Headlines

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು|leopard

ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆ ಸಿಕ್ಕಿರುವ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಮಲ್ಲಾಪುರ ಗ್ರಾಮದ ಸುತ್ತಮುತ್ತಲಿನ ಹೊಲಗದ್ದೆ, ತೋಟಗಳಲ್ಲಿ ಎರಡು ಚಿರತೆಗಳು ಓಡಾಡುತ್ತಿದ್ದವು. ಇದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಚಿರತೆಗಳ ಸೆರೆಗೆ ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಯನೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಗಳು ಓಡಾಡುವ ಸ್ಥಳದಲ್ಲಿ ಬೋನೊಂದನ್ನು ಇರಿಸಿದ್ದರು. ಮುಂಜಾನೆ ಚಿರತೆ ಬೋನಿನಲ್ಲಿ ಬಿದ್ದಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನಿನಲ್ಲಿ…

Read More

ಚಿಕ್ಕಜೇನಿ ಪ್ರೌಢ ಶಾಲೆಯಲ್ಲಿ ಕೇಂದ್ರ ಸಂವಹನ ಇಲಾಖೆಯಿಂದ ಸ್ವಾತಂತ್ರ್ಯ ಉತ್ಸವ

ಚಿಕ್ಕಜೇನಿ ಪ್ರೌಢ ಶಾಲೆಯಲ್ಲಿ ಕೇಂದ್ರ ಸಂವಹನ ಇಲಾಖೆಯಿಂದ ಸ್ವಾತಂತ್ರ್ಯ ಉತ್ಸವ ರಿಪ್ಪನ್‌ಪೇಟೆ – ಇಲ್ಲಿಗೆ ಸಮೀಪದ ಚಿಕ್ಕಜೇನಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ ಶಿವಮೊಗ್ಗದ ಕೇಂದ್ರ ಸಂವಹನ ಇಲಾಖೆಯಿಂದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಎಸ್.ಡಿ.ಎಂ.ಸಿ.ಅಧ್ಯಕ್ಷ ಪ್ರಕಾಶ್ ರಾಷ್ಟ್ರ ಧ್ವಜಾರೋಹಣ ನಡೆಸಿದರು. ಗ್ರಾ.ಪಂ.ಸದಸ್ಯ ಅಣ್ಣಪ್ಪ ಶೆಟ್ಟಿ ಸ್ವಾತಂತ್ರ್ಯ ಜಾಥಾಕ್ಕೆ ಚಾಲನೆ ನೀಡಿದರು. ಚಿಕ್ಕಜೇನಿ ಗ್ರಾ.ಪಂ. ಅಧ್ಯಕ್ಷ ರಾಜು ಎನ್.ಪಿ.ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಕ್ಕಳು ದೇಶದ ಭವ್ಯ ಇತಿಹಾಸ ತಿಳಿದುಕೊಳ್ಳಬೇಕು ಎಂದರು.ಶಾಲೆಯ ಸಮಗ್ರ ಪ್ರಗತಿಗೆ ಗ್ರಾ. ಪಂ.ಸದಾ ಸಿದ್ಧವಿದೆ…

Read More

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ|soraba

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಶ್ರೀ ಸಿದ್ಧ ವೃಷಬೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ 14 ವರ್ಷದೊಳಿಗಿನ ಮಕ್ಕಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡುವ ಸಂದರ್ಭದಲ್ಲಿ ಅವರು ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಮೂರು…

Read More

ಬೋನಿಗೆ ಬಿದ್ದ ಚಿರತೆ – ನಿಟ್ಟುಸಿರು ಬಿಟ್ಟ ಜನತೆ

ಕಳೆದ ಎರಡು ತಿಂಗಳಿಂದ ಕಾಟ ಕೊಡುತ್ತಿದ್ದ ಚಿರತೆ ಶಿವಮೊಗ್ಗ ಗ್ರಾಮಾಂತರದ ಆಲದಹಳ್ಳಿ ಸೋಮಿನಕೊಪ್ಪದಲ್ಲಿ  ಬೋನಿಗೆ ಬಿದ್ದಿದೆ.ನಂತರ ಚಿರತೆಯನ್ನು ಅರಣ್ಯ ಇಲಾಖೆಯವರು ಬೇರೆಡೆ ಸಾಗಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ಬಾಳಿ ತಾಲೂಕಿನ ಪಲವನಹಳ್ಳಿ ಯಲ್ಲಿ ಮಹಿಳೆಯನ್ನು ಬಲಿ ತೆಗೆದುಕೊಂಡ ಚಿರತೆ ಆಲದಹಳ್ಳಿ ಸೋಮಿನಕೊಪ್ಪದಲ್ಲಿ ಬೋನಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಸಾಕಿದ ನಾಯಿಯನ್ನು ಬೋನಿನಲ್ಲಿಟ್ಟು ಚಿರತೆಯನ್ನ ಹಿಡಿಯಲಾಗಿದೆ. ಹೊಲದಲ್ಲಿ ಸೌತೆಕಾಯಿ ಕೀಳಲು ಬಂದ ರೈತರು ಬೋನಿಗೆ ಬಿದ್ದ ಚಿರತೆಯನ್ನು ಮೊದಲು ನೋಡಿದ್ದಾರೆ. ನಂತರ ಸ್ಥಳದಲ್ಲಿ ಜನ ಜಾತ್ರೆಯೇ ನಿರ್ಮಾಣವಾಗಿದೆ. ಕಳೆದ  ಮೂರು…

