Headlines

ಮಿದುಳು ನಿಷ್ಕ್ರಿಯಗೊಂಡು ಏಳು ವರ್ಷದ ಬಾಲಕ ಸಾವು : ನೇತ್ರದಾನ ಮಾಡಿ ಉದಾರತೆ ಮೆರೆದ ಪೋಷಕರು|Eyedonate

ರಿಪ್ಪನ್ ಪೇಟೆ : ಏಳು ವರ್ಷದ ಮಗುವಿನ ಮೆದುಳಿನಲ್ಲಿ ರಕ್ತಸ್ತ್ರಾವ ಉಂಟಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿತ್ತು. ಮಗನನ್ನು ಬದುಕಿಸುವುದಕ್ಕೆ ಪೋಷಕರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ ಮೆದುಳು ನಿಷ್ಕ್ರೀಯಗೊಂಡ ಬಳಿಕ ಬಾಲಕ ಸಾವಿನ ಮನೆಯ ಅಂಚು ತಲುಪಿಯಾಗಿತ್ತು. ಎತ್ತಿ ಮುದ್ದಾಡಿ ಸಾಕಿ ಸಲುಹಿದ ಪುಟ್ಟ ಮಗನ ಸಾವಿನ ನೋವಿನ ನಡುವೆಯೂ ಪೋಷಕರು ಆತನ ಅಂಗಾಂಗ ದಾನ ಮಾಡುವ ನಿರ್ಧಾರ ಮಾಡಿದ್ದಾರೆ. ಈ ಮೂಲಕ ಮಗನ ಸಾವಿನ ನೋವಿನಲ್ಲಿಯೂ ಸಾರ್ಥಕತೆಯನ್ನು ಮೆರೆದಿದ್ದಾರೆ. ಹೌದು…

Read More

ರಿಪ್ಪನ್ ಪೇಟೆಯ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ಸಂಘದ ವತಿಯಿಂದ ಕೊರೊನಾ ಸೋಂಕು ನಿವಾರಣೆಗಾಗಿ ಶ್ರೀ ಸತ್ಯನಾರಾಯಣ ಪೂಜೆ.

ರಿಪ್ಪನ್ ಪೇಟೆ: ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ಸೋಂಕು ನಿವಾರಣೆಯಾಗಿ ದೇಶದ ಜನತೆ ಉತ್ತಮ ಆರೋಗ್ಯವನ್ನು ಹೊಂದಲಿ ಎಂದು ಪಟ್ಟಣದ ಕಾಲಭೈರವೇಶ್ವರ  ಮಹಿಳಾ ಒಕ್ಕಲಿಗರ ಸಂಘದ ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು  ಸರಳವಾಗಿ ಆಚರಿಸಲಾಯಿತು.  ಈ ಸಂದರ್ಭದಲ್ಲಿ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗ ಸಂಘದ ಅಧ್ಯಕ್ಷ ಅಧ್ಯಕ್ಷೆ ವಾಣಿ ಗೋವಿಂದಪ್ಪ ಗೌಡ ಮಾಧ್ಯಮದವರೊಂದಿಗೆ ಮಾತನಾಡಿ ಕೋವಿಡ್ 19 ರ ಕಾರಣದಿಂದ ದೇಶದಲ್ಲಿ ಕೋಟ್ಯಂತರ ಜನರು ಸೋಂಕಿನಿಂದ ಬಳಲುವಂತಾ ಯಿತು. ಹಾಗೆಯೇ ಲಕ್ಷಾಂತರ ಜನರು ಮರಣವನ್ನು ಹೊಂದಿದರು….

Read More

ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ – ತಹಶೀಲ್ದಾರ್ ಕಛೇರಿ ಮುಂದೆಯೇ ಧರಣಿ ಕುಳಿತ ಶಾಸಕ ಆರಗ ಜ್ಞಾನೇಂದ್ರ | Thirthahalli

ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ – ತಹಶೀಲ್ದಾರ್ ಕಛೇರಿ ಮುಂದೆಯೇ ಧರಣಿ ಕುಳಿತ ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಕಳೆದ ಆರು ತಿಂಗಳಿಂದ ಸರಿಯಾಗಿ ಜಾತಿ ಪ್ರಮಾಣ ಪತ್ರವನ್ನು ಕೊಡದೇ ಅಲೆದಾಡಿಸುತ್ತಿದ್ದ ಅಧಿಕಾರಿಗಳಿಗಾಗಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಅರಗ ಜ್ಞಾನೇಂದ್ರ ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿ ಬಾಗಿಲಲ್ಲಿ ಕುಳಿತು ಪ್ರತಿಭಟನೆ ಮಾಡಿದ್ದಾರೆ. ಈ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ತೀರ್ಥಹಳ್ಳಿ ತಾಲೂಕು ವ್ಯಾಪ್ತಿಯ ಸಾರ್ವಜನಿಕರು ಜಾತಿ ಪ್ರಮಾಣ…

