Headlines

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು.!

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರ ದುರ್ಮರಣ! ತೀರ್ಥಹಳ್ಳಿ : ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಅಗಸರಕೋಣೆ ಬಳಿ ನಡೆದಿದೆ. ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಡಿಕ್ಕಿಯಾಗಿದೆ. ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಅಪಘಾತದ ರಭಸಕ್ಕೆ…

Read More

Hombuja| ಭೂಮಿಯ ಒಡಲಿನ ಭತ್ತ “ದಿವ್ಯ ಪ್ರಸಾದ” – ಹೊಂಬುಜಾ ಶ್ರೀಗಳು

ಭೂಮಿಯ ಒಡಲಿನ ಭತ್ತ ‘ದಿವ್ಯ ಪ್ರಸಾದ’ ರಿಪ್ಪನ್‌ಪೇಟೆ:-ಭೂಮಿಯು ಸ್ವರ್ಗ ಸಮಾನವಾಗಿದ್ದು ವ್ಯವಸಾಯದ ಮೂಲಕ ಬೆಳೆಯುವಆಹಾರಧಾನ್ಯ, ತರಕಾರಿ, ಹಣ್ಣು ಹಂಪಲು, ಹೂವು, ‘ದಿವ್ಯ ಪ್ರಸಾದ’ ಎಂಬ ಭಾವನೆ ಮೂಡಬೇಕು. ಎಂದು ಹೊಂಬುಜ ಜೈನಮಠದ ಜಗದ್ಗುರು ಡಾ.ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಹೊಂಬುಜ ಜೈನಮಠದಲ್ಲಿ “ದೀಪಾವಳಿಯ ಹಬ್ಬದಲ್ಲಿ ಹೊಸತು ಬೆಳಸಿಕೊಂಡು ಬರುವ ಹಬ್ಬವೇ “ವರ್ಷದಡಕು’’ಯನ್ನು   ಇಂದು ಜೀವನಾವಶ್ಯಕ ಆರೋಗ್ಯ ಸಂರಕ್ಷಣೆ-ಪೋಷಣೆಗಾಗಿ ಬೇಸಾಯ ವೃತ್ತಿಯಾದರೂ ಕೃಷಿ ಮೂಲವೇ ಆರ್ಥಿಕ, ಆರೋಗ್ಯ, ಅಕ್ಷರ, ಆಶ್ರಯ ಪಾಲನೆಯ ಕೇಂದ್ರವಾಗಿದೆ ಶ್ರೀಕ್ಷೇತ್ರದ ಭತ್ತದ…

Read More

ಕೋಡೂರು ಸಮೀಪ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ|Accident

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಕೋಡೂರು ಸಮೀಪದ ಕೊಪ್ಪರಗುಂಡಿ ಸೇತುವೆ ಬಳಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಪ್ಪರಗುಂಡಿ ಗ್ರಾಮದ ಸೇತುವೆ ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ರಿಪ್ಪನ್‌ಪೇಟೆ ಕಡೆಯಿಂದ ಅಕ್ಕಿ ತುಂಬಿಕೊಂಡು ಹೋಗುತಿದ್ದ ಲಾರಿ ಹಾಗೂ ಹೊಸನಗರ ಕಡೆಯಿಂದ ಬರುತಿದ್ದ ಖಾಲಿ ಲಾರಿ ನಡುವೆ ಡಿಕ್ಕಿಯಾಗಿದ್ದು,ಆಟೋವೊಂದನ್ನು ಓವರ್ ಟೇಕ್ ಮಾಡುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗುತ್ತಿದೆ. ಲಾರಿ ಚಾಲಕನೊಬ್ಬನಿಗೆ ಗಾಯಗಳಾಗಿದ್ದು ಆತನನ್ನು ಹೊಸನಗರದ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಈ ಅಪಘಾತದಿಂದ…

Read More

ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ನಂದನ್ ಇನ್ನಿಲ್ಲ..!

ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ನಂದನ್ ಇನ್ನಿಲ್ಲ..! ಖ್ಯಾತ ಫೋಟೋ ಜರ್ನಲಿಸ್ಟ್ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಶಿವಮೊಗ್ಗ ನಂದನ್ (57ವರ್ಷ ) ಹೃದಯಾಘಾತದಿಂದ ನಿಧನರಾಗಿದ್ದಾರೆ. ತಡರಾತ್ರಿ 1:30ರ ಸುಮಾರಿಗೆ ನಂದನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಂದನ್ ಇಹಲೋಕ ತ್ಯಜಿಸಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿ, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇಂದು ರೈಲ್ವೆ ನಿಲ್ದಾಣ ಬಳಿ ಇರುವ ಎ.ಎ.ಕಾಲೋನಿಯಲ್ಲಿರುವ ನಿವಾಸದಲ್ಲಿ…

Read More

ಸಾಗರ : ಉಳ್ಳೂರು ಸಮೀಪದ ಕಾಡಿನಲ್ಲಿ ಡೆತ್ ನೋಟ್ ಬರೆದಿಟ್ಟು ಯುವಕ ಸಾವು|ulluru

ಸಾಗರ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಕಾಡಿಗೆ ತೆರಳಿ ನೇಣು ಬಿಗಿದುಕೊಂಡ ಘಟನೆ ಸಾಗರ ತಾಲೂಕಿನ ಉಳ್ಳೂರು ಸಮೀಪದಲ್ಲಿ ನಡೆದಿದೆ.  ಉತ್ತರ ಕನ್ನಡ ಮೂಲದ ಅಕ್ಷಯ್ (22) ಆತ್ಮಹತ್ಯೆ ಮಾಡಿಕೊಂಡವನು ಎಂದು ತಿಳಿದು ಬಂದಿದೆ. ಯುವಕ ನೇಣು ಬಿಗಿದುಕೊಂಡ ಜಾಗದಲ್ಲಿಯೇ ಬೈಕ್ ಅನಾಥವಾಗಿ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಮೂಲದ ಯುವಕ ಸಾಗರದ‌ ಉಳ್ಳೂರು ಬಳಿ ಬೈಕ್ ನಲ್ಲಿ ತೆರಳುವಾಗ ಜೋಗಿನಗದ್ದೆಯ ಬಳಿ ಕಾಡಿಗೆ ತೆರಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶವವಾಗಿ ಪತ್ತೆಯಾದ…

Read More

ಮಂಗನಕಾಯಿಲೆಗೆ ಗ್ರಾಮಪಂಚಾಯಿತಿ ಸದಸ್ಯ ಬಲಿ!!!

ಸಾಗರ :  ತಾಲ್ಲೂಕಿನ ಅರಳಗೋಡಿನಲ್ಲಿ ಮಂಗನ ಕಾಯಿಲೆಗೆ ಅಲ್ಲಿನ ಗ್ರಾಮಪಂಚಾಯ್ತಿ ಸದಸ್ಯರೊಬ್ಬರು ಸಾವನ್ನಪ್ಪಿದ್ದಾರೆ. 55 ವರ್ಷದ ರಾಮಸ್ವಾಮಿ ಕರುಮನೆ ಎಂಬುವರು ಮೃತರು. ಕಳೆದ ಎಪ್ರಿಲ್​ 24 ರಂದು ಇವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಜ್ವರ ಇನ್ನೂ ಹೆಚ್ಚಾದ ಕಾರಣ ಹೀಗಾಗಿ ಮಣಿಪಾಲದ ಕಸ್ತೂರಿಬಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮಸ್ವಾಮಿಯವರು ಇಂದು  ಮಧ್ಯಾಹ್ನ ದ  ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

Read More

ಗ್ರಾಮೀಣ ಕ್ರೀಡೆಗಳಿಂದ ಯುವಜನರ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಹರತಾಳು ಹಾಲಪ್ಪ

ಗ್ರಾಮೀಣ ಕ್ರೀಡೆಗಳಿಂದ ಯುವಜನರ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಹರತಾಳು ಹಾಲಪ್ಪ State BJP Vice President Hartalu Halappa inaugurated a floodlight volleyball tournament in Ripponpet, highlighting the importance of rural sports for the physical and mental well-being of the youth. ​ರಿಪ್ಪನ್‌ಪೇಟೆ: ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವುದರಿಂದ ಗ್ರಾಮದ ಹಿತ ಕಾಪಾಡುವ ಜೊತೆಗೆ ಯುವಜನರ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿಸಬಹುದು ಎಂದು ರಾಜ್ಯ…

Read More

ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿ !!!