Read More

RIPPONPETE | ಕೆಂಚನಾಲದಲ್ಲಿ ಹಸುವಿನ ಕತ್ತರಿಸಿದ ತಲೆ ಪತ್ತೆ – ಪ್ರಕರಣ ದಾಖಲು

RIPPONPETE | ಕೆಂಚನಾಲದಲ್ಲಿ ಹಸುವಿನ ಕತ್ತರಿಸಿದ ತಲೆ ಪತ್ತೆ – ಪ್ರಕರಣ ದಾಖಲು ರಿಪ್ಪನ್‌ಪೇಟೆ : ಶುಕ್ರವಾರದಂದು ಬೆಳಕಿಗೆ ಬಂದ ಆಘಾತಕಾರಿ ಘಟನೆಯೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಹಸುವಿನ ತಲೆಯನ್ನು ಕೆರೆಯ ಬಳಿಯಲ್ಲಿ ಎಸೆದು ಹೋಗಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಕೆಂಚನಾಲ ಗ್ರಾಮದಲ್ಲಿ ಪೊಲೀಸರು ಗಸ್ತು ತಿರುಗುತಿದ್ದ ಸಂಧರ್ಭದಲ್ಲಿ ಗಸ್ತು ತಿರುಗುತಿದ್ದಾಗ ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಯಾರೋ ಅಪರಿಚಿತರು ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಹಸುವನ್ನು ಕಡಿದು ಕೆರೆಯ…

Read More

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ ಶಿವಮೊಗ್ಗ ಜಿಲ್ಲೆಯ  ತೀರ್ಥಹಳ್ಳಿ ತಾಲ್ಲೂಕಿನ ಬೇಗುವಳ್ಳಿ ಬಳಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದ್ದು, ನಾಲ್ಕು ಮಂದಿಗೆ ಗಾಯಗಳಾಗಿದೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇಲ್ಲಿನ ಬೆಜ್ಜವಳ್ಳಿ ಜಾತ್ರೆಗೆ ಹೋಗಿ ವಾಪಸ್‌ ಆಗುತ್ತಿದ್ದ ಮಂಡಗದ್ದೆ ಸಮೀಪದ ದಂಪತಿಗಳಿದ್ದ ಬೈಕ್‌ಗೆ ಮೇಲಿನ ತೂದೂರು, ಬೇಗುವಳ್ಳಿ ನಿವಾಸಿಗಳಿದ್ದ ಬೈಕ್‌ ಹಿಂದಿನಿಂದ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಮಂಡಗದ್ದೆಯ…

Read More

ಸಕ್ರೆಬೈಲಿನಲ್ಲಿ ಬೋಟಿಂಗ್ ಸ್ಪೋರ್ಟ್ಸ್ ಆರಂಭ : ಏನೆಲ್ಲಾ ಇರಲಿದೆ ಗೊತ್ತಾ…??? ಈ ಸುದ್ದಿ ನೋಡಿ

ಸಕ್ರೆಬೈಲು ಆನೆ ಬಿಡಾರದ ತುಂಗಾ ಹಿನ್ನೀರಿನಲ್ಲಿ ಜಂಗಲ್ ರೇಸಾರ್ಟ್ ವತಿಯಿಂದ ಇಂದು ಬೋಟ್ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ಸಂಸದ ಬಿ.ವೈ.ರಾಘವೇಂದ್ರ ರವರು ನೂತನ ಬೋಟ್ ಗೆ ಚಾಲನೆ ನೀಡಿದರು. ನಂತರ ಸಂಸದರು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಂಗಲ್ ರೇಸಾರ್ಟ್ ನ ನಿರ್ದೆಶಕ ರಾಜೇಶ್ ಕಾಮತ್ ಸೇರಿದಂತೆ ಇತರರು ಬೋಟ್ ನಲ್ಲಿ ವಿಹರಿಸಿದರು. ನಂತರ ಮಾತನಾಡಿದ ಸಂಸದರು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಬೋಟಿಂಗ್ ವ್ಯವಸ್ಥೆ ಉಪಯುಕ್ತವಾಗಲಿದೆ ಎಂದರು.  ಸಕ್ರೆಬೈಲು…