Read More

ಈಡೇರಿದ ತೀರ್ಥಹಳ್ಳಿ ಜನತೆಯ ಬಹುದಿನಗಳ ಕನಸು :ಸಚಿವರಾಗಿ ಆರಗ ಜ್ಞಾನೇಂದ್ರ ಇಂದು ಪ್ರಮಾಣ ವಚನ ಸ್ವೀಕಾರ

  ತೀರ್ಥಹಳ್ಳಿ: ಶಾಸಕ ಆರಗ ಜ್ಞಾನೇಂದ್ರರಿಗೆ ಸಿ.ಎಂ ಬಸವರಾಜ್ ಬೊಮ್ಮಾಯಿ ಅವರ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನ ದೊರೆತಿದ್ದು ಇಂದು ಮಧ್ಯಾಹ್ನ 2.15 ಕ್ಕೆ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವಿಷಯವನ್ನು ಮಾಧ್ಯಮದವರೊಂದಿಗೆ ಹಂಚಿಕೊಳ್ಳುವಾಗ ಜ್ಞಾನೇಂದ್ರ ರವರು ತುಂಬಾ ಭಾವುಕರಾಗಿದ್ದರು.ಸಚಿವ ಸ್ಥಾನಕ್ಕಾಗಿ ಯಾವುದೇ ಲಾಭಿ ಮಾಡದ ಜನನಾಯಕನಿಗೆ ಸಚಿವ ಸ್ಥಾನ ಹುಡುಕಿಕೊಂಡು ಬಂದಿದೆ. ಇದೇ ಮೊದಲ ಬಾರಿಗೆ ಸಚಿವರಾಗಿ ಅರಗ ಜ್ಞಾನೇಂದ್ರರವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿಯ ಹಿರಿಯ ನಾಯಕರಾಗಿ 4 ಬಾರಿ…

Read More

ಚಂದ್ರಗುತ್ತಿ: ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಮತ್ತು ಪೌಷ್ಟಿಕ ಆಹಾರ ಸಪ್ತಾಹ

ಚಂದ್ರಗುತ್ತಿ:  ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಮತ್ತು ಪೌಷ್ಟಿಕ ಆಹಾರ ಸಪ್ತಾಹವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ ಪಿ ರತ್ನಾಕರ್ ಉದ್ಘಾಟನೆ ಮಾಡಿದರು. ಪೌಷ್ಟಿಕ ಆಹಾರದ ಬಳಕೆ ಹಾಗೂ ಉಪಯೋಗದ ಬಗ್ಗೆ ಮಾತನಾಡಿದ ಚಂದ್ರಗುತ್ತಿ ಸರ್ಕಾರಿ ಆಸ್ಪತ್ರೆಯ ನರ್ಸ್  ಮಲ್ಲಮ್ಮ ನುಗ್ಗೆ ಸೊಪ್ಪು ಪೇರಳೆ ಹಣ್ಣು ಕರಿಬೇವಿನ ಸೊಪ್ಪು ಲಿಂಬೆ ಹಾಗೂ ಏಕದಳ ದಾನ್ಯ ದ್ವಿದಳ ದಾನ್ಯ ಹಾಗೂ ಅಯೋಡಿನ್ ಯುಕ್ತ ಉಪ್ಪನ್ನೇ ಬಳಸಿ ಎಂದು  ಇವುಗಳ ಮಹತ್ವ ತಿಳಿಸಿದರು ನಂತರ ಮಾತನಾಡಿದ ಶಿಶು ಅಭಿವೃದ್ಧಿ ಅಧಿಕಾರಿ…

Read More

ಅಮೃತ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ಅವಿರೋಧವಾಗಿ ಆಯ್ಕೆ

ರಿಪ್ಪನ್‌ಪೇಟೆ: ಅಮೃತ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ಮಂಜುಳಾ ರಾಜು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಮಂಜುಳಾ ರಾಘವೇಂದ್ರ ಆಚಾರ್ ಆಯ್ಕೆಯಾಗಿದ್ದಾರೆ. 11 ಜನ ಸದಸ್ಯರಿರುವ ಗ್ರಾಮ ಪಂಚಾಯತಿ 2 ಕಾಂಗ್ರೆಸ್ ಸದಸ್ಯರಿದ್ದು 9 ಸ್ಥಾನ ಬಿಜೆಪಿ ಪಾಲಾಗಿತ್ತು. ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರ ನೇತೃತ್ವದಲ್ಲಿ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ರಿಪ್ಪನ್‌ಪೇಟೆ- ಹುಂಚಾ ಬಿಜೆಪಿ ಮಹಾಶಕ್ತಿ…

