Headlines

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಆನೆಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕಬ್ಬು ತುಂಬಿಕೊಂಡು ಹೋಗುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಈ ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಹೊಸನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಲಾರಿಯಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದು ಇವರಿಗೆ…

Read More

ಹಂದಿ ಅಣ್ಣಿ ಕೊಲೆ ಆರೋಪಿ ಆಂಜನೇಯ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ – ಈ ಸುದ್ದಿ ನೋಡಿ|crime news

ಚೀಲೂರಿನ ಗೋವಿನ ಕೋವಿಯ ಬಳಿಯಲ್ಲಿ ನಡೆದಿದ್ದ ಡಬ್ಬಲ್ ಅಟ್ಯಾಕ್ ಸಂಬಂಧ ದಾವಣಗೆರೆ ಪೊಲೀಸರು ಆಂಧ್ರದ ಗುಂಟೂರಿನ ರೈಲ್ವೆ ಸ್ಟೇಷನ್​ನಲ್ಲಿ ಆರೋಪಿಗಳನ್ನ ಬಂಧಿಸಿದ್ದಾರೆ ಎಂಬ ಸುದ್ದಿ ಬೆಂಗಳೂರಿನ ಮೂಲಗಳಿಂದಲೇ ಲಭ್ಯವಾಗಿತ್ತು.  ಆದರೆ , ಈ ಪ್ರಕರಣ ಇದೀಗ ರೋಚಕ ಟ್ವಿಸ್ಟ್ ಗಳನ್ನು ಪಡೆದುಕೊಳ್ಳುತ್ತಿದೆ.  ಪೊಲೀಸ್ ಹಾಗೂ ಭೂಗತ ಲೋಕದ ನಡುವಿನ ಮೈಂಡ್ ಗೇಮ್ ಆಗಿ ಬದಲಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ  ದಾವಣೆಗೆರೆ ಪೊಲೀಸ್ ಮೂಲಗಳಿಂದ ಮಾಹಿತಿಯೊಂದು ಲಭ್ಯವಾಗಿದ್ದು, ಡಬ್ಬಲ್​ ಅಟ್ಯಾಕ್​ನ ಮಾಸ್ಟರ್ ಮೈಂಡ್ ತಮಿಳ್ ರಮೇಶ್​ ಅರೆಸ್ಟ್ ಆಗಿಲ್ಲ…

Read More

ಗಣೇಶೋತ್ಸವ ,ಈದ್ ಮಿಲಾದ್ ಹಿನ್ನಲೆ – ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ

ಗಣೇಶೋತ್ಸವ ,ಈದ್ ಮಿಲಾದ್ ಹಿನ್ನಲೆ – ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ ರಿಪ್ಪನ್‌ಪೇಟೆ : ಮುಂಬರುವ ಗಣೇಶ ವಿಸರ್ಜನಾ ಮೆರವಣಿಗೆ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAF), ಸ್ಪೆಷಲ್ ಆ್ಯಕ್ಷನ್ ಫೋರ್ಸ್ (SAF) ಹಾಗೂ ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ಅವರ ನೇತೃತ್ವದಲ್ಲಿ ಪಟ್ಟಣದಲ್ಲಿ ಪಥಸಂಚಲನ ನಡೆಯಿತು. ಶಿವಮೊಗ್ಗ ರಸ್ತೆಯಿಂದ ಪ್ರಾರಂಭಗೊಂಡ ಈ ಪಥಸಂಚಲನ ವಿನಾಯಕ ವೃತ್ತ ಸೇರಿ ಪಟ್ಟಣದ ನಾಲ್ಕು…

Read More

ರಿಪ್ಪನ್ ಪೇಟೆ : ದಾಖಲೆಗಳನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಯೋಜನೆಗೆ ಚಾಲನೆ :

ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ದಾಖಲೆಗಳಾದ ಪಹಣಿ, ಅಟ್ಲಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಚಾಲನೆ ನೀಡಿದರು. ರಿಪ್ಪನ್‌ಪೇಟೆಯ ಬರುವೆ ಗ್ರಾಮದ ಸುರೇಶ್, ಲೇಖಪ್ಪ ಎಂಬುವವರ ಮನೆಗೆ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆಯನ್ನು ಶನಿವಾರ ಚಾಲನೆ ನೀಡಿ ಮಾತನಾಡಿ, ಇನ್ನೂ ಮುಂದೆ ಕಛೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರ ಕೆಲವು…

