Headlines

ಶಿವಮೊಗ್ಗ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯ ಗೈಡ್ ಲೈನ್ಸ್/guidelines

ಶಿವಮೊಗ್ಗ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯ ಗೈಡ್ ಲೈನ್ಸ್ ಹೇಗಿದೆ ? ಶಿವಮೊಗ್ಗ : ಡಿ. 31ರ ರಾತ್ರಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯು ಸ್ಪಷ್ಟ ಗೈಡ್ ಲೈನ್ಸ್ ನ್ನು ಬಿಡುಗಡೆ ಮಾಡಿದ್ದು, ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಇಂದು ಜಿಲ್ಲಾ ರಕ್ಷಣಾಧಿಕಾರಿಗಳ ಕಛೆರಿಯಲ್ಲಿ ಹೊಸ ವರ್ಷಾಚರಣೆ ಸಂಬಂಧ ಸಂಬಂಧ ನಡೆದ ಹೋಟೆಲ್ ಗಳು, ಕ್ಲಬ್ ಗಳು ಮತ್ತು ರೆಸೋರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ವಿವಿಧ ನೀತಿ ನೀಯಮಗಳನ್ನು…

Read More

ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ : ಸಮಾಜದಲ್ಲಿನ ಪ್ರತಿಯೊಬ್ಬರನ್ನು ಗೌರವಿಸಿ :ನಾಗರಾಜ ಪರಿಸರ.

ರಿಪ್ಪನ್ ಪೇಟೆ : ಇಂದಿನ ಆಧುನಿಕ ತಂತ್ರಜ್ಞಾನದಲ್ಲಿ  ಶಿಕ್ಷಣ  ಪಡೆಯುತ್ತಿರುವ ಯುವ ಸಮೂಹ  ಪ್ರತಿಯೊಬ್ಬರನ್ನು  ಗೌರವಿಸುವ  ಮನೋಭಾವನೆಯನ್ನು ಬೆಳೆಸಿಕೊಂಡರೆ  ಉತ್ತಮ ಸಮಾಜ  ನಿರ್ಮಾಣ ಮಾಡಬಹುದು ಎಂದು ಕುವೆಂಪು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ  ಸಂಯೋಜನೆ ಅಧಿಕಾರಿ  ಡಾ. ನಾಗರಾಜ  ಪರಿಸರ  ಹೇಳಿದರು.  ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಇಂದಿನ ಯುವ ಸಮೂಹ ಸಮಾಜದಲ್ಲಿನ ಪ್ರತಿಯೊಬ್ಬರನ್ನು ಗೌರವಿಸುವಂತಾಗಬೇಕು. ಅಂತ ಮನೋಭಾವನೆಯನ್ನು…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ಜಿ ಎಸ್ ವರದರಾಜ್ ನೇಮಕ |JDS

ರಿಪ್ಪನ್‌ಪೇಟೆ : ಪಟ್ಟಣದ ಜೆ.ಡಿ.ಎಸ್.ಪಕ್ಷದ ಹಿರಿಯ ಸದಸ್ಯ ಜಿ.ಎಸ್. ವರದರಾಜ್‌ರವರನ್ನು ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಎಂ. ಶ್ರೀಕಾಂತ್‌ರವರ ಆದೇಶದ ಮೇರೆಗೆ ಶಿವಮೊಗ್ಗ ಜಿಲ್ಲಾ ಜನತಾದಳ (ಜ್ಯಾತ್ಯಾತೀತ) ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಎನ್. ರಾಮಕೃಷ್ಣರವರು ಆದೇಶ ಹೊರಡಿಸಿದ್ದಾರೆ. ಈ ನೇಮಕಾತಿಗಾಗಿ ಸಹಕರಿಸಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್, ಕಾರ್ಯಧ್ಯಕ್ಷ ಕೆ.ಎನ್ ರಾಮಕೃಷ್ಣರವರಿಗೆ ಜಿ.ಎಸ್. ವರದರಾಜ್ ಕೃತಜ್ಞತೆ ಸಲ್ಲಿಸಿದ್ದಾರೆ.

