Headlines

ಯುವ ಕಾಂಗ್ರೆಸ್ ಸಾಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಹೇಂದ್ರ ಆಯ್ಕೆ

ಯುವ ಕಾಂಗ್ರೆಸ್ ಸಾಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಹೇಂದ್ರ ಆಯ್ಕೆ ಹೊಸನಗರ ತಾಲೂಕ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆ ಸಾಗರ ವಿಧಾನಸಭಾ ಕ್ಷೇತ್ರದ ಬಹು ನಿರೀಕ್ಷಿತ ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಇಬ್ಬರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹಲವು ತಿಂಗಳಿನಿಂದ ಗೊಂದಲದ ಗೂಡಾಗಿದ್ದ ಕಾಂಗ್ರೆಸ್ ಪಕ್ಷದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಹೇಂದ್ರ ಬುಕ್ಕಿವರೆ ಆಯ್ಕೆಯಾಗಿದ್ದಾರೆ. ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆಯಾಗಿದ್ದಾರೆ….

Read More

ತವರು ಕ್ಷೇತ್ರ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಭರ್ಜರಿ ಸ್ವಾಗತ :

ಶಿಕಾರಿಪುರ : ಕಾರ್ಯಕರ್ತರ ಸಭೆ ಹಿನ್ನೆಲೆಯಲ್ಲಿ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ತವರು ಕ್ಷೇತ್ರ ಶಿಕಾರಿಪುರದಲ್ಲಿ ಭರ್ಜರಿ ಸ್ವಾಗತ ನೀಡಲಾಗಿದೆ. ಇಂದು ಕುಮದ್ವತಿ ಕಾಲೇಜಿನಲ್ಲಿ ನಡೆದ ಕಾರ್ಯಕರ್ತರ ಸಭೆಗೆ ಆಗಮಿಸಿದ ಯಡಿಯೂರಪ್ಪನವರಿಗೆ ಕಾರ್ಯಕರ್ತರು, ಅಭಿಮಾನಿಗಳು ಪೂರ್ಣಕುಂಭದ ಸ್ವಾಗತ ನೀಡಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದರು. ಡೊಳ್ಳು, ವೀರಗಾಸೆಯ ಮೂಲಕ ಕಾಲೇಜಿನ ಮುಖ್ಯದ್ವಾರದಿಂದ ಸಭಾಂಗಣದವರೆಗೂ ಮೆರವಣಿಗೆ ನಡೆಸಿದರು. ಇಲ್ಲಿನ ಸಭಾಂಗಣದಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಯಡಿಯೂರಪ್ಪ, ಸಂಸದ ರಾಘವೇಂದ್ರ, ಮಲೆನಾಡು ಅಭಿವೃದ್ಧಿ…

Read More

ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ

ರಿಪ್ಪನ್‌ಪೇಟೆ : ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಜಂಟಿಯಾಗಿ ಪಟ್ಟಣದ ವಿನಾಯಕ ವೃತ್ತ,ಸಾಗರ ರಸ್ತೆ ಸೇರಿದಂತೆ ಅನೇಕ ಭಾಗಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್‌ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್‌ ಮಾಲೀಕರಿಗೆ ನೋಟೀಸ್‌ ಜಾರಿ ಮಾಡಿ ತಂಬಾಕು…