Read More

ನಗ್ನ ವೀಡಿಯೋ ಲೀಕ್ ಮಾಡುವುದಾಗಿ ಮಹಿಳೆಗೆ ಬೆದರಿಕೆ – ಕಾರು ಚಾಲಕನ ಮೇಲೆ ದಾಖಲಾಯ್ತು ಕೇಸ್ | BDVT

ನಗ್ನ ವೀಡಿಯೋ ಲೀಕ್ ಮಾಡುವುದಾಗಿ ಮಹಿಳೆಗೆ ಬೆದರಿಕೆ – ಕಾರು ಚಾಲಕನ ಮೇಲೆ ದಾಖಲಾಯ್ತು ಕೇಸ್ | BDVT ಮಹಿಳೆಯೊಂದಿಗೆ ಸಲುಗೆ ಬೆಳೆಸಿ ವಿಡಿಯೋ ಕಾಲ್‌ನಲ್ಲಿ ಮಾತನಾಡುವಾಗ ಆಕೆಯ ನಗ್ನ ಚಿತ್ರಗಳನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದ ಕಾರು ಚಾಲಕನ ವಿರುದ್ಧ  ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಭದ್ರಾವತಿಯ ನಿವಾಸಿಯೊಬ್ಬರು ದೂರು ನೀಡಿದ್ದು ಶಿವಮೊಗ್ಗದ ವ್ಯಕ್ತಿ ವಿರುದ್ಧ ಕೇಸ್ ದಾಖಲಾಗಿದೆ.  ಕಳೆದ ವರ್ಷ ಮಹಿಳೆಯ ಕುಟುಂಬದವರು ದೇವಸ್ಥಾನಕ್ಕೆ ಹೋಗುವ ಸಲುವಾಗಿ ಕಾರೊಂದನ್ನ…

Read More

ಮಾಲ್ಗುಡಿಯಲ್ಲಿ ರೈಲು ನಿಲುಗಡೆ ಸ್ವಾಗತಾರ್ಹ – ಜನರಲ್ಲಿ ಜಾಗೃತಿ ಅವಶ್ಯ : ಕಲಗೋಡು ರತ್ನಾಕರ್|malgudi

ಮಾಲ್ಗುಡಿಯಲ್ಲಿ ರೈಲು ನಿಲುಗಡೆ ಸ್ವಾಗತಾರ್ಹ –  ಜನರಲ್ಲಿ ಜಾಗೃತಿ ಅವಶ್ಯ : ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಮಾಲ್ಗುಡಿ ರೈಲ್ವೇ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲುಗಳು ನಿಲಗಡೆಯಾಗುತ್ತಿರುವುದು ಸಂತಸದ ವಿಷಯವಾಗಿದ್ದು ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಜನರಿಗೆ ಈ ರೈಲ್ವೆ ನಿಲ್ದಾಣದ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಹೇಳಿದರು. ರಿಪ್ಪನಪೇಟೆ ಕುವೆಂಪು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಹೊಸನಗರ ತೀರ್ಥಹಳ್ಳಿ ತಾಲ್ಲೂಕಿನ …

Read More

ಹೊಸನಗರ : ಬೈಕ್ ಅಪಘಾತದಲ್ಲಿ ಯುವಕನ ಸ್ಥಿತಿ ಗಂಭೀರ|accident

ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಗೆ ತಲುಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. ಹೊಸನಗರ ಪಟ್ಟಣ ವ್ಯಾಪ್ತಿಯ ದಿ|| ಪ್ರಕಾಶ್ ಹಾಗೂ ಆಶಾ ದಂಪತಿಗಳ ಪುತ್ರ ಆದರ್ಶ (23) ಗಾಯಗೊಂಡಿರುವ ಬೈಕ್ ಸವಾರ. ತನ್ನ ಸ್ನೇಹಿತನನ್ನು ಹಿಂಭಾಗದಲ್ಲಿ ಕೂರಿಸಿಕೊಂಡು ಬೈಕಿನಲ್ಲಿ ಸವಾರಿ ಮಾಡಿಕೊಂಡು ಹೋಗುವಾಗ ಸೊನಲೆ – ತೀರ್ಥಹಳ್ಳಿ ರಸ್ತೆಯಲ್ಲಿ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿ ಹೊಡೆದಿದೆ. ಅಪಘಾತದ…

