Headlines

ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ಪುಡಿ ಮಾಡಿದ ಕಿಡಿಗೇಡಿಗಳು

Miscreants vandalized a newly purchased Swift car by smashing its front and rear windows in Sharavathi Nagar, Shivamogga. The entire act was captured on CCTV, and a case has been registered at Doddapete Police Station. ಶಿವಮೊಗ್ಗ: ಶರಾವತಿ ನಗರದ ಹಂದಿ ಗೊಲ್ಲರ ಕ್ಯಾಂಪ್​​ನಲ್ಲಿ ತಡರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ಕಿಡಿಗೇಡಿಗಳಿಬ್ಬರು ಪುಡಿ ಪುಡಿ ಮಾಡಿ ಕಾರನ್ನು ಜಖಂಗೊಳಿಸಿದ್ದಾರೆ. ಕಿಡಿಗೇಡಿಗಳ‌ ಕೃತ್ಯ…

Read More

SSLC ಪೂರ್ವ ಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ

2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಫೆಬ್ರವರಿ 26 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭವಾಗಲಿವೆ. ಇಲ್ಲಿದೆ ವೇಳಾಪಟ್ಟಿ 26-02-2024 : ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ 27-02-2024 : ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ 28 -02-2024 : ತೃತೀಯ ಭಾಷೆ-…

Read More

SHIVAMOGGA | ಬೀಡಿ ಸಿಗುತ್ತಿಲ್ಲ ಎಂದು ಜೈಲಿನಲ್ಲಿ ಖೈದಿಗಳ ಪ್ರತಿಭಟನೆ

SHIVAMOGGA | ಬೀಡಿ ಸಿಗುತ್ತಿಲ್ಲ ಎಂದು ಜೈಲಿನಲ್ಲಿ ಖೈದಿಗಳ ಪ್ರತಿಭಟನೆ ಆರೋಪಿ ನಟ ದರ್ಶನ್‌ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ವರದಿಯಾದ ಬಳಿಕ ಇದೀಗ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕಟ್ಟುನಿಟ್ಟಿನ ಶಿಸ್ತು ಪಾಲಿಸಲಾಗುತ್ತಿದೆ. ಹೀಗಾಗಿ ಈವರೆಗೆ ಕೆಲವು ಸೌಲಭ್ಯ ಪಡೆಯುತ್ತಿದ್ದ ಕೈದಿಗಳು ಇದೀಗ ಜೈಲಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಶಿವಮೊಗ್ಗ ಕೇಂದ್ರ ಕಾರಗೃಹದಲ್ಲಿ ಜೈಲಿನಲ್ಲಿ ಕೈದಿಗಳು ಪ್ರತಿಭಟನೆ ನಡೆಸಿದ್ದಾರೆ. ಬೀಡಿ ಸಿಗುತ್ತಿಲ್ಲ ಎಂದು ಕೈದಿಗಳು ಪಟ್ಟು ಹಿಡಿದಿದ್ದಾರೆ. ಸೋಗಾನೆ ಬಳಿ ಇರುವ ಕೇಂದ್ರ ಕಾರಗೃಹದಲ್ಲಿಯೂ…

Read More

ಪದವಿ‌ ಕಾಲೇಜಿನ ಬಳಿ ತಂಬಾಕು ಮಾರಾಟ – ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ | GKB

ಪದವಿ‌ ಕಾಲೇಜಿನ ಬಳಿ ತಂಬಾಕು ಮಾರಾಟ – ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗ ಗುಟ್ಕ, ಪಾನ್, ಸಿಗರೇಟ್ ಮಾರುತ್ತಿದ್ದ ಅಂಗಡಿಗೆ ಧಿಡೀರ್ ಭೇಟಿ ಕೊಟ್ಟ ಶಾಸಕ ಗೋಪಾಲ ಕೃಷ್ಣ ಬೇಳೂರು ತಂಬಾಕು ಮಾರಾಟ ಮಾಡುತಿದ್ದ ಮಾಲೀಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕರಾಗಿರುವ ಗೋಪಾಲಕೃಷ್ಣ ಬೇಳೂರು ರವರು ಸಾಗರದ…

Read More

ವಿದ್ಯಾರ್ಥಿಗಳಿಗೆ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ :

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್-19 ರಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸುವಂತೆ ಆರ್ಥಿಕ ಸಹಾಯ ಮಾಡಲು ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಷನ್ ವತಿಯಿಂದ ಆದಿತ್ಯ ಬಿರ್ಲಾ ಕ್ಯಾಪಿಟಲ್ ಕೋವಿಡ್ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಿದೆ. 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ರೂ. 24 ಸಾವಿರಗಳು, 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ರೂ. 30 ಸಾವಿರಗಳು, ವೃತ್ತಿಪರ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ರೂ. 60 ಸಾವಿರಗಳು ಹಾಗೂ ಸಾಮಾನ್ಯ ವೃತ್ತಿಪರ ಪದವಿಪೂರ್ವ ವಿದ್ಯಾರ್ಥಿಗಳಿಗೆ ರೂ. 36…

Read More

ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ – ಕೆಂಚನಾಲದಲ್ಲಿ ನಡೆದ ಪ್ರಕರಣಕ್ಕೆ ಮೇನಕಾ ಗಾಂಧಿ ಎಂಟ್ರಿ | ಆರೋಪಿ ವಶಕ್ಕೆ

ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ – ಕೆಂಚನಾಲದಲ್ಲಿ ನಡೆದ ಪ್ರಕರಣಕ್ಕೆ ಮೇನಕಾ ಗಾಂಧಿ ಎಂಟ್ರಿ | ಆರೋಪಿ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಒಂದಿಲ್ಲೊಂದು ಸುದ್ದಿಯಿಂದ ರಾಜ್ಯಾದ್ಯಂತ ಸುದ್ದಿಯಾಗುತ್ತಿರುವುದು ತಿಳಿದಿರುವ ಸಂಗತಿಯಾಗಿದೆ ಇದೀಗ ಈ ಪುಟ್ಟ ಗ್ರಾಮದಲ್ಲಿ ನಡೆದ ಒಂದು ಘಟನೆಗೆ ಮಾಜಿ ಕೇಂದ್ರ ಸಚಿವೆ ಹಾಗೂ ಪ್ರಾಣಿ ದಯಾ ಸಂಘದ ರಾಷ್ಟ್ರೀಯ ಕಾರ್ಯಕರ್ತೆ ಮೇನಕಾ ಗಾಂಧಿ ಮಧ್ಯ ಪ್ರವೇಶಿಸಿ ಕ್ರೂರ ಸ್ವಭಾವದ ವ್ಯಕ್ತಿಯೊಬ್ಬರ ಮೇಲೆ…

Read More

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ತಹಶೀಲ್ದಾರ್ ರಶ್ಮಿ ಹಾಲೇಶ್ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ಹೊಸನಗರ ತಾಲೂಕಿನಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು ಈ ಹಿನ್ನಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹೆಚ್…

Read More

HOSANAGARA | ಕಸಬಾ ಹೋಬಳಿಯಲ್ಲಿ ಅರಣ್ಯ ಒತ್ತುವರಿ ತೆರವು

ಕಸಬಾ ಹೋಬಳಿಯಲ್ಲಿ ಅರಣ್ಯ ಒತ್ತುವರಿ ತೆರವು ಹೊಸನಗರ:  ಅರಣ್ಯ ಪ್ರದೇಶ ಒತ್ತುವರಿ ಕುರಿತಂತೆ ತಾಲೂಕಿನ ಕಸಬಾ ಹೋಬಳಿಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ  ಶುಕ್ರವಾರ  ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿಗಳು ಸುಮಾರು ನಾಲ್ಕು ಎಕರೆ ಅರಣ್ಯ ಪ್ರದೇಶದ ಒತ್ತುವರಿ ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆದು ವಿವಿಧ ಕಾಡು ಜಾತಿಯ ಸಸಿಗಳನ್ನು ನೆಟ್ಟಿದ್ದಾರೆ. ತಾಲೂಕಿನ ಕಸಬಾ ಹೋಬಳಿ ಹರಿದ್ರಾವತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದ ಸ.ನಂ. 39, ಶುಂಠಿಕೊಪ್ಪ ಗ್ರಾಮದ ಸ.ನಂ.33ರ ಅಲಗೇರಿಮಂಡ್ರಿ ಮೀಸಲು…

Read More

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand ಉತ್ತರಾಖಂಡದ ಎತ್ತರದ ಸ್ಥಳ ಮೈಯಾಳಿಗೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ 19 ಜನರ ಸದಸ್ಯರ ಪೈಕಿ 9ಮಂದಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿದ್ದರು. ಮೃತದೇಹಗಳನ್ನ ಉತ್ತರಾಖಂಡದಿಂದ ಏರ್​ಲಿಫ್ಟ್​ ಮಾಡಲಾಗಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂದವರಿಗೆ ಹಸ್ತಾಂತರ ಮಾಡಲಾಗಿದೆ. ಮೃತಪಟ್ಟವರ ಪೈಕಿ ಹುಬ್ಬಳ್ಳಿ ಮೂಲದ ದಂಪತಿ ಕೂಡ ಇದ್ದು, ಇವರ ಸಾವು ಕುಟುಂಬಸ್ಥರು ಹಾಗೂ ಆಪ್ತರನ್ನು ದುಃಖದ ಮಡುವಿಗೆ ತಳ್ಳಿದೆ. ಹುಬ್ಬಳ್ಳಿಯ ಹುಬ್ಬಳ್ಳಿಯ ವಿನಾಯಕ…

Read More

ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಜಾರಿಗೆ ಬಿಡಲ್ಲ, ಹೋರಾಟಕ್ಕೂ ಸಿದ್ಧ: ಯಡಿಯೂರಪ್ಪ

 ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಒಪ್ಪಲು ಸಾಧ್ಯವಿಲ್ಲ. ಡಾ. ಕಸ್ತೂರಿ ರಂಗನ್ ವರದಿ ಸಂಬಂಧ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮಾತನಾಡಿದ ಅವರು, ಡಾ। ಕಸ್ತೂರಿ ರಂಗನ್ ವರದಿ ಒಪ್ಪಿಕೊಂಡರೆ ದುಷ್ಪರಿಣಾಮ ಉಂಟಾಗುತ್ತದೆ.  ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿಯೂ ಸಾಕಷ್ಟು ಹಾನಿಯಾಗುತ್ತದೆ. ದೆಹಲಿಗೆ ತೆರಳಿದ ಮುಖ್ಯಮಂತ್ರಿಗಳು ಅಧಿಕಾರಿಗಳ ಜೊತೆ ಚರ್ಚಿಸಿ ಮನವರಿಕೆ ಮಾಡಿಕೊಡಲಿದ್ದಾರೆ. ವರದಿ ಜಾರಿಯಿಂದ ಆಗುವ ಪರಿಣಾಮಗಳ ಬಗ್ಗೆ ಸಿಎಂ ಮನವರಿಕೆ…

Read More