Headlines

ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ – ಹೀಗೊಂದು ವಿಚಿತ್ರ ಬ್ಯಾನರ್|TTh

ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ “ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ. ಯಾರಾದರೂ ಸಾಕುತ್ತಾರೆ” ಎಂಬ ವಿಚಿತ್ರವಾದ ಬ್ಯಾನರ್ ನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ದೇವಂಗಿ ಸಮೀಪದ ಹಡಗಿನಮಕ್ಕಿ ಗ್ರಾಮದಲ್ಲಿ ಅಳವಡಿಸಲಾಗಿದೆ. ಹಡಗಿನಮಕ್ಕಿ ಗ್ರಾಮದ ವೃತ್ತವೊಂದರಲ್ಲಿ ಈ ವಿಚಿತ್ರವಾದ ಬ್ಯಾನರ್ ಹಾಕಲಾಗಿದೆ. “ಹಡಗಿನಮಕ್ಕಿ ಗ್ರಾಮದಲ್ಲಿ ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ. ಯಾರಾದರೂ…

Read More

ಹೊಸನಗರ ತಾಲೂಕ್ ಜೆಡಿಎಸ್ ನೂತನ ಅಧ್ಯಕ್ಷರಾಗಿ ಎನ್ ವರ್ತೇಶ್ ಅಧಿಕಾರ ಸ್ವೀಕಾರ:

ಹೊಸನಗರ ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಕ್ಷೀಣಿಸುತ್ತಿದ್ದು ಇದನ್ನು ಬಲಪಡಿಸಲು ಹೊಸನಗರ ತಾಲ್ಲೂಕು ಕಾರ್ಯಕರ್ತರ ಸಭೆ ನಡೆಸಿ ಸಂಘಟನೆ ಮಾಡುವ ಉದ್ದೇಶದಿಂದ ಆಗಸ್ಟ್ 20 ಶನಿವಾರ 11 ಗಂಟೆಗೆ ಹೊಸನಗರ ಪ್ರವಾಸಿ ಮಂದಿರದ ಹತ್ತಿರವಿರುವ ಗಾಯತ್ರಿ ಮಂದಿರದಲ್ಲಿ ಹೊಸನಗರ ತಾಲ್ಲೂಕು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಮಾಜಿ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್‌ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಪಕ್ಷದ ಅಧ್ಯಕ್ಷರ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಸಂದರ್ಭದಲ್ಲಿ ಪತ್ರಿಕಾಘೋಷ್ಟಿ…

Read More

ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿದ್ದಕ್ಕೆ ಪರೀಕ್ಷೆಯನ್ನೆ ಬಹಿಷ್ಕರಿಸಿದ ವಿದ್ಯಾರ್ಥಿಗಳು :

ಶಿವಮೊಗ್ಗದಲ್ಲಿ ತಾರಕಕ್ಕರೇರಿದ ಹಿಜಾಬ್ ವಿವಾದ.ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ಬಹಿಷ್ಕರಿಸಿ ವಿದ್ಯಾರ್ಥಿನಿಯರು ಹೊರನಡೆದಿದ್ದಾರೆ. ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ  ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿದ್ದು  ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಬಿಡಲಿಲ್ಲ ಎಂಬ ಕಾರಣಕ್ಕೆ 13 ವಿದ್ಯಾರ್ಥಿ ನಿಯರಿಂದ ಪರೀಕ್ಷೆ ಬಹಿಷ್ಕಾರಿಸಿದ್ದಾರೆ. ಅದರಂತೆ ತುಂಗನಗರ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬಳು ಹಿಜಬ್ ತೆಗೆದು ತರಗತಿಯಲ್ಲಿ ಕೂರಲು ಸಾಧ್ಯವಿಲ್ಲವೆಂದು ತರಗತಿ ಬಹಿಷ್ಕರಿಸಿ ಹೊರನಡೆದಿದ್ದಾಳೆ, ಶಿಕಾರಿಪುರ ಮತ್ತು ಸಾಗರದಲ್ಲಿಯೂ ಇದೇ…

Read More

ತೀರ್ಥಹಳ್ಳಿ : ಬರಹಗಾರ್ತಿ ಪದ್ಮಜಾ ಜೋಯ್ಸ್ ರವರ “ಕೃಷ್ಣತರಂಗಿಣಿ” ಕೃತಿ ಲೋಕಾರ್ಪಣೆ :

