Headlines

ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ|kenchanal

ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ ಕಾಡಾನೆಗಳು ಪ್ರತ್ಯಕ್ಷವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗಾಳಿಬೈಲ್ ಗ್ರಾಮದಲ್ಲಿ ನಡೆದಿದೆ. ಗಾಳಿಬೈಲು ಗ್ರಾಮದ ರೈತರೊಬ್ಬರ ತೋಟದಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು,ಬಾಳೆ ಮತ್ತು ಅಡಿಕೆ ಗಿಡಗಳನ್ನು ನಾಶಗೊಳಿಸಿದ್ದು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ. ಇತ್ತೀಚೆಗೆ ಚಿರತೆ ಹಾವಳಿಯಿಂದ ಭಯಭೀತರಾಗಿದ್ದ ಗ್ರಾಮಸ್ಥರಿಗೆ ಈಗ ದಿಢೀರ್ ಪ್ರತ್ಯಕ್ಷವಾದ ಕಾಡಾನೆಯ ಭೀತಿಯೂ ಆವರಿಸಿದೆ. ಕಳೆದ 2-3 ದಿನಗಳ ಹಿಂದೆ ಆಲುವಳ್ಳಿ ಗ್ರಾಮದ ಬಳಿ ಕಾಣಿಸಿಕೊಂಡಿದ್ದ ಆನೆಗಳು ನಿನ್ನೆಯ…

Read More

ಕಾಶ್ಮೀರಿ‌ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುತ್ತಾರೆ – ರಾಷ್ಟ್ರ ಧ್ವಜಕ್ಕೆ ಹಣ ಪಡೆಯುತ್ತಾರೆ -ಮಧು ಬಂಗಾರಪ್ಪ

ಶಿವಮೊಗ್ಗ : ಸೊರಬದಲ್ಲಿ 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ  ಪ್ರತಿ ಜಿಲ್ಲೆಯಲ್ಲಿ 75 ಕಿ ಮೀ ದೂರ ಕ್ರಮಿಸಬೇಕಿದ್ದು ನಾಳೆ ಸೊರಬ ಪಟ್ಟಣದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಮಧುಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಸಂವಿಧಾನವನ್ನ ತಿದ್ದುಪಡಿ ಬಗ್ಗೆ ಬಿಜೆಪಿ ಮಾತನಾಡುತ್ತಿದ್ದಾರೆ. ಧ್ವಜದ ಬಗ್ಗೆ ಮಾತನಾಡುತ್ತಾರೆ. 150 ಕೋಟಿ ವೆಚ್ಚದಲ್ಲಿ ಧ್ವಜ ಹಂಚಲಾಗುತ್ತಿದೆ. ಧ್ವಜ ಹಂಚುವ ಶಕ್ತಿ ನೀಡಿದ್ದು ಮಹಾತ್ಮ ಗಾಂಧಿಯವರ ಕೊಡುಗೆ ಎಂದು ಗುಡುಗಿದರು. ಕಾಶ್ಮೀರಿ‌ಫೈಲ್ಸ್ ಸಿನಿಮಾಗೆ ತೆರಿಗೆ ಪಡೆಯುತ್ತಾರೆ….

