Headlines

ರಿಪ್ಪನ್‌ಪೇಟೆ ಸಮೀಪ ಎರಡು ಕಾರುಗಳ ನಡುವೆ ಭೀಕರ ಅಪಘಾತ : ಸ್ಥಿತಿ ಗಂಭೀರ – ಮೆಗ್ಗಾನ್ ಗೆ ದಾಖಲು|accident

ರಿಪ್ಪನ್ ಪೇಟೆ : ಇಲ್ಲಿನ ಬಾಳೂರು ಸಮೀಪದಲ್ಲಿ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆನಂದಪುರ ಕಡೆಗೆ ತೆರಳುತಿದ್ದ ಮಾರುತಿ ಓಮಿನಿ ಕಾರು ಹಾಗೂ ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಸ್ಯಾಂಟ್ರೋ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಮಾರುತಿ ಓಮಿನಿ ಕಾರಿನಲ್ಲಿದ್ದ ಪಟ್ಟಣದ ಗವಟೂರು ಗ್ರಾಮದ ಬೋಟಿ ವ್ಯಾಪಾರಿ ತವಾಮಣಿ (45) ಎಂಬುವವರಿಗೆ ಗಂಭೀರ ಗಾಯಗಳಾಗಿದೆ.ಸೆವಾಮಣಿ ಎಂಬಾತನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಯಾಂಟ್ರೋ ಕಾರಿನಲ್ಲಿದ್ದ ಶಿವಮೊಗ್ಗ…

Read More

ಆಸ್ತಿಗಾಗಿ ಅಣ್ಣನಿಂದ ತಮ್ಮನ ಕೊಲೆ : ಕ್ಲಿಷ್ಟಕರ ಪ್ರಕರಣ ಬೇಧಿಸಿದ ಪೊಲೀಸರು- ಆರೋಪಿ ಬಂಧನ|crime

ಆಸ್ತಿಗಾಗಿ ಸ್ವಂತ ತಮ್ಮನನ್ನು ಕೊಂದು ಪೊದೆಯಲ್ಲಿ ಬಿಸಾಡಿದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆನವಟ್ಟಿ ತಾಲೂಕಿನ ತುಡಿ ನೀರು ಗ್ರಾಮದ ನಿವಾಸಿ ಸಲೀಂ ಎಂಬ ಯುವಕ ಡಿಸೆಂಬರ್ 15ರಂದು ರಾತ್ರಿ ಜಮೀನಿಗೆ ಮಲಗಲು ಹೋಗಿದ್ದರು. ಆದರೆ ಆನಂತರ ಮನೆಗೆ ಆತ ವಾಪಸ್ ಹಿಂದಿರುಗಿರಲಿಲ್ಲ ಆತನಿಗಾಗಿ ಎಲ್ಲೆಡೆ ಹುಡುಕಾಟ ಕೂಡ ನಡೆದಿತ್ತು ಬಳಿಕ ಡಿಸೆಂಬರ್ 18ರಂದು ಬೆಳಗ್ಗೆ ಅದೇ ಗ್ರಾಮದ ಹಳ್ಳ ಒಂದರ ಪಕ್ಕದ ಪೊದೆಯಲ್ಲಿ ಸಲೀ0 ಮೃತ ದೇಹ ಪತ್ತೆಯಾಗಿತ್ತು. ಈ ಸಂಬಂಧ ಮೃತನ ಸಹೋದರ ಪೊಲೀಸ್ ಠಾಣೆಯಲ್ಲಿ…

Read More

Accident | ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತಿದ್ದ ಕಾರು ಅಪಘಾತ

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇದ್ದ ಕಾರು ಅಪಘಾತ ಶಿವಮೊಗ್ಗ : ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇದ್ದ ಕಾರು ಅಪಘಾತಕ್ಕೀಡಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಸಚಿವರು ಸ್ವಲ್ಪದರಲ್ಲಿ ದುರಂತದಿಂದ ಪಾರಾಗಿದ್ದಾರೆ.ಸಚಿವ ಮಧು ಬಂಗಾರಪ್ಪ ಅವರು ಕಾರಿನಲ್ಲಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಈ ಅಪಘಾತವಾಗಿದ್ದು, ಲಾರಿ ಕಾರನ್ನು ತೀವ್ರವಾಗಿ ಉಜ್ಜಿಕೊಂಡಿದೆ. ಕಾರಿನಲ್ಲಿದ್ದ ಸಚಿವರು ಸೇರಿದಂತೆ ಮೂವರಿಗೂ ಯಾವುದೇ ಗಾಯಗಳಾಗಿಲ್ಲ. ಅಪಘಾತದಲ್ಲಿ…