ತೀರ್ಥಹಳ್ಳಿ: ಲೇಖಕ ವಿಷಯವನ್ನು ಗ್ರಹಿಸಿ ತಪಸ್ಸಿನಂತೆ ಬರವಣಿಗೆ ಮಾಡಿದಾಗ ಮಾತ್ರ ಯಶಸ್ವಿಯಾಗುತ್ತಾನೆ. ಸತ್ವಯುತ, ಶಕ್ತಿಯುತವಾದ ಕೃಷ್ಣ ತರಂಗಿಣಿ ಕೃತಿಯಿಂದ ಸಮಾಜ ಸದೃಢವಾಗಲಿ ಎಂದು ಅಖಿಲ ಭಾರತ ಸಾಹಿತ್ಯ ಪರಿಷತ್‌ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್ ಅರೂರು ಅಭಿಪ್ರಾಯಪಟ್ಟರು. ತೀರ್ಥಹಳ್ಳಿ ಪಟ್ಟಣದ ಲಯನ್ಸ್ ಭವನದಲ್ಲಿ ಬೆಂಗಳೂರಿನ ಸ್ನೇಹ ಬುಕ್ ಹೌಸ್ ಪ್ರಸ್ತುತಪಡಿಸಿ ತೀರ್ಥಹಳ್ಳಿ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಬರಹಗಾರ್ತಿ ದರಲಗೋಡು ಪದ್ಮಜಾ ಜೋಯ್ಸ್ ರವರ ‘ಕೃಷ್ಣ ತರಂಗಿಣಿ’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು. ಶ್ರೇಷ್ಠ ಪರಂಪರೆ ನೀಡಿದ ದೇಶ ನಮ್ಮದು,ಸಾಹಿತಿಗಳು ದೇಶವನ್ನು…

Read More

ರಿಪ್ಪನ್‌ಪೇಟೆ : ಅಕ್ರಮ ಮರಳು ಮತ್ತು ಕಲ್ಲು ಸಾಗಾಟ – ಎರಡು ಟಿಪ್ಪರ್ ಲಾರಿ ವಶ|sand

ರಿಪ್ಪನ್‌ಪೇಟೆ : ಅಕ್ರಮ ಮರಳು ಮತ್ತು ಕಲ್ಲು ಸಾಗಾಟ – ಎರಡು ಟಿಪ್ಪರ್ ಲಾರಿ ವಶ ರಿಪ್ಪನ್‌ಪೇಟೆ : ಅಕ್ರಮವಾಗಿ ಕಲ್ಲು ಮತ್ತು ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಪಟ್ಟಣದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪಿಎಸ್‌ಐ ಪ್ರವೀಣ್ ನೇತೃತ್ವದ ಸಿಬ್ಬಂದಿಗಳ ತಂಡ ಗಸ್ತು ತಿರುಗುತ್ತಿರುವಾಗ ಅಕ್ರಮವಾಗಿ ಮರಳು ಸಾಗಾಟ ಮಾಡುತಿದ್ದ ಟಿಪ್ಪರ್ ಲಾರಿ ಹಾಗೂ ಅಕ್ರಮವಾಗಿ…

Read More

ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ  ಗಂಭೀರ ಗಾಯ

ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ  ಗಂಭೀರ ಗಾಯ ಸಿದ್ದಾಪುರ:  ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ ದಲ್ಲಿ  ಭಕ್ತರ ಮೇಲೆ  ಕಾರು ಹರಿದ ಪರಿಣಾಮ   ಓರ್ವ ಯುವತಿ ಸಾವಿಗೀಡಾಗಿ  08 ಭಕ್ತರಿಗೆ ದಲ್ಲಿ ಗಂಭೀರ ಗಾಯ ಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ  ಸಿದ್ದಾ ಪುರದಲ್ಲಿ ನಿನ್ನೆ ಸಂಭವಿಸಿದೆ. ಕಾರು ಚಾಲಕ ರೋಶನ್ ಫರ್ನಾಂಡಿಸ್ ನನ್ನು ಪೊಲೀಸರು ಬಂಧಿಸಿದ್ದಾರೆ.ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ಈತ ಜಾತ್ರೆಗೆ ನುಗ್ಗಿಸಿದ್ದಾನೆ….

