರು ಹತ್ತು ಅಡಿಗೂ ಹೆಚ್ಚಿರುವ ಕಂದಕದತ್ತ ಉರುಳಿದೆ ಆದರೆ ಅದೃಷ್ಟವಶಾತ್ ಮರವೊಂದು ಇದ್ದಿದ್ದರಿಂದ ಲಾರಿ…

Read More

ಅಪ್ಪನ ಸಾವಿನ ಸುದ್ದಿ ಮುಚ್ಚಿಟ್ಟು ಮಗಳ ಮದುವೆ  -ಮಗಳ ಮದುವೆ ದಿನವೇ ಮಸಣಕ್ಕೆ ಸೇರಿದ ಹೃದಯವಿದ್ರಾವಕ ಘಟನೆ

ಅಪ್ಪನ ಸಾವಿನ ಸುದ್ದಿ ಮುಚ್ಚಿಟ್ಟು ಮಗಳ ಮದುವೆ  -ಮಗಳ ಮದುವೆ ದಿನವೇ ಮಸಣಕ್ಕೆ ಸೇರಿದ ಹೃದಯವಿದ್ರಾವಕ ಘಟನೆ ಮಗಳ ಮದುವೆಯ ಸಂಭ್ರಮದಲ್ಲಿದ್ದ ತಂದೆಯೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಮದುವೆಯ ಬಳಿಕ ತಂದೆ ಸಾವಿನ ಸುದ್ದಿ ಕುಟುಂಬಸ್ಥರಿಗೆ ತಿಳಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಆಪ್ತಮಿತ್ರನಿಗೆ ಮಗಳ ಮದುವೆಯ ಲಗ್ನಪತ್ರಿಕೆ ಕೊಡಲು ಹೋದ ತಂದೆ ಮಾರ್ಗ ಮಧ್ಯೆ ಅಪಘಾತದಿಂದ ಸಾವನ್ನಪ್ಪಿದ ವಿಷಯವೇ ಗೊತ್ತಿಲ್ಲದ ಮಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ನಿನ್ನೆ ಹಾಗೂ ಇವತ್ತು ತರೀಕೆರೆ…

Read More

ತೀರ್ಥಹಳ್ಳಿಯಲ್ಲಿ ಅಕ್ರಮ ಮರಳು ಸಾಗಾಟ : ಲಾರಿಗಳು ಸೀಜ಼್ !!!!!!

ತೀರ್ಥಹಳ್ಳಿ ತಾಲೂಕಿನ ಹಲವು ಮರಳು ಕ್ವಾರೆಗಳಲ್ಲಿ ನಿರಂತರವಾಗಿ ಮರಳು ಅಕ್ರಮ ಸಾಗಾಣಿಕೆ ಆಗುತ್ತಿದ್ದರೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಮತ್ತು ಪೊಲೀಸ್ ಇಲಾಖೆಗಳು  ಕಣ್ಣುಮುಚ್ಚಿ ಮೌನವಸ್ಥೆಯಲ್ಲಿ ಇರುವುದಕ್ಕೆ   ಗೃಹಸಚಿವರ ತವರೂರಿನ ಅಕ್ರಮ ಮರಳು ಸಾಗಾಟ ಪ್ರಕರಣವೇ ಸಾಕ್ಷಿಯಾಗಿದೆ. ಭಾನುವಾರ ಸಂಜೆಯ ವೇಳೆ ಮರಳನ್ನ ಡಬ್ಲಿಂಗ್ ಮಾಡಿಕೊಂಡು ಬರುತ್ತಿದ್ದ ಲಾರಿಯನ್ನ ಯಾರೋ ಒಬ್ಬರು ಪೊಲೀಸ್ ಇಲಾಖೆ ಮಾಹಿತಿ ನೀಡಿ ಅದನ್ನು ಕುಶಾವತಿ ಬಳಿ  ಹಿಡಿಸುವ ಸ್ಥಿತಿ ಬಂದಿದೆ ಎಂದರೆ ಗೃಹಸಚಿವರ ತವರಿನಲ್ಲಿ ಎಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಅರ್ಥವಾಗುತ್ತದೆ.  ತಾಲೂಕಿನ…

