Headlines

ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಜ್ಜೆಗೆಹಳ್ಳಿಯಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಮಜ್ಜಿಗೆಹಳ್ಳಿ ಗ್ರಾಮದ ಸಮೀಪದ ಚಾನೆಲ್‌ ಬಳಿ, ಸುಮಾರು 35 ರಿಂದ 45 ವರ್ಷದೊಳಗಿನ ಮಹಿಳೆಯೊಬ್ಬರ ನಗ್ನ ಸ್ಥಿತಿಯ ಶವ ಪತ್ತೆಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಮೃತದೇಹವು ಈಗಾಗಲೇ ಕೊಳೆತ ಸ್ಥಿತಿಯಲ್ಲಿ ಇರುವುದರಿಂದ ಗುರುತಿನ ಪತ್ತೆ ಇನ್ನೂ ಸಾಧ್ಯವಾಗಿಲ್ಲ. ಚಾನೆಲ್‌ನಿಂದ ಹೆಣ ತೇಲಿ ಬಂದಿರಬಹುದೆಂಬ ಶಂಕೆಯಿದ್ದು, ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ. ಅನುಮಾನಾಸ್ಪದ ಸಾವಿನ ಪ್ರಕರಣವೆಂದು ಭದ್ರಾವತಿ ಗ್ರಾಮಾಂತರ ಪೊಲೀಸ್…

Read More

ಹೆದ್ದಾರಿಪುರದಲ್ಲಿ ಪ್ರೋ ಲೀಗ್ ಕಬ್ಬಡ್ಡಿ ಪಂದ್ಯಾವಳಿ: ಗ್ರಾಮೀಣ –ಪ್ರತಿಭೆಯ ಕಾಳಜಿಗೆ ಪ್ರೋತ್ಸಾಹಿಸಿದ ಗ್ರಾಮಸ್ಥರು….!

ಈ ಶತಮಾನದ ಕ್ರೀಡೆ ಯಾವುದು ಎಂದರೆ  ಗಲ್ಲಿಗಲ್ಲಿಗಳಲ್ಲಿ  ಗೋಲಿ ಆಡುವ ಚಿಣ್ಣರಾದಿಯಾಗಿ  ಕ್ರಿಕೆಟ್‌ ಎನ್ನುವ ಮಟ್ಟಿಗೆ ತನ್ನ ಕದಂಬ ಬಾಹು ಚಾಚಿದೆ ಕ್ರಿಕೆಟ್. ಆದರೆ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮದಲ್ಲಿ ಕಬ್ಬಡ್ಡಿಯೇ ತನ್ನ ಜೀವಾಳ ಎನ್ನುವ ಮಟ್ಟಿಗೆ ಬೆಳೆದ ಪ್ರತಿಭಾವಂತ ಆಟಗಾರರಿದ್ದಾರೆ. ಇದೇ ಗ್ರಾಮದ ಪ್ರತಿಭಾವಂತ ಕಬ್ಬಡಿ ಆಟಗಾರ ಸುಷ್ಮಂತ್‌ಗೆ ಕಬಡ್ಡಿ ಆಟವೇ ಆತನ ಎಡಗಾಲಿಗೆ ಮುಳುವಾಗಿ ಕಳೆದ ಎರಡು ವರ್ಷದಿಂದ ತನ್ನ ಒಂದು ಕಾಲನ್ನು ಕಳೆದುಕೊಂಡು ಮನೆಯಲ್ಲಿಯೇ ಕುಳಿತಿರುವ ಆತನ ತಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಎಲೆ…

Read More

ಇಬ್ಬರೂ ಒಟ್ಟಾದ್ರೆ ಏನ್ ಭೂಕಂಪ ಆಗುತ್ತಾ ; ಕಿಮ್ಮನೆ-ಆರ್‌ಎಂಎಂಗೆ ತಿವಿದ ಆರಗ ಜ್ಞಾನೇಂದ್ರ|thirthahalli

ರಿಪ್ಪನ್‌ಪೇಟೆ : ಟಿಕೆಟ್‌ಗಾಗಿ ಅಥವಾ ಮಂತ್ರಿ ಸ್ಥಾನಕ್ಕಾಗಿ ದೆಹಲಿಗೆ ಹೋಗುವವನು ನಾನಲ್ಲ. ಇಂತಹ ಸಂದರ್ಭ ಬರುವುದಿಲ್ಲ. ಸಂದರ್ಭ ಬಂದಲ್ಲಿ ಚುನಾವಣಾ ರಾಜಕೀಯದಿಂದಲೇ ನಿವೃತ್ತಿಯಾಗುತ್ತೇನೆ. ಯಾವುದೇ ಕಾರಣ ಕೊಡದೆ ಇನ್ನೊಬ್ಬರಿಗಾಗಿ ಕೆಲಸ ಮಾಡುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಕೋಡೂರಿನಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 10 ಬಾರಿ ಒಂದೇ ಪಕ್ಷ ಒಂದೇ ಚಿಹ್ನೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. 4 ಬಾರಿ ಶಾಸಕನಾಗಿದ್ದೇನೆ. ಇದು ನನ್ನ ಕೊನೆಯ ಚುನಾವಣೆ. ನಾನು ತತ್ವಕ್ಕಾಗಿ, ಸಿದ್ದಂತಕ್ಕಾಗಿ ರಾಜಕಾರಣ ಮಾಡುವವನು. ಈ…

