Headlines

ಮದುವೆ ವಿವಾದ – ಇಬ್ಬರು ಯುವಕರಿಗೆ ಚೂರಿ ಇರಿತ

ಮದುವೆ ವಿವಾದ – ಇಬ್ಬರು ಯುವಕರಿಗೆ ಚೂರಿ ಇರಿತ ಶಿವಮೊಗ್ಗ ನಗರದಲ್ಲಿನ ಊರುಗಡೂರು ಬಡಾವಣೆಯಲ್ಲಿ ನಡೆದ ವೈಯಕ್ತಿಕ ಗಲಾಟೆ ಎರಡು ಕುಟುಂಬಗಳ ನಡುವೆ ಭೀಕರ ರೂಪ ಪಡೆದು, ಇಬ್ಬರು ಯುವಕರು ಮಾರಕಾಸ್ತ್ರದ ಇರಿತಕ್ಕೊಳಗಾಗಿರುವ ಘಟನೆ ನಡೆದಿದೆ. ಗಾಯಗೊಂಡ ಶಬ್ಬೀರ್ ಹಾಗೂ ಶಹಬಾಜ್ ಎಂಬವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಿ, “ಇದು ಸಂಪೂರ್ಣವಾಗಿ…

Read More

ಪೋಟೋ ಕ್ಲಿಕ್‌ ಮಾಡುವಾಗ ಹೃದಯಾಘಾತದಿಂದ ಫೋಟೋಗ್ರಾಫರ್ ಸಾವು|photographer

ಸಾಗರ ನಗರದ ವೃತ್ತಿನಿರತ ಫೋಟೊಗ್ರಾಫರ್ ಒಬ್ಬರು ಕಾರ್ಯಕ್ರಮವೊಂದರಲ್ಲಿ ಫೋಟೊ ತೆಗೆಯುತ್ತಿರುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ತಾಲೂಕಿನ ಹೆಗ್ಗೋಡು ಸಮೀಪದ ಹೆಬ್ಬೈಲಿನ ಸೋಮೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ ಈ ಘಟನೆ ನಡೆದಿದ್ದು ಇಲ್ಲಿನ ರಾಮನಗರದ ನಿವಾಸಿ ಚಂದ್ರು (42) ಮೃತ ದುರ್ದೈವಿ. ಕಾರ್ಯಕ್ರಮದಲ್ಲಿ ಫೋಟೊ ತೆಗೆಯುವ ವೇಳೆ ಚಂದ್ರು ಕುಸಿದು ಬಿದ್ದರು. ತಕ್ಷಣ ಅವರನ್ನು ನಗರದ ಉಪವಿಭಾಗೀಯ ಆಸ್ಪತ್ರೆಗೆ ಸೇರಿಸುವ ಪ್ರಯತ್ನ ನಡೆಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದಿದ್ದರು. ನಗರದ ಶಿಲ್ಪ ಸ್ಟುಡಿಯೋ ಮಾಲೀಕರಾಗಿದ್ದ…

Read More

ಕೋಣಂದೂರು ಸಮೀಪ ರಸ್ತೆ ಅಪಘಾತ : ಚಾಲಕರ ನಡುವಿನ ಗಲಾಟೆಯಲ್ಲಿ ಮೂರನೇ ವ್ಯಕ್ತಿಯಿಂದ ಚಿನ್ನದ ಸರ ಕಳವು

ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವಿನ ಅಪಘಾತ ನೆಡಿದಿದ್ದು ಅಪಘಾತ ನೆಡದ ಸ್ಥಳದಲ್ಲಿ ಗಲಾಟೆ ನೆಡೆದು ಆ ಸಂದರ್ಭದಲ್ಲಿ ಚಿನ್ನದ ಸರ ಕಳ್ಳತನ ನೆಡೆದಿರುವ ವಿಚಿತ್ರ ಘಟನೆ ತಾಲೂಕಿನ ಕೋಣಂದೂರು ಸಮೀಪ ನೆಡೆದಿದೆ.  KA – 14 M 4592 ಸಂಖ್ಯೆಯ ಕಾರೊಂದು ಹಿರೇಬೈಲಿನಿಂದ ಹೆಗ್ಗಡಿಗೆರೆಗೆ ಹೋಗುವಾಗ ಮಲ್ಲಿಗೆಕಟ್ಟೆಯಲ್ಲಿ ಬೈಕ್ ಅಡ್ಡ ಬಂದು ಅಪಘಾತವಾಗಿದೆ.  ಕಾರು ಹಾಗೂ ಬೈಕ್ ಚಾಲಕನ ಮಧ್ಯೆ ಗಲಾಟೆ ನೆಡೆಯುವಾಗ ಮೂರನೇ ವ್ಯಕ್ತಿಯೊಬ್ಬ ಬಂದು ಹಲ್ಲೆ ನೆಡೆಸಿ ಕಾರಿನ ಚಾಲಕನ ಕೊರಳಲ್ಲಿ…

Read More

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು ಸೊರಬ: ಮಹಿಳೆಯೊಬ್ಬರ ಗಮನವನ್ನು ಬೇರೆಡೆ ಸೆಳೆದು ಮಾಂಗಲ್ಯ ಸರವನ್ನು ಕಳ್ಳರು ಕಿತ್ತು ಪರಾರಿಯಾದ ಘಟನೆ ಶನಿವಾರ ರಾತ್ರಿ 10.30ರ ಸುಮಾರಿಗೆ ಪಟ್ಟಣದ ಚಾಮರಾಜ ಪೇಟೆಯಲ್ಲಿ ನಡೆದಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ದಾದಿಯಾಗಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಕಾನುಕೇರಿ ಬಡಾವಣೆ ನಿವಾಸಿ ಲಕ್ಷ್ಮೀ ಬಾಯಿ  ಮಾಂಗಲ್ಯ ಸರ ಕಳೆದುಕೊಂಡವರು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಗೆ ಮರಳುವಾಗ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಅಪರಿಚಿತರು ಮಹಿಳೆಯ ಗಮನವನ್ನು ಬೇರೆಡೆ…

Read More

ವಿಧಾನ ಪರಿಷತ್ ಚುನಾವಣೆ : ಬಿಎಸ್ ವೈ,ಈಶ್ವರಪ್ಪ ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಯ ಸದಸ್ಯರಿಂದ ಮತದಾನ : ರಿಪ್ಪನ್ ಪೇಟೆಯಲ್ಲಿ ಗ್ರಾಪಂ ಸದಸ್ಯರಿಂದ ಮತದಾನ

ವಿಧಾನ ಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ ಮಧ್ಯಾಹ್ನದವರೆಗೂ ಅನೇಕ ಪ್ರಮುಖರು ಮತ ಚಲಾಯಿಸಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆ ಆವರಣದಲ್ಲಿರುವ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ಮತದಾನ ಮಾಡಿದರು. ಶಿಕಾರಿಪುರದಲ್ಲಿ ನಿಕಟಪೂರ್ವ ಸಿಎಂ ಬಿ.ಎಸ್.ಯಡಿಯೂರಪ್ಪ, ಸಂಸದ ರಾಘವೇಂದ್ರ ಮತಚಲಾಯಿಸಿದರೆ, ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ, ಆಯನೂರು ಮಂಜುನಾಥ್, ರುದ್ರೇಗೌಡ, ಮೇಯರ್ ಸುನೀತ ಅಣ್ಣಪ್ಪ ಒಳಗೊಂಡತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಒಟ್ಟಿಗೆ ಬಂದು ಮತ ಚಲಾಯಿಸಿದರು. ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ರವರು ತೀರ್ಥಹಳ್ಳಿ ಪಟ್ಟಣ…

Read More

ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station

ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station ರಿಪ್ಪನ್‌ಪೇಟೆ : ಅರಸಾಳು ರೈಲ್ವೆ ಸ್ಟೇಷನ್ ಬಳಿಯಲ್ಲಿ ಭಾರಿ ಮಳೆಗೆ ರೈಲ್ವೆ ಹಳಿಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಗುರುವಾರ ಸಂಜೆ ನಡೆದಿದೆ. ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಿಂದ ಒಂದು ಕಿಮೀ ಅಂತರದ ಬಟಾಣಿಜೆಡ್ಡು ಗ್ರಾಮದಲ್ಲಿ ರೈಲ್ವೆ ಹಳಿಯ ಮೇಲೆ ಬೃಹತ್ ಮರ ಬಿದ್ದು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಸ್ಥಳಕ್ಕೆ…

