ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ಕರ್ಮಕಾಂಡ, ಶುಶ್ರೂಷಕಿಯರಿಗೆ ವೈದ್ಯರಿಂದ ಮಾನಸಿಕ ಕಿರುಕುಳ : ಗ್ರಾಮ ಪಂಚಾಯಿತಿಗೆ ದೂರು……!!!!!
ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಆಂಜನೇಯರವರು ನಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಶುಶ್ರೂಷಕಿಯರು ಗ್ರಾಮ ಪಂಚಾಯತ್ ನ ಆರೋಗ್ಯ ರಕ್ಷಾ ಸಮಿತಿಗೆ ದೂರು ನೀಡಿರುವ ಘಟನೆ ಇಂದು ನಡೆದಿದೆ. ಆಸ್ಪತ್ರೆಯ ವೈದ್ಯರು ಹೆಚ್ಚುವರಿ ಕೆಲಸ ನೀಡಿದಾಗ ವಿರೋದ ವ್ಯಕ್ತಪಡಿಸಿದರೆ ಏಕವಚನದಲ್ಲಿ ನಿಂದಿಸುವುದಲ್ಲದೇ ಸಾರ್ವಜನಿಕರ ಸಮ್ಮುಖದಲ್ಲಿ ಅಗೌರವ ಸೂಚಕ ಪದದಲ್ಲಿ ನಿಂದಿಸಿ,ಸಂಬಳ ಹಾಜರಾತಿಗೆ ಸಹಿ ಹಾಕುವುದಿಲ್ಲ ಎಂದು ಬೆದರಿಕೆ ಹಾಕುವ ಮೂಲಕ ಮಾನಸಿಕ ಕಿರುಕುಳ ನೀಡುತಿದ್ದಾರೆ. ಆದ್ದರಿಂದ ಗ್ರಾಮ…