Read More

ಮಳಲಿ ಮಠದಲ್ಲಿ ಲೋಕಕಲ್ಯಾಣಾರ್ಥ ಇಷ್ಟಲಿಂಗ ಕಾರ್ತಿಕ ದೀಪೋತ್ಸವ ಧರ್ಮಸಮಾರಂಭ| malali matt

ಮಳಲಿಮಠದಲ್ಲಿ ಶ್ರೀ ಗುರು ಪಟ್ಟಾಧಿಕಾರ ರಜತ ಮಹೋತ್ಸವ ರಿಪ್ಪನ್‌ಪೇಟೆ:-ಸಮೀಪದ  ಮಳಲಿ ಮಠದಲ್ಲಿ ನವಂಬರ 26 ರಂದು ಸಂಜೆ 4 ಗಂಟೆಗೆ ಶ್ರೀ ಗುರುಪಟ್ಟಾಧಿಕಾರ ರಜತ ಮಹೋತ್ಸವ ಹಾಗೂ ಕಾರ್ತಿಕ ದೀಪೋತ್ಸವ ಧರ್ಮ ಸಮಾರಂಭವನ್ನು  ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಜಗದ್ಗುರುಗಳ ದಿವ್ಯ ಸಾನ್ನಿಧ್ಯದಲ್ಲಿ  ಏರ್ಪಡಿಸಲಾಗಿದೆ ಎಂದು  ಮಳಲಿಮಠದ  ಡಾ.ಗುರುನಾಗಭೂಷಣ ಶಿವಾಚಾರ್ಯಮಹಾಸ್ವಾಮಿಜಿ ತಿಳಿಸಿದರು. ರಿಪ್ಪನ್‌ಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ  ಶ್ರೀ ಗುರುಪಟ್ಟಾಧಿಕಾರ ರಜತ ಮಹೋತ್ಸವ ಕಾರ್ತೀಕ ದೀಪೋತ್ಸವ ಸಮಾರಂಭವನ್ನು ಸಮಾರಂಭವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು.ಸಮಾರಂಭದ ಆಧ್ಯಕ್ಷತೆಯನ್ನು  ಮಳಲಿಮಠದ…

Read More

ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election

ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election ಶಿವಮೊಗ್ಗ : ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ’ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು. ಇಲ್ಲಿ ಶನಿವಾರ, ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬಸ್ ನಿಲ್ದಾಣದಿಂದ, ಮೇದಾರಕೇರಿ, ಪೊಲೀಸ್ ಚೌಕಿ ಫ್ಲೈಓವರ್‌ನಿಂದ ಕಾಶಿಪುರ, ಆಲ್ಕೊಳ ವೃತ್ತ, ಗಾಡಿಕೊಪ್ಪ ಪುನಃ ಆಲ್ಕೊಳ ವೃತ್ತ, ಗೋಪಾಳ ರಸ್ತೆ ಮೂಲಕ ಗೋಪಾಳ ಬಸ್ ನಿಲ್ದಾಣದಿಂದ ಗೋಪಾಳ…

Read More

ಮಾನಸಿಕ ಚಿಕಿತ್ಸೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಆತ್ಮ*ಹತ್ಯೆ

ಮಾನಸಿಕ ಚಿಕಿತ್ಸೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ A 17-year-old girl undergoing treatment at Manasadhara Rehabilitation Centre in Shivamogga allegedly died by suicide. Family members have raised serious allegations against the hospital and rehabilitation centre management. ಶಿವಮೊಗ್ಗ : ನಗರದ ಆಲ್ಕೊಳದ ಮಾನಸಾಧಾರ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ವರ್ಷದ ಅಪ್ರಾಪ್ತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತಳನ್ನು ನೇಹಾ ಎಂದು ಗುರುತಿಸಲಾಗಿದೆ….

Read More

ಫೆ.27 ಕ್ಕೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ – ಯಾವ್ಯಾವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಗೊತ್ತಾ..??? ಈ ಸುದ್ದಿ ನೋಡಿ

ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ ೨೭ರಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಗುರುವಾರ ಅಧಿಕಾರಿಗಳ ಪೂರ್ವಸಿದ್ಧತಾ ಸಭೆ ನಡೆಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರವರಿ ೨೭ರಂದು ಪ್ರಧಾನಿ ಅವರು ಶಿವಮೊಗ್ಗ ಆಗಮಿಸುತ್ತಿದ್ದು, ವಿಮಾನ ನಿಲ್ದಾಣ ಲೋಕಾರ್ಪಣೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವ ಯದಿಂದ ಕಾರ್ಯನಿರ್ವಹಿಸಬೇಕು ಎಂದರು. ಪ್ರಧಾನಿ…

Read More

KODURU | ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ

KODURU | ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ ರಿಪ್ಪನ್‌ಪೇಟೆ – ಇಲ್ಲಿನ ಕೋಡೂರು ಗ್ರಾಪಂ ವ್ಯಾಪ್ತಿಯ ಸುರುಳಿಕೊಪ್ಪ ಗ್ರಾಮದಲ್ಲಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ನಂತರ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಡೆದಿದ್ದೇನು ..??? ಕೋಡೂರು ಗ್ರಾಮದ ಸದಾನಂದ ಭಟ್ ಮತ್ತು ಪತ್ನಿ ಸಬೀತಾ ನಡುವೆ ಗುರುವಾರ ಕೌಟುಂಬಿಕ ಕಾರಣಗಳಿಗಾಗಿ ಜಗಳ ನಡೆದಿದೆ .. ಜಗಳ ವಿಕೋಪಕ್ಕೆ…

