Headlines

ಪ್ರಜಾಪ್ರಭುತ್ವ ದಿನಾಚರಣೆ – ಬೃಹತ್ ಮಾನವ ಸರಪಳಿ ರಚನೆ ಯಶಸ್ವಿ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬಾರಂದೂರಿನಿಂದ ಶಿವಮೊಗ್ಗ ತಾಲ್ಲೂಕಿನ ಗಡಿ ಗ್ರಾಮ ಮಡಿಕೆಚಿಲೂರುವರೆಗೆ ಮಾನವ ಸರಪಳಿ ರಚನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಈ ಬೃಹತ್ ಮಾನವ ಸರಪಳಿ ನಿರ್ಮಾಣದಲ್ಲಿ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸ್ವಸಹಾಯ ಗುಂಪುಗಳ ಮಹಿಳಾ ಸದಸ್ಯರು, ನೌಕರರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿದರು.ಜಿಲ್ಲಾಧಿಕಾರಿ ಗಳ ಕಚೇರಿ ಅವರಣದಲ್ಲಿ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು…

Read More

ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್

ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್ ರಿಪ್ಪನ್ ಪೇಟೆ : ಮಕ್ಕಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ನೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವಂತಾಗಬೇಕು. ಕ್ರೀಡೆ ಸಹೋದರತ್ವವನ್ನು ಬೆಳಸುತ್ತದೆ. ದ್ವೇಷ ಅಸೂಯೆಯನ್ನು ದೂರ ಮಾಡುವ ಮೂಲಕ ಸಾಮರಸ್ಯವನ್ನು ಬೆಳಸುವಲ್ಲಿ ಕ್ರೀಡೆ ಉತ್ತಮ ವೇದಿಕೆಯಾಗಿದೆ ಎಂದು ತಾಲ್ಲೂಕು ಪಂಚಾಯಿತಿಯ ಪಿ.ಎಂ.ಘೋಷಣ್ ಸಹಾಯಕ ನಿರ್ದೇಶಕ ಜಿ.ಶೇಷಾಚಲ ನಾಯಕ್ ತಿಳಿಸಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ…

Read More

HOSANAGARA | ನಗರದಲ್ಲಿ ಮನೆ ಕಳ್ಳತನ ಪ್ರಕರಣ – 48 ಗಂಟೆಗಳಲ್ಲಿ ಆರೋಪಿಗಳ ಪತ್ತೆ, 4 ಲಕ್ಷ ಮೌಲ್ಯದ ನಗದು ಚಿನ್ನಾಭರಣ ವಶಕ್ಕೆ!

ನಗರದಲ್ಲಿ ಮನೆ ಕಳ್ಳತನ ಪ್ರಕರಣ – 48 ಗಂಟೆಗಳಲ್ಲಿ ಆರೋಪಿಗಳ ಪತ್ತೆ, 4 ಲಕ್ಷ ಮೌಲ್ಯದ ಚಿನ್ನ ವಶ! ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಬಳೆ ಹಾಗೂ ಮಾಸ್ತಿಕಟ್ಟೆ ಪ್ರದೇಶದಲ್ಲಿ ಆಗಸ್ಟ್ 21ರಂದು ಸಂಭವಿಸಿದ ಕಳ್ಳತನ ಪ್ರಕರಣವನ್ನು ಪಿಎಸೈ ಶಿವಾನಂದ ಕೆ ನೇತ್ರತ್ವದ ಪೊಲೀಸರು ಕೇವಲ 48 ಗಂಟೆಗಳಲ್ಲಿ ಪ್ರಕರಣ ಭೇದಿಸಿ, ಇಬ್ಬರು ಅಂತರ ಜಿಲ್ಲೆ ಆರೋಪಿಗಳನ್ನು ದಸ್ತಗಿರಿ ಮಾಡಿದೆ. ನಗರ ಹೋಬಳಿಯ ಕಬಳೆ ಗ್ರಾಮದ ರಿಚರ್ಡ್ ಡಿ ಸೋಜಾ ಹಾಗೂ ಮಾಸ್ತಿಕಟ್ಟೆ ಗ್ರಾಮದ…

Read More

ಕೊಡಚಾದ್ರಿ ಪ್ರವಾಸ ಈಗ ಅಪಾಯಕಾರಿ , ಜೀವಕ್ಕಿಲ್ಲ ಭದ್ರತೆ! – ಜೀಪ್ ಮಾಫಿಯಾದ ಅರಾಜಕತೆ ವಿರುದ್ಧ ಪ್ರವಾಸಿಗರ ಆಕ್ರೋಶ!

