Headlines

ರಸ್ತೆ ಮಧ್ಯದಲ್ಲಿಯೇ ಕುರ್ಚಿ ಹಾಕಿ ಕುಳಿತು ವಿನೂತನ ರೀತಿ ಪ್ರತಿಭಟನೆ ಮಾಡಿದ ಟಿ ಆರ್ ಕೃಷ್ಣಪ್ಪ

ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಇರುವ ದೊಡ್ಡ ಗುಂಡಿಯನ್ನು ಕೂಡಲೇ ಮುಚ್ಚುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ರಸ್ತೆ ಮಧ್ಯದಲ್ಲಿಯೇ ಕುರ್ಚಿ ಹಾಕಿ ವಿನೂತನ ರೀತಿಯಾಗಿ ಪ್ರತಿಭಟಿಸಿದ್ದಾರೆ. ರಾಜಧಾನಿ ಹಾಗೂ ಕರಾವಳಿಗೆ ನಡುವೆ ಸಂಪರ್ಕ ಕಲ್ಪಿಸುವ ಮುಖ್ಯ ವೃತ್ತ ಇದಾಗಿದ್ದು ಹಲವು ದಿನಗಳಿಂದ ರಸ್ತೆ ಹದಗೆಟ್ಟಿ,ದೊಡ್ಡ ಗುಂಡಿ ಬಿದ್ದಿದ್ದರು ಯಾವ ಅಧಿಕಾರಿಗಳು ಇದರ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಸಾಮಾಜಿಕ ಹೋರಾಟಗಾರರಾದ ಟಿ ಆರ್ ಕೃಷ್ಣಪ್ಪ ಇಂದು ಗುಂಡಿ ಬಿದ್ದ ಜಾಗದಲ್ಲಿಯೇ ಕುರ್ಚಿ…

Read More

ರಿಪ್ಪನ್ ಪೇಟೆ : ಪರೀಕ್ಷಾ ಶುಲ್ಕ ಹೆಚ್ಚಳ ವಿರೋಧಿಸಿ ಪದವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ರಿಪ್ಪನ್ ಪೇಟೆ : 2021-22 ನೇ ಸಾಲಿನಲ್ಲಿ ನೂತನ  ರಾಷ್ಟ್ರೀಯ ಶಿಕ್ಷಣ ನೀತಿ 2022 ರ ಅಡಿಯಲ್ಲಿ ಪ್ರಥಮ ಬಿಎ, ಬಿಬಿಎ ಮತ್ತು ಬಿಎಸ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ದಿಢೀರ್  ಏರಿಕೆ ಮಾಡಿರುವುದನ್ನು ಖಂಡಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಹಿಂದಿನ ವರ್ಷಗಳಲ್ಲಿ 700 ರೂ ಇದ್ದ ಪರೀಕ್ಷಾ ಶುಲ್ಕವನ್ನು 2020 ರೂ ಗೆ ಏರಿಸಿರುವುದು ಖಂಡನಾರ್ಹ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಕುಟುಂಬಕ್ಕೆ…

Read More

ಸಿಗಂದೂರು ಸೇತುವೆಗೆ ಚೌಡೇಶ್ವರಿ ಹೆಸರಿಡದಿದ್ದರೆ ಹೋರಾಟದ ಎಚ್ಚರಿಕೆ

ಸಿಗಂದೂರು ಸೇತುವೆಗೆ ಚೌಡೇಶ್ವರಿ ಹೆಸರಿಡದಿದ್ದರೆ ಹೋರಾಟ ಶಿವಮೊಗ್ಗ – ಸಾಗರ ತಾಲೂಕು ಅಂಬಾರಗೊಡ್ಲು ಬಳಿ  ನಿರ್ಮಿಸಲಾಗಿರುವ ಸೇತುವೆಗೆ ಸಿಗಂಧೂರು ಚೌಡೇಶ್ವರಿ ಸೇತುವೆ ಎಂದು ಹೆಸರಿಡದಿದ್ದಲ್ಲಿ  ಉಗ್ರ ಹೋರಾಟ ನಡೆಸಲಾಗುವುದು ಎಂದು ನಾರಾಯಣಗುರು ವಿಚಾರ ವೇದಿಕೆಯ (ಎಸ್‌ಎನ್‌ಜಿವಿ) ಜಿಲ್ಲಾಧ್ಯಕ್ಷ ಪ್ರವೀಣ್ ಹಿರೆಗೋಡು ಎಚ್ಚರಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಗಂದೂರು ಚೌಡೇಶ್ವರಿ ದೇವಸ್ಥಾನದಿಂದಾಗಿ ಆ ಭಾಗ ಹೆಚ್ಚು ಪ್ರಸಿದ್ಧಿಗೆ ಬಂದಿದೆ. ಅದೊಂದು ಧರ್ಮಿಕ ಸ್ಥಳವಾಗಿ, ಪ್ರವಾಸಿ ತಾಣವಾಗಿಯೂ ಹೊರಹೊಮ್ಮಿದೆ. ಬೇರೆ ಹೆಸರಿಡುವುದಕ್ಕಿಂತ ಸಿಗಂದೂರು ಚೌಡೇಶ್ವರಿಯ ಹೆಸರಿಡಬೇಕು ಎಂದ ಅವರು,…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರು ಫಿಕ್ಸ್ – ಯಡಿಯೂರಪ್ಪ ಘೋಷಣೆ|airport

ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲಾಗುವುದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ಧಾರೆ. ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್​ವೈ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ..ಈ ಸಂಬಂಧ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲು ತೀರ್ಮಾನಿಸಿದ್ದೇವೆ.  ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಸರ್ವಾನುಮತದ ತೀರ್ಮಾನವನ್ನು ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳಿಸಲಾಗುವುದು. ನರೇಂದ್ರ ಮೋದಿಯವರೇ ಈ ಹೆಸರನ್ನು ಘೋಷಿಸಲಿದ್ಧಾರೆ…

Read More

ಭದ್ರಾವತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಕೋಮುಗಳ ಗುಂಪಿನ ನಡುವೆ ಗಲಾಟೆ – ಓರ್ವನಿಗೆ ಚೂರಿ ಇರಿತ : ವದಂತಿಗಳಿಗೆ ಕಿವಿಗೊಡದಂತೆ ಪೊಲೀಸ್ ಇಲಾಖೆ ಮನವಿ|bhadravathi

ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿರುವ ಘಟನೆ ಭದ್ರಾವತಿಯ ಗಾಂಧಿ ವೃತ್ತದಲ್ಲಿ ನಡೆದಿದೆ. ಗಲಾಟೆಯಲ್ಲಿ ಅರವಿಂದ್ ಮತ್ತು ಗೌತಮ್ ಎಂಬುವವರಿಗೆ ಗಾಯವಾಗಿದೆ. ಇಬ್ಬರನ್ನು ಭದ್ರವತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೆ ಆಸ್ಪತ್ರೆ ಬಳಿಯೂ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ರಿಜ್ವಾನ್‌ ಎಂಬುವರಿಗೆ ಚಾಕು ಇರಿಯಲಾಗಿದ್ದು, ಹರೀಶ್ ಎಂಬುವವರಿಗೆ ಗಾಯವಾಗಿದೆ. ಚಾಕು ಇರಿತಕ್ಕೊಳಗಾದ ರಿಜ್ವಾನ್‌ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಭದ್ರಾವತಿ ಹಳೇ ನಗರ ಪೊಲೀಸ್…

Read More

ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News

ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News ಗಾಂಜಾ ಗಿರಾಕಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದ ಹರ್ಷ ಫರ್ನ್ ಹತ್ತಿರದ ಪುರುದಾಳು ರಸ್ತೆಯಲ್ಲಿ  ಇಬ್ಬರು ವ್ಯಕ್ತಿಗಳು ಬೈಕ್ ನಿಲ್ಲಿಸಿಕೊಂಡು ಗಾಂಜಾ ಮಾರುತ್ತಿದ್ದಾರೆ ಎಂಬ ಮಾಹಿತಿಯೊಂದು ಪೊಲೀಸರಿಗೆ ಲಭ್ಯವಾಗಿದೆ.   ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್ ಬಿ ಮತ್ತು  ಶಿವಪ್ರಸಾದ್, ಪಿಎಸ್ಐ ತುಂಗಾನಗರ ಪೊಲೀಸ್ ಠಾಣೆಯ ನೇತೃತ್ವದ ಸಿಬ್ಬಂದಿ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 1) ಮಾಲತೇಶ ಜೆ,…

Read More

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ ಹೊಸನಗರ ತಾಲೂಕಿನ ಗರ್ತಿಕೆರೆ ಸಮೀಪದ ರಾಮನಸರ ಶ್ರೀನಾಗದೇವತೆ, ಚೌಡೇಶ್ವರಿ ಹಾಗೂ ಪರಿವಾರ ದೇವತೆಗಳ ಸುಬ್ರಹ್ಮಣ್ಯ ಷಷ್ಠಿ ಮತ್ತು ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಶನಿವಾರದಂದು ಗಣಹೋಮ, ಪಂಚ ವಿಂಶತಿ, 108 ಕಲಶಾಭಿಷೇಕ, ಕಲಾತತ್ವ ಅಧಿವಾಸ ಹೋಮ, ಆಶ್ಲೇಷಾ ಬಲಿ ನಡೆಯಿತು. ವೇದಮೂರ್ತಿ ವಿದ್ವಾನ್ ಮುರಳೀಧರ ಕೆದ್ಲಾಯ ಹಾಗೂ ಪ್ರಧಾನ ಅರ್ಚಕ ಸುರೇಶ್ ಭಟ್ ಅವರ ತಂಡ ಪೂಜಾ ವಿಧಿವಿಧಾನಗಳ ನೆರವೇರಿಸಿದರು. ಉಡುಪಿ ಜಿಲ್ಲೆ…

