Headlines

ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಕಾಫಿ ಸವಿದ ಗೃಹ ಸಚಿವ ಆರಗ ಜ್ಞಾನೇಂದ್ರ – ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು ಹಾಗೂ ಕಾರ್ಯಕರ್ತರು|Ripponpet

ರಿಪ್ಪನ್ ಪೇಟೆ :ಆನವಟ್ಟಿಯಲ್ಲಿ ಜನ ಸಂಕಲ್ಪ  ಕಾರ್ಯಕ್ರಮ ಮುಗಿಸಿಕೊಂಡು ತೀರ್ಥಹಳ್ಳಿ ಗೆ ತೆರಳುವ ಮಾರ್ಗ ಮಧ್ಯದಲ್ಲಿ ರಿಪ್ಪನ್ ಪೇಟೆಯ ವಿನಾಯಕ ವೃತ್ತದ ಗಣೇಶ್ ಪ್ರಸಾದ್ ಹೊಟೇಲ್ ನಲ್ಲಿ  ಇಂದು ಸಂಜೆ ರಾಜ್ಯ ಗೃಹ ಸಚಿವರಾದ  ಆರಗ ಜ್ಞಾನೇಂದ್ರ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದರು. ಹೊಟೇಲ್ ನಲ್ಲಿ ಕಾಫ಼ಿ ಸವಿಯುವುದರೊಂದಿಗೆ ಜನಸಾಮಾನ್ಯರೊಂದಿಗೆ ಬೆರೆತು ಸರಳತೆ ಮೆರೆದಿದ್ದಾರೆ.ಈ ಸಂಧರ್ಭದಲ್ಲಿ ಜನಸಾಮಾನ್ಯರು ಗೃಹ ಸಚಿವರೊಂದಿಗೆ ಸೆಲ್ಪಿಗೆ ಮುಂದಾದಗ ನಗುಮೊಗದಲ್ಲೇ ಎಲ್ಲಾರೊಂದಿಗೆ ಸೆಲ್ಪಿ ಕ್ಲಿಕ್ಕಿಸಿಕೊಂಡರು. ಗೃಹ ಸಚಿವರ ಆಗಮನದ ಸುದ್ದಿ ತಿಳಿಯುತಿದ್ದಂತೆ…

Read More

“ಸಂವಿಧಾನದ ಮೌಲ್ಯಗಳೇ ಪೊಲೀಸ್ ಸೇವೆಗೆ ದಿಕ್ಕು” – ಆನಂದಪುರ ಪಿಎಸ್‌ಐ ಪ್ರವೀಣ್ ಎಸ್ ಪಿ

“ಸಂವಿಧಾನದ ಮೌಲ್ಯಗಳೇ ಪೊಲೀಸ್ ಸೇವೆಗೆ ದಿಕ್ಕು” – ಆನಂದಪುರ ಪಿಎಸ್‌ಐ ಪ್ರವೀಣ್ ಎಸ್ ಪಿ SI Praveen of Anandapura Police emphasized the importance of Dr. B.R. Ambedkar’s Constitution, highlighting equality, justice, and duty in maintaining law and order. ಆನಂದಪುರ: ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಮೌಲ್ಯಗಳೇ ಪೊಲೀಸ್ ಇಲಾಖೆಯ ಸೇವೆಗೆ ನಿಜವಾದ ದಿಕ್ಕು ತೋರಿಸುತ್ತವೆ ಎಂದು ಆನಂದಪುರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪ್ರವೀಣ್…

Read More

ಭಾರೀ ಮಳೆ : ಮನೆ ಗೋಡೆ ಕುಸಿದು ವೃದ್ಧೆ ಸಾವು

ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಹೊರವಲಯದ ಮಲವಗೊಪ್ಪ ಬಳಿಯ ಇಂದಿರಾ ಕಾಲೋನಿಯಲ್ಲಿ ನಡೆದಿದೆ.  ಇಂದಿರಾ ಕಾಲೋನಿ ನಿವಾಸಿ ಗೌರಮ್ಮ ಮೃತ ದುರ್ದೈವಿಯಾಗಿದ್ದಾರೆ. ನಿರಂತರ ಮಳೆಯಿಂದಾಗಿ ಗೌರಮ್ಮ ಅವರ ಮನೆ ಗೋಡೆಗಳು ತೇವಗೊಂಡಿದ್ದು, ನಿನ್ನೆ ತಡರಾತ್ರಿ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಗೌರಮ್ಮ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ಗೌರಮ್ಮ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ನಾಗರಾಜ್ ಹಾಗೂ ಪಾಲಿಕೆ ಸದಸ್ಯ ಆರ್.ಸಿ ನಾಯ್ಕ್ ಭೇಟಿ…

Read More

FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!?

FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!? ನೂರಾರು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಗೋವಾದಲ್ಲಿ ನಡೆದಿರುವ ಘಟನೆಯ ವಿಡಿಯೋ ಎಂದು ಸುದ್ದಿ ವ್ಯಾಪಿಸಿತ್ತು. ಗೋವಾದಲ್ಲಿ ಓವರ್‌ಲೋಡ್ ಮಾಡಿದ ಸ್ಟೀಮರ್ ಬೋಟ್ ಅಪಘಾತಕ್ಕೀಡಾಗಿದ್ದು, 64 ಜನರು ನಾಪತ್ತೆಯಾಗಿದ್ದಾರೆ ಮತ್ತು 23 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿತ್ತು. ಈಸ್ಟ್ ಕಾಂಗೋದ ಕಿವು ಸರೋವರದಲ್ಲಿ ಹಲವಾರು…

Read More

ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಪೋಷಣ್ ಅಭಿಯಾನ : ವಿಜಯ | ಕಣ್ಮನ ಸೆಳೆದ ಸಿರಿಧಾನ್ಯಗಳ ಮನೆ |Ripponpet news

ರಿಪ್ಪನ್ ಪೇಟೆ: ಸಮಾಜದ ಪ್ರತಿಯೊಬ್ಬರು ಆರೋಗ್ಯವಾಗಿದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ. ಪ್ರಸ್ತುತ ಅಪೌಷ್ಠಿಕತೆಯಿಂದ ಬಳಲುತ್ತಿರುವ ಜನರನ್ನು ಅನಾರೋಗ್ಯ ಮುಕ್ತರನ್ನಾಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಉದ್ದೇಶದಿಂದ ಸರಕಾರ ಪೋಷಣ್ ಅಭಿಯಾನವನ್ನು ಜಾರಿಗೆ ತಂದಿಗೆ ಎಂದು ಹೊಸನಗರ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ವಿಜಯ ಹೇಳಿದರು.   ಬಾಳೂರು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು  ಅಪೌಷ್ಠಿಕ ಮುಕ್ತತೆಯನ್ನು ಮನಗೊಂಡಿರುವ ಸರಕಾರ ಪೋಷಣ್ ಅಭಿಯಾನ ಯೋಜನೆಯ ಮೂಲಕ ಮಹಿಳೆಯರಿಗೆ…

Read More

ಅಮ್ಮನಘಟ್ಟವನ್ನು ಪ್ರವಾಸಿ ತಾಣವನ್ನಾಗಿಸಲಾಗುವುದು : ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಾಣ ಪ್ರಸಿದ್ಧ ಅಮ್ಮನಘಟ್ಟವನ್ನು ಪ್ರವಾಸಿ ತಾಣವನ್ನಾಗಿಸುವುದರೊಂದಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಅಧ್ಯತೆ ನೀಡುವುದಾಗಿ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದರು. ಸಮೀಪದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಎರಡನೇ ದಿನದ ವಿಶೇಷ ಪೂಜಾ ಕಾರ್ಯದಲ್ಲಿ ಭಾಗವಹಿಸಿ ದೇವಸ್ಥಾನ ಸಮಿತಿಯವರೊಂದಿಗೆ ಸಮಾಲೋಚನಾ ಸಭೆ ನಡೆಸಿ ಇದೊಂದು ಧಾರ್ಮೀಕ ಐತಿಹಾಸಿಕ ಕ್ಷೇತ್ರವಾಗಿದ್ದ ವರ್ಷಧಲ್ಲಿ ಭಾದ್ರಪದ ಮಾಸದ ಪಿತೃಪಕ್ಷದಲ್ಲಿ ಮಂಗಳವಾರ ಮತ್ತು ಶುಕ್ರವಾರದ ಜಾತ್ರಾಮಹೋತ್ಸವ ಮತ್ತು ನಾಡಿನ ಮೈಸೂರು…

Read More

ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ : ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಆರೆಂಜ್ ಅಲರ್ಟ್ ಇದ್ದು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಖಡಕ್ ಸೂಚನೆ ನೀಡಿದ್ದಾರೆ. ಮಳೆಯಿಂದ ಆಗಬಹುದಾದ ಹಾನಿಯನ್ನು ಎದುರಿಸಲು ಯುದ್ದೋಪಾದಿಯಲ್ಲಿ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಳೆ ಹಾನಿ ನಿರ್ವಹಣೆ ಕುರಿತು ಅಗತ್ಯ…

Read More

ಆರಗ ಜ್ಞಾನೇಂದ್ರ ಅವರಿಗೆ ತಾಕತ್ತಿದ್ದರೆ, ನಂದಿತಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ : ಕಿಮ್ಮನೆ ಸವಾಲು