ಕೊಡಚಾದ್ರಿ ಪ್ರವಾಸ ಈಗ ಅಪಾಯಕಾರಿ , ಜೀವಕ್ಕಿಲ್ಲ ಭದ್ರತೆ – ಜೀಪ್ ಮಾಫಿಯಾದ ಅರಾಜಕತೆ ವಿರುದ್ಧ ಪ್ರವಾಸಿಗರ ಆಕ್ರೋಶ! Serious allegations emerge from Kodachadri hill as tourists face overpricing, unsafe jeep rides, and lack of regulation. Concerns rise over safety, illegal practices, and inaction by authorities. ಶಿವಮೊಗ್ಗ ಜಿಲ್ಲೆ ಹಾಗೂ ಪಶ್ಚಿಮ ಘಟ್ಟದ ಪ್ರಮುಖ ಧಾರ್ಮಿಕ-ಪ್ರವಾಸಿ ತಾಣವಾದ ಕೊಡಚಾದ್ರಿ ಪರ್ವತ ಪ್ರದೇಶದಲ್ಲಿ ಪ್ರವಾಸಿಗರು ಹಾಗೂ ಭಕ್ತರು…

Read More

Shivamogga | ಮೂವರು ಯುವಕರನ್ನು ಅಡ್ಡಗಟ್ಟಿ ದರೋಡೆಗೈದ ಖದೀಮರು

ಮೂವರು ಯುವಕರನ್ನು ಅಡ್ಡಗಟ್ಟಿ ದರೋಡೆಗೈದ ಖದೀಮರು ಶಿವಮೊಗ್ಗ ನಗರದ ಶೇಷಾದ್ರಿಪುರಂ  ರೈಲ್ವೆ ಓವರ್ ಬ್ರಿಡ್ಜ್ ಕೆಳಗೆ ಬೈಕ್ ನಲ್ಲಿ ಬಂದ ಮೂವರು ಯುವಕರಿಂದ ಮೊಬೈಲ್,ನಗದು ಹಣ ಹಾಗೂ ದಾಖಲಾತಿಗಳನ್ನ ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ. ಜಯನಗರ ರಾಮಮಂದಿರ ನಿವಾಸಿ ವಿನಿತ್ ರಾಮ್ಜಿಯಾ ಎಂಬುವವರು ಫೆ.28 ರಂದು ರಾತ್ರಿ ರೈಲಿಗೆ ಹೋಗಲು  ಸ್ನೇಹಿತರನ್ನ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಬಿಡಲು ವಿನೀತ್ ಬಂದಿದ್ದರು. ರೈಲು ಬರಲು ಸಮಯವಿದ್ದಿದ್ದರಿಂದ ಗೂಡ್ ಶೆಡ್ ಬಳಿ ವಿನೀತ್ ಸ್ನೇಹಿತರಾದ ಮಾರುತಿ ಮತ್ತು‌ ರಮೆಶ್ ಎಂಬುವರ…

Read More

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ

ಬೆಂಗಳೂರು: ಇಂದು ಇಲ್ಲಿ ನಗರದ ಕ್ಯಾಪಿಟಲ್ ಹೊಟೇಲ್ ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ರವರನ್ನು ಆಯ್ಕೆ ಮಾಡಲಾಗಿದೆ.   ಉತ್ತರ ಕರ್ನಾಟಕ ಮೂಲದ ಲಿಂಗಾಯತ ಸಮುದಾಯಕ್ಕೆ ಸೇರಿದ ಬೊಮ್ಮಾಯಿಯವರ ಆಯ್ಕೆಯಿಂದ ಎಲ್ಲಾ ಲೆಕ್ಕಾಚಾರ ತಲೆಕೆಳಗಾಗಿದೆ.ನಿರಾಣಿ,ಬೆಲ್ಲದ್,ಸಂತೋಷ್ ಹಾಗೂ ಜೋಶಿ ಯವರ ಹೆಸರು ಕೇಳಿ ಬಂದಿತ್ತು.

Read More

ಸಾಗರದ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ನಗರದ ಬೇಕರಿ ಮಾಲೀಕ

ಸಾಗರದ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ನಗರದ ಬೇಕರಿ ಮಾಲೀಕ ಸಾಗರ : ಬಿ.ಹೆಚ್ ರಸ್ತೆಯ ಖಾಸಗಿ ಲಾಡ್ಜ್‌ನಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಶಿರಸಿ ಮೂಲದ ಜಿತೇಂದ್ರ (33) ಮೃತ ವ್ಯಕ್ತಿತಾಗಿದ್ದು ಈತನು ಹೊಸನಗರ ತಾಲ್ಲೂಕಿನ ನಗರದಲ್ಲಿ ಸ್ವಾದಿಷ್ಟ ಬೇಕರಿಯನ್ನು ನಡೆಸುತ್ತಿದ್ದನು. ಶವದ ಬಳಿ ಡೆತ್‌ನೋಟ್ ದೊರೆತ್ತಿದ್ದು, ಶವವನ್ನು ಸಾಗರದ ಸರ್ಕಾರಿ ಉಪವಿಭಾಗಿಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಕಳೆದ ಎರಡು ವರ್ಷದ ಹಿಂದೆ ವಿವಾಹವಾಗಿದ್ದ ಜಿತೇಂದ್ರ ಪತ್ನಿ,…