Read More

ಟೊಮ್ಯಾಟೊ ಪ್ಲೂ (ಟೊಮ್ಯಾಟೊ ಜ್ವರ) ಎಂಬ ಹೊಸ ವೈರಸ್ ಪತ್ತೆ : ಚಿಕ್ಕ ಮಕ್ಕಳೇ ಈ ವೈರಸ್ ನ ಟಾರ್ಗೆಟ್

ಕೊರೊನಾ ನಾಲ್ಕನೇ ಅಲೆಯ ಭೀತಿಯ ನಡುವೆ ಹೊಸ ಜ್ವರವೊಂದು ಕಾಣಿಸಿಕೊಂಡಿದ್ದು, ವಿಶೇಷವಾಗಿ ಚಿಕ್ಕ ಮಕ್ಕಳ ಪೋಷಕರಲ್ಲಿ ಆತಂಕ ಮೂಡಿಸಿದೆ. ಮಾಧ್ಯಮ ವರದಿಗಳ ಪ್ರಕಾರ, ಕೇರಳದಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ 80 ಕ್ಕೂ ಹೆಚ್ಚು ಮಕ್ಕಳು ವೈರಸ್‌ನಿಂದ ಸೋಂಕಿಗೆ ಒಳಗಾಗಿದ್ದಾರೆ ಮತ್ತು ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಕೇರಳದಲ್ಲಿ ಎಲ್ಲಾ ವಾಹನಗಳ ಪ್ರಯಾಣಿಕರನ್ನು, ವಿಶೇಷವಾಗಿ ಮಕ್ಕಳನ್ನು ಪರೀಕ್ಷಿಸಲು ಇಬ್ಬರು ವೈದ್ಯಕೀಯ ಅಧಿಕಾರಿಗಳು ತಂಡವನ್ನು ಮುನ್ನಡೆಸುತ್ತಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಲ್ಲದೆ, ಅಂಗನವಾಡಿಗಳಲ್ಲಿ ಐದು ವರ್ಷಕ್ಕಿಂತ ಕಡಿಮೆ…

Read More

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ ರಿಪ್ಪನ್ ಪೇಟೆ : ಮುಂಬರುವ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಾಳೆ (ಆ.21) ಬೆಳಗ್ಗೆ 10:30ಕ್ಕೆ ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಶಿವಮಂದಿರದಲ್ಲಿ ಶಿವಮೊಗ್ಗ ಎಸ್.ಪಿ. ಮಿಥುನ್ ಕುಮಾರ್ ನೇತೃತ್ವದಲ್ಲಿ ಶಾಂತಿಸಭೆ ಏರ್ಪಡಿಸಲಾಗಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ. ಈ ಸಭೆಗೆ ಠಾಣಾ ವ್ಯಾಪ್ತಿಯ ಎಲ್ಲಾ…

Read More

Ripponpete | ವಡಗೆರೆ ಶಾಲೆ ಬಳಿ ಬೈಕ್ ಅಪಘಾತ – ಯುವಕ ಸ್ಥಳದಲ್ಲೇ ಸಾವು

ವಡಗೆರೆ ಶಾಲೆ ಬಳಿ ಬೈಕ್ ಅಪಘಾತ – ಯುವಕ ಸ್ಥಳದಲ್ಲೇ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ವಡಗೆರೆ ಶಾಲೆಯ ಮುಂಭಾಗದಲ್ಲಿ  ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಆವಿನಹಳ್ಳಿ ಸಮೀಪದ ಗುರುವಂತೆ ಗ್ರಾಮದ ನವೀನ್ ಕುಮಾರ್ ಜಿ ಕೆ ಎಂದು ಆತನ ಡ್ರೈವಿಂಗ್ ಲೈಸೆನ್ಸ್ ಆಧಾರದ ಮೇಲೆ ಗುರುತಿಸಲಾಗಿದೆ. ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬೈಕ್ ನಡು ರಸ್ತೆಯಲ್ಲಿ ಅಪಘಾತವಾಗಿ ಯುವಕನ ತಲೆ ರಸ್ತೆಗೆ ಅಪ್ಪಳಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ….

Read More

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು ಶಿವಮೊಗ್ಗ : ಒಂದು ವರ್ಷದ‌ ಮಗುವೊಂದು ಆಟ ಆಡುವ ವೇಳೆ ಮೀನು ನುಂಗಿದ ಘಟನೆ ನಡೆದಿದೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೀನು ಹೊರತೆಗೆದಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗಂಜಿನಹಳ್ಳಿ ಯೋಗೇಶ್, ರೋಜಾ ದಂಪತಿ ತಮ್ಮ ಒಂದು ವರ್ಷದ‌ ಮಗು ಕೈಗೆ ಆಟ ಆಡಲು‌‌ ಮೀನು ನೀಡಿದ್ದರು. ಆಟವಾಡುತ್ತಾ ಏಕಾಏಕಿ ಮಗು ಮೀನು‌ ನುಂಗಿದೆ. ಕೂಡಲೇ ಮಗುವನ್ನು ಶಿವಮೊಗ್ಗದ ಮ್ಯಾಕ್ಸ್…