Read More

ಜಗತ್ತಿನಾದ್ಯಂತ ಏಕಕಾಲದಲ್ಲಿ ಫೇಸ್​ಬುಕ್, ಇನ್​ಸ್ಟಾಗ್ರಾಂ ಸರ್ವರ್​ ಡೌನ್ | Facebook

ಜಗತ್ತಿನಾದ್ಯಂತ ಏಕಕಾಲದಲ್ಲಿ ಫೇಸ್​ಬುಕ್, ಇನ್​ಸ್ಟಾಗ್ರಾಂ ಸರ್ವರ್​ ಡೌನ್ ಸಾಮಾಜಿಕ ಮಾಧ್ಯಮ ದೈತ್ಯ ಫೇಸ್ಬುಕ್ ಭಾರತ ಸೇರಿ ವಿಶ್ವದ್ಯಾಂತ ಸರ್ವರ್ ಡೌನ್ ಆಗಿದ್ದು, ಲಕ್ಷಾಂತರ ಬಳಕೆದಾರರು ತಮ್ಮ ಖಾತೆಗಳನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ. ಪ್ರಪಂಚದಾದ್ಯಂತದ ಬಳಕೆದಾರರು ತಮ್ಮ ಫೇಸ್ಬುಕ್ ಪ್ರೊಫೈಲ್ಗಳನ್ನು ಲಾಗ್ ಇನ್ ಮಾಡುವಲ್ಲಿ ಮತ್ತು ಪ್ರವೇಶಿಸುವಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಜಗತಿನಾದ್ಯಂತ ಸುಮಾರು 200ಕೋಟಿಗೂ ಅಧಿಕ ಫೇಸ್​ಬುಕ್​ ಬಳಕೆದಾರರಿದ್ದು, ಇಷ್ಟು ಪ್ರಸಿದ್ಧಿ ಪಡೆದುಕೊಂಡಿರುವ ಆಯಪ್​ಗಳು ದಿಢೀರ್ ಸ್ಥಗಿತಗೊಳ್ಳಲು ಕಾರಣವೇನು ಎಂಬುದು ಈವರೆಗೆ ಬಹಿರಂಗವಾಗಿಲ್ಲ. ಏಕಾಏಕಿ ಫೇಸ್​ಬುಕ್​ ಹಾಗೂ ಇನ್​ಸ್ಟಾಗ್ರಾಂ ಏಕಾಏಕಿ…

Read More

ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ – ಕೊಲೆ ಆರೋಪಿಯ ಬಂಧನ ..!! | Arrested

ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ – ಕೊಲೆ ಆರೋಪಿಯ ಬಂಧನ ..!! ತೀರ್ಥಹಳ್ಳಿ : ಮನೆಯಿಂದ ಕೆಲಸಕ್ಕೆಂದು ಹೊರಗೆ ಹೋಗಿ ನಾಪತ್ತೆಯಾಗಿದ್ದ ಯುವತಿಯು ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ನಾಲೂರು-ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಮನೆ ಎಂಬ ಗ್ರಾಮದ ಕಾಡಿನಲ್ಲಿ ಯುವತಿಯ ಶವ ಶನಿವಾರ ರಾತ್ರಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಧರ್ಮಸ್ಥಳ ಸಂಘದ ಪ್ರತಿನಿಧಿಯಾಗಿದ್ದ ಪೂಜಾ ಎ.ಕೆ. (24) ಎಂದು ಗುರುತಿಸಲಾಗಿದೆ. ಜೂನ್ 30 ರಂದು ಯುವತಿ ಕೆಲಸಕ್ಕೆಂದು ಹೋದವಳು…

Read More

ಕಾಮಗಾರಿಗೆ ಮುನ್ನವೇ ಬಿಲ್ ಪಾವತಿ : ಇಂಜಿನಿಯರ್ ಶಿವಮೂರ್ತಿ ಅಮಾನತ್ತಿಗೆ ಮಾನವ ಹಕ್ಕುಗಳ ರಾಜ್ಯಾಧ್ಯಕ್ಷ ಒತ್ತಾಯ

 ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಹುಂಚಾ ಗ್ರಾಮ ಪಂಚಾಯಿತಿ ಮಠದ (ಜಿಗಳ) ಕೆರೆ ದುರಸ್ತಿ ಕಾಮಗಾರಿ ಮಾಡದೆ ಗುತ್ತಿಗೆದಾರನಿಗೆ ಬಿಲ್ಲು ನೀಡಿ ಕರ್ತವ್ಯಲೋಪ ಮಾಡಿರುವ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆ ಯ ರಾಜ್ಯಾಧ್ಯಕ್ಷ ಯುವರಾಜ್ ಕೆ ಸಿ ಒತ್ತಾಯಿಸಿದ್ದಾರೆ.  ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ (ಜಿಗಳೆ) ಕೆರೆಗೆ 2021-2022 ನೇ ಸಾಲಿನ 2702 ಸಣ್ಣ ನೀರಾವರಿ ಕೆರೆಗಳ ವಾರ್ಷಿಕ ನಿರ್ವಹಣೆ ಮತ್ತು ದುರಸ್ತಿ ಯೋಜನೆಯಲ್ಲಿ ಕಾಮಗಾರಿಯನ್ನು ಗುತ್ತಿಗೆದಾರರ…

