Headlines

ಉರುಳಿಗೆ ಸಿಲುಕಿ ಚಿರತೆ ಸಾವು | Leopard died after falling

ಉರುಳಿಗೆ ಸಿಲುಕಿ ಚಿರತೆ ಸಾವು  ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಸಬಾಳೆ ವೃತ್ತದ ಮೇಲಿನ ಕಿರುಗುಣಸೆ ಗ್ರಾಮದಲ್ಲಿ ಬುಧವಾರ ನಡೆದಿದೆ. ಚಿರತೆ ಉರುಳಿಗೆ ಸಿಲುಕಿ ಕೂಗುವುದನ್ನು ಕಂಡು ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಶಿವಮೊಗ್ಗದಿಂದ ಅರವಳಿಕೆ ತಜ್ಞರು ಆಗಮಿಸಿ ಗಾಯಗೊಂಡಿದ್ದ ಚಿರತೆಗೆ ಚಿಕಿತ್ಸೆ ನೀಡುವಷ್ಟರಲ್ಲಿ ಚಿರತೆ ಮೃತಪಟ್ಟಿದೆ. ಜಮೀನಿನೊಂದರ ತಂತಿ ಬೇಲಿಗೆ ಹಂದಿ‌ ಹಿಡಿಯಲು ಅಳವಡಿಸಿದ್ದ ಉರುಳಿಗೆ ಸಿಲುಕಿ ಸುಮಾರು…

Read More

Ripponpete- ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ

ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿಗಳ ನಡುವಿನ ಕಲಹ ತಾರಕಕ್ಕೇರಿ ಪತ್ನಿಯನ್ನು ಹತ್ಯೆಗೈದು ಮೃತದೇಹವನ್ನು ಹೂತಿಟ್ಟಿರುವ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ನಡೆದಿದ್ದೇನು..!? ಕೊಪ್ಪ ಪೊಲೀಸ್‌ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಯುವತಿ ಮಿಸ್ಸಿಂಗ್‌ ಪ್ರಕರಣವೊಂದು ದಾಖಲಾಗಿತ್ತು, ಪ್ರಕರಣದ ಬೆನ್ನತ್ತಿದ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ. ಸಾಗರ ಮೂಲದ ಯುವಕ ಮತ್ತು ಯುವತಿ ಇತ್ತೀಚೆಗೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಕೊಪ್ಪದಲ್ಲಿ…

Read More

Ripponpete | ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Ripponpete | ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ  ರಿಪ್ಪನ್‌ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕೊಲ್ಲೂರಪ್ಪ (55) ಮೃತ ದುರ್ಧೈವಿಯಾಗಿದ್ದಾರೆ. ಕೊಲ್ಲೂರಪ್ಪನವರಿಗೆ ಕೆಂಚನಾಲ ಗ್ರಾಮದ ಸರ್ವೇ ನಂ:50/3 ರಲ್ಲಿ 1 ಎಕ್ಕರೆ 18 ಗುಂಟೆ ತರಿ ಜಮೀನಿರುವೆ. ಅದರಲ್ಲಿ ಸ್ವಲ್ಪ ಅಡಿಕೆ ಮತ್ತು ಸ್ವಲ್ಪ ಶುಂಠಿಯನ್ನು ಹಾಕಿರುತ್ತಾರೆ. ಸದರಿ ಜಮೀನಿನಲ್ಲಿ ಅಡಿಕೆ ಹಾಕುವ ಸಲುವಾಗಿ ಅಲ್ಲಿ ಇಲ್ಲಿ ಸಾಲ ಮಾಡಿ ಬೋರ್ ವೆಲ್ ಕೊರೆಯಿಸಿ ನಂತರ…

Read More

ಗ್ರಾಪಂ ಅಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ ದಾಳಿ – ಕಂತೆ ಕಂತೆ ಹಣ , ಚಿನ್ನಾಭರಣ ಪತ್ತೆ | Lokayukta Raid

ಗ್ರಾಪಂ ಅಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ ದಾಳಿ – ಕಂತೆ ಕಂತೆ ಹಣ , ಚಿನ್ನಾಭರಣ ಪತ್ತೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯತಿ ಅಧ್ಯಕ್ಷರ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಕೋಟ್ಯಾಂತರ ರೂ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚಿದ್ದಾರೆ. ಅಂತರಗಂಗೆ ಗ್ರಾಪಂ ಅಧ್ಯಕ್ಷರಾದ ನಾಗೇಶ್.ಬಿ ಮೂಲ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ  ಕಲಂ 13(1)(ಬಿ) ಸಹಿತ…