ಸಾಗರ ತಾಲೂಕಿನ ಬ್ರಾಹ್ಮಣ ಮಂಚಾಲೆ ಬಳಿ ಅಪರಿಚಿತ ವ್ಯಕ್ತಿಯೋರ್ವ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ಶಿಕ್ಷಕಿಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ. ಬ್ರಾಹ್ಮಣ ಮಂಚಾಲೆ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪ್ರಭಾವತಿ ಅವರು ಬಸ್ಸಿನಿಂದ ಇಳಿದು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೋರ್ವ ಕುತ್ತಿಗೆಯಲ್ಲಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ 35 ಗ್ರಾಂ ಬಂಗಾರದ ಮಾಂಗಲ್ಯ ಸರ ಹಾಗೂ ಒಂದು ಸರ ಕಿತ್ತುಕೊಂಡು ಶಿಕ್ಷಕಿಯನ್ನು ತಳ್ಳಿ ಪರಾರಿಯಾಗಿದ್ದಾನೆ.  ಇದರಿಂದಾಗಿ ಪ್ರಭಾವತಿಯವರ ತಲೆ ಭಾಗದಲ್ಲಿ ತೀವ್ರ…

Read More

ರಿಪ್ಪನ್ ಪೇಟೆ ಯಲ್ಲಿ ಶುಕ್ರವಾರ ಡಾ. ಶಿವಕುಮಾರ ಮಹಾಸ್ವಾಮಿಗಳವರ 115ನೇ ವರ್ಷದ ಜನ್ಮದಿನಾಚರಣೆ:

ರಿಪ್ಪನ್ ಪೇಟೆ : ನಡೆದಾಡುವ ದೇವರು ತ್ರಿವಿಧ ದಾಸೋಹಿ,ಶತಾಯುಷಿ,ಕಾಯಕಯೋಗಿ ಲಿಂಗೈಕ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರು 115ನೇ ವರ್ಷದ ಜನ್ಮದಿನಾಚರಣೆಯನ್ನು  ಏಪ್ರಿಲ್ 1 ಶುಕ್ರವಾರದಂದು  ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಡಾ. ಶಿವಕುಮಾರ ಮಹಾಸ್ವಾಮಿ ಗಳವರ ಭಕ್ತ ವೃಂದದವರು ತಿಳಿಸಿದ್ದಾರೆ.  ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಚಾಲಕ ಕಗ್ಗಲಿ ಲಿಂಗಪ್ಪ ಮಾತನಾಡಿ ಶುಕ್ರವಾರದಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಸಿದ್ದಗಂಗಾ ಮಠದ ಶ್ರೀ ಶ್ರೀ ಶ್ರೀ ಡಾಕ್ಟರ್ ಶಿವಕುಮಾರ…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ. ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ!|Shrikanth

ಶಿವಮೊಗ್ಗ : ಆಯನೂರು ಮಂಜುನಾಥ್, ಮಧು ಬಂಗಾರಪ್ಪ, ಆರ್. ಎಂ. ಮಂಜುನಾಥ ಗೌಡ ಬಳಿಕ ಶಿವಮೊಗ್ಗದ ಮತ್ತೊಬ್ಬ ಜೆಡಿಎಸ್ ನಾಯಕ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಮಧು ಬಂಗಾರಪ್ಪ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ನಿಂದ ಸೊರಬದಲ್ಲಿ ಗೆದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ. ಬುಧವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಶಿವಮೊಗ್ಗ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ತುಮಕೂರು ಮಾಜಿ ಶಾಸಕ‌ ಎಸ್. ಶಫಿ ಅಹ್ಮದ್ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಪಕ್ಷ…

Read More