Read More

ರಿಪ್ಪನ್‌ಪೇಟೆ : ಬೀದಿ ನಾಯಿಗಳ ಹಾವಳಿಗೆ ಬೆಚ್ಚಿಬೀಳುತ್ತಿರುವ ನಾಗರೀಕರು|stray dogs

ರಿಪ್ಪನ್‌ಪೇಟೆ : ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ. ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್‌, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ವಾರ್ಡ್‌, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳು ಉಪಟಳ ಹೆಚ್ಚಾಗಿದೆ. ಪಟ್ಟಣದ  ,…

Read More

RIPPONPETE | ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ  | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ

ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ  | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ ರಿಪ್ಪನ್‌ಪೇಟೆ ಪಟ್ಟಣದ ಬಹುದಿನಗಳ ಬೇಡಿಕೆಯ ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಿಯಾಗಿದ್ದ ಸಾಗರ ರಸ್ತೆಯ ಖಾಸಗಿ ಕಟ್ಟಡವನ್ನು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತ್ರತ್ವದಲ್ಲಿ ದಿಡೀರ್  ತೆರವುಗೊಳಿಸುವ ಕಾರ್ಯಾಚರಣೆ ಕೈಗೊಳ್ಳುವ ಮೂಲಕ ಕಟ್ಟಡದ ಮಾಲೀಕರಿಗೆ ಶಾಕ್ ನೀಡಿದ್ದಾರೆ. ಕಳೆದ ಒಂದು ವರ್ಷದಿಂದ ಈ ಅನಧೀಕೃತ ಕಟ್ಟಡದಿಂದಾಗಿ ದ್ವಿಪಥ ರಸ್ತೆ ಕಾಮಗಾರಿ ಸ್ಥಗಿತಗೊಂಡು ಸಾರ್ವಜನಿಕರು ಪರದಾಡುವ ಸ್ಥಿತಿ…

Read More

Ripponpete | ಪ್ರಸ್ತುತ ಸನ್ನಿವೇಶದಲ್ಲಿ ಸಾರ್ವಜನಿಕರು,ವಿದ್ಯಾರ್ಥಿಗಳಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ

ಸಾರ್ವಜನಿಕರು,ವಿದ್ಯಾರ್ಥಿಗಳಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ : ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕರಿಬಸಮ್ಮ ರಿಪ್ಪನ್‌ಪೇಟೆ : ಸಾರ್ವಜನಿಕರು,ವಿದ್ಯಾರ್ಥಿಗಳಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ,ಹಾಗೇಯೆ ಏಡ್ಸ್ ಹರಡುವ ವಿಧಾನಗಳು,ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಚಿಕಿತ್ಸೆ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕರಿಬಸಮ್ಮ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್ ರಿಬ್ಬನ್ ಕ್ಲಬ್,  ಯುವ ರೆಡ್ ಕ್ರಾಸ್ ಘಟಕ, ತಾಲೂಕು ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಪ್ರಾಥಮಿಕ ಆರೋಗ್ಯ…

Read More

ಮೇ 27 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ – ನೇರ ಸಂದರ್ಶನ

ಮೇ 27 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ – ನೇರ ಸಂದರ್ಶನ ಶಿವಮೊಗ್ಗ, ಮೇ 22; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಮೇ 27 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ಶ್ರೀಲಕ್ಷ್ಮೀ ಗ್ರೂಪ್ಸ್ , ಹೆಚ್.ಡಿ.ಎಫ್.ಸಿ. ಬ್ಯಾಂಕ್, ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಎಲ್ &ಟಿ ಫೈನಾನ್ಸ್, ರೇಜ್ ಮ್ಯಾನೇಜ್ಮೆಂಟ್ ಸಲ್ಯೂಷನ್ ಸಂಸ್ಥೆಗಳು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ…

Read More