Read More

ಹೃದಯಾಘಾತದಿಂದ ಗ್ರಾಮ ಪಂಚಾಯತ್ ಅಧ್ಯಕ್ಷ ವಿನಯ್ ಗೌಡ್ರು ನಿಧನ

ಸೈದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಬಿಜೆಪಿ ಪ್ರಮುಖರಾಗಿದ್ದ ವಿನಯ್ ಗೌಡ್ರು (35) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ವಿನಯ್ ಗೌಡ್ರು 12/05/21 ರಂದು ತಾಳಗುಪ್ಪ ಹೋಬಳಿಯ ಸೈದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆಯನ್ನು ಇಂದು ರಾತ್ರಿ 10 ಕ್ಕೆ ಅವರ ಸ್ವಗ್ರಾಮವಾದ ತಡಗಳಲೆ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ

ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ ಕಾನೂನು ಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ಪೊಲೀಸ್ ದಳ ಸೊತ್ತು ಸಮೇತ ವಶಕ್ಕೆ ತೆಗೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಆನಂದಪುರದಲ್ಲಿ ನಡೆದಿದೆ. ದಾಸಕೊಪ್ಪ ಸರ್ಕಲ್ ಪೆಟ್ರೋಲ್ ಬಂಕ್ ಹತ್ತಿರ ಕಾನೂನುಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ಶಂಕೆಯಿಂದ ವಿಚಾರಣೆಗೊಳಪಡಿಸಿದಾಗ ಶಿಕಾರಿಪುರ ತಾಲೂಕಿನ ಹಾರೊಗೊಪ್ಪ ನಿವಾಸಿ ಲೋಕೇಶ್ ಭಾಗ್ಯಣ್ಣ ಅವರ ಬಳಿ 16…

Read More

ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್‌” ಹಾಲ್

ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್‌” ಹಾಲ್ ಮದುವೆ ಎಂದರೆ ಒಂದೆರಡು ದಿನಗಳಿಗೆ ಸೀಮಿತವಾದ ಘಟನೆಯಲ್ಲ, ಅದು ಎಷ್ಟೇ ವರ್ಷಗಳು ಕಳೆದರೂ ನೆನಪಿನಲ್ಲಿ ಉಳಿಯುವ ಒಂದು ನೆನಪು. ಹೌದು ರಿಪ್ಪನ್ ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ಸುಸಜ್ಜಿತವಾಗಿ ಸಿದ್ದವಾಗಿರುವ ಆರ್ ರವಿಚಂದ್ರ ಮಾಲೀಕತ್ವದ  “ಎಸ್ ಆರ್ ಕನ್ವೆನ್ಷನ್‌ ಸೆಂಟರ್” ಇಂದು ಲೋಕಾರ್ಪಣೆಗೊಳ್ಳಲಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಅನೇಕ ಗಣ್ಯರು ಈ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅರಮನೆಯಂತೆ ಕಂಗೊಳಿಸುವ ಈ ಎಸ್ ಆರ್…

Read More

ಸಿದ್ದುಗೆ ಹುಚ್ಚು ಹಿಡಿದಿದೆ, ಅದು ಯಾವಾಗ ಬಿಡುತ್ತೋ ಗೊತ್ತಿಲ್ಲ: ಸಚಿವ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಸಿದ್ದರಾಮಯ್ಯ ನವರಿಗೆ ಹುಚ್ಚು ಹಿಡಿದಿದೆ. ಅದು ಯಾವಾಗ ಬಿಡುತ್ತದೆ ಗೊತ್ತಿಲ್ಲ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್​ಎಸ್​ಎಸ್​ ಟೀಕೆ ಮಾಡಿದರೆ, ಭಾರತೀಯ ಸಂಸ್ಕೃತಿಯನ್ನೆ ಟೀಕೆ ಮಾಡಿದಂತೆ. ನೆಹರು ಮತ್ತು ಗಾಂಧೀಜಿಯವರು ಆರ್​ಎಸ್ಎಸ್​ ಬಗ್ಗೆ ಪ್ರೀತಿ ಹೊಂದಿದ್ದರು. ಗಾಂಧೀಜಿ, ನೆಹರು ಮುಂದೆ ಸಿದ್ದು ಯಾವ ಲೆಕ್ಕ? ಸಿದ್ದರಾಮಯ್ಯ ಟೀಕೆ ಮಾಡುವ ಮೂಲಕ ಹೀರೋ ಆಗುತ್ತೇನೆ ಎಂಬ ಭ್ರಮೆಯಲ್ಲಿದ್ದಾರೆ ಎಂದರು. ಉಪಚುನಾವಣೆ ಬಗ್ಗೆ ಮಾತನಾಡಿ, ಚುನಾವಣಾ ಆಯೋಗ ಎರಡು ಕ್ಷೇತ್ರಗಳ…