Read More

ಜೋಗ ಜಲಪಾತ, ಹುಲಿ ಸಿಂಹಧಾಮಕ್ಕೆ ರಾಜ್ಯಪಾಲರ ಭೇಟಿ :: ಅಧಿಕಾರಿಗಳ ಜೊತೆ ಸಫಾರಿ, ಫೋಟೊ ಸೆಷನ್

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇವತ್ತು ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಕಣ್ತುಂಬಿಕೊಂಡರು. ಎರಡು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿರುವ ರಾಜ್ಯಪಾಲರು ಇವತ್ತು ಬೆಳಗ್ಗೆ ಜಲಪಾತದಲ್ಲಿ ನೀರು ಧುಮ್ಮಿಕ್ಕುವುದನ್ನು ಕಂಡು ಸಂತಸಪಟ್ಟರು. ಗುರುವಾರ ಬೆಳಗ್ಗೆ ಜೋಗದ ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳನ್ನು ವೀಕ್ಷಿಸಿದರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಜೋಗ ಜಲಪಾತ, ಶರಾವತಿ ನದಿ, ಲಿಂಗನಮಕ್ಕಿ ಜಲಾಶಯದ ಕುರಿತು ಮಾಹಿತಿ ಪಡೆದರು. ಅಲ್ಲದೆ ಲಿಂಗನಮಕ್ಕಿ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣದ ಕುರಿತು ತಿಳಿದುಕೊಂಡರು. ರಾಜ್ಯಪಾಲ…

Read More

Ripponpete | ಜುಮ್ಮಾ ಮಸೀದಿ ಮುಂಭಾಗ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ರದ್ದು – ಶಾಸಕರಿಗೆ ಅಭಿನಂದನೆ

Ripponpete | ಜುಮ್ಮಾ ಮಸೀದಿ ಮುಂಭಾಗ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ರದ್ದು – ಶಾಸಕರಿಗೆ ಅಭಿನಂದನೆ ರಿಪ್ಪನ್‌ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಕಟ್ಟಡದಲ್ಲಿ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ಅಂಡ್ ರೆಸ್ಟೋರೆಂಟ್ ಗೆ ವ್ಯಾಪಕ ವಿರೋದ ವ್ಯಕ್ತವಾದ ಹಿನ್ನೆಲೆಯಲ್ಲಿ ಕಟ್ಟಡದ ಮಾಲೀಕ ಬಾಡಿಗೆ ಕರಾರನ್ನು ರದ್ದು ಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಜುಮ್ಮಾ ಮಸೀದಿ ಸಮಿತಿ ವತಿಯಿಂದ ಮಸೀದಿಯ ಮುಂಭಾಗ ಬಾರ್ ತೆರೆಯದಂತೆ ಅವಿರತವಾಗಿ ಶ್ರಮಿಸಿ…

Read More

ಕ್ರಿಕೆಟ್ ಜಗಳಕ್ಕೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಬಲಿ; ಏಳು ಮಂದಿ ಸಹಪಾಠಿಗಳು ಪೊಲೀಸ್ ವಶಕ್ಕೆ | ಪ್ರಕರಣದ ಬಗ್ಗೆ ಎಸ್ ಪಿ ಹೇಳಿದ್ದೇನು!?

A tragic incident in Shivamogga where a 15-year-old SSLC student was allegedly killed by his classmates following a minor dispute over a cricket game. Police have detained seven juvenile suspects, and the Karnataka government has announced ₹15 lakh compensation to the victim’s family. ಕ್ರಿಕೆಟ್ ಜಗಳಕ್ಕೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಬಲಿ; ಏಳು ಮಂದಿ ಸಹಪಾಠಿಗಳು ಪೊಲೀಸ್ ವಶಕ್ಕೆ | ಪ್ರಕರಣದ…

Read More

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್ | Election

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್  ರಿಪ್ಪನ್‌ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕೆ ಎಸ್ ಈಶ್ವರಪ್ಪ ಬಂಡಾಯವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರೆ ಅವರ ಮನೆಯ ಮುಂದೆ ಧರಣಿ ನಡೆಸಲು ಚಿಂತನೆ ನಡೆಸಿದ್ದೇವೆ ಎಂದು ಮಾಜಿ ಶಾಸಕ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ…

Read More