Read More

ರಿಪ್ಪನ್‌ಪೇಟೆ : ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನಾಥವಾಗಿರುವ ಕೈಗಾರಿಕಾ ವಸಾಹತು ಪ್ರದೇಶದ ಜಾಗ|RPT

ರಿಪ್ಪನ್‌ಪೇಟೆ : ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನಾಥವಾಗಿರುವ ಕೈಗಾರಿಕಾ ವಸಾಹತು ಪ್ರದೇಶದ ಜಾಗ ರಿಪ್ಪನ್‌ಪೇಟೆ : 2013 ರಲ್ಲಿ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದ ಮಾಜಿ ಸಚಿವ ಕಾಗೋಡು ತಮ್ಮಪ್ಪನವರ ಕನಸಿನ ಹಲವು ಅಭಿವೃದ್ದಿ ಕಾರ್ಯಕ್ರಮಗಳಲ್ಲಿ ಒಂದಾಗಿದ್ದ ಸ್ವಾವಲಂಭಿ ಉದ್ಯೋಗಕ್ಕೆ ಉತ್ತೇಜನ ನೀಡುವ ಮಹಾತ್ವಾಕಾಂಕ್ಷಿ ಯೋಜನೆಯಡಿ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೆಹಳ್ಳಿ ಹೋಬಳಿಯ ಕೆರೆಹಳ್ಳಿ ಗ್ರಾಮದ ಗ್ರಾಮ ಠಾಣಾದ 4 ಎಕರೆ ಜಾಗವನ್ನು ಮಂಜೂರು ಮಾಡಿಸುವ ಮೂಲಕ “ಕೈಗಾರಿಕಾ ವಸಾಹತು’’ಸ್ವಂತ…

Read More

ಗೋಮಾಂಸ ಮಾರುತಿದ್ದ ಯುವಕನ ಮೇಲೆ ಬಜರಂಗದಳ ದಾಳಿ – ಹಲ್ಲೆ : ರಾಜಕೀಯ ಬಣ್ಣ ಪಡೆದುಕೊಂಡ ಪ್ರಕರಣ|assault

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಕಂಚಿ ಬಾಗಿಲಿನಲ್ಲಿ ವ್ಯಕ್ತಿಯೊಬ್ಬ ದನದ ಮಾಂಸವನ್ನು ಮಾರಾಟ ಮಾಡಲು ಬೈಕಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ಬಜರಂಗ ದಳದ ಯುವಕರು ಆತನಿಗೆ ಅಡ್ಡಗಟ್ಟಿ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಭದ್ರಾವತಿಯ ಅನ್ವರ್ ಕಾಲೋನಿಯ ಮೂಮಿನ್ ಮೊಹಲ್ಲಾ ವಾಸಿ ಅಬ್ದುಲ್ ರೆಹಮಾನ್ ಬಿನ್ ಮೊಹಮ್ಮದ್ (30) ದನದ ಮಾಂಸದ ವ್ಯಾಪಾರ ಮಾಡುವ ಯುವಕ. ಈತ ಶುಕ್ರವಾರ ಬೆಳಗ್ಗೆ 10 ರಿಂದ 12 ಕೆಜಿಯಷ್ಟು ದನದ ಮಾಂಸದ ಪ್ಯಾಕೆಟ್‌ಗಳನ್ನು ಮಾಡಿಕೊಂಡು ಮನೆ ಮನೆಗೆ ಕೊಡಲು ತನ್ನ ಬೈಕಿನಲ್ಲಿ…

Read More

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ – ಸಹೋದರರಿಬ್ಬರು ಸ್ಥಳದಲ್ಲಿಯೇ ಸಾವು|accident

ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಬಳಿ ನಡೆದಿದೆ. ಸಾಗರದ ರಾಮನಗರದ ವೆಲ್ಡಿಂಗ್ ಕೆಲಸಗಾರ ಸುಹೇಲ್ (27),ಸಯ್ಯದ್ ಆಫ್ರಿದ್(ಪಿಂಟು),(21) ಮೃತಪಟ್ಟ ದುರ್ಧೈವಿಗಳಾಗಿದ್ದಾರೆ. ಮದುವೆ ಕಾರ್ಯಕ್ರಮಕ್ಕೆಂದು ಉಳವಿ ಗ್ರಾಮಕ್ಕೆ ಹೋಗುತ್ತಿದ್ದಾಗ ಮಾರುತಿ ವ್ಯಾಗನಾರ್ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಇಬ್ಬರು ಸಹೋದರರ ಮೃತದೇಹವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

Read More