Read More

ಸಾಗರದ ಎಲ್​ಬಿ ಕಾಲೇಜಿನಲ್ಲಿ ಶಿಮುಲ್​ ಅಧ್ಯಕ್ಷ ಶ್ರೀಪಾದ್​ ಹೆಗೆಡೆ ಮೇಲೆ ಸಾಗರ ಶಾಸಕ ಹರತಾಳು ಹಾಲಪ್ಪ & ಬೆಂಬಲಿಗರಿಂದ ನಡೆಯಿತಾ ಹಲ್ಲೆ!? ಇಲ್ಲಿದೇ ನೋಡಿ ಎಕ್ಸ್ ಕ್ಲೂಸಿವ್ ವೀಡಿಯೋ

ಸಾಗರದ ಎಲ್ ಬಿ ಕಾಲೇಜಿನಲ್ಲಿ ನಡೆಯುತ್ತಿದ್ದ ಜನರಲ್ ಬಾಡಿ ಮೀಟಿಂಗ್ ನಡೆಯುತ್ತಿದ್ದ ಸಂಧರ್ಭದಲ್ಲಿ ಶಾಸಕ ಹರತಾಳು ಹಾಲಪ್ಪ ಹಾಗೂ ಅವರ ಬೆಂಬಲಿಗರು ಅವರ ಮೇಲೆ ಹಲ್ಲೆ ಮಾಡಿದ್ದಾರೆ  ಆರೋಪವನ್ನ ಶ್ರೀಪಾದ್ ಹೆಗೆಡೆಯವರು ಮಾಡಿದ್ದಾರೆ.  ಶಿಮುಲ್​ ಅಧ್ಯಕ್ಷರಾದ ಶ್ರೀಪಾದ್​ ಹೆಗೆಡೆ ರವರು ಎಲ್​ಬಿ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷರಾಗಿದ್ದಾರೆ .ಸದ್ಯ ಅವರು ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ಎಲ್​ಬಿ ಕಾಲೇಜಿನಲ್ಲಿ ಜನರಲ್​ ಬಾಡಿ ಮೀಟಿಂಗ್​ ನಡೆಸುತ್ತಿದ್ದ ಸಂದರ್ಭದಲ್ಲಿ, ಸ್ಥಳಕ್ಕೆ ಬಂದ ಸಾಗರ ಶಾಸಕ ಹರತಾಳು ಹಾಲಪ್ಪ…

Read More

ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ

ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಪ್ರದೀಪ್ ಎಂಬವರು ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಶಿವಮೊಗ್ಗ: ಬಸ್ ಹಾಗೂ ಕಾರೊಂದರ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟು, ಎಂಟು ಮಂದಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಎಲ್‌ಎಲ್‌ಆರ್ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಬಸ್ ನಗರದ ಎಲ್.ಎಲ್.ಆರ್.ರಸ್ತೆಗೆ ಬಂದಾಗ ಕಾರಿಗೆ ಢಿಕ್ಕಿ…

Read More

ಶಿವಮೊಗ್ಗ : ಕೊವಿಡ್ ವಿಶೇಷ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗ : ರಾಜ್ಯದಾದ್ಯಂತ ಕೋವಿಡ್ ವಿಶೇಷ ಲಸಿಕಾ ಅಭಿಯಾನ ಹಿನ್ನೆಲೆ ಇಂದು ಬೆಳಿಗ್ಗೆ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ ಮೆಡಿಕಲ್ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಿದರು. ಜಿಲ್ಲೆಯಲ್ಲಿ 400 ಕೇಂದ್ರಗಳಲ್ಲಿ ಇಂದು ಲಸಿಕಾ ಅಭಿಯಾನ ಆಯೋಜನೆ ಮಾಡಲಾಗಿದೆ. ಜಿಲ್ಲೆಯ ಸುಮಾರು 80 ಸಾವಿರ ಜನರಿಗೆ ವ್ಯಾಕ್ಸಿನ್ ನೀಡಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಆರೋಗ್ಯ ಇಲಾಖೆ ಪ್ರತಿ ಲಸಿಕಾ ಕೇಂದ್ರಕ್ಕೆ 4 ಜನರಂತೆ 1600 ಸಿಬ್ಬಂದಿ ನಿಯೋಜನೆ ಮಾಡಿದೆ. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್…

Read More