Read More

ವಿಜ್ರಂಭಣೆಯಿಂದ ಜರುಗಿದ ಶ್ರೀ ಸಿದ್ಧಿವಿನಾಯಕಸ್ವಾಮಿ ಪ್ರತಿಷ್ಠವರ್ಧಂತ್ಯೋತ್ಸವ : ವಿನಯ್ ಗುರೂಜಿಯವರಿಂದ ಆಶೀರ್ವಚನ

ರಿಪ್ಪನ್‌ಪೇಟೆ: ಪಟ್ಟಣದ ಆರಾಧ್ಯ ದೈವ ಶ್ರೀಸಿದ್ಧಿವಿನಾಯಕ ಸ್ವಾಮಿ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ೫ನೇ ವರ್ಷದ ಪ್ರತಿಷ್ಠಾವರ್ಧಂತ್ಯೋತ್ಸವವು ವಿಜ್ರಂಭಣೆಯಿಂದ ಜರುಗಿತು. ಶನಿವಾರ ಮುಂಜಾನೆ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವತಾ ಪ್ರಾರ್ಥನೆ, ಗಣಪತಿ ಪೂಜೆ, ಸ್ವಸ್ತಿಪುಣ್ಯಾಃ ವಾಚನ, ನಾಂದಿ ಸಮಾರಾಧನೆ, ಮಹಾಸಂಕಲ್ಪ, ಋತ್ವಿಗ್ವರಣ, ಸಮೂಹಿಕ ಷಣ್‌ನಾರಿಕೇಳ ಗಣಹೋಮ, ನವಗ್ರಹ ಹೋಮದೊಂದಿಗೆ ತೀರ್ಥಪ್ರಸಾದ ವಿನಿಯೋಗ ನಡೆಯಿತು.  ಸ್ವಾಮಿಯ ಸನ್ನಿಧಿಯಲ್ಲಿ ಮಂಡಲ ರಚನೆ, ಬ್ರಹ್ಮಕಲಶ ಸ್ಥಾಪನೆ, ಮತ್ತು ಕಲಶಾಧಿವಾಸ ಹೋಮ, ದೇವಿ ಸನ್ನಿಧಿಯಲ್ಲಿ ಪಂಚವಿಂಶತಿ ದ್ರವ್ಯ ಕಲಶ ಸಹಿತ ಬ್ರಹ್ಮಕಲಶ ಸ್ಥಾಪನೆ…

Read More

ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಪಿಡಿಒ :

ಹೊಸನಗರ ತಾಲೂಕಿನ ಎಂ.ಗುಡ್ಡೇಕೊಪ್ಪದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1 ಹೆಚ್ಚುವರಿ ಪ್ರಭಾರ ಪಿಡಿಒ ಮುರುಗೇಶ್ ಎಸಿಬಿ ಬಲೆಗೆ ಬಿದ್ದಿದ್ದಾನೆ. ಇಂದು ಬೆಳಿಗ್ಗೆ ತಾಲೂಕಿನ ಕೋಡೂರಿನ ಕುಸಗುಂಡಿಯ ಸಿದ್ದಗಿರಿ ನಿವಾಸಿ ಸತೀಶ್ ರವರ ಬಳಿ ಪಿಡಿಒ ಮುರುಗೇಶ್ 30 ಸಾವಿರ ರೂ ಲಂಚ ಪಡೆಯುವಾಗ ಎಸಿಬಿ ಬಲೆಗೆ‌ಬಿದ್ದಿದ್ದಾನೆ. ಸತೀಶ್ ರವರು ತಮ್ಮ ಭೂ ಪರಿವರ್ತನೆಗೊಂಡ 10 ಗುಂಟೆ ಜಾಗಕ್ಕೆ ಪ್ಲಾನ್ ಅಪ್ರೂವಲ್, ಮುಟೇಷನ್ ಮತ್ತು‌ 9  ಮತ್ತು 11 ಅರ್ಜಿ ಅನುಮತಿ ಮಾಡಿಕೊಡಲು ಎಂ.ಗುಡ್ಡೇಕೊಪ್ಪಕ್ಕೆ ಅರ್ಜಿ ಸಲ್ಲಿಸಿದ್ದರು. ಸತೀಶ್…