ಶಿವಮೊಗ್ಗ : ದೇಶದ ಗೃಹಮಂತ್ರಿ ಅಮಿತ್ ಶಾ ಹಾಗೂ ರಾಜ್ಯದ ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರಿಗೆ ತಾಕತ್ತಿದ್ದರೆ, ಸಾಮರ್ಥ್ಯ ಇದ್ದರೆ ನಂದಿತಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ. ಆರು ತಿಂಗಳಲ್ಲಿ ಫಲಿತಾಂಶ ಕೊಡಿ. ಇದರಲ್ಲಿ ನನ್ನ ಹಸ್ತಕ್ಷೇಪವೆಗಿರುವುದು ಗುಲಗಂಜಿಯಷ್ಟು ಸಾಬೀತಾದರೆ ನಾನು ಸಾರ್ವಜನಿಕ ಕ್ಷೇತ್ರದಿಂದ ನಿವೃತ್ತಿಯಾಗುತ್ತೇನೆ. ಇಲ್ಲದಿರೆ ರಾಜ್ಯದ ಗೃಹಮಂತ್ರಿಗಳು ತೀರ್ಥಹಳ್ಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಗ್ರಹಿಸಿದರು. ಅವರಿಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ 01-11-2014 ರಿಂದ 2018 ರವರೆಗೆ ಸತತವಾಗಿ ಆರಗ ಜ್ಞಾನೇಂದ್ರ…

Read More

ಹುಂಚ : ಬೈಕ್‌ ನಿಲ್ಲಿಸಿ ಕೆರೆಗೆ ಹಾರಿದ ಯುವಕ – ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ಕಾರ್ಯಾಚರಣೆ – ಶವ ಪತ್ತೆ|Crime news

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯ ಬಳಿ ಯುವಕನೊಬ್ಬ ಬೈಕ್ ನಿಲ್ಲಿಸಿ ಕೆರೆಗೆ ಹಾರಿ ಮೃತಪಟ್ಟಿರುವ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಹುಂಚ ಸಮೀಪದ ಮುತ್ತಿನಕೆರೆ ಬಳಿ ಯುವಕನೊಬ್ಬ ತನ್ನ ಬೈಕ್ ಹಾಗೂ ಪಾದರಕ್ಷೆಗಳನ್ನು ಬಿಟ್ಟು ಕೆರೆಗೆ ಹಾರಿದ ಘಟನೆ ನಡೆದಿತ್ತು ಬೆಳಿಗ್ಗೆ ಬೈಕ್ ಹಾಗೂ ಪಾದರಕ್ಷೆಗಳನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದರು. ಕೆರೆಯಲ್ಲಿ ಇಂದು ಬೆಳಿಗ್ಗೆಯಿಂದ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಶವ ಪತ್ತೆ ಹಚ್ಚಿದ್ದಾರೆ. ಮೃತ…

Read More

ಶಿವಮೊಗ್ಗದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ ಶಂಕೆ – ಆತಂಕದಲ್ಲಿ ಗ್ರಾಮಸ್ಥರು|leopard attack

ಶಿವಮೊಗ್ಗ(Shivamogga): ತಾಲ್ಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ರೈತ ಮಹಿಳೆ  ಮೇಲೆ ಚಿರತೆ(leopard) ದಾಳಿ ನಡೆಸಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಬಿಕ್ಕೋನಹಳ್ಳಿ ಗ್ರಾಮದ ಯಶೋದಮ್ಮ (45) ಮೃತ ಮಹಿಳೆ. ಬೆಳಗ್ಗೆ ಹೊಲಕ್ಕೆ ಹೋಗುವುದಾಗಿ ಹೇಳಿ ಹೋದವರು ವಾಪಾಸ್ ಬಂದಿರಲಿಲ್ಲ. ಫೋನ್ ಮಾಡಿದಾಗಲೂ ಸಿಗದ ಕಾರಣ ಸಂಜೆ ಹುಡುಕಿಕೊಂಡು ಬಂದಾಗ ವನ್ಯಪ್ರಾಣಿ ದಾಳಿಗೆ ಒಳಗಾಗಿರುವುದು ತಿಳಿದುಬಂದಿದೆ.  ಮಹಿಳೆಯ ಕುತ್ತಿಗೆ, ದೇಹದ ಹಿಂಭಾಗವನ್ನು ತಿಂದಿರುವುದು ನೋಡಿ ರೈತರು ಭಯಗೊಂಡಿದ್ದಾರೆ.ಯಶೋದಮ್ಮ ಅವರ ಮೇಲೆ ಚಿರತೆ ದಾಳಿ (Attack) ನಡೆಸಿರುವ…

Read More