Read More

Accident | ಚಲಿಸುತ್ತಿದ್ದ ಬೈಕ್ ಸವಾರರ ಮೇಲೆ ಬಿದ್ದ ಬೃಹತ್​​ ಮರದ ಕೊಂಬೆ; ಮೂವರಿಗೆ ಗಾಯ

ಚಲಿಸುತ್ತಿದ್ದ ಬೈಕ್ ಸವಾರರ ಮೇಲೆ ಬಿದ್ದ ಬೃಹತ್​​ ಮರದ ಕೊಂಬೆ; ಮೂವರಿಗೆ ಗಾಯ ಚಲಿಸುತ್ತಿದ್ದ ಬೈಕ್ ಸವಾರರ ಮೇಲೆ ಹೆದ್ದಾರಿ ಪಕ್ಕದ ಬೃಹತ್​​ ಮರದ ಕೊಂಬೆ ಬಿದ್ದ ಘಟನೆ  ಶಿವಮೊಗ್ಗ ಜಿಲ್ಲೆಯ ಗೊಂದಿ ಚಟ್ನಹಳ್ಳಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.  ಬೈಕ್ ಓಡಿಸುತ್ತಿದ್ದ ಮಾವ ಮಹಮ್ಮದ್ ಶಫಿ, ಬೈಕ್ ಹಿಂಬದಿಯಲ್ಲಿದ್ದ ಸೊಸೆ ಮತ್ತು ಮೊಮ್ಮಗಳಿಗೆ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಅದೃಷ್ಟವಶಾತ್​ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಬೃಹತ್ ಮರದ…

Read More

ತುಂಗಾ ನದಿಯಲ್ಲಿ ತೇಲುತ್ತಿದ್ದ ಅರ್ಧಂಬರ್ಧ ಸುಟ್ಟ ಶವ : ಹಲವು ಅನುಮಾನಕ್ಕೆ ಎಡೆ

ಶಿವಮೊಗ್ಗದ ತುಂಗನದಿಯಲ್ಲಿ ಅರ್ಧಂಬರ್ಧ ಸುಟ್ಟ ಶವವೊಂದು ದೊರೆತಿದೆ. ಇಷ್ಟುದಿನ‌ ಗಂಗಾನದಿಯಲ್ಲಿ ಇಂತಹ ಅರ್ದಂಬರ್ಧ ಸುಟ್ಟ ಹೆಣ ದೊರೆಯುವ ದೃಶ್ಯಾವಳಿಗಳು ಕಂಡುಬರುತ್ತಿದ್ದವು ಆದರೆ ತುಂಗ ನದಿಯಲ್ಲಿ ಈ ಶವ ದೊರೆತಿರುವುದು ಚರ್ಚೆಗೆ ಗ್ರಾಸವಾಗಿದೆ. ಇಂದು ಸಂಜೆ 6 ಗಂಟೆಯ ವೇಳೆಗೆ ರೋಟರಿ ಚಿತಾಗಾರದಿಂದ ತುಂಗಾನದಿಗೆ ಹೋಗುವ ಜಾಗದಲ್ಲಿ ಈ ಶವ ಪತ್ತೆಯಾಗಿದೆ. ಈ ಶವ ಸೊಂಟದ ಕೆಳಭಾಗ ಪೂರ್ತಿ ಸುಟ್ಟು ಹೋಗಿದೆ. ಆದರೆ ಇದು ಗಂಡೋ ಹೆಣ್ಣೋ ಎಂಬುದು ಮರಣೋತ್ತರ ಪರೀಕ್ಷೆಯ ನಂತರ ತಿಳಿದು ಬರಬೇಕಿದೆ. ಜೊತೆಗೆ ಯಾವ…

Read More

ಭದ್ರಾವತಿ : ಕಡಜದ ಹುಳಗಳ ದಾಳಿಗೆ ಮತ್ತೋರ್ವ ರೈತ ಬಲಿ !

ಭದ್ರಾವತಿ: ಕಳೆದ ಕೆಲವು ದಿನಗಳ ಹಿಂದೆ ಕಡಜದ ಹುಳುಗಳ ದಾಳಿಯಿಂದ ಇಬ್ಬರು ಮೃತಪಟ್ಟಿದ್ದರು.ಇದೀಗ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿರುವ ಘಟನೆಸೋಮವಾರ ನಡೆದಿದೆ. ತಾಲೂಕಿನ ಉಕ್ಕುಂದ ಗ್ರಾಮದ ನಿವಾಸಿ ಕುಮಾರ್‌(38) ಮೃತಪಟ್ಟಿದ್ದು, ಇವರು ತಮ್ಮ ತೆಂಗಿನ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಭಾನುವಾರ ಬೆಳಿಗ್ಗೆ ಕಡಜದ ಹುಳುಗಳು ದಾಳಿ ನಡೆಸಿವೆ. ತೀವ್ರ ಅಸ್ವಸ್ಥಗೊಂಡಿದ್ದ ಇವರನ್ನು ಶಿವಮೊಗ್ಗದ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Read More
Exit mobile version