Read More

ಅತಿವೃಷ್ಟಿ ಮಳೆಗೆ ಸಾಗರ ತಾಲ್ಲೂಕಿನಲ್ಲಿ 50 ಕೋಟಿಗೂ ಅಧಿಕ ನಷ್ಟ: ಮಾಜಿ ಜಿಪಂ ಸದಸ್ಯೆ ಅನಿತಾ ಕುಮಾರಿ

ಆನಂದಪುರ: ತಾಲ್ಲೂಕಿನಲ್ಲಿ ಕಳೆದ ವಾರದಿಂದ ಸುರಿದ ಮಳೆಗೆ ಇದುವರೆಗೂ 50 ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಅನಿತಾಕುಮಾರಿ ಹೇಳಿದ್ದಾರೆ. ಆನಂದಪುರ ಸಮೀಪದ ಹೊಸೂರು ಗ್ರಾಮಪಂಚಾಯತಿ  ವ್ಯಾಪ್ತಿಯಲ್ಲಿ ಅತಿವೃಷ್ಟಿ ವೀಕ್ಷಣೆಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿ ಸಾಗರ ತಾಲ್ಲೂಕಿನಲ್ಲಿ ಇದುವರೆಗೂ ಸುರಿದ ಮಳೆಗೆ ಐವತ್ತು ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ    ಭತ್ತ ನಾಟಿ ಮಾಡಿ 500 ಹೆಕ್ಟೇರ್ ಬೆಳೆ ನಾಶವಾಗಿದೆ    ಶುಂಠಿ ಹಾಗೂ ಜೋಳ ಕೊಳೆಯುವ ಹಂತಕ್ಕೆ ಬಂದಿದೆ ಇದರಿಂದ…

Read More

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ದಿನ ಎರಡು ಮನೆಯಲ್ಲಿ ಸರಣಿ ಕಳ್ಳತನವಾಗಿರುವ (Theft Case) ಘಟನೆ ಜರುಗಿದೆ. ಘಟನೆ 1 ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತಳಲೆ ಸಮೀಪದ ಕಗ್ಗಲಿ  ಗ್ರಾಮದ ನ.30 ರಂದು ಅಶೋಕ್ ಎನ್ ಎಂಬುವವರ ಮನೆಗೆ ಹಾಕಿದ್ದ ಬೀಗವನ್ನು ಮುರಿದು ಬೀರುವಿನಲ್ಲಿ ಇದ್ದ 24 ಗ್ರಾಂ ಬಂಗಾರ, 15 ಸಾವಿರ ನಗದು, 85 ಗ್ರಾಂ ಬೆಳ್ಳಿ ಅನ್ನು…

Read More

ಶಿವಮೊಗ್ಗವನ್ನು ಅಂತರಾಷ್ಟೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸುತ್ತೇವೆ : ಬಿ ವೈ ರಾಘವೇಂದ್ರ

ಶಿವಮೊಗ್ಗ:  ನಗರದ ನವುಲೆ ಬಳಿ ರಸ್ತೆ ಮಧ್ಯೆ ಅಳವಡಿಸಲಾಗಿರುವ ಅಲಂಕಾರಿಕ ವಿದ್ಯುತ್ ದೀಪಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು.  ನವುಲೆ ಸಮೀಪದ ಗಣಪತಿ ದೇವಸ್ಥಾನದ ಬಳಿ ಸಂಸದ ಬಿ.ವೈ.ರಾಘವೇಂದ್ರ ಅವರು ಅಲಂಕಾರಿ ವಿದ್ಯುತ್ ದೀಪಗಳಿಗೆ ಚಾಲನೆ ನೀಡಿದರು. ಬಳಿಕ ಮಾತಿನಾಡಿದ ಅವರು ಶಿಕಾರಿಪುರ, ಶಿರಾಳಕೊಪ್ಪ, ಸೊರಬ ತಾಲೂಕಿನ ಆನವಟ್ಟಿಯಲ್ಲಿಯು ಇದೆ ಮಾದರಿಯ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧ ಪಟ್ಟಣಗಳಲ್ಲಿ 7.12 ಕೋಟಿ ರೂ. ವೆಚ್ಚದಲ್ಲಿ ಅಲಂಕಾರಿ ದೀಪಗಳನ್ನು ಅಳವಡಿಸಲಾಗುತ್ತದೆ ಎಂದರು. ರಸ್ತೆಯ ಒಂದು ಕಿ.ಮೀ…

