2023ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದನ್ನು ಯಾವ ಶಕ್ತಿಯಿಂದಲೂ ತಡೆಯಲು ಸಾಧ್ಯವಿಲ್ಲ : ಶಾರದ ಪೂರ್ಯನಾಯ್ಕ್
ಹೊಸನಗರ : 2023ರಲ್ಲಿ ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿ ಆಗುವುದನ್ನು ಯಾವ ಶಕ್ತಿಯಿಂದಲೂ ತಡೆಯಲು ಸಾಧ್ಯವಿಲ್ಲವೆಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಪೂರ್ಯ ನಾಯ್ಕ್ ಹೇಳಿದರು. ಪಟ್ಟಣದ ಗಾಯತ್ರಿ ಮಂದಿರದಲ್ಲಿ ಹೊಸನಗರ ತಾಲ್ಲೂಕು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು ಶಿವಮೊಗ್ಗ ಜಿಲ್ಲೆಯಲ್ಲಿ ಮೊಟ್ಟ ಮೊದಲು ಜೆಡಿಎಸ್ ಪಕ್ಷವು ಬೇರೂರಿ ಅತ್ಯಂತ ಕ್ರಿಯಾಶೀಲವಾಗಿ ಇದ್ದದ್ದು ಈ ಹೊಸನಗರ ತಾಲ್ಲೂಕಿನಲ್ಲಿ ಕೆಲ ರಾಜಕೀಯ ಸ್ಥಿತ್ಯಂತರಗಳಿಗೆ ಕಾರ್ಯಕರ್ತರು ಚದುರಿದ್ದು ಅವರನ್ನು…