Read More

ರಿಪ್ಪನ್ ಪೇಟೆ ಮೆಸ್ಕಾಂ ಕಛೇರಿ ಎದುರು ಧರೆಗುರುಳಿದ ಮರ : ವಿದ್ಯುತ್ ಕಂಬ, ಟ್ರಾನ್ಸ್ ಫಾರಂ ಪುಡಿಪುಡಿ : ಪ್ರಾಣಾಪಾಯದಿಂದ ಪಾರಾದ ವಾಹನ ಚಾಲಕ

ಇಂದು ಸಂಜೆ ಸುರಿದ ಧಾರಾಕಾರ ಮಳೆ ಗಾಳಿಗೆ ಇಲ್ಲಿನ ಸಾಗರ ರಸ್ತೆಯ ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಬೃಹದಾಕಾರದ ಮರವೊಂದು  ರಸ್ತೆ ಮೇಲೆ ಬಿದ್ದು ವಿದ್ಯುತ್ ಟ್ರಾನ್ಸ್ ಫಾರಂ ವಿದ್ಯುತ್ ಕಂಬ ತುಂಡಾಗಿ ಧರೆಗೆ ಉರುಳಿದ ಘಟನೆ ನಡೆದಿದೆ. ಈ ಘಟನೆ ನಡೆಯುವ ಸಂದರ್ಭದಲ್ಲಿ ಸಾಗರ ಕಡೆಯಿಂದ ಬರುತ್ತಿದ್ದ ಸರಕು ಸಾಗಾಣಿಕೆ ವಾಹನದ ಮೇಲೆ ವಿದ್ಯುತ್ ತಂತಿ ಬಿದ್ದಿದ್ದು , ಗಾಳಿ ಮಳೆಗೆ ಹೆದರಿ ವಾಹನ ನಿಲ್ಲಿಸಿ ಇಳಿದು ಹೊರ ಹೋದಾಗ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ…

Read More

ರಿಪ್ಪನ್‌ಪೇಟೆ : ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡ ಧ್ವಂಸ – ಪ್ರಕರಣ ದಾಖಲು|Crime

ರಿಪ್ಪನ್‌ಪೇಟೆ : ಇಲ್ಲಿನ ಮೂಗುಡ್ತಿ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಂಬಂದಿಸಿದ ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಸಂಬಂದಪಟ್ಟವರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಗುಡ್ತಿ ಗ್ರಾಮದ ಪವನ್ ಕುಮಾರ್ ಎಂಬುವವರು ತಮ್ಮ ಜಾಗದಲ್ಲಿ ಮನೆ ದೇವರಾದ ಪಂಜುರ್ಲಿ ಹಾಯ್ ಗುಳಿ ಮತ್ತು ಮರ್ಲುಚಿಕ್ಕು ದೇವರುಗಳನ್ನು ಹಲವಾರು ವರ್ಷಗಳಿಂದ ಆರಾಧನೆ ಮಾಡಿಕೊಂಡು ಬರುತ್ತಿದ್ದು ಇತ್ತೀಚಿಗೆ ದೇವರ ಅಣತಿಯಂತೆ ನೂತನ ಕಟ್ಟಡವನ್ನು ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಲಾಗುತಿತ್ತು.ಇನ್ನೂ ಹದಿನೈದು…

Read More

ಶಿವಮೊಗ್ಗದಲ್ಲಿ ಯುವಕನೊಬ್ಬನ ಕಗ್ಗೊಲೆ – ಆರೋಪಿಯ ಬಂಧನ|crime-news

ಶಿವಮೊಗ್ಗ: ತನ್ನ ಸೊಸೆಗೆ ಕಿರುಕುಳ ನೀಡಿದ ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. ಸ್ನೇಹಿತನೇ ಕೊಲೆ ಮಾಡಿದ್ದಾನೆ. ಆಸೀಫ್ (25) ಕೊಲೆಯಾಗಿರುವ ಯುವಕ. ಆತನ ಸ್ನೇಹಿತ ಜಬೀ (25) ಎಂಬಾತ ಚಾಕುವಿನಿಂದ ಇರಿದು ಆಸೀಫ್‌ನ ಹತ್ಯೆ ಮಾಡಿದ್ದಾನೆ. ಶಿವಮೊಗ್ಗದ ಇಲಿಯಾಜ್ ನಗರದಲ್ಲಿ ಘಟನೆ ನಡೆದಿದೆ. ಮಂಡ್ಲಿಯ ನಿವಾಸಿ ಆಸೀಫ್​ ಎಂಬಾತ ಕೊಲೆಯಾದ ಯುವಕ!. 25 ವರ್ಷದ ಆಸೀಪ್​ ಜಬಿ ಎಂಬಾತನ ಸಹೋದರಿಯ ಮಗಳಿಗೆ ತೊಂದರೆ ಕೊಡುತ್ತಿದ್ದ ಎಂಬುದು ಪ್ರಾಥಮಿಕವಾಗಿ ತಿಳಿದಬಂದಿರುವ ಮಾಹಿತಿ. ಇದೇ ಕಾರಣಕ್ಕೆ ಸಿಟ್ಟಾದ ಜಭಿ,…

Read More