Read More

ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನಾಪತ್ತೆ – ಶೋಧ ಕಾರ್ಯಾಚರಣೆ | person missing in jogfalls

ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನಾಪತ್ತೆ – ಶೋಧ ಕಾರ್ಯಾಚರಣೆ | person missing in jogfalls ಜೋಗ ಜಲಪಾತ ವೀಕ್ಷಣೆಗೆಂದು ಬೆಂಗಳೂರಿನಿಂದ ಆಗಮಿಸಿದ್ದ ಯುವಕನೋರ್ವ ಜಲಪಾತದ ಬಳಿ ಕಣ್ಮರೆಯಾದ ಘಟನೆ ನಡೆದಿದ್ದು, ಹುಡುಕಾಟ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಟೀ ಅಂಗಡಿ ನಡೆಸುತ್ತಿರುವ ಗದಗ ಮೂಲದ ಆನಂದ್ (24) ಜಲಪಾತದ ಬಳಿ ನಾಪತ್ತೆಯಾಗಿದ್ದಾನೆ. ಆನಂದ್ ಜೋಗ ಜಲಪಾತಕ್ಕೆ ಜುಲೈ 15ರಂದು ಆಗಮಿಸಿದ್ದ. ಯಾತ್ರಿ ನಿವಾಸದ ಸೀತಾಕಟ್ಟೆ ಬ್ರಿಡ್ಜ್ ಬಳಿಯಿಂದ ಬೇಲಿ ದಾಟಿ, ಜಲಪಾತದ ಬಳಿ ಆಗಮಿಸಿದ್ದ. ಯುವಕ…

Read More

ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ 112 ಪೊಲೀಸರು

ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಮುಂದಾದ ಮಹಿಳೆಯನ್ನು ರಕ್ಷಿಸಿದ 112 ಪೊಲೀಸರು ಶಿವಮೊಗ್ಗ ಜಿಲ್ಲೆಯ ಸಾಗರ(sagara) ತಾಲೂಕಿನ ಕುಗ್ವೆ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು 112 ಪೋಲೀಸರು ರಕ್ಷಿಸಿದ ಘಟನೆ ನಡೆದಿದೆ. ಅಣಲೆಕೊಪ್ಪ ಗ್ರಾಮದ 26 ವರ್ಷದ ಮಹಿಳೆ ಕೌಟುಂಬಿಕ ಕಾರಣದಿಂದ ತನ್ನ ಇಬ್ಬರು ಮಕ್ಕಳೊಂದಿಗೆ ಹೊಳೆಯ ಬಳಿಗೆ ಸ್ಕೂಟಿಯಲ್ಲಿ ಬಂದು ಮೊಬೈಲ್ ಹಾಗೂ ಚಪ್ಪಲಿಯನ್ನು ಹೊಳೆ ಬದಿಯಲ್ಲಿಟ್ಟು ಆತ್ಮಹತ್ಯೆಗೆ‌ ಮುಂದಾಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರೊಬ್ಬರು ಮಹಿಳೆಯ ಬಳಿ ತೆರಳಿ ಬುದ್ದಿವಾದ…

Read More

ಹಳ್ಳದಲ್ಲಿ ಈಜಿಕೊಂಡು ಹೋಗಿ ವಿದ್ಯುತ್ ಲೈನ್ ದುರಸ್ತಿಪಡಿಸಿದ ಲೈನ್ ಮ್ಯಾನ್ – ವೀಡಿಯೋ ವೈರಲ್ | power man