Read More

ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ

ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ಅಕ್ಷರ ಮಾಂತ್ರಿಕ, ಸರಸ್ವತಿ ಸಮ್ಮಾನ್ ಪುರಸ್ಕೃತ, ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ (SL Bhyrappa) ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 1931ರ ಆಗಸ್ಟ್ 20ರಂದು ಜನಿಸಿದ ಸಂತೆಶಿವರ ಲಿಂಗಣ್ಣಯ್ಯ ಭೈರಪ್ಪ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರಾಗಿ ಗುರುತಿಸಿಕೊಂಡಿದ್ದರು. ಅವರ ಕಾದಂಬರಿಗಳು ವಿಷಯ, ರಚನೆ ಮತ್ತು ಪಾತ್ರಗಳ ನಿರೂಪಣೆಯಲ್ಲಿ ವಿಶಿಷ್ಟವಾಗಿವೆ.ಭೈರಪ್ಪ ಅವರ ಕೃತಿಗಳು ನವೋದಯ, ನವ್ಯ, ಬಂದಾಯ…

Read More

ರಿಪ್ಪನ್‌ಪೇಟೆಯಲ್ಲಿ ಇಂದು ಆಳ್ವಾಸ್ ನುಡಿಸಿರಿ ಹಬ್ಬ – ಭರದ ಸಿದ್ದತೆ : 15 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ|Ripponpet

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಆಳ್ವಾಸ್ ನುಡಿಸಿರಿ ಹಬ್ಬ ಆಯೋಜಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಅಂದಾಜು 15 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ.ಕಾರ್ಯಕ್ರಮದ ಸಿದ್ದತೆ ಭರದಿಂದ ಸಾಗಿದೆ. ಇಂದು ಸಂಜೆ ಸರಿಯಾಗಿ 5 ಗಂಟೆಗೆ ಪಟ್ಟಣದ ಸಾಗರ ರಸ್ತೆಯ ಚಿನ್ನೆಗೌಡ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಆಳ್ವಾಸ್ ಸಾಂಸ್ಕೃತಿಕ ಪ್ರದರ್ಶನದಲ್ಲಿ ಆಂಧ್ರದ ಜನಪದ, ಬಂಜಾರ ನೃತ್ಯ, ಮಣಿಪುರಿ ಸ್ಟಿಕ್‌ಡ್ಯಾನ್ಸ್, ಶಾಸ್ತ್ರೀಯ ನೃತ್ಯ, ನವದುರ್ಗೆ, ಮಲ್ಲಕಂಬ ಮತ್ತು ರೋಪ್ ಕಸರತ್ತು, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಮಣಿಪುರಿ ಧೋಲ್…

Read More

ಆಗುಂಬೆ ಘಾಟಿ ತಿರುವಿನಲ್ಲಿ ಬೃಹತ್ ಗಾತ್ರದ ಮರ ಬಿದ್ದು ಪ್ರಯಾಣಿಕರಿಗೆ ತೊಂದರೆ !

ತೀರ್ಥಹಳ್ಳಿ ::  ತಾಲೂಕಿನ ಆಗುಂಬೆ ಘಾಟಿ ಕೆಳಭಾಗದಿಂದ  ಮೂರನೇ ತಿರುವಿನಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದು ಬೆಳಗ್ಗಿನಿಂದ ಸರಿ ಸುಮಾರು ಇನ್ನೂರಕ್ಕೂ ಹೆಚ್ಚು ವಾಹನಗಳು ಘಾಟಿಯಲ್ಲಿಯೇ ಜಾಮ್  ಆಗಿದ್ದು ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣ ಅರಣ್ಯ ಇಲಾಖೆ ಸಂಬಂಧಪಟ್ಟ ಹೆದ್ದಾರಿ ಪ್ರಾಧಿಕಾರದವರು ಈ ಬಗ್ಗೆ ಗಮನಹರಿಸಬೇಕು ಎಂಬುದಾಗಿ ವಾಹನ ಸವಾರರು ಮನವಿ ಮಾಡಿಕೊಂಡಿದ್ದು ಅರಣ್ಯ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಈ ರೀತಿ ರಸ್ತೆ ಬದಿಯಲ್ಲಿರುವ ಬೀಳುವ  ಮರಗಳನ್ನು ಮುಂಜಾಗ್ರತಾ ಕ್ರಮವಾಗಿ ತೆರವುಗೊಳಿಸಿದರೆ ಸೂಕ್ತ…

Read More