Read More

ಕೆಂಚನಾಲದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ

ಕೆಂಚನಾಲದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ ಕೆಂಚನಾಲದಲ್ಲಿ ಸಡಗರ ಹಾಗೂ ಸಂಭ್ರಮದಿಂದ 78ನೇಯ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಿರಿಯರು ತನು, ಮನ, ಧನವನ್ನು ಲೆಕ್ಕಿಸದೇ ತ್ಯಾಗ ಮಾಡಿ ಹುತಾತ್ಮರಾಗಿದ್ದು ಅವರಂತೆ ಪ್ರತಿಯೊಬ್ಬರೂ ಸ್ವಾತಂತ್ರ್ಯ ಪ್ರೇಮಿಯಾಗಿ ದೇಶಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ಪ್ರಕಾಶ್ ಮಾದಾಪುರ , ಅಲ್ತಾಫ್…

Read More

ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ತೀರಿಸಿಕೊಳ್ತೇವೆ: ಸಿದ್ದರಾಮಯ್ಯಗೆ ಈಶ್ವರಪ್ಪ ಟಾಂಗ್

ಶಿವಮೊಗ್ಗ: ಹಾನಗಲ್​ನಲ್ಲಿ ಮುಳುಗುವ ಹಂತದಲ್ಲಿ ಕಡ್ಡಿ ಹಿಡಿದು ಬದುಕುವ ಪ್ರಯತ್ನ ಮಾಡಿದ್ದಾರೆ. ಅದೇ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ಸಿಗರಿಗೆ ಸುನಾಮಿ ಎನಿಸಿಬಿಟ್ಟಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಆಡಳಿತ ವಿರೋಧಿ ಸುನಾಮಿ ಎಂಬ ಸಿದ್ದಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಚಾಮುಂಡೇಶ್ವರಿ ಸುನಾಮಿಯಲ್ಲಿ ಸಿದ್ದರಾಮಯ್ಯನವರೇ ಕೊಚ್ಚಿ ಹೋದರು. ಉಪಚುನಾವಣೆ ಸುನಾಮಿಯಲ್ಲಿ ಕಾಂಗ್ರೆಸ್​ನವರು ಸಿಂದಗಿಯಲ್ಲಿ ಸಹ ಈಗ ಕೊಚ್ಚಿ ಹೋಗಿದ್ದಾರೆ. ಹಾನಗಲ್​ನಲ್ಲಿ ಕಡಿಮೆ ಅಂತರದಲ್ಲಿ ಆಕಸ್ಮಿಕವಾಗಿ ಗೆದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ತೀರಿಸಿಕೊಳ್ತೇವೆ ಎಂದರು. ಪ್ರಾದೇಶಿಕ ಪಕ್ಷಗಳಿಗೆ ಯಾವುದೇ…

Read More

ಹೆದ್ದಾರಿಪುರ ಗ್ರಾ.ಪಂ.ಅಧ್ಯಕ್ಷರಾಗಿ ವಿನಂತಿ ರಾಘವೇಂದ್ರ ಉಪಾಧ್ಯಕ್ಷರಾಗಿ ವನಿತಾ ಗಂಗಾಧರ್ ಆಯ್ಕೆ|heddaripura

ಹೆದ್ದಾರಿಪುರ ಗ್ರಾ.ಪಂ.ಅಧ್ಯಕ್ಷರಾಗಿ ವಿನಂತಿ ರಾಘವೇಂದ್ರ ಉಪಾಧ್ಯಕ್ಷರಾಗಿ ವನಿತಾ ಗಂಗಾಧರ್ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ವಿನಂತಿ ರಾಘವೇಂದ್ರ ಉಪಾಧ್ಯಕ್ಷರಾಗಿ ವನಿತಾ ಗಂಗಾಧರ್ ಆಯ್ಕೆಯಾಗಿದ್ದಾರೆ. 15 ಸದಸ್ಯರನ್ನು ಹೊಂದಿರುವ ಹೆದ್ದಾರಿಪುರ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ವಿನಂತಿ ರಾಘವೇಂದ್ರ 08 ಮತಗಳನ್ನು ಪಡೆದರೆ ಉಪಾಧ್ಯಕ್ಷೆ ಸ್ಥಾನಕ್ಕೆ ಸ್ಪರ್ಧಿಸಿದ್ದ ವನಿತಾ ಗಂಗಾಧರ್ ಕ್ರಮವಾಗಿ 09 ಮತಗಳನ್ನು…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೈರಾಪುರಾ ಗ್ರಾಮದ ತೀರ್ಥೇಶ್ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ತೀರ್ಥೇಶ್ ಅಡಿಕಟ್ಟು ರವರಿಗೆ ಸೇರಿದ 700ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಬೈರಾಪುರ ಗ್ರಾಮದಲ್ಲಿ ಒಕ್ಕಲು ಮಾಡಲು 6 ಸಾವಿರಕ್ಕೂ ಪಿಂಡಿಯಷ್ಟು ಹೆಚ್ಚು…

Read More