Read More

ಗೃಹ ಸಚಿವರ ಕ್ಷೇತ್ರದಲ್ಲಿ ಮತ್ತೆ ದನಗಳ್ಳರ ಅಟ್ಟಹಾಸ …!!!????

ತೀರ್ಥಹಳ್ಳಿ : ಗೋಹತ್ಯಾ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಕೂಡಾ ದನಗಳ್ಳರ ಮತ್ತು ಖದೀಮರ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ಸ್ವಲ್ಪ ದಿನಗಳ ಹಿಂದೆ ಮಂಡಗದ್ದೆಯ ಸಮೀಪ ದನ ಕಟುಕನೋರ್ವನನ್ನು ಮಾಳೂರು ಸಬ್ ಇನ್ಸ್ ಸೆಕ್ಟರ್ ನವೀನ್ ಮಠಪತಿಯವರು ಹಿಡಿದು ಜೈಲಿಗಟ್ಟಿದ್ದರೂ ಕೂಡಾ ಪುನಃ ದನಗಳ್ಳರು ಬಾಲಬಿಚ್ಚುತ್ತಿರುವುದು ತೀರ್ಥಹಳ್ಳಿ ತಾಲೂಕಿಗೆ ದೊಡ್ಡ ದುರಂತವೇ ಸರಿ. ಗುರುವಾರ ರಾತ್ರಿ ಹೆದ್ದೂರು ಹೊಸಳ್ಳಿ ಪರಿಸರದಲ್ಲಿ ಜಾನುವಾರುಗಳನ್ನು ಕದ್ದು ಪಿಕಪ್ ವಾಹನಗಳಲ್ಲಿ ಸಾಗಿಸುವಾಗ ಅನುಮಾನ ಬಂದು ಭಜರಂಗದಳದ ಕಾರ್ಯಕರ್ತರು ಹಾಗೂ ಊರಿನ…

Read More

ಸಿಗಂದೂರು ದೇವಸ್ಥಾನಕ್ಕೆ ತೆರಳುತಿದ್ದವರ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ | Accident

ಸಿಗಂದೂರು ದೇವಸ್ಥಾನಕ್ಕೆ ತೆರಳುತಿದ್ದವರ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ | Accident ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕಜೇನಿ ಗ್ರಾಮದ ತಿರುವಿನಲ್ಲಿ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ತುಮಕೂರು ಮೂಲದ ನಾಲ್ವರು ಸಿಗಂದೂರು ದೇವಸ್ಥಾನಕ್ಕೆ ದರ್ಶನಕ್ಕೆಂದು ತೆರಳುತಿದ್ದಾಗ ಮಾರ್ಗ ಮಧ್ಯದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ…

Read More

ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ: ಶಿವಮೊಗ್ಗದಲ್ಲಿ ಬಿರಿಯಾನಿ, ಸಿಹಿ ಹಂಚಿ ಕಾಂಗ್ರೆಸ್ ಸಂಭ್ರಮ

Karnataka CM Siddaramaiah surpasses former CM Devaraj Arasu’s record for longest tenure. Congress workers celebrate in Shivamogga by distributing country chicken biryani and sweets. ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ: ಶಿವಮೊಗ್ಗದಲ್ಲಿ ಬಿರಿಯಾನಿ, ಸಿಹಿ ಹಂಚಿ ಕಾಂಗ್ರೆಸ್ ಸಂಭ್ರಮ ಶಿವಮೊಗ್ಗ : ರಾಜ್ಯದಲ್ಲಿ ಅತಿ ಹೆಚ್ಚು ದಿನಗಳ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ದೇವರಾಜ್ ಅರಸು ಅವರ ದಾಖಲೆಯನ್ನು ಮೀರಿ ಸಿಎಂ ಸಿದ್ದರಾಮಯ್ಯ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ…

Read More