Read More

ಎರಡೂವರೆ ವರ್ಷದ ಪ್ರೀತಿ – ಮದುವೆಯಾಗೋಣ ಬಾ ಎಂದಳು ಪ್ರಿಯತಮೆ | ಸುಂದರಿಯ ಕಥೆಯನ್ನೆ ಮುಗಿಸಿ ಹೂತಿಟ್ಟ ಪ್ರಿಯಕರ | Crime Story

ಎರಡೂವರೆ ವರ್ಷದ ಪ್ರೀತಿ – ಮದುವೆಯಾಗೋಣ ಬಾ ಎಂದಳು ಪ್ರಿಯತಮೆ | ಸುಂದರಿಯ ಕಥೆಯನ್ನೆ ಮುಗಿಸಿ ಹೂತಿಟ್ಟ ಪ್ರಿಯಕರ ಹೆದ್ದಾರಿಪುರದಲ್ಲಿ ನಡೆದ ಸೌಮ್ಯ ಮರ್ಡರ್ ಕಹಾನಿ ಜೀವನದಲ್ಲಿ ತಾವು ಪ್ರೀತಿಸಿದವರ ಜೊತೆ ಸುಂದರವಾಗಿ ಬದುಕಿ ಬಾಳಿ ತಮ್ಮ ಪ್ರೀತಿಯನ್ನು ವಿರೋಧಿಸಿದವರ ಮುಂದೆ ಸುಂದರವಾಗಿ ಬದುಕಿ ತೋರಿಸಬೇಕೆಂಬ ಬಣ್ಣಬಣ್ಣದ ಕನಸುಗಳನ್ನು ಕಟ್ಟಿಕೊಂಡಿದ್ದ ಅಮಾಯಕ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ , ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಪ್ರಿಯಕರನೇ ಕೊಲೆಗೈದ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ…

Read More

ಗೋವಿನ ‍ಚರ್ಮ ಸಾಗಾಟ ತಡೆದಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಪೊಲೀಸ್ ಠಾಣೆ ಎದುರು ಹಲ್ಲೆ|assault

ಗೋವಿನ ಚರ್ಮ ಸಾಗಾಟ ತಡೆದ ವ್ಯಕ್ತಿಯೊಬ್ಬನ ಮೇಲೆ ಗುಂಪೊಂದು ಪೊಲೀಸ್ ಠಾಣೆ ಎದುರೇ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಅಕ್ರಮವಾಗಿ ಗೋವುಗಳಚರ್ಮ ಸಾಗಿಸುತ್ತಿದ್ದ ವಿಚಾರ ತಿಳಿದ ಗುಂಪೊಂದು ಅದನ್ನು ತಡೆದು ಪೊಲೀಸ್ ಠಾಣೆಗೆ ಒಪ್ಪಿಸಿದೆ. ಈ ವಿಚಾರವಾಗಿ ಯುವಕರ ಮತ್ತೊಂದು ತಂಡ ಪೊಲೀಸರ ಎದುರೇ ಹಲ್ಲೆ ನಡೆಸಿದೆ. ಬಕ್ರಿದ್ ಹಬ್ಬದ ಪ್ರಯುಕ್ತ ಗೋವನ್ನು ಹತ್ಯೆ ಮಾಡಿ ಅದರ ಚರ್ಮವನ್ನು ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಗುಂಪೊಂದು ಅದನ್ನು ತಡೆದು ಶಿಕಾರಿಪುರ…

Read More

ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ

ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ ಊಟ ಬಡಿಸಲು‌ ನಿರಾಕರಿಸಿದ ಪತ್ನಿಯ ಕತ್ತನ್ನು ಟವಲ್ನಲ್ಲಿ ಬಿಗಿದು ಪತಿಯೇ ಕೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಅಂಬ್ಲಿಗೊಳ ಗ್ರಾಮದಲ್ಲಿ‌ ನಡೆದಿದೆ. ಅಂಬ್ಲಿಗೊಳ ಗ್ರಾಮದ ಗೌರಮ್ಮ (28) ಕೊಲೆಯಾದ ಮಹಿಳೆ. ಪತಿ ಮನು (35) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಗೌರಮ್ಮ ಶಿಕಾರಿಪುರದ ಗಾರ್ಮೆಂಟ್ಸ್​​ನಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ಗಂಡ ಮನು ಮನೆಗೆ ಬಂದಾಗ ಪತ್ನಿ…

Read More