Read More

ವಿಜೃಂಭಣೆಯೊಂದಿಗೆ ಜರುಗಿದ ಶ್ರೀನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರೋತ್ಸವ

ವಿಜೃಂಭಣೆಯೊಂದಿಗೆ ಜರುಗಿದ ಶ್ರೀನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರೋತ್ಸವ The Koole Panchami Jatra festival of the nearby historic Nagarahalli Sri Nagendraswamy temple was celebrated with great pomp and show. ರಿಪ್ಪನ್‌ಪೇಟೆ : ಸಮೀಪದ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವವು ಸಂಭ್ರಮ ಸಡಗಡರದೊಂದಿಗೆ ವಿಜೃಂಭಣೆಯೊಂದಿಗೆ ನೆರವೇರಿತು. ಇಂದು ಬೆಳಗ್ಗೆ ೬ ರಿಂದ ದೇವಸ್ಥಾನದ ಪ್ರಧಾನ ಅರ್ಚಕ ಲಕ್ಷಿನಾರಾಯಣ ಭಟ್ ಮತ್ತು ಕಿರಣ್‌ಭಟ್ ನೇತೃತ್ವದಲ್ಲಿ ಶ್ರೀ ನಾಗೇಂದ್ರಸ್ವಾಮಿಗೆ…

Read More

ಶಿವಮೊಗ್ಗದ ಇಂಜಿನಿಯರ್ ಪತ್ನಿಯ ಕೊಲೆ!!! – ನಡೆದಿದ್ದೇನು…!!???

ಶಿವಮೊಗ್ಗ ನಗರದ ವಿಜಯನಗರದಲ್ಲಿ ಮಹಿಳೆಯ ಕೊಲೆ ಪ್ರಕರಣ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಕಾರು ಚಾಲಕನ ನಡೆ ಬಗ್ಗೆ ತುಂಗಾನಗರ ಪೊಲೀಸರು ಅನುಮಾನ ಮೂಡಿಸಿದೆಯಷ್ಟೆ ಅಲ್ಲದೆ , ಮನೆ ಸಮೀಪ ಕೆಲ ವ್ಯಕ್ತಿಗಳು ಓಡಾಡಿರುವುದರ ಬಗ್ಗೆ ಮಾಹಿತಿ ಲಭ್ಯವಾಗಿದೆ.  ತುಂಗಾನಗರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಬರುವ ವಿಜಯ ನಗರದ 2 ನೇ ತಿರುವಿನಲ್ಲಿರುವ ಮನೆಯಲ್ಲಿ   ಕಮಲಮ್ಮ 54 ವರ್ಷದ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ….

Read More

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು ಶಿವಮೊಗ್ಗ: ತುಂಗಾ ನದಿ ಸೇತುವೆ ಮೇಲೆ ಚಲಿಸುತ್ತಿದ್ದಾಗಲೇ ರೈಲಿನ  ಬೋಗಿಗಳು ಬೇರ್ಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. Mysore Intercity train carriages separated on Tunga river bridge ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಬೇರ್ಪಟ್ಟು ಆತಂಕ ಮೂಡಿಸಿದ್ದವು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ರೈಲು ಸಂಜೆ ೫ ಗಂಟೆ ಹೊತ್ತಿಗೆ ಶಿವಮೊಗ್ಗ ರೈಲ್ವೆ…

Read More