ಹಳ್ಳದಲ್ಲಿ ಈಜಿಕೊಂಡು ಹೋಗಿ ವಿದ್ಯುತ್ ಲೈನ್ ದುರಸ್ತಿಪಡಿಸಿದ ಲೈನ್ ಮ್ಯಾನ್ – ವೀಡಿಯೋ ವೈರಲ್ | power man ಮಲೆನಾಡಿನಲ್ಲಿ ವರುಣನ ಆರ್ಭಟಕ್ಕೆ ಹಲವಾರು ಕಡೆ ಅನೇಕ ಅವಘಡಗಳು ಸಂಭವಿಸಿದೆ, ಇದೀಗ ವಿದ್ಯುತ್ ಲೈನ್ ಸರಿಪಡಿಸಲು ಹಳ್ಳದಲ್ಲಿ ಈಜಿಕೊಂಡು ಹೋಗಿರುವ ವೀಡಿಯೋ ವೈರಲ್ ಆಗಿದೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಪವರ್ ಮ್ಯಾನ್ ವೊಬ್ಬ ರಭಸವಾಗಿ ಹರಿಯುತ್ತಿರವ ಹಳ್ಳದಲ್ಲಿ ಈಜಿ ವಿದ್ಯುತ್ ಲೈನ್ ಸರಿಪಡಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಅರೇಹಳ್ಳಿ ಗ್ರಾ. ಪಂ…

Read More

ತಗ್ಗಿದ ವರುಣನ ಆರ್ಭಟ – ಹೊಸನಗರ ,ಸಾಗರ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..!| Rain update

ತಗ್ಗಿದ ವರುಣನ ಆರ್ಭಟ – ಹೊಸನಗರ ,ಸಾಗರ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..! ಹೊಸನಗರ ಮತ್ತು ಸಾಗರ ತಾಲೂಕಿನಾದ್ಯಂತ ವರುಣನ ಆರ್ಭಟ ತಗ್ಗಿರುವ ಹಿನ್ನಲೆಯಲ್ಲಿ ಸೋಮವಾರ ಶಾಲಾ ಕಾಲೇಜುಗಳು ಎಂದಿನಂತೆ ಪ್ರಾರಂಭಗೊಳ್ಳಲಿದೆ. ಹೊಸನಗರ ಮತ್ತು ಸಾಗರ ತಾಲೂಕಿನಲ್ಲಿ ಕಳೆದ ಐದಾರು ದಿನಗಳಿಂದ ಭಾರಿ ಮಳೆಯಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು ಈಗ ವರುಣನ ಆರ್ಭಟ ತಗ್ಗಿರುವುದರಿಂದ ಶಾಲಾ ಕಾಲೇಜುಗಳು ಎಂದಿನಂತೆ ಪ್ರಾರಂಭಗೊಳ್ಳಲಿದೆ. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಹೊಸನಗರ BEO ಎಚ್ ಆರ್…

Read More

Ripponpete | ಬೆನವಳ್ಳಿಯಲ್ಲಿ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ : ಶಿವಮೊಗ್ಗ – ರಿಪ್ಪನ್‌ಪೇಟೆ ಸಂಚಾರ ಕೆಲಕಾಲ ವ್ಯತ್ಯಯ

Ripponpete | ಬೆನವಳ್ಳಿಯಲ್ಲಿ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ : ಶಿವಮೊಗ್ಗ – ರಿಪ್ಪನ್‌ಪೇಟೆ ಸಂಚಾರ ಕೆಲಕಾಲ ವ್ಯತ್ಯಯ ರಿಪ್ಪನ್‌ಪೇಟೆ : ಬೆನವಳ್ಳಿ ಗ್ರಾಮದ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ರಿಪ್ಪನ್ ಪೇಟೆ ಶಿವಮೊಗ್ಗ ಮಾರ್ಗದ ಸಂಚಾರ ಕೆಲಕಾಲ ವ್ಯತ್ಯಯವಾಗಿರುವ ಘಟನೆ ನಡೆದಿದೆ. ಅರಸಾಳು ಗ್ರಾಪಂ ವ್ಯಾಪ್ತಿಯ ಬೆನವಳ್ಳಿ ಗ್ರಾಮದ ತಿರುವಿನಲ್ಲಿ ಬೃಹತ್ ಮರವೊಂದು ಹೆದ್ದಾರಿ ರಸ್ತೆಗೆ ಅಡ್ಡಲಾಗಿ ಬಿದ್ದ ಹಿನ್ನಲೆಯಲ್ಲಿ ಕೆಲಕಾಲ ಶಿವಮೊಗ್ಗ- ರಿಪ್ಪನ್‌ಪೇಟೆ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಿ ಪ್ರಯಾಣಿಕರು ಅರ್ಧ ಗಂಟೆಗೂ ಹೆಚ್ಚು…

Read More