Read More

ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವು

ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವು ವೈದ್ಯಕೀಯ ಶಿಕ್ಷಣವನ್ನ ಮುಗಿಸಿ ಇಂಟರ್ ಶಿಪ್ ನ್ನ ಮುಗಿಸುವ ಹಂತದಲ್ಲಿದ್ದ ವೇಳೆ ವಿದ್ಯಾರ್ಥಿನಿ ವಿಷ್ಣುಪ್ರಿಯ ಎಂಬ ಸುಮಾರು 22 ವರ್ಷದ ಯುವತಿ ನೇಣಿಗೆ ಶರಣಾಗಿದ್ದಾರೆ. ಶಿವಮೊಗ್ಗ ನಗರದ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ಇಂಟರ್ ಶಿಪ್ ವಿದ್ಯಾರ್ಥಿನಿ ವಿಷ್ಣು ಪ್ರಿಯ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾಗಿದ್ದಾರೆ.  ವೈದ್ಯಕೀಯ ಶಿಕ್ಷಣವನ್ನ ಮುಗಿಸಿ ಇಂಟರ್…

Read More

ಯಾವುದೇ ಕಾರಣಕ್ಕೂ ಮುಸ್ಲಿಂ ಮತ ಕೇಳಲ್ಲ – ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ನಾನು ಶಿವಮೊಗ್ಗದಲ್ಲಿ ಯಾವುದೇ ಕಾರಣಕ್ಕೂ ಮುಸ್ಲೀಂ ಜನರ ಬಳಿ ಮತ ಕೇಳುವುದಿಲ್ಲವೆಂದು ಮಾಜಿ ಶಾಸಕ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ. ಅವರು ತಮ್ಮ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಮುಸ್ಲೀಂ ಮತಗಳ ಮೇಲೆ ಬಿಜೆಪಿ ಅವಲಂಬಿತವಾಗಿಲ್ಲ. ನಾನಂತು ಯಾವುದೇ ಕಾರಣಕ್ಕೂ ಶಿವಮೊಗ್ಗದಲ್ಲಿ ಮುಸ್ಲೀಂ ಜನರ  ಮತವನ್ನ ಕೇಳೊಲ್ಲ. 60 ಬೂತ್ ಗಳಲ್ಲಿ ಮುಸ್ಲೀಂ ಮತಗಳು ಬಿದ್ದಿವೆ. ಆದರೆ ವಿರೋಧ ಪಕ್ಷಗಳು ಮುಸ್ಲೀಂ ಮತಗಳ ಮೇಲೆ ಕಣ್ಣಿಟ್ಟು ಅವರನ್ನ ಓಲೈಸುತ್ತಿದೆ. ಹಾಗಾಗಿ ಆರ್ ಎಸ್ ಎಸ್ ನ್ನ‌ ಬೈದರೆ…

Read More

Ripponpete | ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ಪೊಲೀಸರು

Ripponpete | ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ಪೊಲೀಸರು ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ.ಇಂತಹ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ, ಇದೀಗ ಪೊಲೀಸರು ಮತ್ತೊಂದು ವಿನೂತನ ಜಾಗೃತಿ ಕಾರ್ಯಕ್ಕೆ ಕೈ ಹಾಕಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಡೂರು ತಿರುವು ಅಪಘಾತಗಳಿಗೆ ಹೆಸರು…

Read More

ಮಾದಾಪುರ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ :

ಹೊಸನಗರ ತಾಲೂಕಿನ ಮಾದಾಪುರ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ತಾಲೂಕು ವೃಕ್ಷ ಜಾಗೃತಿ ಸಂಘ ಮತ್ತು ಶನಿಪರಮೇಶ್ವರ ಯುವಕ ಸಂಘದ ಜಂಟಿ ಆಶ್ರಯದಲ್ಲಿ ನಡೆಸಲಾಯಿತು. ಮಾದಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮವನ್ನು ರೇವಣಪ್ಪ ಸ್ವರಚಿತ ಪರಿಸರ ಗೀತೆ ಹಾಡುವ ಮೂಲಕ ಉದ್ಘಾಟಿಸಿದರು.ಈ ಸಂಧರ್ಭದಲ್ಲಿ ಊರಿನ ಹಿರಿಯರು ಹಾಗೂ ಗ್ರಾಪಂ ಮಾಜಿ ಸದಸ್ಯರಾದ ಕೆ ಎಲ್ ವಿಜಯ್ ಮಾತನಾಡಿ ಪ್ರಸ್ತುತ ದಿನಗಳಲ್ಲಿ ಯುವ ಪೀಳಿಗೆಯು ಪರಿಸರ ಉಳಿಸುವ ನಿಟ್ಟಿನಲ್ಲಿ ಒಂದೊಂದು ಗಿಡ ನೆಡುವ ಮೂಲಕ ಗಾಂಧೀಜಿ ಕಂಡ ಕನಸು…

Read More