Read More

ಹೊಸ ವರ್ಷದ ಹೊಸ್ತಿಲಿನಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ – ಯುವಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ | New Year

ಯುವಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ : ಹೊಸ ವರ್ಷದ ಸಮಯದಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ ಯುವಕರೇ….. ನಮ್ಮ ಮಲೆನಾಡಿನಲ್ಲಿ ಕಳೆದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳಿಂದ ಸಾಕಷ್ಟು ಯುವಕರು ಸಾವನ್ನಪ್ಪುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಅದರಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸಿ ಕೆಲವರು ಮೃತಪಟ್ಟರೆ ಇನ್ನು ಕೆಲವರು ಮದ್ಯಪಾನ ಮಾಡಿ ಅಪಘಾತವೆಸಗಿ ತಾವು ಬಲಿಯಾಗುವುದಲ್ಲದೆ ಅಮಾಯಕರನ್ನು ಬಲಿತೆಗೆದುಕೊಳ್ಳುತ್ತಿದ್ದಾರೆ. ಯುವಕರೇ, ನಿಧಾನವಾಗಿ ವಾಹನ ಚಾಲನೆ ಮಾಡಿದರೆ ನಿಮ್ಮ ನಿಗದಿತ ಸ್ಥಳಕ್ಕೆ ತಲುಪಲು ಸ್ವಲ್ಪ ತಡವಾಗಬಹುದು.ಆದರೆ…

Read More

ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು

ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ರಿಪ್ಪನ್‌ಪೇಟೆ : ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಗರದಲ್ಲಿ ಅ. 09 ರಿಂದ 10ರ ವರೆಗೆ ನಡೆದ ಬೆಂಗಳೂರು ವಿಭಾಗ ಮಟ್ಟದ ಕಬ್ಬಡಿ ಕ್ರೀಡಾಕೂಟದಲ್ಲಿ ಪಟ್ಟಣದ ಶಾರದಾ, ರಾಮಕೃಷ್ಣ ವಿದ್ಯಾಲಯ ವಿದ್ಯಾರ್ಥಿಗಳು ಅಮೋಘ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾರದ,ರಾಮಕೃಷ್ಣ ವಿದ್ಯಾಲಯದ 7 ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸಿದ್ದು 17 ವರ್ಷ ವಯೋಮಿತಿಯೊಳಗಿನ ಕಬಡ್ಡಿ ಪಂದ್ಯಾವಳಿಯಲ್ಲಿ ಬಾಲಕಿಯರ ತಂಡ ಪ್ರಥಮ ಸ್ಥಾನ…

Read More

ಸಾಗರದಲ್ಲಿ ಈದ್ ಮೆರವಣಿಗೆ ವೇಳೆ ಆಕ್ಷೇಪಾರ್ಹ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಹಿಂಜಾವೇ ಆಗ್ರಹ|sagara

ಈದ್ ಮೆರವಣಿಗೆ ವೇಳೆ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ ಸಾಗರ ಪಟ್ಟಣದಲ್ಲಿ ಸೋಮವಾರ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ರಚೋದನಾಕಾರಿ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಮಂಗಳವಾರ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಡಿವೈಎಸ್‌ಪಿ ಕಚೇರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಕೆ.ಎಚ್.ಸುಧೀಂದ್ರ, ಪವಿತ್ರವಾದ ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲೀಂ ಸಮುದಾಯ ಸೋಮವಾರ ಬೃಹತ್ ಮೆರವಣಿಗೆ ಹಮ್ಮಿಕೊಂಡಿತ್ತು. ಮೆರವಣಿಗೆಯಲ್ಲಿ ಹಿಂದೂ ಸಮುದಾಯದ ತೇಜೋವಧೆ ಮಾಡುವ…

Read More

ತಾಲೂಕ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಎಸ್. ನಾಗರಾಜ್ , ಅಂಬ್ರಯ್ಯಮಠ ಹಾಗೂ ಸಹಕಾರಿ ರತ್ನ ಎಂ.ಎಂ.ಪರಮೇಶ್‌ರಿಗೆ ಸನ್ಮಾನ

H.S. Nagaraj, writer Ambrayyamat and Sahakari Ratna awardee M.M. Paramesh were honored at the 20th District Kannada Sahitya Sammelana held in Shivamogga for their contributions to journalism, literature and the cooperative sector. ಹೊಸನಗರ: ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಹಕಾರಿ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಹೊಸನಗರ ತಾಲ್ಲೂಕಿನ ಮೂವರು ಗಣ್ಯರನ್ನು ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ 20ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು….

Read More